Homeಮುಖಪುಟ'ಸುಪ್ರೀಂ ಕೋರ್ಟ್ ನಿರ್ದೇಶನಗಳ ಬಗ್ಗೆ ಅರಿವಿರಲಿಲ್ಲ': ಆರೋಪಿಗಳ ಮನೆ ಕೆಡವಿದ್ದಕ್ಕೆ ಹೈಕೋರ್ಟ್‌ ಮುಂದೆ ಕ್ಷಮೆಯಾಚಿಸಿದ ನಾಗ್ಪುರ...

‘ಸುಪ್ರೀಂ ಕೋರ್ಟ್ ನಿರ್ದೇಶನಗಳ ಬಗ್ಗೆ ಅರಿವಿರಲಿಲ್ಲ’: ಆರೋಪಿಗಳ ಮನೆ ಕೆಡವಿದ್ದಕ್ಕೆ ಹೈಕೋರ್ಟ್‌ ಮುಂದೆ ಕ್ಷಮೆಯಾಚಿಸಿದ ನಾಗ್ಪುರ ಪಾಲಿಕೆ

- Advertisement -
- Advertisement -

ಇತ್ತೀಚೆಗೆ ನಡೆದ ಕೋಮು ಹಿಂಸಾಚಾರದ ಆರೋಪಿಗಳ ಮನೆಗಳನ್ನು ಅಕ್ರಮ ಎಂದು ಭಾಗಶಃ ಕೆಡವುವ ವೇಳೆ ಸುಪ್ರೀಂ ಕೋರ್ಟ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕೆ ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್ (ಎನ್‌ಎಂಸಿ) ಮಂಗಳವಾರ (ಏ.15) ಬಾಂಬೆ ಹೈಕೋರ್ಟ್‌ ಮುಂದೆ ಬೇಷರತ್ ಕ್ಷಮೆಯಾಚಿಸಿದೆ

ನ್ಯಾಯಮೂರ್ತಿ ನಿತಿನ್ ಸಾಂಬ್ರೆ ನೇತೃತ್ವದ ವಿಭಾಗೀಯ ಪೀಠದ ಮುಂದೆ ಎನ್‌ಎಂಸಿ ತನ್ನ ಅಫಿಡವಿಟ್ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್‌ನ ತೀರ್ಪಿನ ಬಗ್ಗೆ ನಮಗೆ ಅರಿವಿರಲಿಲ್ಲ ಎಂದು ಹೇಳಿಕೊಂಡಿದೆ. ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಡ್ಡಾಯ ಮಾರ್ಗಸೂಚಿಗಳನ್ನು ಹೊರಡಿಸಿಲ್ಲ ಎಂದಿದೆ.

ಇತ್ತೀಚಿನ ಕೋಮು ಹಿಂಸಾಚಾರದ ಪ್ರಮುಖ ಆರೋಪಿ ಫಾಹೀಮ್ ಖಾನ್ ಅವರ ತಾಯಿ ಜೆಹ್ರುನ್ನಿಸಾ ಶಮೀಮ್ ಖಾನ್ ಅವರ ಕಟ್ಟಡಗಳನ್ನು ಕೆಡವಿದಕ್ಕಾಗಿ ಎನ್‌ಎಂಸಿಯ ಕಾರ್ಯನಿರ್ವಾಹಕ ಇಂಜಿನಿಯರ್ (ಕೊಳೆಗೇರಿಗಳು) ಕಮಲೇಶ್ ಚವಾಣ್ ಅವರ ಮೂಲಕ ಸಲ್ಲಿಸಿದ ಅಫಿಡವಿಟ್‌ನಲ್ಲಿ ಎನ್‌ಎಂಸಿ ಹೈಕೋರ್ಟ್‌ಗೆ ಕ್ಷಮೆಯಾಚಿಸಿದೆ.

ಎನ್‌ಎಂಸಿ ಅಥವಾ ಅದರ ಅಧಿಕಾರಿಗಳು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಅಥವಾ ಕೆಳ ನ್ಯಾಯಾಲಯಗಳ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸುವುದಿಲ್ಲ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ನವೆಂಬರ್ 13, 2014ರಂದು ಸುಪ್ರೀಂ ಕೋರ್ಟ್ ಹೊರಡಿಸಿದ ನಿರ್ದೇಶನಗಳ ಬಗ್ಗೆ ಅರಿವಿರಲಿಲ್ಲ ಎಂದು ಎನ್‌ಎಂಸಿ ಹೇಳಿಕೊಂಡಿದೆ. ನ್ಯಾಯಮೂರ್ತಿ ಬಿ.ಆರ್‌ ಗವಾಯಿ ನೇತೃತ್ವದ ಪೀಠವು, ಆರೋಪಿ ಅಥವಾ ಶಿಕ್ಷೆಗೊಳಗಾದ ವ್ಯಕ್ತಿಗಳೆಂಬ ಕಾರಣಕ್ಕಾಗಿ ಸರ್ಕಾರ ಅವರ ಮನೆಗಳು/ಆಸ್ತಿಗಳನ್ನು ಕೆಡವಲು ಸಾಧ್ಯವಿಲ್ಲ ಎಂದು ಹೇಳಿತ್ತು.

ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ಬಗ್ಗೆ ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಸ್ಥಳೀಯ ಅಧಿಕಾರಿಗಳಿಗೆ ಸುತ್ತೋಲೆಗಳನ್ನು ಹೊರಡಿಸುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಆದೇಶಿಸಿದೆ ಎಂಬ ಅಂಶವನ್ನು ಅಫಿಡವಿಟ್ ಎತ್ತಿ ತೋರಿಸಿದೆ.

ಅಲ್ಲದೆ, ಪೊಲೀಸ್ ಅಧಿಕಾರಿಗಳು ಮಾರ್ಚ್ 21ರ ಗಲಭೆಯ ಆರೋಪಿಗಳ ಆಸ್ತಿಗಳ ಕುರಿತು ಎನ್‌ಎಂಸಿಯಿಂದ ವಿವರಗಳನ್ನು ಕೋರಿದ್ದರು ಮತ್ತು ಆರೋಪಿಗಳ ಆಸ್ತಿಗಳು ಅಕ್ರಮವಾಗಿದ್ದರೆ ಅವುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಕೇಳಿದ್ದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಅರ್ಜಿದಾರರು ತಮ್ಮ ಮನೆಯ ಅನುಮೋದಿತ ಯೋಜನೆ ದಾಖಲೆ ನೀಡಲು ವಿಫಲವಾಗಿದ್ದನ್ನು ಕಂಡುಕೊಂಡ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಕಟ್ಟಡ ಕೆಡವುವ ಮುನ್ನ ಅರ್ಜಿದಾರರಿಗೆ ಶೋಕಾಸ್ ನೀಡಿ ಪ್ರತಿಕ್ರಿಯಿಸಲು ಅವರಿಗೆ ಒಂದು ದಿನದ ಗಡುವು ನೀಡಲಾಗಿತ್ತು ಎಂದು ಎನ್‌ಎಂಸಿ ಹೇಳಿಕೊಂಡಿದೆ.

ಸಿವಿಲ್ ವಿವಾದದಲ್ಲಿ ಕ್ರಿಮಿನಲ್ ಮೊಕದ್ದಮೆ: ಉತ್ತರ ಪ್ರದೇಶ ಪೊಲೀಸರಿಗೆ ದಂಡ ವಿಧಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...