Homeಮುಖಪುಟಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು ಗೋಡೆಗೆ ಸೆಗಣಿ ಬಳಿದ ಪ್ರಾಂಶುಪಾಲೆ!

ಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು ಗೋಡೆಗೆ ಸೆಗಣಿ ಬಳಿದ ಪ್ರಾಂಶುಪಾಲೆ!

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯದ ಲಕ್ಷ್ಮಿಬಾಯಿ ಕಾಲೇಜಿನ ಪ್ರಾಂಶುಪಾಲರು ತರಗತಿಯ ಗೋಡೆಗಳಿಗೆ ಹಸುವಿನ ಸಗಣಿ ಬಳಿಯುತ್ತಿರುವ ವಿಡಿಯೊ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವ್ಯಂಗ್ಯಕ್ಕೀಡಾಗಿದೆ. ಕೃತ್ಯವನ್ನು ಸಮರ್ಥಿಸಿಕೊಂಡಿರುವ ಪ್ರಾಂಶುಪಾಲೆ ಪ್ರತ್ಯುಷ್ ವತ್ಸಲಾ, ಇದನ್ನು ಅಧ್ಯಾಪಕರ ನೇತೃತ್ವದಲ್ಲಿ ನಡೆಯುತ್ತಿರುವ ಸಂಶೋಧನಾ ಯೋಜನೆಯ ಭಾಗವಾಗಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು

”ಭಾರತದ ಸಾಂಪ್ರದಾಯಿಕ ಜ್ಞಾನವನ್ನು ಬಳಸಿಕೊಂಡು ಶಾಖದ ಒತ್ತಡ ನಿಯಂತ್ರಣದ ಅಧ್ಯಯನ” ಎಂಬ ಶೀರ್ಷಿಕೆಯ ಅಧ್ಯಯನವು ಇನ್ನೂ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ. “ಅಧ್ಯಯನ ಇನ್ನೂ ಪ್ರಕ್ರಿಯೆಯಲ್ಲಿದೆ. ಒಂದು ವಾರದ ನಂತರ ನಾನು ಪೂರ್ಣ ಸಂಶೋಧನೆಯ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಾಗುತ್ತದೆ. ಪೋರ್ಟಾ ಕ್ಯಾಬಿನ್‌ಗಳಲ್ಲಿ ಸಂಶೋಧನೆಯನ್ನು ನಡೆಸಲಾಗುತ್ತಿದೆ.” ಎಂದು ಹೇಳಿದ್ದಾಋಎ.

“ನೈಸರ್ಗಿಕ ಮಣ್ಣನ್ನು ಮುಟ್ಟುವುದರಿಂದ ಯಾವುದೇ ಹಾನಿಯಿಲ್ಲದ ಕಾರಣ ಒಂದಿಷ್ಟು ನಾನೆ ಬಳಿದಿದ್ದೇನೆ. ಕೆಲವು ಜನರು ಪೂರ್ಣ ವಿವರಗಳನ್ನು ತಿಳಿಯದೆ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ. ವೀಡಿಯೊದಲ್ಲಿ, ವತ್ಸಲಾ ಅವರು ತಮ್ಮ ಸಿಬ್ಬಂದಿಯ ಸಹಾಯದಿಂದ ಗೋಡೆಗಳ ಮೇಲೆ ಸಗಣಿ ಬಳಿಯುತ್ತಿರುವುದು ದಾಖಲಾಗಿದೆ.

ಸಿ ಬ್ಲಾಕ್‌ನಲ್ಲಿ ತರಗತಿ ಕೊಠಡಿಗಳನ್ನು ತಂಪಾಗಿಸಲು ಸ್ಥಳೀಯ ವಿಧಾನಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಪ್ರತಿಪಾದಿಸಿ ಕಾಲೇಜಿನ ಶಿಕ್ಷಕರ ಗುಂಪಿನಲ್ಲಿ ಅವರೇ ಈ ವೀಡಿಯೊವನ್ನು ಸ್ವತಃ ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

“ಈ ಕೊಠಡಿಗಳಲ್ಲಿ ತರಗತಿಗಳನ್ನು ಹೊಂದಿರುವವರಿಗೆ ಶೀಘ್ರದಲ್ಲೇ ಈ ಕೊಠಡಿಗಳು ಹೊಸ ರೂಪದಲ್ಲಿ ಸಿಗುತ್ತವೆ. ನಿಮ್ಮ ಬೋಧನಾ ಅನುಭವವನ್ನು ಆಹ್ಲಾದಕರವಾಗಿಸಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಅವರು ಸಂದೇಶದಲ್ಲಿ ಬರೆದಿದ್ದಾರೆ ಎಂದು ವರದಿ ಹೇಳಿದೆ.

1965 ರಲ್ಲಿ ಸ್ಥಾಪನೆಯಾದ ಮತ್ತು ಝಾನ್ಸಿಯ ರಾಣಿ ಲಕ್ಷ್ಮಿಬಾಯಿ ಅವರ ಹೆಸರನ್ನು ಇಡಲಾದ ಈ ಕಾಲೇಜು ಅಶೋಕ್ ವಿಹಾರ್‌ನಲ್ಲಿದೆ ಮತ್ತು ದೆಹಲಿ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಕಾಲೇಜು ಐದು ಬ್ಲಾಕ್‌ಗಳನ್ನು ಒಳಗೊಂಡಿದ್ದು, ಸೆಗಣಿ ಬಳಿಯುವ ಯೋಜನಯನ್ನು ಒಂದು ಬ್ಲಾಕನ್ನು ಕೇಂದ್ರಿಕರಿಸಿ ನಡೆಸಲಾಗಿದೆ ಎಂದು ವರದಿ ಹೇಳಿದೆ. ಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...