Homeಮುಖಪುಟಕೈವ್‌ನಲ್ಲಿರುವ ಭಾರತೀಯ ಔಷಧ ಕಂಪನಿ ಗೋದಾಮಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ: ಉಕ್ರೇನ್ ಆರೋಪ

ಕೈವ್‌ನಲ್ಲಿರುವ ಭಾರತೀಯ ಔಷಧ ಕಂಪನಿ ಗೋದಾಮಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ: ಉಕ್ರೇನ್ ಆರೋಪ

- Advertisement -
- Advertisement -

ಕೈವ್‌ನಲ್ಲಿರುವ ಭಾರತೀಯ ಔಷಧ ಕಂಪನಿಯ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ ಮಾಡಿದೆ ಎಂದು ಭಾರತದಲ್ಲಿನ ಉಕ್ರೇನ್ ರಾಯಭಾರ ಕಚೇರಿ ಶನಿವಾರ ಆರೋಪಿಸಿದೆ. “ಭಾರತದೊಂದಿಗೆ ‘ವಿಶೇಷ ಸ್ನೇಹ’ ಹೊಂದಿದ್ದರೂ ಸಹ ಮಾಸ್ಕೋ ಭಾರತೀಯ ವ್ಯವಹಾರಗಳನ್ನು ‘ಉದ್ದೇಶಪೂರ್ವಕವಾಗಿ’ ಗುರಿಯಾಗಿಸಿಕೊಂಡಿದೆ” ಎಂದು ಅದು ಹೇಳಿಕೊಂಡಿದೆ.

ರಷ್ಯಾದ ದಾಳಿಯಲ್ಲಿ ಗುರಿಯಾಗಿಸಿಕೊಂಡ ಗೋದಾಮು ಭಾರತದ ಪ್ರಮುಖ ಔಷಧ ಕಂಪನಿ ಕುಸುಮ್‌ಗೆ ಸೇರಿದೆ.

“ಇಂದು, ಉಕ್ರೇನ್‌ನಲ್ಲಿರುವ ಭಾರತೀಯ ಔಷಧ ಕಂಪನಿ ಕುಸುಮ್‌ನ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ ಮಾಡಿದೆ. ಭಾರತದೊಂದಿಗೆ ‘ವಿಶೇಷ ಸ್ನೇಹ’ ಎಂದು ಹೇಳಿಕೊಳ್ಳುತ್ತಾ, ಮಾಸ್ಕೋ ಉದ್ದೇಶಪೂರ್ವಕವಾಗಿ ಭಾರತೀಯ ವ್ಯವಹಾರಗಳನ್ನು ಗುರಿಯಾಗಿಸಿಕೊಂಡಿದೆ. ಮಕ್ಕಳು ಮತ್ತು ವೃದ್ಧರಿಗೆ ನೀಡುವ ಔಷಧಿಗಳನ್ನು ನಾಶಪಡಿಸುತ್ತದೆ” ಎಂದು ಭಾರತದಲ್ಲಿನ ಉಕ್ರೇನ್ ರಾಯಭಾರ ಕಚೇರಿ ಟ್ವೀಟ್ ಮಾಡಿದೆ.

ಭಾರತ ಮತ್ತು ರಷ್ಯಾ ಸರ್ಕಾರಗಳು ಈ ವಿಷಯದ ಬಗ್ಗೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಉಕ್ರೇನ್‌ನಲ್ಲಿರುವ ಯುಕೆ ರಾಯಭಾರಿ ಮಾರ್ಟಿನ್ ಹ್ಯಾರಿಸ್ ಮಾತನಾಡಿ, ರಷ್ಯಾದ ದಾಳಿಗಳು ಕೈವ್‌ನಲ್ಲಿರುವ ಪ್ರಮುಖ ಔಷಧದ ಗೋದಾಮನ್ನು ನಾಶಪಡಿಸಿವೆ ಎಂದು ಹೇಳಿದ್ದಾರೆ. ಆದರೆ, ಅವರ ಪೋಸ್ಟ್‌ನಲ್ಲಿ ಗೋದಾಮು ಕುಸುಮ್‌ಗೆ ಸೇರಿದೆಯೇ ಎಂಬುದನ್ನು ಉಲ್ಲೇಖಿಸಲಿಲ್ಲ. ದಾಳಿಯನ್ನು ರಷ್ಯಾದ ಡ್ರೋನ್‌ಗಳಿಂದ ನಡೆಸಲಾಗಿದೆಯೇ ಹೊರತು ಕ್ಷಿಪಣಿಯಲ್ಲ ಎಂದು ಹೇಳಿದರು.

“ಇಂದು ಬೆಳಿಗ್ಗೆ, ರಷ್ಯಾದ ಡ್ರೋನ್‌ಗಳು ಕೈವ್‌ನಲ್ಲಿರುವ ಪ್ರಮುಖ ಔಷಧ ಗೋದಾಮನ್ನು ಸಂಪೂರ್ಣವಾಗಿ ನಾಶಪಡಿಸಿದವು. ವೃದ್ಧರು ಮತ್ತು ಮಕ್ಕಳಿಗೆ ಅಗತ್ಯವಿರುವ ಔಷಧಿಗಳ ದಾಸ್ತಾನುಗಳನ್ನು ಸುಟ್ಟುಹಾಕಿದವು. ಉಕ್ರೇನಿಯನ್ ನಾಗರಿಕರ ವಿರುದ್ಧ ರಷ್ಯಾದ ಭಯೋತ್ಪಾದನಾ ಕಾರ್ಯಾಚರಣೆ ಮುಂದುವರೆದಿದೆ” ಎಂದು ಹ್ಯಾರಿಸ್ ಟ್ವೀಟ್ ಮಾಡಿದ್ದಾರೆ.

ಗೋದಾಮಿನಂತೆ ಕಾಣುವ ರಚನೆಯಿಂದ ಹೊಗೆ ಹೊರಹೊಮ್ಮುತ್ತಿರುವುದನ್ನು ಮತ್ತು ಸ್ಥಳದಲ್ಲಿ ಅಗ್ನಿಶಾಮಕ ಯಂತ್ರವನ್ನು ತೋರಿಸುವ ಫೋಟೋವನ್ನು ರಾಯಭಾರಿ ಪೋಸ್ಟ್ ಮಾಡಿದ್ದಾರೆ.

ಇಂದು ಮುಂಜಾನೆ, ರಷ್ಯಾದ ರಕ್ಷಣಾ ಸಚಿವಾಲಯವು ಉಕ್ರೇನ್ ಕಳೆದ ದಿನದಲ್ಲಿ ರಷ್ಯಾದ ಇಂಧನ ಮೂಲಸೌಕರ್ಯದ ಮೇಲೆ ಐದು ದಾಳಿಗಳನ್ನು ನಡೆಸಿದೆ ಎಂದು ಹೇಳಿಕೊಂಡಿದೆ. ಇದು ಅಂತಹ ದಾಳಿಗಳ ಮೇಲೆ ಯುಎಸ್-ಮಧ್ಯಸ್ಥಿಕೆಯ ನಿಷೇಧದ ಉಲ್ಲಂಘನೆಯಾಗಿದೆ.

ಕಳೆದ ತಿಂಗಳು, ಫೆಬ್ರವರಿ 2022 ರಲ್ಲಿ ಮಾಸ್ಕೋ ನೆರೆಯ ದೇಶವನ್ನು ಆಕ್ರಮಿಸಿದಾಗಿನಿಂದ ಪರಸ್ಪರ ಹೋರಾಡುತ್ತಿರುವ ಉಕ್ರೇನ್ ಮತ್ತು ರಷ್ಯಾ, ಪರಸ್ಪರ ಇಂಧನ ಸೌಲಭ್ಯಗಳ ಮೇಲಿನ ದಾಳಿಗಳನ್ನು ವಿರಾಮಗೊಳಿಸಲು ಒಪ್ಪಿಕೊಂಡಿವೆ. ಆದರೂ, ಎರಡೂ ಕಡೆಯವರು ಒಪ್ಪಂದ ಮುರಿದಿದ್ದಾರೆ ಎಂದು ಪರಸ್ಪರ ಪದೇ ಪದೇ ಆರೋಪಿಸಿದ್ದಾರೆ.

ಸಂಭಾಲ್ ದರ್ಗಾ ವಿರುದ್ಧ ವಕ್ಫ್ ಭೂಮಿ ಅತಿಕ್ರಮಣ ಆರೋಪ; ತನಿಖೆಗೆ ಆದೇಶಿಸಿದ ಜಿಲ್ಲಾಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...