Homeಮುಖಪುಟ'ಸುಪ್ರೀಂ ಕೋರ್ಟ್ ನಿರ್ದೇಶನಗಳ ಬಗ್ಗೆ ಅರಿವಿರಲಿಲ್ಲ': ಆರೋಪಿಗಳ ಮನೆ ಕೆಡವಿದ್ದಕ್ಕೆ ಹೈಕೋರ್ಟ್‌ ಮುಂದೆ ಕ್ಷಮೆಯಾಚಿಸಿದ ನಾಗ್ಪುರ...

‘ಸುಪ್ರೀಂ ಕೋರ್ಟ್ ನಿರ್ದೇಶನಗಳ ಬಗ್ಗೆ ಅರಿವಿರಲಿಲ್ಲ’: ಆರೋಪಿಗಳ ಮನೆ ಕೆಡವಿದ್ದಕ್ಕೆ ಹೈಕೋರ್ಟ್‌ ಮುಂದೆ ಕ್ಷಮೆಯಾಚಿಸಿದ ನಾಗ್ಪುರ ಪಾಲಿಕೆ

- Advertisement -
- Advertisement -

ಇತ್ತೀಚೆಗೆ ನಡೆದ ಕೋಮು ಹಿಂಸಾಚಾರದ ಆರೋಪಿಗಳ ಮನೆಗಳನ್ನು ಅಕ್ರಮ ಎಂದು ಭಾಗಶಃ ಕೆಡವುವ ವೇಳೆ ಸುಪ್ರೀಂ ಕೋರ್ಟ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕೆ ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್ (ಎನ್‌ಎಂಸಿ) ಮಂಗಳವಾರ (ಏ.15) ಬಾಂಬೆ ಹೈಕೋರ್ಟ್‌ ಮುಂದೆ ಬೇಷರತ್ ಕ್ಷಮೆಯಾಚಿಸಿದೆ

ನ್ಯಾಯಮೂರ್ತಿ ನಿತಿನ್ ಸಾಂಬ್ರೆ ನೇತೃತ್ವದ ವಿಭಾಗೀಯ ಪೀಠದ ಮುಂದೆ ಎನ್‌ಎಂಸಿ ತನ್ನ ಅಫಿಡವಿಟ್ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್‌ನ ತೀರ್ಪಿನ ಬಗ್ಗೆ ನಮಗೆ ಅರಿವಿರಲಿಲ್ಲ ಎಂದು ಹೇಳಿಕೊಂಡಿದೆ. ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಡ್ಡಾಯ ಮಾರ್ಗಸೂಚಿಗಳನ್ನು ಹೊರಡಿಸಿಲ್ಲ ಎಂದಿದೆ.

ಇತ್ತೀಚಿನ ಕೋಮು ಹಿಂಸಾಚಾರದ ಪ್ರಮುಖ ಆರೋಪಿ ಫಾಹೀಮ್ ಖಾನ್ ಅವರ ತಾಯಿ ಜೆಹ್ರುನ್ನಿಸಾ ಶಮೀಮ್ ಖಾನ್ ಅವರ ಕಟ್ಟಡಗಳನ್ನು ಕೆಡವಿದಕ್ಕಾಗಿ ಎನ್‌ಎಂಸಿಯ ಕಾರ್ಯನಿರ್ವಾಹಕ ಇಂಜಿನಿಯರ್ (ಕೊಳೆಗೇರಿಗಳು) ಕಮಲೇಶ್ ಚವಾಣ್ ಅವರ ಮೂಲಕ ಸಲ್ಲಿಸಿದ ಅಫಿಡವಿಟ್‌ನಲ್ಲಿ ಎನ್‌ಎಂಸಿ ಹೈಕೋರ್ಟ್‌ಗೆ ಕ್ಷಮೆಯಾಚಿಸಿದೆ.

ಎನ್‌ಎಂಸಿ ಅಥವಾ ಅದರ ಅಧಿಕಾರಿಗಳು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಅಥವಾ ಕೆಳ ನ್ಯಾಯಾಲಯಗಳ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸುವುದಿಲ್ಲ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ನವೆಂಬರ್ 13, 2014ರಂದು ಸುಪ್ರೀಂ ಕೋರ್ಟ್ ಹೊರಡಿಸಿದ ನಿರ್ದೇಶನಗಳ ಬಗ್ಗೆ ಅರಿವಿರಲಿಲ್ಲ ಎಂದು ಎನ್‌ಎಂಸಿ ಹೇಳಿಕೊಂಡಿದೆ. ನ್ಯಾಯಮೂರ್ತಿ ಬಿ.ಆರ್‌ ಗವಾಯಿ ನೇತೃತ್ವದ ಪೀಠವು, ಆರೋಪಿ ಅಥವಾ ಶಿಕ್ಷೆಗೊಳಗಾದ ವ್ಯಕ್ತಿಗಳೆಂಬ ಕಾರಣಕ್ಕಾಗಿ ಸರ್ಕಾರ ಅವರ ಮನೆಗಳು/ಆಸ್ತಿಗಳನ್ನು ಕೆಡವಲು ಸಾಧ್ಯವಿಲ್ಲ ಎಂದು ಹೇಳಿತ್ತು.

ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ಬಗ್ಗೆ ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಸ್ಥಳೀಯ ಅಧಿಕಾರಿಗಳಿಗೆ ಸುತ್ತೋಲೆಗಳನ್ನು ಹೊರಡಿಸುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಆದೇಶಿಸಿದೆ ಎಂಬ ಅಂಶವನ್ನು ಅಫಿಡವಿಟ್ ಎತ್ತಿ ತೋರಿಸಿದೆ.

ಅಲ್ಲದೆ, ಪೊಲೀಸ್ ಅಧಿಕಾರಿಗಳು ಮಾರ್ಚ್ 21ರ ಗಲಭೆಯ ಆರೋಪಿಗಳ ಆಸ್ತಿಗಳ ಕುರಿತು ಎನ್‌ಎಂಸಿಯಿಂದ ವಿವರಗಳನ್ನು ಕೋರಿದ್ದರು ಮತ್ತು ಆರೋಪಿಗಳ ಆಸ್ತಿಗಳು ಅಕ್ರಮವಾಗಿದ್ದರೆ ಅವುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಕೇಳಿದ್ದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಅರ್ಜಿದಾರರು ತಮ್ಮ ಮನೆಯ ಅನುಮೋದಿತ ಯೋಜನೆ ದಾಖಲೆ ನೀಡಲು ವಿಫಲವಾಗಿದ್ದನ್ನು ಕಂಡುಕೊಂಡ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಕಟ್ಟಡ ಕೆಡವುವ ಮುನ್ನ ಅರ್ಜಿದಾರರಿಗೆ ಶೋಕಾಸ್ ನೀಡಿ ಪ್ರತಿಕ್ರಿಯಿಸಲು ಅವರಿಗೆ ಒಂದು ದಿನದ ಗಡುವು ನೀಡಲಾಗಿತ್ತು ಎಂದು ಎನ್‌ಎಂಸಿ ಹೇಳಿಕೊಂಡಿದೆ.

ಸಿವಿಲ್ ವಿವಾದದಲ್ಲಿ ಕ್ರಿಮಿನಲ್ ಮೊಕದ್ದಮೆ: ಉತ್ತರ ಪ್ರದೇಶ ಪೊಲೀಸರಿಗೆ ದಂಡ ವಿಧಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...