Homeಮುಖಪುಟಕನಿಷ್ಠ 170 ಮದರಸಾಗಳನ್ನು ಮುಚ್ಚಿದ ಉತ್ತರಾಖಂಡ ಸರ್ಕಾರ

ಕನಿಷ್ಠ 170 ಮದರಸಾಗಳನ್ನು ಮುಚ್ಚಿದ ಉತ್ತರಾಖಂಡ ಸರ್ಕಾರ

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಉತ್ತರಾಖಂಡದಾದ್ಯಂತ ಕನಿಷ್ಠ 170 ಮದರಸಾಗಳನ್ನು ಮುಚ್ಚಲಾಗಿದೆ ಎಂದು ವರದಿಯಗಳಿಂದ ತಿಳಿದುಬಂದಿದೆ. ಮದರಸಾ ಮಂಡಳಿ ಅಥವಾ ಶಿಕ್ಷಣ ಇಲಾಖೆಯಲ್ಲಿ ನೋಂದಣಿ ಕೊರತೆಯೇ ಈ ಕ್ರಮಕ್ಕೆ ಕಾರಣವೆಂದು ರಾಜ್ಯ ಅಧಿಕಾರಿಗಳು ಉಲ್ಲೇಖಿಸಿದ್ದಾರೆ.

ಹಲ್ದ್ವಾನಿಯ ಮುಸ್ಲಿಂ ಬಹುಸಂಖ್ಯಾತ ಬನ್ಭುಲ್ಪುರ ಪ್ರದೇಶದಲ್ಲಿ, ಜಿಲ್ಲಾಡಳಿತ, ಪುರಸಭೆ ಮತ್ತು ಸ್ಥಳೀಯ ಪೊಲೀಸರ ಅಧಿಕಾರಿಗಳನ್ನು ಒಳಗೊಂಡ ಜಂಟಿ ತಂಡವು ಏಪ್ರಿಲ್ 13 ರ ಭಾನುವಾರ ವಿಶೇಷ ತಪಾಸಣೆ ನಡೆಸಿತು. ಕಾರ್ಯಾಚರಣೆಯ ಸಮಯದಲ್ಲಿ, ನೋಂದಣಿ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಆರೋಪದ ಮೇಲೆ ಏಳು ಮದರಸಾಗಳನ್ನು ಸೀಲ್ ಮಾಡಲಾಗಿದೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ಸರ್ಕಾರ ನೇಮಿಸಿದ ವಿಶೇಷ ತಂಡಗಳು ನಡೆಸಿದ ವಿವರವಾದ ಸಮೀಕ್ಷೆಗಳ ವರದಿಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಧಾಮಿ ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದು, “ಶಿಕ್ಷಣದ ಹೆಸರಿನಲ್ಲಿ ಮಕ್ಕಳನ್ನು ತೀವ್ರಗಾಮಿತ್ವದತ್ತ ಕರೆದೊಯ್ಯುವ ಸಂಸ್ಥೆಗಳನ್ನು ಯಾವುದೇ ಸಂದರ್ಭದಲ್ಲೂ ಸಹಿಸಲಾಗುವುದಿಲ್ಲ. ಮದರಸಾಗಳ ಮುಚ್ಚುವ ಕ್ರಮವನ್ನು ಐತಿಹಾಸಿಕ ಹೆಜ್ಜೆ” ಎಂದು ಅವರು ಬಣ್ಣಿಸಿದರು.

ಇದು ಕೇವಲ ಆರಂಭವಾಗಿರಬಹುದು ಎಂದು ಅಧಿಕಾರಿಗಳು ಸುಳಿವು ನೀಡಿದ್ದಾರೆ. ಸುಮಾರು 500 ಮದರಸಾಗಳು ಪ್ರಸ್ತುತ ಪರಿಶೀಲನೆಯಲ್ಲಿದ್ದು ಮುಚ್ಚುವ ಸಾಧ್ಯತೆಯನ್ನು ಎದುರಿಸುತ್ತಿವೆ. ಮುಚ್ಚಲಾದ ಹಲವು ಮದರಸಾಗಳು ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದವು.

ಇದಕ್ಕೆ ಪ್ರತಿಕ್ರಿಯೆಯಾಗಿ, ನಾಗರಿಕ ಹಕ್ಕುಗಳ ಕಾರ್ಯಕರ್ತರು ಮತ್ತು ಮುಸ್ಲಿಂ ಧರ್ಮಗುರುಗಳು ಈ ಕ್ರಮವನ್ನು ನ್ಯಾಯಯುತ ಮತ್ತು ಪುರಾವೆ ಆಧಾರಿತ ಪರಿಶೀಲನೆಯನ್ನು ಖಚಿತಪಡಿಸಿಕೊಳ್ಳುವಂತೆ ರಾಜ್ಯವನ್ನು ಒತ್ತಾಯಿಸಿದ್ದಾರೆ. ಪಾರದರ್ಶಕತೆ ಇಲ್ಲದೆ ವ್ಯಾಪಕ ಕ್ರಮಗಳು ಅಪನಂಬಿಕೆಯನ್ನು ಬೆಳೆಸಬಹುದು, ಈಗಾಗಲೇ ಗುರಿಯಾಗಿಸಿಕೊಂಡಿರುವ ದುರ್ಬಲ ಸಮುದಾಯಗಳನ್ನು ಮತ್ತಷ್ಟು ಅಂಚಿನಲ್ಲಿಡಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಛತ್ತೀಸ್‌ಗಢ| ಪ್ರಬಲ ಜಾತಿ ಬಾಲಕಿಯೊಂದಿಗೆ ಮಾತನಾಡಿದ್ದಕ್ಕೆ ದಲಿತ ಯುವಕನಿಗೆ ಚಿತ್ರಹಿಂಸೆ; ವಿವಸ್ತ್ರಗೊಳಿಸಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...