Homeಮುಖಪುಟಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್‌ ಗವಾಯಿ ಹೆಸರು ಶಿಫಾರಸು

ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್‌ ಗವಾಯಿ ಹೆಸರು ಶಿಫಾರಸು

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಭೂಷಣ್ ರಾಮಕೃಷ್ಣ ಗವಾಯಿ (ಬಿ.ಆರ್‌ ಗವಾಯಿ) ಅವರ ಹೆಸರನ್ನು ಹಾಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಬುಧವಾರ (ಏಪ್ರಿಲ್.16) ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಮೇ 13ರಂದು ಹಾಲಿ ಸಿಜೆಐ ಖನ್ನಾ ಅವರ ನಿವೃತ್ತಿಯ ನಂತರ, ಮೇ 14ರಂದು ಸುಪ್ರೀಂ ಕೋರ್ಟ್‌ನ 52ನೇ ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾಯಮೂರ್ತಿ ಗವಾಯಿ, ಹಾಲಿ ಸಿಜೆಐ ಖನ್ನಾ ನಂತರ ಎರಡನೇ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ.

ಕಳೆದ ವರ್ಷದ ನವೆಂಬರ್ 11 ರಂದು 51ನೇ ಸಿಜೆಐ ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕರಿಸಿದ್ದರು. ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನಿವೃತ್ತಿ ವಯಸ್ಸು 65 ವರ್ಷ ಆಗಿದೆ.

ಮೇ 24, 2019ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ನ್ಯಾಯಮೂರ್ತಿ ಗವಾಯಿ ಅವರು ಆರು ತಿಂಗಳಿಗಿಂತ ಹೆಚ್ಚು ಕಾಲ ಸಿಜೆಐ ಆಗಿ ಸೇವೆ ಸಲ್ಲಿಸಲಿದ್ದಾರೆ. ಅವರು ನವೆಂಬರ್ 23, 2025 ರಂದು ನಿವೃತ್ತರಾಗಲಿದ್ದಾರೆ.

ನವೆಂಬರ್ 24, 1960ರಂದು ಅಮರಾವತಿಯಲ್ಲಿ ಜನಿಸಿದ ನ್ಯಾಯಮೂರ್ತಿ ಗವಾಯಿ ಅವರು, ನವೆಂಬರ್ 14, 2003ರಂದು ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಬಡ್ತಿ ಪಡೆದರು. ಅವರು ನವೆಂಬರ್ 12, 2005ರಂದು ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರಾದರು.

ನ್ಯಾಯಮೂರ್ತಿ ಗವಾಯಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಸಾಂವಿಧಾನಿಕ ಪೀಠಗಳ ಭಾಗವಾಗಿದ್ದರು, ಅವುಗಳು ಮಹತ್ವದ ತೀರ್ಪುಗಳನ್ನು ನೀಡಿವೆ.

ಡಿಸೆಂಬರ್ 2023ರಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಸರ್ವಾನುಮತದಿಂದ ಎತ್ತಿಹಿಡಿದ ಐದು ನ್ಯಾಯಾಧೀಶರ ಸಂವಿಧಾನ ಪೀಠದ ಭಾಗವಾಗಿದ್ದರು.

ರಾಜಕೀಯ ನಿಧಿ ಸಂಗ್ರಹಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ‘ಚುನಾವಣಾ ಬಾಂಡ್ ಯೋಜನೆ’ಯನ್ನು ರದ್ದುಗೊಳಿಸಿ ಐತಿಹಾಸಿಕ ತೀರ್ಪು ನೀಡಿದ ಐವರು ನ್ಯಾಯಾಧೀಶರ ಸಂವಿಧಾನ ಪೀಠದಲ್ಲಿ ನ್ಯಾಯಮೂರ್ತಿ ಗವಾಯಿ ಇದ್ದರು.

4:1 ಬಹುಮತದಿಂದ, 2016ರಲ್ಲಿ 1,000 ಮತ್ತು 500 ರೂಪಾಯಿ ಮುಖಬೆಲೆಯ ಕರೆನ್ಸಿ ನೋಟುಗಳನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಐವರು ನ್ಯಾಯಾಧೀಶರ ಸಂವಿಧಾನ ಪೀಠದಲ್ಲಿ ನ್ಯಾಯಮೂರ್ತಿ ಗವಾಯಿ ಭಾಗವಾಗಿದ್ದರು.

6:1 ಬಹುಮತದಿಂದ, ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಗಳು ಸಾಂವಿಧಾನಿಕ ಅಧಿಕಾರ ಹೊಂದಿವೆ ಎಂದು ಮಹತ್ವದ ತೀರ್ಪು ನೀಡಿದ ಏಳು ನ್ಯಾಯಾಧೀಶರ ಸಂವಿಧಾನ ಪೀಠದಲ್ಲಿ ನ್ಯಾಯಮೂರ್ತಿ ಗವಾಯಿ ಇದ್ದರು.

ನ್ಯಾಯಮೂರ್ತಿ ಗವಾಯಿ ಅವರನ್ನೊಳಗೊಂಡ ಏಳು ನ್ಯಾಯಾಧೀಶರ ಸಂವಿಧಾನ ಪೀಠವು, ಪಕ್ಷಗಳ ನಡುವಿನ ಮುದ್ರೆಯಿಲ್ಲದ ಅಥವಾ ಸರಿಯಾದ ಮುದ್ರೆಯಿಲ್ಲದ ಒಪ್ಪಂದದಲ್ಲಿನ ಮಧ್ಯಸ್ಥಿಕೆ ಷರತ್ತು ಜಾರಿಗೊಳಿಸಬಹುದಾಗಿದೆ. ಏಕೆಂದರೆ, ಅಂತಹ ದೋಷವನ್ನು ಸರಿಪಡಿಸಬಹುದು ಮತ್ತು ಒಪ್ಪಂದವನ್ನು ಅಮಾನ್ಯಗೊಳಿಸುವುದಿಲ್ಲ ಎಂದು ತೀರ್ಪು ನೀಡಿತ್ತು.

ಕಾರಣ ಕೇಳಿ ನೋಟಿಸ್ ನೀಡದೆ ಯಾವುದೇ ಕಟ್ಟಡಗಳನ್ನು ಕೆಡವಬಾರದು, ನೋಟಿಸ್ ನೀಡಿದ ಬಳಿಕ ಅದಕ್ಕೆ ಪ್ರತಿಕ್ರಿಯಿಸಲು ಕಟ್ಟಡ ಮಾಲೀಕರಿಗೆ 15 ದಿನಗಳ ಸಮಯವಕಾಶ ನೀಡಬೇಕು ಎಂಬುವುದು ಸೇರಿದಂತೆ ಕಟ್ಟಡಗಳ ತೆರವು ಕಾರ್ಯಾಚರಣೆ ಇಡೀ ದೇಶಕ್ಕೆ ಮಾರ್ಗಸೂಚಿಗಳನ್ನು ರೂಪಿಸಿ ನೀಡಿದ ಮಹತ್ವದ ತೀರ್ಪು ನೀಡಿದ ಪೀಠದ ನೇತೃತ್ವವನ್ನು ನ್ಯಾಯಮೂರ್ತಿ ಗವಾಯಿ ವಹಿಸಿದ್ದರು.

ಇದಲ್ಲದೆ, ನ್ಯಾಯಮೂರ್ತಿ ಗವಾಯಿ ಅವರು ಅರಣ್ಯಗಳು, ವನ್ಯಜೀವಿಗಳು ಮತ್ತು ಮರಗಳ ರಕ್ಷಣೆಗೆ ಸಂಬಂಧಿಸಿದ ವಿಷಯಗಳನ್ನು ಆಲಿಸುವ ಪೀಠದ ಮುಖ್ಯಸ್ಥರಾಗಿದ್ದಾರೆ.

ಮಾರ್ಚ್ 16, 1985ರಂದು ವಕೀಲರಾಗಿ ವೃತ್ತಿ ಜೀವನ ಆರಂಭಿಸಿದ ನ್ಯಾಯಮೂರ್ತಿ ಗವಾಯಿ ಅವರು, ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್, ಅಮರಾವತಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಅಮರಾವತಿ ವಿಶ್ವವಿದ್ಯಾಲಯದ ಸ್ಥಾಯಿ ಸಲಹೆಗಾರರಾಗಿದ್ದರು.

ಆಗಸ್ಟ್ 1992ರಿಂದ ಜುಲೈ 1993ರವರೆಗೆ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದಲ್ಲಿ ಸಹಾಯಕ ಸರ್ಕಾರಿ ವಕೀಲ ಮತ್ತು ಹೆಚ್ಚುವರಿ ಸಾರ್ವಜನಿಕ ಅಭಿಯೋಜಕರಾಗಿ ನ್ಯಾಯಮೂರ್ತಿ ಗವಾಯಿ ನೇಮಕಗೊಂಡಿದ್ದರು.

ಜನವರಿ 17, 2000ದಂದು ನಾಗಪುರ ಪೀಠಕ್ಕೆ ಸರ್ಕಾರಿ ಪ್ಲೀಡರ್ ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನ್ಯಾಯಮೂರ್ತಿ ಗವಾಯಿ ಅವರನ್ನು ನೇಮಿಸಲಾಗಿತ್ತು.

ಲಡ್ಕಿ ಬಹಿನ್ ಯೋಜನೆಯ ಫಲಾನುಭವಿ 8 ಲಕ್ಷ ಮಹಿಳೆಯರಿಗೆ 1500 ರಿಂದ 500 ಗೆ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...