Homeಕರ್ನಾಟಕಜಾತಿಗಣತಿ ವರದಿ ಅಂಕಿ-ಅಂಶ; ರಾಜ್ಯದಲ್ಲಿ ದಲಿತರೇ ನಂ.1, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ

ಜಾತಿಗಣತಿ ವರದಿ ಅಂಕಿ-ಅಂಶ; ರಾಜ್ಯದಲ್ಲಿ ದಲಿತರೇ ನಂ.1, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ

- Advertisement -
- Advertisement -

‘ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ’ದ ಹಿಂದಿನ ಅಧ್ಯಕ್ಷರಾದ ಕಾಂತರಾಜು ಆಯೋಗ 10 ವರ್ಷಗಳ ಹಿಂದೆ ನಡೆಸಿದ ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ-ಅಂಶಗಳು ಹರಿದಾಡುತ್ತಿದ್ದು, ರಾಜ್ಯದಲ್ಲಿ ದಲಿತರು ಮೊದಲ ಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ ಇದೆ.

5,98,14,942 ಜನ ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟಿದ್ದು, ಪರಿಶಿಷ್ಟ ಜಾತಿ ಜನಸಂಖ್ಯೆ 1,09,29,347 ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಯ 42,81,289 ಜನರಿದ್ದಾರೆ. ಒಟ್ಟಾರೆ ದಲಿತರ ಸಂಖ್ಯೆ 1,52,10,636 ಇದೆ. ರಾಜ್ಯದಲ್ಲಿ ಪ್ರವರ್ಗ 1ಎ ಜನಸಂಖ್ಯೆ 34,96,638, ಲಕ್ಷ ಪ್ರವರ್ಗ 1ಬಿ ಜನಸಂಖ್ಯೆ 73,92,313 ಲಕ್ಷ ಹಾಗೂ ಪ್ರವರ್ಗ 2ಎ ಜನಸಂಖ್ಯೆ 77,78,209 ಲಕ್ಷ ಇದೆ.

ಪ್ರವರ್ಗ 2ಬಿ ಜನಸಂಖ್ಯೆ 75,25,880 ಲಕ್ಷ, ಪ್ರವರ್ಗ 3ಎ ಜನಸಂಖ್ಯೆ 72,99,577 ಲಕ್ಷ, ಪ್ರವರ್ಗ 3ಬಿ ಜನಸಂಖ್ಯೆ 81,37,536 ಲಕ್ಷ ಇದೆ.

ಪ್ರವರ್ಗ 1 ರಲ್ಲಿ 97 ಜಾತಿಗಳು, ಪ್ರವರ್ಗ  2ಎ ನಲ್ಲಿ 102 ಜಾತಿಗಳು, ಪ್ರವರ್ಗ 2ಬಿ ನಲ್ಲಿ ಮುಸ್ಲಿಂ, ಪ್ರವರ್ಗ 3ಎ ನಲ್ಲಿ ಒಕ್ಕಲಿಗ , ಬಲಿಜ, ಕೊಡವ ಸಮುದಾಯಗಳಿವೆ.

ಪ್ರವರ್ಗ 3ಬಿ ನಲ್ಲಿ ಲಿಂಗಾಯತ–ವೀರಶೈವ ಲಿಂಗಾಯತ, ಲಿಂಗಾಯತ ಉಪ ಪಂಗಡಗಳು, ಮರಾಠ, ಕೊಂಕಣ ಮರಾಠ, ಕ್ಷತ್ರಿಯ, ಕ್ರಿಶ್ಚಿಯನ್ ಸಮುದಾಯಗಳಿವೆ.

ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟ ಜನಸಂಖ್ಯೆ 5,98,14,942

ಎಸ್‌ಸಿ ಜನಸಂಖ್ಯೆ 1,09,29,347

ಎಸ್‌ಟಿ ಜನಸಂಖ್ಯೆ 42,81,289

ಪ್ರವರ್ಗ 1ಎ ಜನಸಂಖ್ಯೆ 34,96,638

ಪ್ರವರ್ಗ 1ಬಿ ಜನಸಂಖ್ಯೆ 73,92,313

ಪ್ರವರ್ಗ 2ಎ ಜನಸಂಖ್ಯೆ 77,78,209

ಪ್ರವರ್ಗ 2ಬಿ ಜನಸಂಖ್ಯೆ 75,25,880

ಪ್ರವರ್ಗ 3ಎ ಜನಸಂಖ್ಯೆ 72,99,577

ಪ್ರವರ್ಗ 3ಬಿ ಜನಸಂಖ್ಯೆ 81,37,536

ಪ್ರವರ್ಗ – 1 – 97 ಜಾತಿಗಳು

ಪ್ರವರ್ಗ – 2ಎ – 102 ಜಾತಿಗಳು

ಪ್ರವರ್ಗ – 2ಬಿ – ಮುಸ್ಲಿಂ

ಪ್ರವರ್ಗ – 3ಎ – ಒಕ್ಕಲಿಗ , ಬಲಿಜ, ಕೊಡವ

ಆಯೋಗ ಶಿಫಾರಸುಗಳೇನು?

ಒಬಿಸಿ ಸಮುದಾಯದ ಶೇ.32ರಷ್ಟು ಮೀಸಲಾತಿಯನ್ನು ಶೇ.51ಕ್ಕೆ ಹೆಚ್ಚಿಸಲು ಆಯೋಗದ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಹಿಂದುಳಿದ ವರ್ಗಗಳ ಮೀಸಲಾತಿ 5 ವಿಭಾಗಗಳಲ್ಲಿ ವರ್ಗೀಕರಣವಾಗಿದೆ. ಪ್ರವರ್ಗ 1 ಅನ್ನು ಎರಡು ವಿಭಾಗಗಳನ್ನಾಗಿ ಮಾಡಿ ವರ್ಗೀಕರಣ ಮಾಡಲಾಗಿದೆ. 1ಎ ಮತ್ತು 1ಬಿ ಎಂದು ವರ್ಗಿಕರಿಸುವಂತೆ ಶಿಫಾರಸು ಆಗಿದೆ. ಕಾಯಕ, ಕುಲಕಸುಬು ಆಧಾರಿತ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಈ ವರ್ಗೀಕರಣದಲ್ಲಿ ಮನ್ನಣೆ ನೀಡಲಾಗಿದೆ. ಹಾಲಿ ಇರುವ ಪ್ರವರ್ಗ 1ಕ್ಕೆ ಶೇ. 4ರಷ್ಟು ಮೀಸಲಾತಿ ಇದೆ . ಇದನ್ನು 2 ಭಾಗಗಳನ್ನಾಗಿ ಮಾಡಿ 1ಎಗೆ ಶೇ. 6ರಷ್ಟು, 1ಬಿಗೆ ಶೇ. 12ರಷ್ಟು ಮೀಸಲಾತಿಗೆ ಸಲಹೆ ನೀಡಲಾಗಿದೆ. ಹಾಗೇ, ಹಾಲಿ 2ಎಗೆ ಇರುವ ಶೇ.15ರಷ್ಟು ಮೀಸಲಾತಿಯನ್ನು ಶೇ.10ಕ್ಕೆ ಇಳಿಸುವಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಆದರೆ 2ಬಿ ಅಂದರೆ ಮುಸ್ಲಿಂ ಸಮುದಾಯಕ್ಕಿರುವ ಶೇ. 4ರಷ್ಟು ಮೀಸಲಾತಿಯನ್ನು ಡಬಲ್ ಅಂದರೆ, ಶೇ. 8ಕ್ಕೆ ಏರಿಸಲು ಶಿಫಾರಸು ಮಾಡಲಾಗಿದೆ. ಹಾಗೇ 3ಎಗಿರುವ ಶೇ. 4ರಷ್ಟು ಮೀಸಲಾತಿಯನ್ನು ಶೇ. 7ಕ್ಕೆ ಏರಿಸಲು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಇನ್ನು. ಶೇ. 5ರಷ್ಟಿರುವ 3ಬಿ ಮೀಸಲಾತಿಯನ್ನು ಶೇ. 8ಕ್ಕೆ ಹೆಚ್ಚಿಸುವಂತೆ ಜಾತಿ ಗಣತಿ ವರದಿ ಹೇಳಿದೆ.

ಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಅಂಗೀಕರಿಸಿದ ರಾಜ್ಯ ಸಚಿವ ಸಂಪುಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...