Homeಮುಖಪುಟಉತ್ತರಪ್ರದೇಶ: ಮುಸ್ಲಿಂ ಯುವತಿಯ ಬುರ್ಖಾ ಬಿಚ್ಚಿ ಥಳಿತ; ವೀಡಿಯೋ ವೈರಲ್

ಉತ್ತರಪ್ರದೇಶ: ಮುಸ್ಲಿಂ ಯುವತಿಯ ಬುರ್ಖಾ ಬಿಚ್ಚಿ ಥಳಿತ; ವೀಡಿಯೋ ವೈರಲ್

- Advertisement -
- Advertisement -

ಉತ್ತರಪ್ರದೇಶದ ಮುಜಫರ್‌ನಗರ ಜಿಲ್ಲೆಯ ಖಲಾಪರ್ ಪ್ರದೇಶದಲ್ಲಿ ಶನಿವಾರ ಬುರ್ಖಾ ಧರಿಸಿದ ಯುವತಿ ಮತ್ತು ಆಕೆಯ ಜೊತೆ ಇದ್ದ ಯುವಕನ ಮೇಲೆ ಗುಂಪೊಂದು ಥಳಿಸಿದ ಘಟನೆ ನಡೆದಿದೆ. ಈ ಘಟನೆ ಶನಿವಾರ ನಡೆದಿದ್ದರೂ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದಾಗ ಅದು ನೆಟಿಜನ್‌ಗಳು ಮತ್ತು ಅಧಿಕಾರಿಗಳ ಗಮನ ಸೆಳೆದಿದೆ.

ವೀಡಿಯೊದಲ್ಲಿ ಒಬ್ಬ ವ್ಯಕ್ತಿ ಮಹಿಳೆಯ ಮುಖದ ಮೇಲಿನ ಹಿಜಾಬ್ ಅನ್ನು ಕಿತ್ತೆಸೆಯುತ್ತಿರುವುದನ್ನು ಕಾಣಬಹುದು ಮತ್ತು ಅಲ್ಲಿದ್ದ ಇತರರು ಆಕೆಯ ಮತ್ತು ಆಕೆಯ ಜೊತೆ ಇದ್ದ ಯುವಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಯುವತಿ ತಾಯಿ ಮತ್ತು ಯುವಕನು ಉತ್ಕರ್ಷ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಸಂಬಂಧಿಸಿದ ಉದ್ಯೋಗಿಗಳು ಎನ್ನಲಾಗಿದೆ.

ಯುವತಿಯ ತಾಯಿಯ ಬದಲು ಯುವತಿಯೇ ಯುವಕನೊಂದಿಗೆ ಹೋಗಿ ಸಾಲದ ಕಂತು ಸಂಗ್ರಹಿಸಿ ಬ್ಯಾಂಕ್‌ಗೆ ಹಿಂತಿರುಗಿಸುತ್ತಿದ್ದಾಗ ಖಲಾಪರ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಇಬ್ಬರು ಸಾಲದ ಸಂಗ್ರಹಿಸಿಕೊಂಡು ಬ್ಯಾಂಕಿನೆಡೆಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಗುಂಪೊಂದು ಅವರನ್ನು ತಡೆದಿದೆ. ಹಲ್ಲೆಕೋರರು ಅವರನ್ನು ಎದುರುಗೊಂಡು ಯುವತಿಯ ಮುಖದ ಮುಸುಕನ್ನು ತೆಗೆಯುವಂತೆ ಒತ್ತಾಯಿಸಿದರು. ಆಕೆ ನಿರಾಕರಿಸಿದಾಗ ಅವರು ಬಲವಂತವಾಗಿ ಆಕೆಯ ಬುರ್ಖಾವನ್ನು ತೆರೆದು ಘಟನೆಯನ್ನು ತಮ್ಮ ಮೊಬೈಲ್ ಗಳಲ್ಲಿ ರೆಕಾರ್ಡ್ ಮಾಡಿದರು. ಈ ವಿಡಿಯೋ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಯುವತಿ ತನ್ನ ತಾಯಿಯ ಸೂಚನೆಯ ಮೇರೆಗೆ ಯುವಕನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಳು ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಪೊಲೀಸ್ ಗಸ್ತು ಪಡೆಯ ಸಿಬ್ಬಂದಿಗೆ ಮಾಹಿತಿ ಬಂದ ತಕ್ಷಣ, ಕೆಲವು ಪೊಲೀಸರು ಸ್ಥಳಕ್ಕೆ ತಲುಪಿ ಇಬ್ಬರನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆದೊಯ್ದರು. ಯುವತಿಯ ತಾಯಿಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.

ಸಾರ್ವಜನಿಕ ಕಿರುಕುಳ ಮತ್ತು ವೈಯಕ್ತಿಕ ಘನತೆಯ ಉಲ್ಲಂಘನೆಯ ಈ ಕೃತ್ಯದಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಗುರುತಿಸಲು ಮತ್ತು ಬಂಧಿಸಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆದಾಗ್ಯೂ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.

ಮುಜಫರ್ ನಗರ ಘಟನೆಯು ವೈಯಕ್ತಿಕ ಸ್ವಾತಂತ್ರ್ಯ, ಕೋಮು ಸಾಮರಸ್ಯ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಜಾರಿ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವ ತುರ್ತು ಅಗತ್ಯವನ್ನು ಒತ್ತಿಹೇಳಿದೆ. ಸಾರ್ವಜನಿಕ ಕಿರುಕುಳದ ಇಂತಹ ಕೃತ್ಯಗಳನ್ನು ತ್ವರಿತವಾಗಿ ನಿಭಾಯಿಸುವುದನ್ನು ಮತ್ತು ಅಪರಾಧಿಗಳನ್ನು ನ್ಯಾಯಕ್ಕೆ ಒಪ್ಪಿಸುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಹಾಗೆಯೇ ಇಂತಹ ಘಟನೆಗಳು ಮರುಕಳಿಸುವುದನ್ನು ತಡೆಯಲು ಮತ್ತು ಸಾಮಾಜಿಕ ಶಾಂತಿಯನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿರುವುದರಿಂದ ಪೊಲೀಸರು ತುರ್ತುಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಈ ಘಟನೆಯಲ್ಲಿ ಸಂತ್ರಸ್ತ ಯುವತಿ, ಯುವಕ ಮತ್ತು ಆರೋಪಿಗಳೆಲ್ಲರೂ ಒಂದೇ ಸಮುದಾಯಕ್ಕೆ ಸೇರಿದವರೆಂದು ಮಾಧ್ಯಮಗಳು ವರದಿ ಮಾಡಿವೆ.

ಕೆಲವು ತಿಂಗಳ ಹಿಂದೆ, ಉತ್ತರ ಪ್ರದೇಶದ ಸಹರಾನ್‌ಪುರ ಪಟ್ಟಣದಲ್ಲಿ ಇಬ್ಬರು ಮುಸ್ಲಿಂ ಹುಡುಗಿಯರನ್ನು ಹಿಂದೂ ಯುವಕರೊಂದಿಗೆ ಸುತ್ತಾರುತ್ತಿದ್ದಾರೆ ಎಂದು ಅನುಮಾನದಿಂದ ಗುಂಪೊಂದು ಹಲ್ಲೆ ನಡೆಸಿತ್ತು. ಯುವಕರೂ ಮುಸ್ಲಿಮರಾಗಿದ್ದರಿಂದ ಪೋಷಕರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿ ಬಿಟ್ಟಿತ್ತು. ಇಂತಹ ಹಲವು ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ದೇಶದಲ್ಲಿ ವರದಿಯಾಗುತ್ತಿವೆ.

ಹಿಂದೂ ಯುವತಿ, ಮುಸ್ಲಿಂ ಯುವಕರು ಜೊತೆಗಿದ್ದ ಕಾರಣ ಅವರ ಮೇಲೆ ಹಲ್ಲೆ ನಡೆಸಿರುವ ಹಲವು ಘಟನೆಗಳೂ ಉತ್ತರ ಪ್ರದೇಶದಲ್ಲಿ ನಡೆದಿವೆ. ಮುಸ್ಲಿಂ ಎಂಬ ಕಾರಣಕ್ಕೆ ಹಲ್ಲೆ ನಡೆಸುವುದು ದೇಶದಲ್ಲಿ ಹೆಚ್ಚಾಗುತ್ತಿದೆ. ಮುಸ್ಲಿಮರ ಮೇಲೆ ದಾಳಿ ಹೆಚ್ಚಾಗುತ್ತಿದ್ದಂತೆ ಪ್ರತಿದಾಳಿಯೂ ನಡೆದು ಕೋಮುಗಲಭೆಗೆ ದೇಶ ಸಾಕ್ಷಿಯಾಗುತ್ತಿದೆ. ಹೋಳಿ ಬಣ್ಣ ಹಾಕಿಸಿಕೊಳ್ಳಲು ನಿರಾಕರಿಸಿದ ಕಾರಣಕ್ಕೆ ಮುಸ್ಲಿಂ ಬಾಲಕನಿಗೆ ಥಳಿಸಿ ಕೊಂದಿರುವ ಘಟನೆ ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಹನುಮಾನ್ ಮಂದಿರಲ್ಲಿದ್ದ ಜೈನ ಮುನಿಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...