Homeಮುಖಪುಟಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅವಲೋಕನ ಮಾಡುವಾಗ ನ್ಯಾಯಾಧೀಶರು ಜಾಗರೂಕರಾಗಿರಬೇಕು: ಸುಪ್ರೀಂ ಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅವಲೋಕನ ಮಾಡುವಾಗ ನ್ಯಾಯಾಧೀಶರು ಜಾಗರೂಕರಾಗಿರಬೇಕು: ಸುಪ್ರೀಂ ಕೋರ್ಟ್

- Advertisement -
- Advertisement -

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಧೀಶರು ಅವಲೋಕನಗಳನ್ನು ಮಾಡುವಾಗ ಜಾಗರೂಕರಾಗಿರಬೇಕು ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. 2024 ರಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಮಾರ್ಚ್ 11 ರಂದು ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದ ಆದೇಶದ ಬಗ್ಗೆ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಅಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ಈ ಹೇಳಿಕೆ ನೀಡಿದೆ. ಲೈಂಗಿಕ ದೌರ್ಜನ್ಯ

2024ರ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಜಾಮೀನು ನೀಡುವಾಗ ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿ ಸಂಜಯ್ ಕುಮಾರ್ ಸಿಂಗ್, ಪ್ರಕರಣದಲ್ಲಿ ”ಮಹಿಳೆಯೆ ಸಮಸ್ಯೆಯನ್ನು ಮೈಗೆಳೆದುಕೊಂಡಿದ್ದಾರೆ” ಎಂದು ಎಂದು ಹೇಳಿದ್ದು, ಅವರ ವಿರುದ್ಧ ನಡೆದ ಅಪರಾಧಕ್ಕೆ ಅವರೇ ಕಾರಣರಾಗಿದ್ದಾರೆ ಎಂದು ಇತ್ತೀಚೆಗೆ ಹೇಳಿದ್ದರು.

ಪ್ರತಿ ಪ್ರಕರಣದ ಸಂಗತಿಗಳನ್ನು ಅವಲಂಬಿಸಿ ಜಾಮೀನು ನೀಡುವುದು ನ್ಯಾಯಾಧೀಶರ ವಿವೇಚನೆಯಾಗಿದ್ದರೂ, ದೂರುದಾರರ ವಿರುದ್ಧ ಅನಗತ್ಯ ಅವಲೋಕನಗಳನ್ನು ತಪ್ಪಿಸಬೇಕು ಎಂದು ಮಂಗಳವಾರ ಸುಪ್ರೀಂಕೋರ್ಟ್ ಹೇಳಿದೆ.

“ಈಗ ಇನ್ನೊಬ್ಬ ನ್ಯಾಯಮೂರ್ತಿ ಮತ್ತೊಂದು ಆದೇಶ ನೀಡಿದ್ದಾರೆ. ಆರೋಪಿಗೆ ಜಾಮೀನು ನೀಡುವುದು ತಪ್ಪೇನಲ್ಲ, ಆದರೆ ‘ಮಹಿಳೆಯೆ ತೊಂದರೆ ಮೈಗೆಳೆದುಕೊಂಡಿದ್ದಾಳೆ’ ಎಂಬ ಚರ್ಚೆ ಏಕೆ ಮಾಡಬೇಕು? ವಿಶೇಷವಾಗಿ ಈ ಕಡೆಯಿಂದ [ನ್ಯಾಯಾಧೀಶರು] ಅಂತಹ ವಿಷಯಗಳನ್ನು ಹೇಳುವಾಗ ಜಾಗರೂಕರಾಗಿರಬೇಕು.” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

“ಸಂಪೂರ್ಣ ನ್ಯಾಯ ದೊರಕಿಸಿಕೊಡುವುದು ಮಾತ್ರವಲ್ಲ, ನ್ಯಾಯ ದೊರಕಿಸಿಕೊಟ್ಟಿದ್ದೇವೆ ಎಂದು ಕೂಡಾ ಕಾಣುವಂತಿರಬೇಕು. ಸಾಮಾನ್ಯ ವ್ಯಕ್ತಿಯೊಬ್ಬ ಅಂತಹ ಆದೇಶಗಳನ್ನು ಹೇಗೆ ಗ್ರಹಿಸುತ್ತಾರೆ ಎಂಬುದನ್ನು ಸಹ ನೋಡಬೇಕಾಗುತ್ತದೆ” ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಹೇಳಿದ್ದಾರೆ.

ಹೆಣ್ಣು ಮಗುವಿನ ಎದೆಗಳನ್ನು ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರವಲ್ಲ. ಅದು ವಿವಸ್ತ್ರಗೊಳಿಸಿ ಹಲ್ಲೆ ನಡೆಸುವ ಅಪರಾಧ ಎಂದು ಹೇಳಿದ್ದ ಅಲಹಾಬಾದ್ ಹೈಕೋರ್ಟ್‌ನ ಮತ್ತೊಂದು ತೀರ್ಪಿನ ಬಗ್ಗೆ ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿತ್ತು.

2021 ರಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಹೊತ್ತಿರುವ ಇಬ್ಬರು ವ್ಯಕ್ತಿಗಳ ವಿರುದ್ಧ ವಿಚಾರಣೆ ನಡೆಸಿ ಮಾರ್ಚ್ 17 ರಂದು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರು ಈ ಅವಲೋಕನಗಳನ್ನು ಮಾಡಿದ್ದರು.

ಭಾರತೀಯ ದಂಡ ಸಂಹಿತೆಯಡಿಯಲ್ಲಿ ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಅಡಿಯಲ್ಲಿ ವಿಚಾರಣೆಗೆ ಹಾಜರಾಗಲು ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯ ನ್ಯಾಯಾಲಯವು ಈ ಇಬ್ಬರು ವ್ಯಕ್ತಿಗಳಿಗೆ ಸಮನ್ಸ್ ನೀಡಿತ್ತು. ದೂರನ್ನು ಮೇಲ್ನೋಟಕ್ಕೆ ತೆಗೆದುಕೊಂಡರೂ ಅದು ಅತ್ಯಾಚಾರ ಯತ್ನದ ಅಪರಾಧವಾಗುವುದಿಲ್ಲ ಎಂದು ವಾದಿಸಿ ಅವರು ಸಮನ್ಸ್ ಅನ್ನು ಪ್ರಶ್ನಿಸಿದ್ದರು.

ಭಾರತೀಯ ದಂಡ ಸಂಹಿತೆಯಡಿಯಲ್ಲಿ ವಿವಸ್ತ್ರಗೊಳ್ಳುವ ಉದ್ದೇಶದಿಂದ ಹಲ್ಲೆ ನಡೆಸಿದ್ದಕ್ಕಾಗಿ ಮತ್ತು ಪೋಕ್ಸೊ ಕಾಯ್ದೆಯಡಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ಸೂಚಿಸಿತ್ತು. ಈ ರೀತಿಯ ಪ್ರಕರಣದಲ್ಲಿ ಕಡಿಮೆ ಶಿಕ್ಷೆ ವಿಧಿಸಲಾಗುತ್ತದೆ.

ಅದಾಗ್ಯೂ, ಮಾರ್ಚ್ 26 ರಂದು ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿತ್ತು. ನ್ಯಾಯಮೂರ್ತಿಗಳಾದ ಬೇಲಾ ತ್ರಿವೇದಿ ಮತ್ತು ಪ್ರಸನ್ನ ಬಿ. ವರಾಳೆ ಅವರ ಮತ್ತೊಂದು ಪೀಠವು ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದ ಒಂದು ದಿನದ ನಂತರ ಪೀಠವು ಸ್ವಯಂಪ್ರೇರಿತವಾಗಿ ಈ ವಿಷಯವನ್ನು ಪರಿಗಣಿಸಿತ್ತು.

ಈ ವೇಳೆ ಹೈಕೋರ್ಟ್‌ನ ಅವಲೋಕನಗಳು “ಆಘಾತಕಾರಿ” ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಮಂಗಳವಾರ ನಡೆದ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಒಂದು ತಿಂಗಳ ಕಾಲ ಮುಂದೂಡಿತು. ಲೈಂಗಿಕ ದೌರ್ಜನ್ಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...