Homeಮುಖಪುಟಸಗಣಿ ಬಳಿದ ಪ್ರಕರಣ: ಪ್ರಾಂಶುಪಾಲೆಯ ಕಚೇರಿ ಗೋಡೆಗೆ ಸಗಣಿ ಬಳಿದು ಪ್ರತಿಭಟಿಸಿದ ವಿದ್ಯಾರ್ಥಿ ಒಕ್ಕೂಟ; ವೀಡಿಯೋ...

ಸಗಣಿ ಬಳಿದ ಪ್ರಕರಣ: ಪ್ರಾಂಶುಪಾಲೆಯ ಕಚೇರಿ ಗೋಡೆಗೆ ಸಗಣಿ ಬಳಿದು ಪ್ರತಿಭಟಿಸಿದ ವಿದ್ಯಾರ್ಥಿ ಒಕ್ಕೂಟ; ವೀಡಿಯೋ ವೈರಲ್

- Advertisement -
- Advertisement -

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಡಿಯುಎಸ್‌ಯು) ಅಧ್ಯಕ್ಷ ರೋನಕ್ ಖತ್ರಿ ನೇತೃತ್ವದ ವಿದ್ಯಾರ್ಥಿಗಳು ಲಕ್ಷ್ಮಿಬಾಯಿ ಕಾಲೇಜಿನ ಪ್ರಾಂಶುಪಾಲೆಯ ಕಚೇರಿಯ ಗೋಡೆಗಳಿಗೆ ಹಸುವಿನ ಸಗಣಿ ಬಳಿದಿದ್ದಾರೆ. ಬೇಸಿಗೆಯ ಬಿಸಿಲಿನ ತಾಪವನ್ನು ತಗ್ಗಿಸಲು ಕಾಲೇಜಿನ ತರಗತಿ ಕೊಠಡಿಗಳಿಗೆ ಸಗಣಿಯಿಂದ ಸಾರಿಸಿದ್ದ ಪ್ರಾಂಶುಪಾಲೆಯ  ಕ್ರಮವನ್ನು ವಿರೋಧಿಸಿ ಈ ಪ್ರತಿಭಟನೆ ನಡೆದಿದೆ ಎಂದು ಖತ್ರಿ ಆರೋಪಿಸಿದ್ದಾರೆ.

ಈ ಹಿಂದೆ ದೆಹಲಿ ವಿಶ್ವವಿದ್ಯಾಲಯದ ಲಕ್ಷ್ಮಿಬಾಯಿ ಕಾಲೇಜಿನ ಪ್ರಾಂಶುಪಾಲೆಯು ತರಗತಿಯ ಗೋಡೆಗಳಿಗೆ ಹಸುವಿನ ಸಗಣಿ ಬಳಿಯುತ್ತಿರುವ ವಿಡಿಯೊ ವೈರಲ್ ಆಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವ್ಯಂಗ್ಯಕ್ಕೀಡಾಗಿತ್ತು. ಕೃತ್ಯವನ್ನು ಸಮರ್ಥಿಸಿಕೊಂಡಿರುವ ಪ್ರಾಂಶುಪಾಲೆ ಪ್ರತ್ಯುಷ್ ವತ್ಸಲಾ, ಇದನ್ನು ಅಧ್ಯಾಪಕರ ನೇತೃತ್ವದಲ್ಲಿ ನಡೆಯುತ್ತಿರುವ ಸಂಶೋಧನಾ ಯೋಜನೆಯ ಭಾಗವಾಗಿ ಮಾಡಲಾಗಿದೆ ಎಂದು ಹೇಳಿದ್ದರು.

ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊದಲ್ಲಿ, ಕಾಲೇಜು ಪ್ರಾಂಶುಪಾಲರ ಅನುಪಸ್ಥಿತಿಯಲ್ಲಿ ಖತ್ರಿಯವರು ಉಪ ಪ್ರಾಂಶುಪಾಲೆಯವರೊಂದಿಗೆ ವಾಗ್ವಾದ ನಡೆಸುತ್ತಿರುವುದನ್ನು ಕಾಣಬಹುದು.

ಕ್ಯಾಂಪಸ್‌ನಲ್ಲಿ ಪ್ರಚಾರ ಮಾಡಲಾದ “ಅಸಂಬದ್ಧ ಮತ್ತು ಅವೈಜ್ಞಾನಿಕ” ವಾದ ಈ ಸಗಣಿ ಬಳಿಯುವ ಪದ್ಧತಿಯನ್ನು ಎತ್ತಿ ತೋರಿಸುವ ಉದ್ದೇಶದಿಂದ ತಮ್ಮ ಈ ಪ್ರತಿಭಟನೆಯ ಉದ್ದೇಶ ಎಂದು ಅವರು ಹೇಳಿದ್ದಾರೆ.

ಪ್ರಾಂಶುಪಾಲೆಯ ಜೊತೆ ತೀವ್ರ ವಾಗ್ವಾದದ ನಂತರ ಡಿಯುಎಸ್‌ಯು ಅಧ್ಯಕ್ಷರು ಇತರ ವಿದ್ಯಾರ್ಥಿಗಳೊಂದಿಗೆ ಸೇರಿ ಪ್ರಾಂಶುಪಾಲೆಯ ಕಚೇರಿಯ ಗೋಡೆಗಳು ಮತ್ತು ಶೌಚಾಲಯದ ಮೇಲೆ ಸಗಣಿಯಿಂದ ಸಾರಿಸಿದ್ದಾರೆ.

ಪ್ರಾಂಶುಪಾಲೆ ಕಾಲೇಜಿನ ಕೊಠಡಿಗೆ ಸಗಣಿ ಬಳಿಯುವ ಕ್ಲಿಪ್‌ನಲ್ಲಿ, ಸಿ ಬ್ಲಾಕ್‌ನಲ್ಲಿ ತರಗತಿ ಕೊಠಡಿಗಳನ್ನು ತಂಪಾಗಿಸಲು ಸ್ಥಳೀಯ ವಿಧಾನಗಳನ್ನು ಬಳಸಲಾಗುತ್ತಿದೆ ಎಂದು ಪ್ರಾಂಶುಪಾಲೆ ಪ್ರತ್ಯುಷ್ ವತ್ಸಲಾ ಸಿಬ್ಬಂದಿಯ ಸಹಾಯದಿಂದ ಗೋಡೆಗಳಿಗೆ ಲೇಪಿಸುತ್ತಿರುವುದನ್ನು ಕಾಣಬಹುದು.

ಈಗ ವೈರಲ್ ಆಗಿರುವ ವೀಡಿಯೊ ವಿಶ್ವವಿದ್ಯಾಲಯದಾದ್ಯಂತ ಆಕ್ರೋಶ ಮತ್ತು ಗೊಂದಲವನ್ನು ಹುಟ್ಟುಹಾಕಿತ್ತು ಮತ್ತು ಕಾಲೇಜು ಆಡಳಿತದ ಕ್ರಮಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿತು.

ಪ್ರಾಂಶುಪಾಲರಾದ ಪ್ರತ್ಯುಷ್ ವತ್ಸಲಾ ಅವರು, ಅಧ್ಯಾಪಕರ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಗಣಿ ಬಳಿಯುವ ಕ್ರಮವು ಸಂಶೋಧನಾ ಯೋಜನೆಯ ಭಾಗವಾಗಿದೆ ಎಂದು ಹೇಳಿದರು. ‘ಸಾಂಪ್ರದಾಯಿಕ ಭಾರತೀಯ ಜ್ಞಾನವನ್ನು ಬಳಸಿಕೊಂಡು ಶಾಖ ಒತ್ತಡ ನಿಯಂತ್ರಣದ ಅಧ್ಯಯನ’ ಎಂಬ ಶೀರ್ಷಿಕೆಯ ಅಧ್ಯಯನವು ಇನ್ನೂ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದರು.

ಇದು ಪ್ರಕ್ರಿಯೆಯಲ್ಲಿದೆ. ಒಂದು ವಾರದ ನಂತರ ನಾನು ಪೂರ್ಣ ಸಂಶೋಧನೆಯ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಾಗುತ್ತದೆ. ಪೋರ್ಟಾ ಕ್ಯಾಬಿನ್‌ಗಳಲ್ಲಿ ಸಂಶೋಧನೆಯನ್ನು ನಡೆಸಲಾಗುತ್ತಿದೆ. ನೈಸರ್ಗಿಕ ಮಣ್ಣನ್ನು ಮುಟ್ಟುವುದರಿಂದ ಯಾವುದೇ ಹಾನಿಯಾಗದ ಕಾರಣ ನಾನು ಅವುಗಳಲ್ಲಿ ಒಂದನ್ನು ನಾನೇ ಲೇಪಿಸಿದೆ. ಕೆಲವು ಜನರು ಪೂರ್ಣ ವಿವರಗಳನ್ನು ತಿಳಿಯದೆ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ ಎಂದು ಪ್ರತ್ಯುಷ್ ವತ್ಸಲಾ ಹೇಳುತ್ತಾರೆ.

ಕಾಲೇಜು ಆಡಳಿತವು ಇನ್ನೂ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡದಿದ್ದರೂ, ಅನೇಕ ವಿದ್ಯಾರ್ಥಿಗಳು ಈ ನಿರ್ಧಾರದಿಂದ ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಆರೋಗ್ಯ ಕಾಳಜಿ ಮತ್ತು ಅಂತಹ ಕ್ರಮಕ್ಕೆ ವೈಜ್ಞಾನಿಕ ಆಧಾರಗಳ ಕೊರತೆಯನ್ನು ಉಲ್ಲೇಖಿಸಿದ್ದಾರೆ.

ಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು ಗೋಡೆಗೆ ಸೆಗಣಿ ಬಳಿದ ಪ್ರಾಂಶುಪಾಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...