Homeಕರ್ನಾಟಕಸುಳ್ಳೇ ಬಿಜೆಪಿಯ ಮನೆ ದೇವರು; ಆರೆಸ್ಸೆಸ್‌ ಸುಳ್ಳಿನ ಮಹಾ ಕಾರ್ಖಾನೆ: ಸಿದ್ದರಾಮಯ್ಯ

ಸುಳ್ಳೇ ಬಿಜೆಪಿಯ ಮನೆ ದೇವರು; ಆರೆಸ್ಸೆಸ್‌ ಸುಳ್ಳಿನ ಮಹಾ ಕಾರ್ಖಾನೆ: ಸಿದ್ದರಾಮಯ್ಯ

- Advertisement -
- Advertisement -

ಪ್ರಧಾನಿ ಮೋದಿ ಗ್ಯಾಸ್ ಸಬ್ಸಿಡಿ ತೆಗೆದು ಬಡವರ ವಿರೋಧಿಯಾಗಿದ್ದು, ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ್ದಾರೆ. ಅವರು ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಳ್ಳೇ ಬಿಜೆಪಿಯ

ಬಿಜೆಪಿ ಯಾವ‌ ಮುಖ ಇಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ಮಾತಾಡುತ್ತಿದೆ? 4ರೂ ಹಾಲಿನ ದರ ಹೆಚ್ಚಿಸಿ ಈ 4 ರೂಪಾಯಿಯನ್ನು ನೇರವಾಗಿ ರೈತರ ಜೇಬಿಗೆ ಹಾಕಿದ್ದೇವೆ. ಸರ್ಕಾರಕ್ಕೆ ಬರಲ್ಲ ಎಂದು ಅವರು ಹೇಳಿದ್ದಾರೆ. ಅವರು ಬಿಜೆಪಿ ಸರ್ಕಾರದ ಬೆಲೆ ಏರಿಕೆಯನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡುತ್ತಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರದಲ್ಲಿ ಸೋನಿಯಾ, ರಾಹುಲ್ ವಿರುದ್ಧ ಆರೋಪ ಪಟ್ಟಿ ಹಾಕಿದ್ದನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿ, ಆರೆಸ್ಸೆಸ್ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ. ಹೀಗಾಗಿ ಈ ಆರೆಸ್ಸೆಸ್ ಪರಿವಾರಕ್ಕೆ ಭಾರತದ ಬೆಲೆಯೂ ಗೊತ್ತಿಲ್ಲ. ಸ್ವಾತಂತ್ರ್ಯದ ಬೆಲೆಯೂ ಗೊತ್ತಿಲ್ಲ ಹೇಳಿದ್ದಾರೆ.

ಆರೆಸ್ಸೆಸ್‌ನವರ ದೇಶದ್ರೋಹದ ವಿರುದ್ಧ ಮತ್ತೊಂದು ಸ್ವಾತಂತ್ರ್ಯ ಹೋರಾಟದ ಮಾದರಿ ದೇಶಾದ್ಯಂತ ನಡೆಸೋಣ. ಅದಕ್ಕೆ ಸಜ್ಜಾಗಿ ಎಂದು ಮುಖ್ಯಮಂತ್ರಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. “ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ. ಸೈದ್ಧಾಂತಿಕ ಸ್ಪಷ್ಟತೆಯಿಂದ ಜನರ ಪರವಾಗಿ ನಿಂತು ನಿರಂತರ ಹೋರಾಟ ನಡೆಸುವುದೂ ರಾಜಕೀಯ ಬದ್ಧತೆಯೇ ಆಗಿದೆ” ಎಂದು ಅವರು ಹೇಳಿದ್ದಾರೆ.

” ಸುಳ್ಳೇ ಬಿಜೆಪಿಯ ಮನೆ ದೇವರು. ಆರೆಸ್ಸೆಸ್‌ ಸುಳ್ಳಿನ ಮಹಾ ಕಾರ್ಖಾನೆ. ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಕಾಂಗ್ರೆಸ್ ಸೋಲಿಸಿದ್ದು ಎಂದು ಬಿಜೆಪಿ ಬಂಡಲ್ ಬಿಡುತ್ತಿದೆ. ನಾವು ಸುಳ್ಳಿನ ಕಾರ್ಖಾನೆ RSS ನ ಸುಳ್ಳುಗಳ ವಿರುದ್ಧ ಸತ್ಯವನ್ನು ದೇಶದ ತುಂಬ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ನಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡುತ್ತಾ ಮೋದಿ ಸರ್ಕಾರ ತನ್ನ ಬಡವರ, ಮಧ್ಯಮ ವರ್ಗ ವಿರೋಧಿತನವನ್ನು ಬಚ್ಚಿಡಲು ಯತ್ನಿಸುತ್ತಿದೆ. ಸರ್ಕಾರ ದಿವಾಳಿ ಆಗಿದ್ದರೆ ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ರೂಪಾಯಿ ಪ್ರತೀ ವರ್ಷ ತೆಗೆದಿಡಲು ಸಾಧ್ಯವಾಗುತ್ತಿತ್ತಾ?” ಎಂದು ಅವರು ಪ್ರಶ್ನಿಸಿದ್ದಾರೆ.

ತಮ್ಮ ಸರ್ಕಾರ ಏರಿಕೆ ಮಾಡಿರುವ ಹಾಲಿನ ಬೆಲೆಯನ್ನು ಸಮರ್ಥಿಸಿಕೊಂಡ ಅವರು, ಏರಿಕೆ ಮಾಡಲಾದ 4 ರೂ ರೈತರ ಜೇಬಿಗೆ ಹೋಗುತ್ತಿದೆ. ಸರ್ಕಾರಕ್ಕೆ ಬರುತ್ತಿಲ್ಲ. ನೀವು ಗ್ಯಾಸ್ ಬೆಲೆ ಹತ್ತಾರು ಬಾರಿ ಹೆಚ್ಚಿಸಿ ಈಗ ಮತ್ತೆ 50 ರೂ ಹೆಚ್ಚಿಸಿದ್ದೀರಿ. ಈ ಹೆಚ್ಚುವರಿ ಹಣ ಯಾರಿಗೆ ಹೋಗುತ್ತಿದೆ ಹೇಳಿ ಎಂದು ಕೇಂದ್ರ ಸರ್ಕಾರದ ಆಡಳಿತರೂಢ ಬಿಜೆಪಿಗೆ ಕೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಂದಿನ ವಿಚಾರಣೆಯವರೆಗೆ ವಕ್ಫ್‌ನಲ್ಲಿ ಯಾವುದೇ ಬದಲಾವಣೆ-ನೇಮಕಾತಿ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ಮುಂದಿನ ವಿಚಾರಣೆಯವರೆಗೆ ವಕ್ಫ್‌ನಲ್ಲಿ ಯಾವುದೇ ಬದಲಾವಣೆ-ನೇಮಕಾತಿ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...