Homeಮುಖಪುಟಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು ಗೋಡೆಗೆ ಸೆಗಣಿ ಬಳಿದ ಪ್ರಾಂಶುಪಾಲೆ!

ಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು ಗೋಡೆಗೆ ಸೆಗಣಿ ಬಳಿದ ಪ್ರಾಂಶುಪಾಲೆ!

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯದ ಲಕ್ಷ್ಮಿಬಾಯಿ ಕಾಲೇಜಿನ ಪ್ರಾಂಶುಪಾಲರು ತರಗತಿಯ ಗೋಡೆಗಳಿಗೆ ಹಸುವಿನ ಸಗಣಿ ಬಳಿಯುತ್ತಿರುವ ವಿಡಿಯೊ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವ್ಯಂಗ್ಯಕ್ಕೀಡಾಗಿದೆ. ಕೃತ್ಯವನ್ನು ಸಮರ್ಥಿಸಿಕೊಂಡಿರುವ ಪ್ರಾಂಶುಪಾಲೆ ಪ್ರತ್ಯುಷ್ ವತ್ಸಲಾ, ಇದನ್ನು ಅಧ್ಯಾಪಕರ ನೇತೃತ್ವದಲ್ಲಿ ನಡೆಯುತ್ತಿರುವ ಸಂಶೋಧನಾ ಯೋಜನೆಯ ಭಾಗವಾಗಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು

”ಭಾರತದ ಸಾಂಪ್ರದಾಯಿಕ ಜ್ಞಾನವನ್ನು ಬಳಸಿಕೊಂಡು ಶಾಖದ ಒತ್ತಡ ನಿಯಂತ್ರಣದ ಅಧ್ಯಯನ” ಎಂಬ ಶೀರ್ಷಿಕೆಯ ಅಧ್ಯಯನವು ಇನ್ನೂ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ. “ಅಧ್ಯಯನ ಇನ್ನೂ ಪ್ರಕ್ರಿಯೆಯಲ್ಲಿದೆ. ಒಂದು ವಾರದ ನಂತರ ನಾನು ಪೂರ್ಣ ಸಂಶೋಧನೆಯ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಾಗುತ್ತದೆ. ಪೋರ್ಟಾ ಕ್ಯಾಬಿನ್‌ಗಳಲ್ಲಿ ಸಂಶೋಧನೆಯನ್ನು ನಡೆಸಲಾಗುತ್ತಿದೆ.” ಎಂದು ಹೇಳಿದ್ದಾಋಎ.

“ನೈಸರ್ಗಿಕ ಮಣ್ಣನ್ನು ಮುಟ್ಟುವುದರಿಂದ ಯಾವುದೇ ಹಾನಿಯಿಲ್ಲದ ಕಾರಣ ಒಂದಿಷ್ಟು ನಾನೆ ಬಳಿದಿದ್ದೇನೆ. ಕೆಲವು ಜನರು ಪೂರ್ಣ ವಿವರಗಳನ್ನು ತಿಳಿಯದೆ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ. ವೀಡಿಯೊದಲ್ಲಿ, ವತ್ಸಲಾ ಅವರು ತಮ್ಮ ಸಿಬ್ಬಂದಿಯ ಸಹಾಯದಿಂದ ಗೋಡೆಗಳ ಮೇಲೆ ಸಗಣಿ ಬಳಿಯುತ್ತಿರುವುದು ದಾಖಲಾಗಿದೆ.

ಸಿ ಬ್ಲಾಕ್‌ನಲ್ಲಿ ತರಗತಿ ಕೊಠಡಿಗಳನ್ನು ತಂಪಾಗಿಸಲು ಸ್ಥಳೀಯ ವಿಧಾನಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಪ್ರತಿಪಾದಿಸಿ ಕಾಲೇಜಿನ ಶಿಕ್ಷಕರ ಗುಂಪಿನಲ್ಲಿ ಅವರೇ ಈ ವೀಡಿಯೊವನ್ನು ಸ್ವತಃ ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

“ಈ ಕೊಠಡಿಗಳಲ್ಲಿ ತರಗತಿಗಳನ್ನು ಹೊಂದಿರುವವರಿಗೆ ಶೀಘ್ರದಲ್ಲೇ ಈ ಕೊಠಡಿಗಳು ಹೊಸ ರೂಪದಲ್ಲಿ ಸಿಗುತ್ತವೆ. ನಿಮ್ಮ ಬೋಧನಾ ಅನುಭವವನ್ನು ಆಹ್ಲಾದಕರವಾಗಿಸಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಅವರು ಸಂದೇಶದಲ್ಲಿ ಬರೆದಿದ್ದಾರೆ ಎಂದು ವರದಿ ಹೇಳಿದೆ.

1965 ರಲ್ಲಿ ಸ್ಥಾಪನೆಯಾದ ಮತ್ತು ಝಾನ್ಸಿಯ ರಾಣಿ ಲಕ್ಷ್ಮಿಬಾಯಿ ಅವರ ಹೆಸರನ್ನು ಇಡಲಾದ ಈ ಕಾಲೇಜು ಅಶೋಕ್ ವಿಹಾರ್‌ನಲ್ಲಿದೆ ಮತ್ತು ದೆಹಲಿ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಕಾಲೇಜು ಐದು ಬ್ಲಾಕ್‌ಗಳನ್ನು ಒಳಗೊಂಡಿದ್ದು, ಸೆಗಣಿ ಬಳಿಯುವ ಯೋಜನಯನ್ನು ಒಂದು ಬ್ಲಾಕನ್ನು ಕೇಂದ್ರಿಕರಿಸಿ ನಡೆಸಲಾಗಿದೆ ಎಂದು ವರದಿ ಹೇಳಿದೆ. ಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...