Homeಮುಖಪುಟಲಡ್ಕಿ ಬಹಿನ್ ಯೋಜನೆಯ ಫಲಾನುಭವಿ 8 ಲಕ್ಷ ಮಹಿಳೆಯರಿಗೆ 1500 ರಿಂದ 500 ಗೆ ಕಡಿತಗೊಳಿಸಿದ...

ಲಡ್ಕಿ ಬಹಿನ್ ಯೋಜನೆಯ ಫಲಾನುಭವಿ 8 ಲಕ್ಷ ಮಹಿಳೆಯರಿಗೆ 1500 ರಿಂದ 500 ಗೆ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರವು ತನ್ನ ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್ ಯೋಜನೆಯಡಿಯಲ್ಲಿ ನೀಡುವ ಮಾಸಿಕ ಪಾವತಿಯನ್ನು 8 ಲಕ್ಷ ಮಹಿಳೆಯರಿಗೆ 1,500 ರೂ.ಗಳಿಂದ 500 ರೂ.ಗಳಿಗೆ ಕಡಿತಗೊಳಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅನುದಾನ ಕಡಿತಗೊಂಡ ಮಹಿಳೆಯರುವ ನಮೋ ಶೇತ್ಕರಿ ಮಹಾಸನ್ಮಾನ್ ನಿಧಿ ಯೋಜನೆಯಡಿಯಲ್ಲಿ ತಿಂಗಳಿಗೆ 1,000 ರೂ.ಗಳನ್ನು ಪಡೆಯುತ್ತಿರುವವರಾಗಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಲಡ್ಕಿ ಬಹಿನ್ ಯೋಜನೆಯ ನಿಯಮಗಳ ಅಡಿಯಲ್ಲಿ, ಸರ್ಕಾರ ನೀಡುವ ಒಟ್ಟು ಮಾಸಿಕ ಪ್ರಯೋಜನದಲ್ಲಿ 1,500 ರೂ.ಗಳನ್ನು ಮೀರದಿದ್ದರೆ ಮಾತ್ರ ಫಲಾನುಭವಿಗಳು ಇತರ ಸರ್ಕಾರಿ ಸಹಾಯವನ್ನು ಪಡೆಯಬಹುದಾಗಿದೆ. ಯೋಜನೆಯು ಅರ್ಹತಾ ಮಾನದಂಡಗಳನ್ನು ಪೂರೈಸುವವರಿಗೆ ಸೀಮಿತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ರಾಜ್ಯವು ನಡೆಸುತ್ತಿರುವ ಪರಿಶೀಲನೆಯ ಭಾಗವಾಗಿ ಈ ಕಡಿತವನ್ನು ಮಾಡಲಾಗಿದೆ.

“ಸದ್ಯದ ಪರಿಶೀಲನೆ ನಡೆಯುತ್ತಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ಪತ್ರಿಕೆ ಉಲ್ಲೇಖಿಸಿದೆ. “ಮೊದಲು ಜಿಲ್ಲೆಗಳಿಂದ ರಾಜ್ಯ ಪ್ರಧಾನ ಕಚೇರಿಗೆ ಕಳುಹಿಸಲಾದ ಅರ್ಜಿಗಳನ್ನು ಸ್ಕ್ಯಾನ್ ಮಾಡುತ್ತೇವೆ. ನಂತರ ಅರ್ಹ ಪ್ರಕರಣಗಳನ್ನು ಮರುಪರಿಶೀಲಿಸುತ್ತೇವೆ.” ಎಂದು ಅವರು ಹೇಳಿದ್ದಾರೆ.

ಪರಿಶೀಲನೆಯ ನಂತರ ಫಲಾನುಭವಿಗಳ ಸಂಖ್ಯೆ 10 ರಿಂದ 15 ಲಕ್ಷದಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಹಿಂದೆ ಎಂದು ಹೇಳಿದ್ದರು. “ನಾವು ಮಾನದಂಡಗಳನ್ನು ಅಥವಾ ಹಣವನ್ನು ಬದಲಾಯಿಸುತ್ತಿಲ್ಲ. ಅರ್ಹರಿಗೆ ಮಾತ್ರ ಸ್ಟೈಫಂಡ್ ಸಿಗಬೇಕು ಎಂದು ಖಚಿತಪಡಿಸಿಕೊಳ್ಳುತ್ತಿದ್ದೇವೆ” ಎಂದು ಅವರು ಹೇಳಿದ್ದರು.

ಅಕ್ಟೋಬರ್ ವೇಳೆಗೆ ರಾಜ್ಯವು ಈ ಯೋಜನೆಗೆ ಸುಮಾರು 2.63 ಕೋಟಿ ಅರ್ಜಿಗಳನ್ನು ಸ್ವೀಕರಿಸಿತ್ತು. ಪರಿಶೀಲನೆಯ ನಂತರ, ಫೆಬ್ರವರಿ ವೇಳೆಗೆ ಈ ಅಂಕಿ ಅಂಶವು 2.52 ಕೋಟಿಗಳಲ್ಲಿ 11 ಲಕ್ಷ ಇಳಿದಿದೆ, ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ 2.46 ಕೋಟಿ ಫಲಾನುಭವಿಗಳಿಗೆ ಹಣ ಪಾವತಿ ಮಾಡಲಾಗಿದೆ.

ಅರ್ಹತೆ ಪಡೆಯಲು, ಅರ್ಜಿದಾರರು 18 ರಿಂದ 65 ವರ್ಷ ವಯಸ್ಸಿನವರಾಗಿರಬೇಕು, ರಾಜ್ಯದಲ್ಲಿ ನೆಲೆಸಿರಬೇಕು ಮತ್ತು ವಾರ್ಷಿಕವಾಗಿ 2.5 ಲಕ್ಷ ರೂ.ಗಿಂತ ಕಡಿಮೆ ಕುಟುಂಬದ ಆದಾಯವನ್ನು ಹೊಂದಿರಬೇಕು. ಸರ್ಕಾರಿ ಉದ್ಯೋಗಿ ಅಥವಾ ನಾಲ್ಕು ಚಕ್ರಗಳ ವಾಹನವನ್ನು ಹೊಂದಿರುವ ಕುಟುಂಬಗಳು ಈ ಯೋಜನೆಗೆ ಅರ್ಹರಲ್ಲ.

ಸರ್ಕಾರದ ಈ ನಡೆಗೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿದ್ದು, 8 ಲಕ್ಷ ಮಹಿಳೆಯರಿಗೆ ಹಣ ಪಾವತಿಯನ್ನು ಕಡಿಮೆ ಮಾಡುವ ಸರ್ಕಾರದ ನಿರ್ಧಾರವು ನಾಗರಿಕರಿಗೆ ಮಾಡಿದ ದ್ರೋಹ ಎಂದು ಹೇಳಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪ್ಕಲ್, “ಸರ್ಕಾರ ರಚಿಸಿದ ಐದು ತಿಂಗಳೊಳಗೆ, ಮಹಾಯುತಿ ರಾಜ್ಯದ ಜನರಿಗೆ ಎರಡು ಬಾರಿ ದ್ರೋಹ ಮಾಡಿದೆ” ಎಂದು ಹೇಳಿದ್ದಾರೆ.

“ಇತ್ತೀಚೆಗಷ್ಟೆ, ರಾಜ್ಯ ಸರ್ಕಾರವು ತನ್ನ ಕೃಷಿ ಸಾಲ ಮನ್ನಾ ಭರವಸೆಯನ್ನು ರದ್ದುಗೊಳಿಸಿತ್ತು ಮತ್ತು ಈಗ 8 ಲಕ್ಷ ಫಲಾನುಭವಿಗಳಿಗೆ ಲಡ್ಕಿ ಬಹಿನ್ ಹಣವನ್ನು ಕಡಿಮೆ ಮಾಡುವ ಮೂಲಕ ದ್ರೋಹ ಮಾಡುತ್ತಿದೆ. ಮುಂಬರುವ ತಿಂಗಳುಗಳಲ್ಲಿ ಈ ಸರ್ಕಾರದಿಂದ ಇಂತಹ ಹೆಚ್ಚಿನ ದ್ರೋಹಗಳಿಗೆ ನಾಗರಿಕರು ಸಿದ್ಧರಾಗಿರಬೇಕು” ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ವಿಜಯ್ ವಡೆಟ್ಟಿವಾರ್ ಈ ಯೋಜನೆಯನ್ನು ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮಾತ್ರ ಪರಿಚಯಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸೋನಿಯಾ, ರಾಹುಲ್ ವಿರುದ್ಧ ಇಡಿ ಚಾರ್ಜ್‌ ಶೀಟ್| ಮೋದಿ, ಅಮಿತ್ ಶಾ ಸೇಡಿನ ರಾಜಕಾರಣದ ಮುಂದುವರಿದ ಭಾಗ; ಸಿಎಂ ಸಿದ್ದರಾಮಯ್ಯ

ಸೋನಿಯಾ, ರಾಹುಲ್ ವಿರುದ್ಧ ಇಡಿ ಚಾರ್ಜ್‌ ಶೀಟ್| ಮೋದಿ, ಅಮಿತ್ ಶಾ ಸೇಡಿನ ರಾಜಕಾರಣದ ಮುಂದುವರಿದ ಭಾಗ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...