Homeಮುಖಪುಟಸೋದರಳಿಯ ಆಕಾಶ್‌ರನ್ನು ಮತ್ತೆ ಪಕ್ಷಕ್ಕೆ ಸ್ವಾಗತಿಸಿದ ಮಾಯಾವತಿ!

ಸೋದರಳಿಯ ಆಕಾಶ್‌ರನ್ನು ಮತ್ತೆ ಪಕ್ಷಕ್ಕೆ ಸ್ವಾಗತಿಸಿದ ಮಾಯಾವತಿ!

- Advertisement -
- Advertisement -

‘ದುರಹಂಕಾರ’ ಮತ್ತು ‘ಸ್ವಾರ್ಥ’ದ ಕಾರಣಕ್ಕೆ ಪಕ್ಷದಿಂದ ಹೊರಹಾಕಲ್ಪಟ್ಟ ನಲವತ್ತೊಂದು ದಿನಗಳ ನಂತರ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡಿರುವ ವಿದ್ಯಾಮಾನ ನಡೆದಿದೆ ಎಂದು ವರದಿಯಾಗಿದೆ. ಆಕಾಶ್ ಆನಂದ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದು, ಅವರಿಗೆ ‘ಇನ್ನೊಂದು ಅವಕಾಶ’ ನೀಡುತ್ತಿದ್ದೇನೆ. ಜೊತೆಗೆ ತಾನು ಆರೋಗ್ಯವಾಗಿರುವವರೆಗೆ ಯಾರನ್ನೂ ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸುವುದಿಲ್ಲ ಎಂದು ಮಾಯಾವತಿ ಸ್ಪಷ್ಟಪಡಿಸಿದ್ದಾರೆ. ಸೋದರಳಿಯ ಆಕಾಶ್‌ರನ್ನು

‘ಎಕ್ಸ್’ನಲ್ಲಿ ಆಕಾಶ್ ಅವರು ಕ್ಷಮೆಯಾಚಿಸಿದ ನಂತರ ಮಾಯಾವತಿಯವರ ಮನಸ್ಸು ಬದಲಾಗಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ತಮ್ಮ ಏಕೈಕ ‘ರಾಜಕೀಯ ಗುರು’ ಮತ್ತು ‘ಆದರ್ಶ’ ಎಂದು ಮಾಯಾವತಿಯವರನ್ನು ಪರಿಗಣಿಸಿರುವ ಆಕಾಶ್, ಅವರೊಂದಿಗೆ ಕ್ಷಮೆಯಾಚಿಸಿದ್ದಾಗಿ ಹೇಳಿದ್ದಾರೆ.

”ಸಂಬಂಧಿಕರು ಮತ್ತು ಸಲಹೆಗಾರರಿಂದ ಅವರ ರಾಜಕೀಯ ನಿರ್ಧಾರಗಳಿಗಾಗಿ ನಾನು ಎಂದಿಗೂ ಯಾವುದೇ ಸಲಹೆಯನ್ನು ತೆಗೆದುಕೊಳ್ಳುವುದಿಲ್ಲ ಮತ್ತು ಮಾಯಾವತಿಯ ಸೂಚನೆಗಳನ್ನು ಮಾತ್ರ ಅನುಸರಿಸುತ್ತೇನೆ ಎಂದು ಖಚಿತಪಡಿಸಿಕೊಳ್ಳುತ್ತೇನೆ…. ಪಕ್ಷದ ಹಿರಿಯರು ಮತ್ತು ಹಳೆಯ ನಾಯಕರರನ್ನು ನಾನು ಗೌರವಿಸುತ್ತೇನೆ,” ಎಂದು ಅವರು ಹೇಳಿದ್ದಾರೆ.

ಆಕಾಶ್ ಅವರು ಮಾಯಾವತಿಯವರನ್ನು ಕ್ಷಮಿಸುವಂತೆ ಮತ್ತು ಬಿಎಎಸ್‌ಪಿಗಾಗಿ ಕೆಲಸ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಇಂತಹ ಅವಕಾಶ ನೀಡಿದರೆ ತಾನು ‘ಎಂದೆಂದಿಗೂ’ ಅವರಿಗೆ ‘ಋಣಿಯಾಗಿ’ ಇರುವುದಾಗಿ ಹೇಳಿದ್ದಾರೆ.

ಆಕಾಶ್ ಕ್ಷಮೆಯಾಚಿಸಿದ ಕೆಲವು ಗಂಟೆಗಳ ನಂತರ, ಮಾಯಾವತಿ ತಮ್ಮ ಎಕ್ಸ್‌ ಹ್ಯಾಂಡಲ್‌ನಲ್ಲಿ ಹೇಳಿಕೆಯನ್ನು ಪೋಸ್ಟ್ ಮಾಡಿ, “ಆಕಾಶ್ ಸಾರ್ವಜನಿಕ ಕ್ಷಮೆಯಾಚಿಸಿದ್ದು ಮತ್ತು ಪಕ್ಷಕ್ಕಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಜೊತೆಗೆ ಬಿಎಸ್‌ಪಿಯಿಂದ ಹೊರಹಾಕಲ್ಪಟ್ಟ ಅವರ ಮಾವ ಅಶೋಕ್ ಸಿದ್ಧಾರ್ಥ್ ಅವರ ಸಲಹೆಗಳನ್ನು ಪಾಲಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಆದ್ದರಿಂದ ಅವರಿಗೆ ‘ಇನ್ನೊಂದು ಅವಕಾಶ’ ನೀಡಲು ನಿರ್ಧರಿಸಿದ್ದೇನೆ” ಎಂದು ಹೇಳಿದರು.

ತಾವು ಆರೋಗ್ಯವಾಗಿರುವವರೆಗೆ ಯಾರನ್ನೂ ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸುವುದಿಲ್ಲ ಎಂದು ಮಾಯಾವತಿ ಅವರು ಸ್ಪಷ್ಟಪಡಿಸಿದ್ದಾರೆ.

ಮಾಯಾವತಿ ಅವರು ಕಳೆದ ತಿಂಗಳು ಆಕಾಶ್ ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ವಜಾಗೊಳಿಸಿದ್ದರು. ಒಂದು ವರ್ಷದಲ್ಲಿ ಎರಡನೇ ಬಾರಿಗೆ ಆಕಾಶ್ ಆನಂದ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ಕಳೆದ ವರ್ಷವೂ ಅವರನ್ನು ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ವಜಾಗೊಳಿಸಲಾಯಿತು, ಕೆಲವು ತಿಂಗಳ ನಂತರ ಅವರನ್ನು ಮತ್ತೆ ನೇಮಿಸಲಾಯಿತು.

ನಂತರ ಅವರು ತಾನು ಜೀವಂತವಾಗಿರುವವರೆಗೆ ಯಾರನ್ನೂ ತಮ್ಮ ಉತ್ತರಾಧಿಕಾರಿ ಎಂದು ಘೋಷಿಸಲಾಗುವುದಿಲ್ಲ ಎಂದು ಹೇಳಿದ್ದರು. ಪಕ್ಷದ ನಾಯಕರು ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ ಎಂದು ಅವರು ಹೇಳಿದ್ದಾರೆ. “ನಾನು ಬದುಕಿರುವವರೆಗೂ ಉತ್ತರಾಧಿಕಾರಿಯನ್ನು ಘೋಷಿಸಬಾರದು ಎಂದು ನಾನು ನಿರ್ಧರಿಸಿದ್ದೇನೆ…. ಪಕ್ಷದ ಹಿತಾಸಕ್ತಿಗಳಿಗಿಂತ ಸಂಬಂಧಗಳು, ಕುಟುಂಬ ಮುಖ್ಯವಲ್ಲ….. ನನಗೆ ಪಕ್ಷ ಮೊದಲು” ಎಂದು ಅವರು ಹೇಳಿದ್ದರು. ಸೋದರಳಿಯ ಆಕಾಶ್‌ರನ್ನು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಿಳಾ ಬ್ಯೂಟಿ ಪಾರ್ಲರ್‌ಗಳಲ್ಲಿ ‘ಲವ್ ಜಿಹಾದ್’? ಮುಸ್ಲಿಂ ಪುರುಷರ ನೇಮಕ ನಿಷೇಧಿಸಲು ಬಲಪಂಥೀಯ ಸಂಘಟನೆ ಒತ್ತಾಯ

ಮಹಿಳಾ ಬ್ಯೂಟಿ ಪಾರ್ಲರ್‌ಗಳಲ್ಲಿ ‘ಲವ್ ಜಿಹಾದ್’? ಮುಸ್ಲಿಂ ಪುರುಷರ ನೇಮಕ ನಿಷೇಧಿಸಲು ಬಲಪಂಥೀಯ ಸಂಘಟನೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...