Homeಕರ್ನಾಟಕರಾಜ್ಯ ಸರ್ಕಾರದ ವಿರುದ್ಧ ಸಾರಿಗೆದಾರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

ರಾಜ್ಯ ಸರ್ಕಾರದ ವಿರುದ್ಧ ಸಾರಿಗೆದಾರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

- Advertisement -
- Advertisement -

ರಾಜ್ಯ ಸರ್ಕಾರದ “ಸಾರಿಗೆ ವಿರೋಧಿ ವ್ಯಾಪಾರ ನೀತಿಗಳನ್ನು” ವಿರೋಧಿಸಿ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದ ಭಾಗವಾಗಿ ಸೋಮವಾರ ಮಧ್ಯರಾತ್ರಿಯಿಂದ ಆರು ಲಕ್ಷಕ್ಕೂ ಹೆಚ್ಚು ಸಾರಿಗೆ ವಾಹನಗಳು ಭಾಗಿಯಾಗಲಿವೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಆದಾಗ್ಯೂ, ಹಾಲು, ತರಕಾರಿಗಳು ಮತ್ತು ಹಣ್ಣುಗಳಂತಹ ಅಗತ್ಯ ಸರಕುಗಳನ್ನು ಸಾಗಿಸುವ ವಾಹನಗಳು ಮತ್ತು ಇತರ ಅಗತ್ಯ ಸೇವೆಗಳ ವಾಹನಗಳು ಮುಷ್ಕರದಲ್ಲಿ ಭಾಗವಹಿಸುವುದಿಲ್ಲ ಎಂದು ವರದಿ ಉಲ್ಲೇಖಿಸಿದೆ.

ರಾಜ್ಯದ ಟ್ರಕ್ಕರ್‌ಗಳು, ಸಾಗಣೆದಾರರು, ಪ್ರವಾಸಿ ಟ್ಯಾಕ್ಸಿಗಳು ಮತ್ತು ಮ್ಯಾಕ್ಸಿ ಕ್ಯಾಬ್ ನಿರ್ವಾಹಕರ ಪ್ರಮುಖ ಒಕ್ಕೂಟ ಎಂದು ಹೇಳಿಕೊಳ್ಳುವ ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್‌ಗಳ ಸಂಘ (FOKSLOAA) ಈ ಮುಷ್ಕರಕ್ಕೆ ಕರೆ ನೀಡಿದೆ. ರಾಜ್ಯದ 31 ಜಿಲ್ಲೆಯ 236 ತಾಲ್ಲೂಕು ಮಟ್ಟದ ಮತ್ತು ಸ್ಥಳೀಯ ಸಾರಿಗೆ ಸಂಘಗಳು ಈ ಸಂಘಟನೆಯೊಂದಿಗೆ ಸಂಯೋಜಿತವಾಗಿವೆ ಎಂದು ಅದು ಪ್ರತಿಪಾದಿಸಿದೆ.

ಪೆಟ್ರೋಲ್ ಪಂಪ್ ಮಾಲೀಕರು, LPG ಬಲ್ಕ್ ಆಪರೇಟರ್‌ಗಳ ಸಂಘ, ವಿಮಾನ ನಿಲ್ದಾಣ ಟ್ಯಾಕ್ಸಿ ಸಂಘಗಳು, ಚಾಲಕ ಸಂಘಗಳು ಮತ್ತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಾರಿಗೆ ಸಂಘಗಳು ಸೇರಿದಂತೆ ವಿವಿಧ ಮಿತ್ರ ವಲಯಗಳಿಂದ ಮುಷ್ಕರಕ್ಕೆ ಬೆಂಬಲ ದೊರೆತಿದೆ ಎಂದು FOKSLOAA ತಿಳಿಸಿದೆ ಎಂದು ವರದಿ ಉಲ್ಲೇಖಿಸಿದೆ.

ಆದಾಗ್ಯೂ, ಕರ್ನಾಟಕ ಲಾರಿ ಮಾಲೀಕರ ಸಂಘದ ಒಕ್ಕೂಟವು ಮುಷ್ಕರವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿ ಪ್ರತಿಭಟನೆಯಿಂದ ದೂರ ಉಳಿದಿದೆ ಎಂದು ವರದಿ ತಿಳಿಸಿದೆ.

FOKSLOAA ಒಟ್ಟು ಆರು ಬೇಡಿಕೆಗಳನ್ನು ಮುಂದಿಟ್ಟಿದ್ದು, ಇತ್ತೀಚೆಗೆ ಏರಿಕೆ ಮಾಡಿರುವ ಇಂಧನ ಬೆಲೆ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ. ರಾಜ್ಯ ಸರ್ಕಾರ ಇತ್ತೀಚೆಗೆ ಮಾರಾಟ ತೆರಿಗೆಯನ್ನು ಹೆಚ್ಚಿಸಿತ್ತು. ಹಾಗಾಗಿ ರಾಜ್ಯದಲ್ಲಿ ಪೆಟ್ರೋಲ್ ಲೀಟರ್‌ಗೆ ರೂ. 3 ಮತ್ತು ಡೀಸೆಲ್ ರೂ. 3.02 ರಷ್ಟು ದುಬಾರಿಯಾಗಿದೆ.

“ಸುಲಿಗೆ ಮತ್ತು ಕಿರುಕುಳದ ಕೇಂದ್ರಗಳಾಗಿ” ಮಾರ್ಪಟ್ಟಿರುವ 18 ರಾಜ್ಯ ಟೋಲ್ ಪ್ಲಾಜಾಗಳನ್ನು ರದ್ದುಗೊಳಿಸಿ ಎಂದು FOKSLOAA ಆಗ್ರಹಿಸಿದ್ದು, ಜಿಎಸ್‌ಟಿ ನಂತರದ ಯುಗದಲ್ಲಿ “ಅನಗತ್ಯ”ವಾಗಿರುವ ಚೆಕ್ ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದೆ.

ಹಳೆಯ ವಾಹನ ಫಿಟ್‌ನೆಸ್ ನವೀಕರಣ ಶುಲ್ಕವನ್ನು ರೂ. 15,000 ವರೆಗೆ ಹೆಚ್ಚಿಸುವ ಪ್ರಸ್ತಾವಿತ ಹೆಚ್ಚಳವನ್ನು ಮರುಪರಿಶೀಲಿಸುವಂತೆ ಸಂಘವು ಒತ್ತಾಯಿಸಿದ್ದು, ಬೆಂಗಳೂರು ನಗರಕ್ಕೆ ವಾಣಿಜ್ಯ ವಾಹನಗಳಿಗೆ ಪ್ರವೇಶ ಸಮಯವನ್ನು ವಿಸ್ತರಿಸುವಂತೆ ಮತ್ತು NBFCಗಳು ಮತ್ತು ಕಿರುಬಂಡವಾಳ ಪೂರೈಕೆದಾರರಿಂದ ನೀಡಲಾಗುತ್ತಿರುವ ಕಿರುಕುಳವನ್ನು ನಿಲ್ಲಿಸುವಂತೆ ಕೇಳಿಕೊಂಡಿದೆ.

ಸಮಸ್ಯೆಯನ್ನು ಪರಿಹರಿಸದಿದ್ದರೆ ರಾಜ್ಯದಾದ್ಯಂತ ಸರಕು ಮತ್ತು ಪ್ರಯಾಣಿಕರ ಚಲನೆಗೆ ತೀವ್ರ ಅಡ್ಡಿಯಾಗುವ ಸಾಧ್ಯತೆಯಿದೆ ಎಂದು FOKSLOAA ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಎಚ್ಚರಿಸಿದ್ದಾರೆ. ಪಾಲುದಾರರೊಂದಿಗೆ ರಚನಾತ್ಮಕವಾಗಿ ತೊಡಗಿಸಿಕೊಳ್ಳುವ ಮೂಲಕ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸುವಂತೆ ಹಾಗೂ ಈ ಮೂಲಕ ಬಿಕ್ಕಟ್ಟನ್ನು ತಪ್ಪಿಸಲು ಸರ್ಕಾರ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಮುಷ್ಕರದ ಭಾಗವಾಗಿ, FOKSLOAA ಸದಸ್ಯರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಅತ್ತಿಬೆಲೆ ಮತ್ತು ರಾಜ್ಯದ ಇತರ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿದ್ದಾಗಿ ಡೆಕ್ಕನ್ ಹೆರಾಲ್ಡ್ ವರದಿ ಹೇಳಿದೆ. ರಾಜ್ಯ ಸರ್ಕಾರದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಏಪ್ರಿಲ್ 17ರ ಸಚಿವ ಸಂಪುಟ ಚರ್ಚೆಯ ನಂತರ ಜಾತಿ ಸಮೀಕ್ಷೆ ಬಗ್ಗೆ ಮಾತನಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ಏಪ್ರಿಲ್ 17ರ ಸಚಿವ ಸಂಪುಟ ಚರ್ಚೆಯ ನಂತರ ಜಾತಿ ಸಮೀಕ್ಷೆ ಬಗ್ಗೆ ಮಾತನಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...