Homeಮುಖಪುಟಸಗಣಿ ಬಳಿದ ಪ್ರಕರಣ: ಪ್ರಾಂಶುಪಾಲೆಯ ಕಚೇರಿ ಗೋಡೆಗೆ ಸಗಣಿ ಬಳಿದು ಪ್ರತಿಭಟಿಸಿದ ವಿದ್ಯಾರ್ಥಿ ಒಕ್ಕೂಟ; ವೀಡಿಯೋ...

ಸಗಣಿ ಬಳಿದ ಪ್ರಕರಣ: ಪ್ರಾಂಶುಪಾಲೆಯ ಕಚೇರಿ ಗೋಡೆಗೆ ಸಗಣಿ ಬಳಿದು ಪ್ರತಿಭಟಿಸಿದ ವಿದ್ಯಾರ್ಥಿ ಒಕ್ಕೂಟ; ವೀಡಿಯೋ ವೈರಲ್

- Advertisement -
- Advertisement -

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಡಿಯುಎಸ್‌ಯು) ಅಧ್ಯಕ್ಷ ರೋನಕ್ ಖತ್ರಿ ನೇತೃತ್ವದ ವಿದ್ಯಾರ್ಥಿಗಳು ಲಕ್ಷ್ಮಿಬಾಯಿ ಕಾಲೇಜಿನ ಪ್ರಾಂಶುಪಾಲೆಯ ಕಚೇರಿಯ ಗೋಡೆಗಳಿಗೆ ಹಸುವಿನ ಸಗಣಿ ಬಳಿದಿದ್ದಾರೆ. ಬೇಸಿಗೆಯ ಬಿಸಿಲಿನ ತಾಪವನ್ನು ತಗ್ಗಿಸಲು ಕಾಲೇಜಿನ ತರಗತಿ ಕೊಠಡಿಗಳಿಗೆ ಸಗಣಿಯಿಂದ ಸಾರಿಸಿದ್ದ ಪ್ರಾಂಶುಪಾಲೆಯ  ಕ್ರಮವನ್ನು ವಿರೋಧಿಸಿ ಈ ಪ್ರತಿಭಟನೆ ನಡೆದಿದೆ ಎಂದು ಖತ್ರಿ ಆರೋಪಿಸಿದ್ದಾರೆ.

ಈ ಹಿಂದೆ ದೆಹಲಿ ವಿಶ್ವವಿದ್ಯಾಲಯದ ಲಕ್ಷ್ಮಿಬಾಯಿ ಕಾಲೇಜಿನ ಪ್ರಾಂಶುಪಾಲೆಯು ತರಗತಿಯ ಗೋಡೆಗಳಿಗೆ ಹಸುವಿನ ಸಗಣಿ ಬಳಿಯುತ್ತಿರುವ ವಿಡಿಯೊ ವೈರಲ್ ಆಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವ್ಯಂಗ್ಯಕ್ಕೀಡಾಗಿತ್ತು. ಕೃತ್ಯವನ್ನು ಸಮರ್ಥಿಸಿಕೊಂಡಿರುವ ಪ್ರಾಂಶುಪಾಲೆ ಪ್ರತ್ಯುಷ್ ವತ್ಸಲಾ, ಇದನ್ನು ಅಧ್ಯಾಪಕರ ನೇತೃತ್ವದಲ್ಲಿ ನಡೆಯುತ್ತಿರುವ ಸಂಶೋಧನಾ ಯೋಜನೆಯ ಭಾಗವಾಗಿ ಮಾಡಲಾಗಿದೆ ಎಂದು ಹೇಳಿದ್ದರು.

ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊದಲ್ಲಿ, ಕಾಲೇಜು ಪ್ರಾಂಶುಪಾಲರ ಅನುಪಸ್ಥಿತಿಯಲ್ಲಿ ಖತ್ರಿಯವರು ಉಪ ಪ್ರಾಂಶುಪಾಲೆಯವರೊಂದಿಗೆ ವಾಗ್ವಾದ ನಡೆಸುತ್ತಿರುವುದನ್ನು ಕಾಣಬಹುದು.

ಕ್ಯಾಂಪಸ್‌ನಲ್ಲಿ ಪ್ರಚಾರ ಮಾಡಲಾದ “ಅಸಂಬದ್ಧ ಮತ್ತು ಅವೈಜ್ಞಾನಿಕ” ವಾದ ಈ ಸಗಣಿ ಬಳಿಯುವ ಪದ್ಧತಿಯನ್ನು ಎತ್ತಿ ತೋರಿಸುವ ಉದ್ದೇಶದಿಂದ ತಮ್ಮ ಈ ಪ್ರತಿಭಟನೆಯ ಉದ್ದೇಶ ಎಂದು ಅವರು ಹೇಳಿದ್ದಾರೆ.

ಪ್ರಾಂಶುಪಾಲೆಯ ಜೊತೆ ತೀವ್ರ ವಾಗ್ವಾದದ ನಂತರ ಡಿಯುಎಸ್‌ಯು ಅಧ್ಯಕ್ಷರು ಇತರ ವಿದ್ಯಾರ್ಥಿಗಳೊಂದಿಗೆ ಸೇರಿ ಪ್ರಾಂಶುಪಾಲೆಯ ಕಚೇರಿಯ ಗೋಡೆಗಳು ಮತ್ತು ಶೌಚಾಲಯದ ಮೇಲೆ ಸಗಣಿಯಿಂದ ಸಾರಿಸಿದ್ದಾರೆ.

ಪ್ರಾಂಶುಪಾಲೆ ಕಾಲೇಜಿನ ಕೊಠಡಿಗೆ ಸಗಣಿ ಬಳಿಯುವ ಕ್ಲಿಪ್‌ನಲ್ಲಿ, ಸಿ ಬ್ಲಾಕ್‌ನಲ್ಲಿ ತರಗತಿ ಕೊಠಡಿಗಳನ್ನು ತಂಪಾಗಿಸಲು ಸ್ಥಳೀಯ ವಿಧಾನಗಳನ್ನು ಬಳಸಲಾಗುತ್ತಿದೆ ಎಂದು ಪ್ರಾಂಶುಪಾಲೆ ಪ್ರತ್ಯುಷ್ ವತ್ಸಲಾ ಸಿಬ್ಬಂದಿಯ ಸಹಾಯದಿಂದ ಗೋಡೆಗಳಿಗೆ ಲೇಪಿಸುತ್ತಿರುವುದನ್ನು ಕಾಣಬಹುದು.

ಈಗ ವೈರಲ್ ಆಗಿರುವ ವೀಡಿಯೊ ವಿಶ್ವವಿದ್ಯಾಲಯದಾದ್ಯಂತ ಆಕ್ರೋಶ ಮತ್ತು ಗೊಂದಲವನ್ನು ಹುಟ್ಟುಹಾಕಿತ್ತು ಮತ್ತು ಕಾಲೇಜು ಆಡಳಿತದ ಕ್ರಮಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿತು.

ಪ್ರಾಂಶುಪಾಲರಾದ ಪ್ರತ್ಯುಷ್ ವತ್ಸಲಾ ಅವರು, ಅಧ್ಯಾಪಕರ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಗಣಿ ಬಳಿಯುವ ಕ್ರಮವು ಸಂಶೋಧನಾ ಯೋಜನೆಯ ಭಾಗವಾಗಿದೆ ಎಂದು ಹೇಳಿದರು. ‘ಸಾಂಪ್ರದಾಯಿಕ ಭಾರತೀಯ ಜ್ಞಾನವನ್ನು ಬಳಸಿಕೊಂಡು ಶಾಖ ಒತ್ತಡ ನಿಯಂತ್ರಣದ ಅಧ್ಯಯನ’ ಎಂಬ ಶೀರ್ಷಿಕೆಯ ಅಧ್ಯಯನವು ಇನ್ನೂ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದರು.

ಇದು ಪ್ರಕ್ರಿಯೆಯಲ್ಲಿದೆ. ಒಂದು ವಾರದ ನಂತರ ನಾನು ಪೂರ್ಣ ಸಂಶೋಧನೆಯ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಾಗುತ್ತದೆ. ಪೋರ್ಟಾ ಕ್ಯಾಬಿನ್‌ಗಳಲ್ಲಿ ಸಂಶೋಧನೆಯನ್ನು ನಡೆಸಲಾಗುತ್ತಿದೆ. ನೈಸರ್ಗಿಕ ಮಣ್ಣನ್ನು ಮುಟ್ಟುವುದರಿಂದ ಯಾವುದೇ ಹಾನಿಯಾಗದ ಕಾರಣ ನಾನು ಅವುಗಳಲ್ಲಿ ಒಂದನ್ನು ನಾನೇ ಲೇಪಿಸಿದೆ. ಕೆಲವು ಜನರು ಪೂರ್ಣ ವಿವರಗಳನ್ನು ತಿಳಿಯದೆ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ ಎಂದು ಪ್ರತ್ಯುಷ್ ವತ್ಸಲಾ ಹೇಳುತ್ತಾರೆ.

ಕಾಲೇಜು ಆಡಳಿತವು ಇನ್ನೂ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡದಿದ್ದರೂ, ಅನೇಕ ವಿದ್ಯಾರ್ಥಿಗಳು ಈ ನಿರ್ಧಾರದಿಂದ ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಆರೋಗ್ಯ ಕಾಳಜಿ ಮತ್ತು ಅಂತಹ ಕ್ರಮಕ್ಕೆ ವೈಜ್ಞಾನಿಕ ಆಧಾರಗಳ ಕೊರತೆಯನ್ನು ಉಲ್ಲೇಖಿಸಿದ್ದಾರೆ.

ಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು ಗೋಡೆಗೆ ಸೆಗಣಿ ಬಳಿದ ಪ್ರಾಂಶುಪಾಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...