Homeಕರ್ನಾಟಕನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

ನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

- Advertisement -
- Advertisement -

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಜಾತಿವಾರು ಆಧಾರಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015 ವರದಿಯನ್ನು (ಜಾತಿ ಗಣತಿ ವರದಿ) ರಾಜ್ಯದ ಜನರ ಎದುರು ಇಟ್ಟು ಚರ್ಚೆಗೆ ಸರ್ಕಾರ ಅವಕಾಶ ಮಾಡಿಕೊಡಲಿ ಎಂದು ಕಾಂಗ್ರೆಸ್‌ನ ಅಹಿಂದ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್‌.ಎಂ ರೇವಣ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ನ ಅಹಿಂದ ನಾಯಕರು ಜಂಟಿಸುದ್ದಿಗೋಷ್ಠಿ ನಡೆಸಿ ಸರ್ಕಾರಕ್ಕೆ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಹೆಚ್‌.ಎಂ ರೇವಣ್ಣ ಮಾತನಾಡಿ, “ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ದೇಶದಲ್ಲೇ ದೊಡ್ಡ ಸಮೀಕ್ಷೆಯಾಗಿದೆ. ವರದಿ ಜಾರಿಯಿಂದ ರಾಜ್ಯದ ಜನತೆಗೆ ಒಳಿತಾಗಲಿದೆ. ಪ್ರಗತಿಗೂ ಸಹಾಯಕವಾಗಲಿದೆ. ಒಂದು ವರದಿ ಏನು ಪರಿಣಾಮ ಬೀರಬಹುದು ಎಂಬುದನ್ನು ಹಾವನೂರ್‌ ವರದಿ ತೋರಿಸಿಕೊಟ್ಟಿದೆ. ಸರ್ಕಾರ ಯಾವುದೇ ಕಾರಣಕ್ಕೂ ಹಿಂದೆ ಸರಿಯದೆ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಬೇಕು” ಎಂದು ಆಗ್ರಹಿಸಿದರು.

”ಯಾರು ಏನೇ ಹೇಳಿದರೂ ನಾವು ಒಪ್ಪುವುದಿಲ್ಲ. ಸೈದ್ಧಾಂತಿಕವಾಗಿ, ವೈಜ್ಞಾನಿಕವಾಗಿ ಸಮೀಕ್ಷೆ ನಡೆದಿದೆ. ಇದೇನು ಅಂತಿಮ ಆದೇಶವಲ್ಲ. ಸಣ್ಣ ಪುಟ್ಟ ಲೋಪದೋಷಗಳು ಕಂಡು ಬಂದರೆ ಖಂಡಿತ ತಿದ್ದಿಕೊಳ್ಳಲು ಅವಕಾಶ ಇರುತ್ತದೆ. ಇಡೀ ದೇಶದಲ್ಲಿ 1930ರ ನಂತರ ನಡೆದ ಅತೀ ದೊಡ್ಡ ಸಮೀಕ್ಷೆ ಇದಾಗಿದೆ. 10 ವರ್ಷದಲ್ಲಿ 10-15 ಲಕ್ಷ ಅಂಕಿ ಅಂಶ ವ್ಯತ್ಯಾಸ ಇರಬಹುದು. ಇದೊಂದೇ ಕಾರಣಕ್ಕೆ ಇಡೀ ವರದಿಯೇ ಅವೈಜ್ಞಾನಿಕ ಎಂದು ಹೇಳುವುದು ಸರಿಯಲ್ಲ” ಎಂದರು.

“ರಾಜಕೀಯ ಕಾರಣಕ್ಕೆ ವಿರೋಧ ಮಾಡುವುದು ಸರಿಯಲ್ಲ. ವರದಿ ಜಾರಿಯಿಂದ ಸಾಮಾಜಿಕ ನ್ಯಾಯ ಸಿಗುತ್ತದೆ. ನಮ್ಮ ಪಕ್ಷದವರು ಆದಿಯಾಗಿ ಬಿಜೆಪಿ ಮತ್ತಿ ಜೆಡಿಎಸ್‌ನ ಒಕ್ಕಲಿಗ ಮತ್ತು ಲಿಂಗಾಯತ ನಾಯಕರು ವರದಿಯನ್ನು ವಿರೋಧಿಸಬೇಡಿ ಎಂದು ಈ ಮೂಲಕ ಕೋರಿಕೊಳ್ಳುತ್ತೇವೆ. 55 ಪ್ರಶ್ನೆಗಳಿಗೆ ರಾಜ್ಯದ ಜನತೆ ಉತ್ತರಿಸಿದೆ. ನಮ್ಮ ಮನೆಗೆ ಯಾರೂ ಬಂದಿಲ್ಲ ಎಂದು ಹೇಳುವುದು ಸರಿಯಲ್ಲ. ನಗರ ಪ್ರದೇಶಗಳಲ್ಲಿ ಸ್ವಲ್ಪ ಹೀಗಾಗಿರಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಶೇ.99ರಷ್ಟು ಜನರು ಸಮೀಕ್ಷೆಗೆ ಮಾಹಿತಿ ನೀಡಿದ್ದಾರೆ” ಎಂದು ತಿಳಿಸಿದರು.

ಮಾಜಿ ಸಭಾಪತಿ ವಿ.ಆರ್‌ ಸುದರ್ಶನ್‌ ಅವರು ಪ್ರಾಸ್ತಾವಿಕ ಮಾತನಾಡಿ, “ರಾಜ್ಯದ ಪ್ರತಿಯೊಂದು ಕುಟುಂಬದ ಸಾಮಾಜಿಕ, ಶೈಕ್ಷಣಿಕ ಹಾಗೂ ಉದ್ಯೋಗದ ಸ್ಥಿತಿಗತಿಗಳ ಬಗ್ಗೆ 55 ಮಾನದಂಡಗಳ ಅಡಿಯಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ. 1,35,35,772 ಕುಟುಂಬಗಳು ಸಮೀಕ್ಷೆಗೆ ಒಳಗಾಗಿವೆ. 5,9814,942 ಕೋಟಿ ಜನರಿಂದ ಮಾಹಿತಿ ಸಂಗ್ರಹಿಸಲಾಗಿದೆ. ಈ ಸಮೀಕ್ಷೆ ನಡೆಸಲು 1.66 ಲಕ್ಷ ಸರ್ಕಾರಿ ನೌಕರರ ಸಹಕಾರ ಸಿಕ್ಕಿದೆ. ಇದರಲ್ಲಿ 22 ಸಾವಿರ ಶಿಕ್ಷಕರು ಭಾಗಿಯಾಗಿದ್ದಾರೆ. ಸಮೀಕ್ಷೆಗೆ 165.51 ಕೋಟಿ ರೂ ಖರ್ಚಾಗಿದೆ. ಇಷ್ಟೆಲ್ಲ ಮಾಹಿತಿ ಇರುವಾಗ ವರದಿ ಅವೈಜ್ಞಾನಿಕ ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

 

”ಪ್ರಮುಖ ಸಮುದಾಯ ನಾಯಕರು, ಮಠಾಧೀಶರು ತಮ್ಮ ಜಾತಿಯ ಬಗ್ಗೆ ಅಂಕಿ-ಅಂಶ ಹೇಳುವುದು ನೋಡಿದರೆ ರಾಜ್ಯದ ಜನಸಂಖ್ಯೆ ಅವರ ಪ್ರಕಾರ 50 ಕೋಟಿ ಆಗುತ್ತದೆ. ನಮ್ಮ ಜನಸಂಖ್ಯೆ ಅಷ್ಟು ಇದೆಯಾ? ಸರ್ಕಾರಕ್ಕೆ ನಮ್ಮ ಮನವಿ ಇಷ್ಟೇ: ಏ.17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹಿರಂಗಗೊಳಿಸಿ. ರಾಜ್ಯದ ಜನತೆ ಈ ಬಗ್ಗೆ ಮುಕ್ತವಾಗಿ ಚರ್ಚಿಸಲಿ. ನಂತರ ತಮ್ಮ ಅಭಿಪ್ರಾಯಗಳನ್ನು ಸರ್ಕಾರಕ್ಕೆ ತಿಳಿಸಲಿ. ಸರಿ ಮಾಡಲು ಅವಕಾಶ ಇದೆ. ಅಧಿವೇಶನದಲ್ಲೂ ಈ ಬಗ್ಗೆ ಚರ್ಚೆಯಾಗಲಿ” ಎಂದು ಹೇಳಿದರು.

 

“ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷದವರು ಪರಿಣಿತರನ್ನು ಕರೆದು ಚರ್ಚಿಸಲಿ. ನಾವು ಯಾವುದೇ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡುವುದಿಲ್ಲ. ನೀವು ಸಹ ಆವೇಶದ ಮಾತುಗಳನ್ನು ಆಡಬೇಡಿ” ಎಂದು ಎಚ್ಚರಿಕೆಯ ಧ್ವನಿಯಲ್ಲಿ ಮಾತನಾಡಿದರು.

“ವರದಿ ಕುರಿತ ಅನುಕೂಲ ಮತ್ತು ಅನಾನುಕೂಲ ಸಂಗತಿಗಳ ಬಗ್ಗೆ ಚರ್ಚೆಗೆ ಅವಕಾಶವಿದೆ. ಸಚಿವ ಸಂಪುಟ ಉಪ ಸಮಿತಿ ಕೂಡ ರಚನೆಯಾಗಲಿ. 3-5 ಜನ ಸದಸ್ಯರಿರಲಿ. ಒಂದು ತಿಂಗಳಲ್ಲಿ ಸಮಿತಿ ವರದಿ ನೀಡಲಿ. ಮಾಧ್ಯಮದವರು ಸಹ ಸೂಕ್ಷ್ಮತೆ ಇಟ್ಟುಕೊಂಡು ವರದಿ ಮಾಡಲಿ. ಇದು ರಾಜಕೀಯ ಪ್ರಶ್ನೆಯಲ್ಲ. ಅನ್ಯಾಯಕ್ಕೆ ಒಳಗಾದ ಜನತೆಗೆ ನ್ಯಾಯ ಒದಗಿಸುವ ಪ್ರಶ್ನೆಯಾಗಿದೆ” ಎಂದು ಹೇಳಿದರು.

ಮಾಜಿ ಸಚಿವ ಮತ್ತು ವಿಧಾನ ಪರಿಷತ್‌ ಸದಸ್ಯ ಎಂ.ಆರ್‌ ಸೀತಾರಾಂ ಮಾತನಾಡಿ, “ನಾಳೆ ಅಧಿಕೃತವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ. ಪೂರ್ವಭಾವಿಯಾಗಿ ಎಲ್ಲವನ್ನು ಹೇಳುವುದು ಸರಿಯಲ್ಲ. ನಮ್ಮ ಉದ್ದೇಶ ಇಷ್ಟೇ: ಯಾರೂ ಸಹ ಸಮಾಜಘಾತುಕ ಕೆಲಸ ಮಾಡುವುದು ಬೇಡ. ಎಲ್ಲ ವರ್ಗದವರಿಗೂ ನ್ಯಾಯ ಸಿಗಲಿ” ಎಂದು ಅಭಿಪ್ರಾಯಪಟ್ಟರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವೆ ಉಮಾಶ್ರಿ, ಬಾದಾಮಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಸೇನ ಬಿ ಚಿಮ್ಮನಕಟ್ಟಿ ಸೇರಿದಂತೆ ಅಹಿಂದ ಸಮುದಾಯ ವಿವಿಧ ಸಂಘಟನೆಗಳ ನಾಯಕರು ಇದ್ದರು.

ಸೌಜನ್ಯ : ಈದಿನ.ಕಾಂ

ಮುಸ್ಲಿಮರು ದೊಡ್ಡ ಜನಸಂಖ್ಯೆ ಎಂಬುದು ಸುಳ್ಳು: ಒಕ್ಕಲಿಗ ಶಾಸಕರ ಸಭೆಯಲ್ಲಿ ಡಿಕೆಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...