Homeಮುಖಪುಟಕಾವ್ಯ ಎಂದರೆ ನ್ಯಾಯದ ಭಾಷೆ; ಬಲಪಂಥೀಯರಿಗೆ ಅದು ಅಸಾಧ್ಯ: ಹಿರಿಯ ಸಾಹಿತಿ ಜಾವೇದ್ ಅಖ್ತರ್

ಕಾವ್ಯ ಎಂದರೆ ನ್ಯಾಯದ ಭಾಷೆ; ಬಲಪಂಥೀಯರಿಗೆ ಅದು ಅಸಾಧ್ಯ: ಹಿರಿಯ ಸಾಹಿತಿ ಜಾವೇದ್ ಅಖ್ತರ್

- Advertisement -
- Advertisement -

ಕಾವ್ಯವನ್ನು “ನ್ಯಾಯದ ಭಾಷೆ” ಮತ್ತು “ಸಮಾಜದ ಧ್ವನಿಪೆಟ್ಟಿಗೆ” ಎಂದು ಬಣ್ಣಿಸಿರುವ ಖ್ಯಾತ ಚಿತ್ರ ಸಾಹಿತಿ, ಗೀತರಚನೆಕಾರ ಜಾವೇದ್ ಅಖ್ತರ್, ಪ್ರಪಂಚದಾದ್ಯಂತ ಇರುವ ಬಲಪಂಥೀಯರು ಯಾವುದೇ ದೊಡ್ಡ ಕವಿಯನ್ನು ಸೃಷ್ಟಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಕಾವ್ಯ ಎಂದರೆ ನ್ಯಾಯದ ಭಾಷೆ

ಶುಕ್ರವಾರ ಸಂಜೆ ಮಧ್ಯ ಮುಂಬೈನ ಬೈಕುಲ್ಲಾದಲ್ಲಿರುವ ಅನ್ನಭಾವು ಸಾಥೆ ಸಭಾಂಗಣದಲ್ಲಿ ಸಮಷ್ಟಿ ಕಲೆ ಮತ್ತು ಸಾಹಿತ್ಯ ಉತ್ಸವದ ಸಂದರ್ಭದಲ್ಲಿ ‘ನಾಮ್‌ದೇವ್ ಧಸಾಲ್ ಸಮಷ್ಟಿ ಪ್ರಶಸ್ತಿ’ ಸ್ವೀಕರಿಸಿದ ನಂತರ ಅವರು ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಏಪ್ರಿಲ್ 11 ರಂದು ಪ್ರಾರಂಭವಾದ ಎರಡು ದಿನಗಳ ಕಾರ್ಯಕ್ರಮವನ್ನು ಪ್ರಸಿದ್ಧ ಮರಾಠಿ ಕವಿ ಮತ್ತು ದಲಿತ ಹಕ್ಕುಗಳ ಹೋರಾಟಗಾರ ದಿವಂಗತ ನಾಮದೇವ್ ಧಸಾಲ್ ಅವರ ಸ್ಮರಣಾರ್ಥ ಆಯೋಜಿಸಲಾಗಿತ್ತು.

“ಪ್ರಣಯದ ಕಾವ್ಯವನ್ನು ಕೇಳುವ ಜನರಿಗೆ ಕಾವ್ಯವು ಪ್ರೀತಿಯ ಭಾಷೆ ಮಾತ್ರವಲ್ಲ, ಅದು ನ್ಯಾಯದ ಭಾಷೆಯೂ ಎಂದು ತಿಳಿದಿಲ್ಲ. ಕಾವ್ಯದ ಮೌಲ್ಯ ವ್ಯವಸ್ಥೆಯು ಪ್ರಪಂಚದಾದ್ಯಂತ ಸಾಂಸ್ಕೃತಿಕವಾಗಿ ಸರಿಯಾಗಿದೆ. ಮತ್ತು ಪ್ರಪಂಚದ ಇತಿಹಾಸದಲ್ಲಿ, ಬಲಪಂಥೀಯರಿಗೆ ಎಂದಿಗೂ ದೊಡ್ಡ ಕವಿಯನ್ನು ಸೃಷ್ಟಿಸಲು ಸಾಧ್ಯವಾಗದಿರಲು ಇದೇ ಕಾರಣ” ಎಂದು ಅವರು ಹೇಳಿದ್ದಾರೆ.

“ಕಾವ್ಯವು ಸಮಾನತೆಯನ್ನು, ನ್ಯಾಯವನ್ನು ನಂಬುತ್ತದೆ ಮತ್ತು ಈ ಮೌಲ್ಯಗಳನ್ನು ಬೋಧಿಸುವ ಅದೇ ಕಾವ್ಯವನ್ನು ಪ್ರಪಂಚದಾದ್ಯಂತ ಸ್ವೀಕರಿಸಲಾಗಿದೆ. ನ್ಯಾಯದ ಬಗ್ಗೆ ಮಾತನಾಡುವವನೆ ದೊಡ್ಡ ಕವಿ ಮತ್ತು ಇದು ನಾವು ಯಾರ ಹೆಸರಿನಲ್ಲಿ ಇಂದು ಒಟ್ಟುಗೂಡಿದ್ದೇವೆಯೆ ಅವರಯ (ಧಸಾಲ್) ನ್ಯಾಯದ ಬಗ್ಗೆಯೆ ಮಾತನಾಡಿದ್ದಾರೆ” ಎಂದು ಜಾವೇದ್ ಅಖ್ತರ್ ಹೇಳಿದ್ದಾರೆ.

ಮೀನಿಗೆ ಧ್ವನಿ ಪೆಟ್ಟಿಗೆಯಿಲ್ಲ, ಅದು ಕಿರುಚುವುದಿಲ್ಲ ಅಥವಾ ಧ್ವನಿಯನ್ನು ಹೊಂದಿಲ್ಲ. ಆದ್ದರಿಂದ ಅದು ಅನುಭವಿಸುತ್ತಿರುವ ನೋವು ಅಥವಾ ಹಿಂಸೆ ನಿಮಗೆ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.

“ಕಾವ್ಯವು ಸಮಾಜದ ಧ್ವನಿ ಪೆಟ್ಟಿಗೆಯಾಗಿದ್ದು, ಮಹಾತ್ಮ ಫುಲೆ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಧ್ವನಿಯಿಲ್ಲದವರ ಧ್ವನಿ ಪೆಟ್ಟಿಗೆಗಳನ್ನು ಒದಗಿಸಿದರು… ಸಾಮಾಜಿಕ ನ್ಯಾಯದ ಇಡೀ ಚಳುವಳಿ ನಮ್ಮದಾಗಿದ್ದು, ಅದು ಮಹಾರಾಷ್ಟ್ರದಲ್ಲಿ ಹುಟ್ಟಿತು” ಎಂದು ಅವರು ಹೇಳಿದ್ದಾರೆ.

ಧಸಾಲ್ ಅವರು 20 ನೇ ಶತಮಾನದ ಕವಿಯಲ್ಲ, ಅವರು ಸಾವಿರಾರು ವರ್ಷಗಳ ಹಿಂದೆ ಜನಿಸಿದರು ಎಂದು ಜಾವೇದ್ ಹೇಳಿದರು. “ಅಗ್ನಿಪರ್ವತದ ಲಾವಾ ಒಂದೇ ದಿನದಲ್ಲಿ ಹೊರಬರುವುದಿಲ್ಲ. ಅದು ರೂಪುಗೊಳ್ಳಲು ವರ್ಷಗಳೇ ಬೇಕಾಗುತ್ತದೆ. ಅದು ಒಂದು ದಿನ ಪರ್ವತವನ್ನು ಒಡೆದು, ಆ ಮೂಲಕ ಸ್ಫೋಟದೊಂದಿಗೆ ಹೊರಬರುತ್ತದೆ” ಎಂದು ಹೇಳಿದ ಅವರು, ಧಸಾಲ್ ಅವರನ್ನು ಜ್ವಾಲಾಮುಖಿಗೆ ಹೋಲಿಸಿದ್ದಾರೆ.

ಭಾಷಣದ ನಂತರ, ಜಾವೇದ್ ಅಖ್ತರ್ ಅವರು ಧಸಾಲ್ ಅವರ ‘ರಕ್ತತ್ ಪೆಟ್ಲೆಲ್ಯಾ ಅಗನಿತ್ ಸೂರ್ಯನ್ನೋ’ ಕವಿತೆಯ ಉರ್ದು ಅನುವಾದವನ್ನು ಸಹ ಓದಿದರು. ಕಾವ್ಯ ಎಂದರೆ ನ್ಯಾಯದ ಭಾಷೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  200 ವರ್ಷದಿಂದ ವಾಸಿಸುವ ಮುಸ್ಲಿಂ ಕುಟುಂಬದ ಹತ್ತಿರ ಆಗಮಿಸಿದ ಬುಲ್ಡೋಜರ್ ಗಳು!

200 ವರ್ಷದಿಂದ ವಾಸಿಸುವ ಮುಸ್ಲಿಂ ಕುಟುಂಬದ ಹತ್ತಿರ ಆಗಮಿಸಿದ ಬುಲ್ಡೋಜರ್ ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...