Homeಕರ್ನಾಟಕಹುಬ್ಬಳ್ಳಿ ಬಾಲಕಿ ಅಪಹರಣ, ಕೊಲೆ ಪ್ರಕರಣ | ಆರೋಪಿ ಬಿಹಾರದ ವಲಸೆ ಕಾರ್ಮಿಕ 'ಎನ್‌ಕೌಂಟರ್'ನಲ್ಲಿ ಹತ

ಹುಬ್ಬಳ್ಳಿ ಬಾಲಕಿ ಅಪಹರಣ, ಕೊಲೆ ಪ್ರಕರಣ | ಆರೋಪಿ ಬಿಹಾರದ ವಲಸೆ ಕಾರ್ಮಿಕ ‘ಎನ್‌ಕೌಂಟರ್’ನಲ್ಲಿ ಹತ

- Advertisement -
- Advertisement -

ಐದು ವರ್ಷದ ಬಾಲಕಿಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದ ವ್ಯಕ್ತಿಯನ್ನು ಪೊಲೀಸ್‌ ‘ಎನ್‌ಕೌಂಟರ್‌’ನಲ್ಲಿ ಹುಬ್ಬಳ್ಳಿಯಲ್ಲಿ ಭಾನುವಾರ ಮೃತರಾಗಿದ್ದಾರೆ. ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಪೊಲೀಸರು ‘ಎನ್‌ಕೌಂಟರ್’ ಮಾಡಿದ್ದಾಗಿ ಹೇಳಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಹುಬ್ಬಳ್ಳಿ ಬಾಲಕಿ ಅಪಹರಣ

ಕೊಲೆ ಆರೋಪಿಯನ್ನು ಬಿಹಾರದ ಪಾಟ್ನಾ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎಂದು ಗುರುತಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಪೊಲೀಸರ ಮೇಲೆ ಕಲ್ಲು ತೂರಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕೊಲೆ ಆರೋಪಿಯ ಮೇಲೆ ಗುಂಡು ಹಾರಿಸಬೇಕಾಯಿತು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಹೇಳಿದ್ದಾರೆ.

ಆರೋಪಿಯನ್ನು ಬಂಧಿಸಲು ಪ್ರಯತ್ನ ನಡೆಸಲು ಪೊಲೀಸರು ಆತನ ಕಾಲಿಗೆ ಮತ್ತು ನಂತರ ಬೆನ್ನಿಗೆ ಗುಂಡು ಹಾರಿಸಿದ್ದಾಗಿ ಪೊಲೀಸರು ಹೇಳಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆರೋಪಿಯನ್ನು ಕೆಎಂಸಿ-ಆರ್‌ಐಗೆ ಕರೆತರಲಾಯಿತು ಎಂದು ತಿಳಿಸಿದ್ದಾರೆ.

ಅದಾಗ್ಯೂ, ತೀವ್ರ ರಕ್ತಸ್ರಾವದಿಂದ ಆರೋಪಿ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ಮಹಿಳಾ ಪಿಎಸ್‌ಐ ಸೇರಿದಂತೆ ಮೂವರು ಪೊಲೀಸರಿಗೆ ಗಾಯಗಳಾಗಿದ್ದು, ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಐದು ವರ್ಷದ ಬಾಲಕಿಯೊಬ್ಬರು ತನ್ನ ತಾಯಿ ಮನೆ ಮುಂದೆ ಆಟವಾಡುತ್ತಿದ್ದಾಗ ಆರೋಪಿ ಅವರನ್ನು ಅಪಹರಿಸಿದ್ದರು ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ. ಬಾಲಕಿಯನ್ನು ನಂತರ ಹತ್ತಿರದ ಶೆಡ್‌ಗೆ ಕರೆದೊಯ್ದ ಆರೋಪಿ ಅವರ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದರು.

ಈ ವೇಳೆ ಜೋರಾಗಿ ಕೂಗಿದ್ದ ಬಾಲಕಿಯ ಶಬ್ಧ ಕೇಳಿ ಸ್ಥಳೀಯರು ಅನುಮಾನಗೊಂಡು ಅವರನ್ನು ರಕ್ಷಿಸಲು ಶೆಡ್‌ಗೆ ಧಾವಿಸಿದ್ದರು. ಆದರೆ, ಸ್ಥಳದಿಂದ ಓಡಿಹೋಗುವ ಮೊದಲು ಆರೋಪಿ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಸ್ಥಳೀಯರು ಅವನನ್ನು ಸ್ವಲ್ಪ ದೂರದವರೆಗೆ ಬೆನ್ನಟ್ಟಿದ್ದರೂ, ಆರೋಪಿ ತಪ್ಪಿಸಿಕೊಂಡಿದ್ದ. ಅದಾಗ್ಯೂ, ಕೆಲವೇ ನಿಮಿಷಗಳಲ್ಲಿ ಮತ್ತೊಂದು ಗುಂಪು ರಿತೇಶ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಈ ಮಧ್ಯೆ, ಬಾಲಕಿಯನ್ನು ಕೆಎಂಸಿ-ಆರ್‌ಐಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಸುದ್ದಿ ಹರಡುತ್ತಿದ್ದಂತೆ, ಅಶೋಕ್ ನಗರ, ವಿಶ್ವೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳು ಆರೋಪಿಯನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ಅಥವಾ ಆತನನ್ನು ಎನ್ಕೌಂಟರ್ ಮಾಡುವಂತೆ ಒತ್ತಾಯಿಸಿ ದಿನವಿಡೀ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಂತೆ ಪೊಲೀಸ್ ಉನ್ನತ ಅಧಿಕಾರಿಗಳು ಪದೇ ಪದೇ ಮನವಿ ಮಾಡಿದರೂ ಯಾವುದೇ ಫಲಿತಾಂಶ ಸಿಕ್ಕಿರಲಿಲ್ಲ ಮತ್ತು ಸಮಯ ಕಳೆದಂತೆ ಪ್ರತಿಭಟನೆ ತೀವ್ರಗೊಳ್ಳಲು ಪ್ರಾರಂಭವಾಯಿತು. ಸಂಜೆ 6:00 ರ ಸುಮಾರಿಗೆ, ಕೆಎಂಸಿ-ಆರ್‌ಐ ಪ್ರವೇಶ ದ್ವಾರದ ಮುಂದೆ ಜಮಾಯಿಸಿದ ಜನರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಹುಬ್ಬಳ್ಳಿ-ಧಾರವಾಡ ರಸ್ತೆಯನ್ನು ತಡೆದಿದ್ದರು. ಈ ವೇಳೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಲು ಅವರು ಟೈರ್‌ಗಳನ್ನು ಸಹ ಸುಟ್ಟು ಹಾಕಿದ್ದಾರೆ ಎಂದು ವರದಿಯಾಗಿದೆ.

ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್, ಆರೋಪಿ ರಿತೇಶ್ ಕುಮಾರ್ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿ ಬಾಲಕಿ ಅಪಹರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...