Homeಮುಖಪುಟಹನುಮಾನ್ ಮಂದಿರಲ್ಲಿದ್ದ ಜೈನ ಮುನಿಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಹನುಮಾನ್ ಮಂದಿರಲ್ಲಿದ್ದ ಜೈನ ಮುನಿಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

- Advertisement -
- Advertisement -

ಮಧ್ಯಪ್ರದೇಶ-ರಾಜಸ್ಥಾನ ಗಡಿಯಲ್ಲಿರುವ ಪಶ್ಚಿಮ ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ಹಳ್ಳಿಯೊಂದರ ಹನುಮಾನ್ ದೇವಾಲಯದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮೂವರು ಶ್ವೇತಾಂಬರ ಜೈನ ಮುನಿಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. 16 ವರ್ಷದ ಬಾಲಕ ಸೇರಿದಂತೆ ಎಲ್ಲಾ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದು, ಅವರೆಲ್ಲರೂ ಪಕ್ಕದ ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯವರು ಎಂದು ತಿಳಿಸಿದ್ದಾರೆ. ಹನುಮಾನ್ ಮಂದಿರಲ್ಲಿದ್ದ

ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯೊಂದಿಗಿನ ರಾಜ್ಯದ ಗಡಿಯ ಸಮೀಪವಿರುವ ನೀಮಚ್ ಜಿಲ್ಲೆಯ ಸಿಂಗೋಲಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಇದನ್ನು ವಿರೋಧಿಸಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗೂ ಮುನ್ನ ಪೊಲೀಸರು ಆರು ಯುವಕರನ್ನು ಬಂಧಿಸಿದ್ದಾರೆ.

ಸಿಂಗೋಲಿ ಪಟ್ಟಣದ ನಿವಾಸಿ ಭವರ್‌ಲಾಲ್ ಮೆಹ್ತಾ ಅವರ ದೂರಿನ ಮೇರೆಗೆ ಸಲ್ಲಿಸಲಾದ ಎಫ್‌ಐಆರ್ ಪ್ರಕಾರ, ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ನೀಮಚ್ ಜಿಲ್ಲೆಯ ಸಿಂಗೋಲಿ ಪ್ರದೇಶದ ಕಚ್ಚಲಾ ಗ್ರಾಮದ ದೇವಾಲಯದೊಳಗೆ ಮುನಿಗಳು ವಿಶ್ರಾಂತಿ ಪಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ಮುನಿಗಳು ಮರುದಿನ ಬೆಳಿಗ್ಗೆ ರಾಜಸ್ಥಾನಕ್ಕೆ ಪ್ರಯಾಣ ಬೆಳೆಸಲಿದ್ದರು. ಈ ವೇಳೆ ಮುನಿಗಳ ಬಳಿ ಬಂದ ಯುವಕರು ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ಕೇಳಿದ್ದಾರೆ.

ಈ ವೇಳೆ ಯುವಕರಿಗೆ, ತಾವು ಧಾರ್ಮಿಕ ಯಾತ್ರೆಯಲ್ಲಿರುವ ಜೈನ ಮುನಿಗಳೆಂದು ಅವರು ಹೇಳಿದಾಗ, ದುಷ್ಕರ್ಮಿಗಳು ಅವರ ಮೇಲೆ ಲಾಠಿ ಮತ್ತು ರಾಡ್‌ಗಳಿಂದ ನಿರ್ದಯವಾಗಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡಿದ್ದರೂ, ಮುನಿಗಳು ಮುಖ್ಯ ರಸ್ತೆಗೆ ತಪ್ಪಿಸಿಕೊಂಡು ಸ್ಥಳೀಯ ನಿವಾಸಿಗಳಿಂದ ಸಹಾಯ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ನಂತರ ಗ್ರಾಮಸ್ಥರು ಘಟನೆ ಬಗ್ಗೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆಯ ನಂತರ ಪೊಲೀಸರು ಸ್ಥಳದಲ್ಲಿರುವ ಸುಮಾರು 2.20 ನಿಮಿಷಗಳ ವೀಡಿಯೊ ವೈರಲಾಗಿದ್ದು, ಅದರಲ್ಲಿ ಸಂತ್ರಸ್ತ ಮುನಿಗಳ ಬೆನ್ನು, ತಲೆ, ಕುತ್ತಿಗೆ ಮತ್ತು ಮುಖಗಳ ಮೇಲೆ ಅನೇಕ ಗಾಯಗಳನ್ನು ತೋರಿಸುವ ದೃಶ್ಯಗಳಿವೆ. ನಿರ್ದಿಷ್ಟ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಪೊಲೀಸ್ ತಂಡವು ಕೆಲವು ಗಂಟೆಗಳ ನಂತರ ಆರೋಪಿಯನ್ನು ಪತ್ತೆಹಚ್ಚಿದ್ದಾರೆ ಎಂದು ವರದಿಯಾಗಿದೆ.

“16 ವರ್ಷದ ಬಾಲಕ ಸೇರಿದಂತೆ ಎಲ್ಲಾ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಅವರೆಲ್ಲರೂ ಪಕ್ಕದ ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯವರು. ಅವರ ಮೇಲೆ ಬಿಎನ್‌ಎಸ್‌ನ ಪ್ರಮುಖ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಅವರು ಈ ಹಿಂದೆ ಅಪರಾಧ ಘಟನೆಗಳಲ್ಲಿ ಭಾಗಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಕಂಡುಹಿಡಿಯಲು ನಾವು ಕೆಲಸ ಮಾಡುತ್ತಿದ್ದೇವೆ” ಎಂದು ನೀಮುಚ್ ಜಿಲ್ಲಾ ಪೊಲೀಸ್ ಸೂಪರಿಂಟೆಂಡೆಂಟ್ ಅಂಕಿತ್ ಜೈಸ್ವಾಲ್ ಸೋಮವಾರ ತಿಳಿಸಿದ್ದಾರೆ.

ಬಂಧಿತ ಆರೋಪಿಗಳಲ್ಲಿ ಒಬ್ಬನಿಗೆ 16 ವರ್ಷ ವಯಸ್ಸಾಗಿದ್ದು, ಉಳಿದ ಐದು ಜನರನ್ನು (ಎಲ್ಲರೂ 20 ವರ್ಷದವರು) ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯ ನಿವಾಸಿಗಳಾದ ಗಣಪತ್ ನಾಯಕ್, ಗೋಪಾಲ್ ಭೋಯ್, ಕನ್ಹಯ್ಯಾಲಾಲ್ ಭೋಯ್, ರಾಜು ಭೋಯ್ ಮತ್ತು ಬಾಬು ಶರ್ಮಾ ಎಂದು ಗುರುತಿಸಲಾಗಿದೆ. ಬಂಧಿತರ ವಿರುದ್ಧ ಬಿಎನ್‌ಎಸ್ ಸೆಕ್ಷನ್ 115(2), 119(1), 3(5), 191(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗಾಯಾಳುಗಳನ್ನು ಧರ್ಮಶಾಲೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

ಭಾನುವಾರ ತಡರಾತ್ರಿ ನಡೆದ ಘಟನೆಯಿಂದ ಉದ್ರಿಕ್ತರಾದ ಸ್ಥಳೀಯ ನಿವಾಸಿಗಳು ಸೋಮವಾರ ಬೆಳಿಗ್ಗೆ ಸಿಂಗೋಲಿ ಪಟ್ಟಣವನ್ನು ಬಂದ್ ಮಾಡಿದ್ದಾರೆ. ಆದರೆ ಪೊಲೀಸರ ಕ್ರಮ ಮತ್ತು ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಅವರೊಂದಿಗೆ ಸಭೆ ನಡೆಸಿದ ನಂತರ ಬಂದ್ ಅನ್ನು ಹಿಂಪಡೆಯಲಾಯಿತು. ರಾಜ್ಯದ ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಬರೆದಿರುವ ಮನವಿ ಪತ್ರವನ್ನು ಜೈನ ಸಮುದಾಯದ ಧಾರ್ಮಿಕ ಸಂಸ್ಥೆಗಳು ಪಶ್ಚಿಮ ಮಧ್ಯಪ್ರದೇಶದ ಮಂದ್ಸೌರ್ ಮತ್ತು ನೀಮಚ್ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿವೆ.


ನುಮಾನ್ ಮಂದಿರಲ್ಲಿದ್ದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಫ್ ಕಾಯ್ದೆ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ; ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಬಂಧನ

ವಕ್ಫ್ ಕಾಯ್ದೆ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ; ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...