Homeಮುಖಪುಟತಮಿಳುನಾಡಿನ ಸ್ವಾಯತ್ತತೆಗಾಗಿ ಸಮಿತಿ ರಚಿಸಿದ ಸಿಎಂ ಸ್ಟಾಲಿನ್

ತಮಿಳುನಾಡಿನ ಸ್ವಾಯತ್ತತೆಗಾಗಿ ಸಮಿತಿ ರಚಿಸಿದ ಸಿಎಂ ಸ್ಟಾಲಿನ್

- Advertisement -
- Advertisement -

ರಾಜ್ಯಪಾಲರೊಂದಿಗಿನ ಸಂಘರ್ಷದ ನಡುವೆ ರಾಜ್ಯದ ಸ್ವಾಯತ್ತತೆ ಕಾಪಾಡಲು ಕ್ರಮ ಕೈಗೊಳ್ಳುವ ಸಲುವಾಗಿ ಶಿಫಾರಸ್ಸುಗಳನ್ನು ಮಾಡಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿ ಕುರಿಯನ್ ಜೋಸೆಫ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ರಾಜ್ಯ ಸರ್ಕಾರಗಳ ಹಕ್ಕುಗಳನ್ನು ರಕ್ಷಿಸಲು ಮತ್ತು ಕೇಂದ್ರ ಸರ್ಕಾರದೊಂದಿಗಿನ ಸಂಬಂಧಗಳನ್ನು ಸುಧಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸುಗಳನ್ನು ಮಾಡಲಿದೆ.

ರಾಜ್ಯ ಸರ್ಕಾರಗಳಿಗೆ ಬಿಡಲಾಗಿದ್ದ, ಈಗ ರಾಜ್ಯ ಮತ್ತು ಕೇಂದ್ರವು ಜಂಟಿಯಾಗಿ ನಿರ್ವಹಿಸುತ್ತಿರುವ ಆಡಳಿತ ಮತ್ತು ನೀತಿ ನಿರೂಪಣೆಯ ಕ್ಷೇತ್ರಗಳನ್ನು ಮರಳಿ ತರುವುದು, ಅಂದರೆ, ಸಮಕಾಲೀನ ಪಟ್ಟಿಗೆ ಸ್ಥಳಾಂತರಗೊಂಡ ರಾಜ್ಯ ವಿಷಯಗಳನ್ನು ಮರುಪಡೆಯಲು ಕೈಗೊಳ್ಳಬೇಕಾದ ಕ್ರಮಗಳನ್ನು ಶಿಫಾರಸ್ಸು ಮಾಡುವ ಕಾರ್ಯವನ್ನೂ ಸಮಿತಿಗೆ ವಹಿಸಲಾಗಿದೆ.

ಮಾಜಿ ಅಧಿಕಾರಿಗಳಾದ ಅಶೋಕ್ ಶೆಟ್ಟಿ ಮತ್ತು ಮು ನಾಗರಾಜನ್ ಅವರನ್ನು ಒಳಗೊಂಡ ಸಮಿತಿಯು, ಭಾರತವನ್ನು ರೂಪಿಸುವ ರಾಜ್ಯಗಳ ಒಕ್ಕೂಟದ ಸಮಗ್ರತೆಗೆ ಧಕ್ಕೆಯಾಗದಂತೆ ಕಾನೂನುಗಳನ್ನು ನಿರ್ಣಯಿಸುವ ಮತ್ತು ಮೌಲ್ಯಮಾಪನ ಮಾಡುವ ನಿರೀಕ್ಷೆಯಿದೆ.

ಜನವರಿ 2026ರೊಳಗೆ ಸಮಿತಿಯು ತನ್ನ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದು, 2028ರ ವೇಳೆಗೆ ಅಂತಿಮ ವರದಿ ಸಲ್ಲಿಕೆಯಾಗಲಿದೆ. ತಮಿಳುನಾಡು ಸೇರಿದಂತೆ ಎಲ್ಲಾ ರಾಜ್ಯಗಳ ಹಕ್ಕುಗಳನ್ನು ರಕ್ಷಿಸುವುದು ನಮ್ಮ ಗುರಿಯಾಗಿದೆ ಎಂದು ಸಿಎಂ ಸ್ಟಾಲಿನ್ ವಿಧಾನಸಭೆಗೆ ತಿಳಿಸಿದ್ದಾರೆ.

ರಾಜ್ಯಪಾಲರೊಂದಿಗಿನ ಸಂಘರ್ಷ, ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ವಿವಾದಾತ್ಮಕ ಮತ್ತು ಕೇಂದ್ರೀಯವಾಗಿ ನಡೆಸಲ್ಪಡುವ ನೀಟ್ ಪರೀಕ್ಷೆಯಿಂದ ವಿನಾಯಿತಿ ಪಡೆಯುವ ರಾಜ್ಯ ಸರ್ಕಾರದ ಒತ್ತಾಯ ಸೇರಿದಂತೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಡುವೆ ನಡೆಯುತ್ತಿರುವ ತೀವ್ರ ಬಿಕ್ಕಟ್ಟಿನ ಸಂದರ್ಭದಲ್ಲಿ ಸಿಎಂ ಸ್ಟಾಲಿನ್ ಸಮಿತಿ ರಚಿಸಿರುವುದು ಮಹತ್ವ ಪಡೆದುಕೊಂಡಿದೆ.

ವಿಧಾನಸಭೆ ಅಂಗೀಕರಿಸಿದ 10 ಮಸೂದೆಗಳ ಕುರಿತು ಯಾವುದೇ ನಿರ್ಣಯ ತೆಗೆದುಕೊಳ್ಳದೆ ಐದು ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ತಮಿಳುನಾಡು ರಾಜ್ಯಪಾಲರನ್ನು ಸುಪ್ರೀಂ ಕೋರ್ಟ್ ಕಳೆದ ವಾರ ತರಾಟೆಗೆ ತೆಗೆದುಕೊಂಡಿತ್ತು. 10 ಮಸೂದೆಗಳು ಅಂಗೀಕಾರಗೊಂಡಿದೆ ಎಂದು ಘೋಷಿಸಿ ಸರ್ಕಾರದ ಪರ ತೀರ್ಪು ನೀಡಿತ್ತು. ರಾಜ್ಯಪಾಲ ರವಿ ಅವರ ನಡವಳಿಕೆ ‘ನಿರಂಕುಶ’ ಮತ್ತು ‘ಸಂವಿಧಾನಬಾಹಿರ’ ಎಂದಿತ್ತು.

ಕೇಂದ್ರ ಸರ್ಕಾರ ನೇಮಿಸಿದ ರಾಜ್ಯಪಾಲರು ರಾಜ್ಯದ ಅಭಿವೃದ್ಧಿ ಯೋಜನೆಗಳನ್ನು ವಿಫಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತಮಿಳುನಾಡು ಸರ್ಕಾರ ಪದೇ ಪದೇ ಆರೋಪ ಮಾಡುತ್ತಿತ್ತು. ಈ ವೇಳೆ ಸುಪ್ರೀಂ ಕೋರ್ಟ್‌ ಸರ್ಕಾರದ ಪರ ತೀರ್ಪು ನೀಡಿದ್ದನ್ನು ಸಿಎಂ ಸ್ಟಾಲಿನ್ ಐತಿಹಾಸಿಕ ಎಂದಿದ್ದರು.

ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿದೆ, ಅಂದರೆ ಇದನ್ನು ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ನಿರ್ವಹಿಸುತ್ತಿವೆ. ಆದರೆ, ತಮಿಳುನಾಡು ಸಿಎಂ ಸ್ಟಾಲಿನ್ ಅವರು ಇದು ಕೇವಲ ರಾಜ್ಯದ ವಿಷಯವಾಗಿರಬೇಕು ಎಂದು ಆಗ್ರಹಿಸಿದ್ದಾರೆ. ಶಿಕ್ಷಣವನ್ನು ಸಮವರ್ತಿ ಪಟ್ಟಿಗೆ ಬದಲಾಯಿಸಿದ ಸಂವಿಧಾನದ 42ನೇ ತಿದ್ದುಪಡಿಯನ್ನು ರದ್ದುಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ನೀಟ್‌ಗೆ ಬದಲಾಗಿ 12ನೇ ತರಗತಿಯ ಅಂಕಗಳನ್ನು ಪರಿಗಣಿಸಬೇಕೆಂದು ತಮಿಳುನಾಡು ವಿಧಾನಸಭೆ ಎರಡು ಬಾರಿ ಅಂಗೀಕರಿಸಿದ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕರಿಸಿದ ನಂತರ, ಕೇಂದ್ರ ಮತ್ತು ರಾಜ್ಯದ ನಡುವೆ ಸಂಘರ್ಷ ಏರ್ಪಟ್ಟಿತ್ತು.

“ಕೇಂದ್ರ ಸರ್ಕಾರ ತಮಿಳುನಾಡಿನ ಮನವಿಯನ್ನು ತಿರಸ್ಕರಿಸಿರಬಹುದು… ಆದರೆ ನಮ್ಮ ಹೋರಾಟ ಇನ್ನೂ ಕೊನೆಗೊಂಡಿಲ್ಲ.ಈ ನಿರ್ಧಾರವನ್ನು ಹೇಗೆ ಪ್ರಶ್ನಿಸುವುದು ಎಂಬುದರ ಕುರಿತು ನಾವು ಕಾನೂನು ತಜ್ಞರೊಂದಿಗೆ ಸಮಾಲೋಚಿಸುತ್ತೇವೆ” ಎಂದು ಸಿಎಂ ಸ್ಟಾಲಿನ್ ಹೇಳಿದ್ದರು.

ತಮಿಳುನಾಡು ಮತ್ತು ಕೇಂದ್ರ ಸರ್ಕಾರದ ನಡುವಿನ ಮತ್ತೊಂದು ಪ್ರಮುಖ ವಿವಾದವೆಂದರೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿನ ತ್ರಿಭಾಷಾ ಸೂತ್ರ, ಇದನ್ನು ‘ಹಿಂದಿ ಹೇರಿಕೆ’ ಎಂದು ತಮಿಳುನಾಡು ಕಠುವಾಗಿ ವಿರೋಧಿಸಿದೆ.

ಹರಿಯಾಣ ಭೂ ವ್ಯವಹಾರ ಪ್ರಕರಣ; ರಾಬರ್ಟ್ ವಾದ್ರಾಗೆ ಎರಡನೇ ಸಮನ್ಸ್ ಕೊಟ್ಟ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...