Homeಮುಖಪುಟಕಾವ್ಯ ಎಂದರೆ ನ್ಯಾಯದ ಭಾಷೆ; ಬಲಪಂಥೀಯರಿಗೆ ಅದು ಅಸಾಧ್ಯ: ಹಿರಿಯ ಸಾಹಿತಿ ಜಾವೇದ್ ಅಖ್ತರ್

ಕಾವ್ಯ ಎಂದರೆ ನ್ಯಾಯದ ಭಾಷೆ; ಬಲಪಂಥೀಯರಿಗೆ ಅದು ಅಸಾಧ್ಯ: ಹಿರಿಯ ಸಾಹಿತಿ ಜಾವೇದ್ ಅಖ್ತರ್

- Advertisement -
- Advertisement -

ಕಾವ್ಯವನ್ನು “ನ್ಯಾಯದ ಭಾಷೆ” ಮತ್ತು “ಸಮಾಜದ ಧ್ವನಿಪೆಟ್ಟಿಗೆ” ಎಂದು ಬಣ್ಣಿಸಿರುವ ಖ್ಯಾತ ಚಿತ್ರ ಸಾಹಿತಿ, ಗೀತರಚನೆಕಾರ ಜಾವೇದ್ ಅಖ್ತರ್, ಪ್ರಪಂಚದಾದ್ಯಂತ ಇರುವ ಬಲಪಂಥೀಯರು ಯಾವುದೇ ದೊಡ್ಡ ಕವಿಯನ್ನು ಸೃಷ್ಟಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಕಾವ್ಯ ಎಂದರೆ ನ್ಯಾಯದ ಭಾಷೆ

ಶುಕ್ರವಾರ ಸಂಜೆ ಮಧ್ಯ ಮುಂಬೈನ ಬೈಕುಲ್ಲಾದಲ್ಲಿರುವ ಅನ್ನಭಾವು ಸಾಥೆ ಸಭಾಂಗಣದಲ್ಲಿ ಸಮಷ್ಟಿ ಕಲೆ ಮತ್ತು ಸಾಹಿತ್ಯ ಉತ್ಸವದ ಸಂದರ್ಭದಲ್ಲಿ ‘ನಾಮ್‌ದೇವ್ ಧಸಾಲ್ ಸಮಷ್ಟಿ ಪ್ರಶಸ್ತಿ’ ಸ್ವೀಕರಿಸಿದ ನಂತರ ಅವರು ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಏಪ್ರಿಲ್ 11 ರಂದು ಪ್ರಾರಂಭವಾದ ಎರಡು ದಿನಗಳ ಕಾರ್ಯಕ್ರಮವನ್ನು ಪ್ರಸಿದ್ಧ ಮರಾಠಿ ಕವಿ ಮತ್ತು ದಲಿತ ಹಕ್ಕುಗಳ ಹೋರಾಟಗಾರ ದಿವಂಗತ ನಾಮದೇವ್ ಧಸಾಲ್ ಅವರ ಸ್ಮರಣಾರ್ಥ ಆಯೋಜಿಸಲಾಗಿತ್ತು.

“ಪ್ರಣಯದ ಕಾವ್ಯವನ್ನು ಕೇಳುವ ಜನರಿಗೆ ಕಾವ್ಯವು ಪ್ರೀತಿಯ ಭಾಷೆ ಮಾತ್ರವಲ್ಲ, ಅದು ನ್ಯಾಯದ ಭಾಷೆಯೂ ಎಂದು ತಿಳಿದಿಲ್ಲ. ಕಾವ್ಯದ ಮೌಲ್ಯ ವ್ಯವಸ್ಥೆಯು ಪ್ರಪಂಚದಾದ್ಯಂತ ಸಾಂಸ್ಕೃತಿಕವಾಗಿ ಸರಿಯಾಗಿದೆ. ಮತ್ತು ಪ್ರಪಂಚದ ಇತಿಹಾಸದಲ್ಲಿ, ಬಲಪಂಥೀಯರಿಗೆ ಎಂದಿಗೂ ದೊಡ್ಡ ಕವಿಯನ್ನು ಸೃಷ್ಟಿಸಲು ಸಾಧ್ಯವಾಗದಿರಲು ಇದೇ ಕಾರಣ” ಎಂದು ಅವರು ಹೇಳಿದ್ದಾರೆ.

“ಕಾವ್ಯವು ಸಮಾನತೆಯನ್ನು, ನ್ಯಾಯವನ್ನು ನಂಬುತ್ತದೆ ಮತ್ತು ಈ ಮೌಲ್ಯಗಳನ್ನು ಬೋಧಿಸುವ ಅದೇ ಕಾವ್ಯವನ್ನು ಪ್ರಪಂಚದಾದ್ಯಂತ ಸ್ವೀಕರಿಸಲಾಗಿದೆ. ನ್ಯಾಯದ ಬಗ್ಗೆ ಮಾತನಾಡುವವನೆ ದೊಡ್ಡ ಕವಿ ಮತ್ತು ಇದು ನಾವು ಯಾರ ಹೆಸರಿನಲ್ಲಿ ಇಂದು ಒಟ್ಟುಗೂಡಿದ್ದೇವೆಯೆ ಅವರಯ (ಧಸಾಲ್) ನ್ಯಾಯದ ಬಗ್ಗೆಯೆ ಮಾತನಾಡಿದ್ದಾರೆ” ಎಂದು ಜಾವೇದ್ ಅಖ್ತರ್ ಹೇಳಿದ್ದಾರೆ.

ಮೀನಿಗೆ ಧ್ವನಿ ಪೆಟ್ಟಿಗೆಯಿಲ್ಲ, ಅದು ಕಿರುಚುವುದಿಲ್ಲ ಅಥವಾ ಧ್ವನಿಯನ್ನು ಹೊಂದಿಲ್ಲ. ಆದ್ದರಿಂದ ಅದು ಅನುಭವಿಸುತ್ತಿರುವ ನೋವು ಅಥವಾ ಹಿಂಸೆ ನಿಮಗೆ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.

“ಕಾವ್ಯವು ಸಮಾಜದ ಧ್ವನಿ ಪೆಟ್ಟಿಗೆಯಾಗಿದ್ದು, ಮಹಾತ್ಮ ಫುಲೆ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಧ್ವನಿಯಿಲ್ಲದವರ ಧ್ವನಿ ಪೆಟ್ಟಿಗೆಗಳನ್ನು ಒದಗಿಸಿದರು… ಸಾಮಾಜಿಕ ನ್ಯಾಯದ ಇಡೀ ಚಳುವಳಿ ನಮ್ಮದಾಗಿದ್ದು, ಅದು ಮಹಾರಾಷ್ಟ್ರದಲ್ಲಿ ಹುಟ್ಟಿತು” ಎಂದು ಅವರು ಹೇಳಿದ್ದಾರೆ.

ಧಸಾಲ್ ಅವರು 20 ನೇ ಶತಮಾನದ ಕವಿಯಲ್ಲ, ಅವರು ಸಾವಿರಾರು ವರ್ಷಗಳ ಹಿಂದೆ ಜನಿಸಿದರು ಎಂದು ಜಾವೇದ್ ಹೇಳಿದರು. “ಅಗ್ನಿಪರ್ವತದ ಲಾವಾ ಒಂದೇ ದಿನದಲ್ಲಿ ಹೊರಬರುವುದಿಲ್ಲ. ಅದು ರೂಪುಗೊಳ್ಳಲು ವರ್ಷಗಳೇ ಬೇಕಾಗುತ್ತದೆ. ಅದು ಒಂದು ದಿನ ಪರ್ವತವನ್ನು ಒಡೆದು, ಆ ಮೂಲಕ ಸ್ಫೋಟದೊಂದಿಗೆ ಹೊರಬರುತ್ತದೆ” ಎಂದು ಹೇಳಿದ ಅವರು, ಧಸಾಲ್ ಅವರನ್ನು ಜ್ವಾಲಾಮುಖಿಗೆ ಹೋಲಿಸಿದ್ದಾರೆ.

ಭಾಷಣದ ನಂತರ, ಜಾವೇದ್ ಅಖ್ತರ್ ಅವರು ಧಸಾಲ್ ಅವರ ‘ರಕ್ತತ್ ಪೆಟ್ಲೆಲ್ಯಾ ಅಗನಿತ್ ಸೂರ್ಯನ್ನೋ’ ಕವಿತೆಯ ಉರ್ದು ಅನುವಾದವನ್ನು ಸಹ ಓದಿದರು. ಕಾವ್ಯ ಎಂದರೆ ನ್ಯಾಯದ ಭಾಷೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  200 ವರ್ಷದಿಂದ ವಾಸಿಸುವ ಮುಸ್ಲಿಂ ಕುಟುಂಬದ ಹತ್ತಿರ ಆಗಮಿಸಿದ ಬುಲ್ಡೋಜರ್ ಗಳು!

200 ವರ್ಷದಿಂದ ವಾಸಿಸುವ ಮುಸ್ಲಿಂ ಕುಟುಂಬದ ಹತ್ತಿರ ಆಗಮಿಸಿದ ಬುಲ್ಡೋಜರ್ ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...