Homeಮುಖಪುಟಪೋಷಕರ ಇಚ್ಛೆಗೆ ವಿರುದ್ಧ ಮದುವೆಯಾದ ಜೋಡಿಗೆ ಪೊಲೀಸ್ ರಕ್ಷಣೆ ನೀಡಲ್ಲ ಎಂದ ಅಲಹಾಬಾದ್ ಹೈಕೋರ್ಟ್

ಪೋಷಕರ ಇಚ್ಛೆಗೆ ವಿರುದ್ಧ ಮದುವೆಯಾದ ಜೋಡಿಗೆ ಪೊಲೀಸ್ ರಕ್ಷಣೆ ನೀಡಲ್ಲ ಎಂದ ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಪೋಷಕರ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗುವ ದಂಪತಿಗಳ ಜೀವ ಮತ್ತು ಸ್ವಾತಂತ್ರ್ಯಕ್ಕೆ ನಿಜವಾಗಿಯು ಬೆದರಿಕೆ ಇಲ್ಲದಿದ್ದರೆ, ಪೊಲೀಸ್ ರಕ್ಷಣೆಯನ್ನು ಹಕ್ಕಿನ ವಿಷಯವಾಗಿ ಪಡೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ ಎಂದು ಲೈವ್ ಲಾ ಬುಧವಾರ ವರದಿ ಮಾಡಿದೆ. ಪೊಲೀಸ್ ರಕ್ಷಣೆ ಮತ್ತು ಸಂಬಂಧಿಕರು ಹಸ್ತಕ್ಷೇಪ ಮಾಡದಂತೆ ತಡೆಯುವ ನಿರ್ದೇಶನವನ್ನು ಕೋರಿ ದಂಪತಿಗಳು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಆಲಿಸುವಾಗ ನ್ಯಾಯಮೂರ್ತಿ ಸೌರಭ್ ಶ್ರೀವಾಸ್ತವ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದಂಪತಿಗಳಿಗೆ ಯಾವುದೇ ಗಂಭೀರ ಬೆದರಿಕೆ ಇಲ್ಲ ಎಂದು ನ್ಯಾಯಾಲಯ ಹೇಳಿದ್ದು, ಅವರ ಅರ್ಜಿಯನ್ನು ವಿಲೇವಾರಿ ಮಾಡಿದೆ.

ದಂಪತಿಗಳಿಗೆ ಪೊಲೀಸ್ ರಕ್ಷಣೆ ಒದಗಿಸಲು ಆದೇಶ ಹೊರಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. “ತಮ್ಮ ಸ್ವಂತ ಇಚ್ಛೆಯಂತೆ ಮದುವೆಯಾಗಲು ಓಡಿಹೋದ” ಯುವಕರಿಗೆ ನ್ಯಾಯಾಲಯಗಳು ರಕ್ಷಣೆ ನೀಡಲು ಉದ್ದೇಶಿಸಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಅದು ಉಲ್ಲೇಖಿಸಿದೆ. ಅರ್ಹ ಪ್ರಕರಣಗಳಲ್ಲಿ ಭದ್ರತೆ ನೀಡಬಹುದು ಎಂದು ನ್ಯಾಯಾಲಯ ಹೇಳಿದ್ದು, ಆದರೆ ನಿಜವಾಗಿಯು ಯಾವುದೇ ಬೆದರಿಕೆ ಇಲ್ಲದಿದ್ದಾಗ, ದಂಪತಿಗಳು “ಪರಸ್ಪರ ಒಗ್ಗಟ್ಟಾಗಿ ನಿಂತು ಸಮಾಜವನ್ನು ಎದುರಿಸಲು ಕಲಿಯಬೇಕು” ಎಂದು ಹೇಳಿದೆ.

ಅರ್ಜಿದಾರರ ಜೀವನ ಮತ್ತು ಸ್ವಾತಂತ್ರ್ಯ ಅಪಾಯದಲ್ಲಿದೆ ಎಂದು ಸೂಚಿಸುವ ಯಾವುದೇ ಪುರಾವೆಗಳು ನ್ಯಾಯಾಲಯಕ್ಕೆ ಕಂಡುಬಂದಿಲ್ಲ ಎಂದು ಅದು ಪ್ರಕರಣದಲ್ಲಿ ಹೇಳಿದೆ. “ಖಾಸಗಿ ಪ್ರತಿವಾದಿಗಳು [ಅರ್ಜಿದಾರರಲ್ಲಿ ಇಬ್ಬರ ಸಂಬಂಧಿಕರು] ಅರ್ಜಿದಾರರ ಮೇಲೆ ದೈಹಿಕ ಅಥವಾ ಮಾನಸಿಕ ಹಲ್ಲೆ ನಡೆಸುವ ಸಾಧ್ಯತೆಯಿದೆ ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ” ಎಂದು ನ್ಯಾಯಾಲಯ ಹೇಳಿದ್ದಾಗಿ ದಿ ಹಿಂದೂ ಉಲ್ಲೇಖಿಸಿದೆ.

ದಂಪತಿಗಳು ತಮ್ಮ ಸಂಬಂಧಿಕರಿಂದ ನಡೆಸಲ್ಪಟ್ಟ ದುಷ್ಕೃತ್ಯದ ವಿರುದ್ಧ ಎಫ್‌ಐಆರ್‌ ದಾಖಲಿಸಲು ಪೊಲೀಸರಿಗೆ ನಿರ್ದಿಷ್ಟ ಅರ್ಜಿಯನ್ನು ಸಲ್ಲಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾದ ಸೆಕ್ಷನ್ 175(3) ರ ಅಡಿಯಲ್ಲಿ ಪ್ರಾರಂಭಿಸಲಾದ ಯಾವುದೇ ಕ್ರಮ ಅಥವಾ ಔಪಚಾರಿಕ ಅರ್ಜಿಗೆ ಪ್ರತಿಕ್ರಿಯೆಯಾಗಿ ಪೊಲೀಸರು ಯಾವುದೇ ನಿಷ್ಕ್ರಿಯತೆ ತೋರಿಲ್ಲ. ಪೊಲೀಸರು ಎಫ್‌ಐಆರ್ ದಾಖಲಿಸಲು ಅಥವಾ ತನಿಖೆ ನಡೆಸಲು ವಿಫಲವಾದಾಗ ಸೂಕ್ಷ್ಮ ವಿಷಯವನ್ನು ತನಿಖೆ ಮಾಡಲು ಪೊಲೀಸರಿಗೆ ಆದೇಶಿಸಲು ಈ ವಿಭಾಗವು ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ಗೆ ಅಧಿಕಾರ ನೀಡುತ್ತದೆ.

ಆದಾಗ್ಯೂ, ಅರ್ಜಿದಾರರು ಉತ್ತರ ಪ್ರದೇಶದ ಚಿತ್ರಕೂಟದ ಪೊಲೀಸ್ ವರಿಷ್ಠಾಧಿಕಾರಿಗೆ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ ಎಂದು ಪೀಠ ಹೇಳಿದೆ. “ಸಂಬಂಧಪಟ್ಟ ಪೊಲೀಸರು ನಿಜವಾಗಿಯು ಬೆದರಿಕೆ ಇದೆ ಎಂದು ಗ್ರಹಿಸಿದರೆ, ಅವರು ಕಾನೂನಿನ ಪ್ರಕಾರ ಅಗತ್ಯ ಕ್ರಮವನ್ನು ಕೈಗೊಳ್ಳಬೇಕು” ಎಂದು ನ್ಯಾಯಾಲಯ ಹೇಳಿದೆ. ದಂಪತಿಗೆ ಯಾರಾದರೂ ಕಿರುಕುಳ ನೀಡಿದರೆ, ನ್ಯಾಯಾಲಯಗಳು ಮತ್ತು ಪೊಲೀಸ್ ಅಧಿಕಾರಿಗಳು ಅವರ ಸಹಾಯಕ್ಕೆ ಬರಲು ಸಿದ್ಧರಿರಬೇಕು ಎಂದು ಪೀಠ ಒತ್ತಿ ಹೇಳಿದೆ. ಪೋಷಕರ ಇಚ್ಛೆಗೆ ವಿರುದ್ಧವಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂವಿಧಾನ ಅಸ್ತಿತ್ವಕ್ಕೆ ಬಂದು 75 ವರ್ಷಗಳ ನಂತರವೂ ಪೊಲೀಸರಿಗೆ ಮೂಲಭೂತ ಹಕ್ಕುಗಳ ಅರಿವಿಲ್ಲ ಎಂದ ಕುನಾಲ್

ಸಂವಿಧಾನ ಅಸ್ತಿತ್ವಕ್ಕೆ ಬಂದು 75 ವರ್ಷಗಳ ನಂತರವೂ ಪೊಲೀಸರಿಗೆ ಮೂಲಭೂತ ಹಕ್ಕುಗಳ ಅರಿವಿಲ್ಲ ಎಂದ ಕುನಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...