Homeಕರ್ನಾಟಕಮಂಗಳೂರು| ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಶಂಕೆ: ಮೂವರ ಬಂಧನ

ಮಂಗಳೂರು| ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಶಂಕೆ: ಮೂವರ ಬಂಧನ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುನ್ನೂರು ಗ್ರಾಮದ ನೇತ್ರಾವತಿ ನದಿ ಕಿನಾರೆಯಲ್ಲಿ ಪಶ್ಚಿಮ ಬಂಗಾಳದ ಯುವತಿ ಮೇಲೆ ಬುಧವಾರ (ಏ.16) ರಾತ್ರಿ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಗುರುವಾರ (ಏ.17) ಬಂಧಿಸಿದ್ದಾರೆ.

“ಗುರುವಾರ ನಸುಕಿನಲ್ಲಿ ನೀರು ಕೇಳುತ್ತಾ ಯುವತಿ ಮುನ್ನೂರು ಗ್ರಾಮದ ಮನೆಯೊಂದರ ಬಾಗಿಲು ಬಡಿದಿದ್ದರು. ಮೈತುಂಬ ಗಾಯಗೊಂಡಿದ್ದ ಆಕೆಗೆ ಸ್ವಲ್ಪ ಹೊತ್ತಿನಲ್ಲಿ ಪ್ರಜ್ಞೆ ತಪ್ಪಿತ್ತು. ಚಿಕಿತ್ಸೆ ಬಳಿಕ ಪೊಲೀಸರಿಗೆ ಹೇಳಿಕೆ ನೀಡಿರುವ ಯುವತಿ, ರಿಕ್ಷಾ ಚಾಲಕನೊಬ್ಬ ಆಹಾರದಲ್ಲಿ ಮತ್ತು ಬರುವ ಪದಾರ್ಥ ಸೇರಿಸಿ ತನ್ನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಇನ್ನಿಬ್ಬರು ಸ್ನೇಹಿತರ ಜೊತೆ ಸೇರಿ ಕಾರಿನಲ್ಲಿ ಅತ್ಯಾಚಾರ ನಡೆಸಿರುವ ಶಂಕೆ ಇದೆ ಎಂದು ತಿಳಿಸಿದ್ದಾರೆ” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ರಿಕ್ಷಾ ಚಾಲಕನಾಗಿರುವ ಮೂಲ್ಕಿ ಕಾರ್ನಾಡು ನಿವಾಸಿ ಪ್ರಭುರಾಜ್ (38), ಕೋಟೆಕಾರು ಕುಂಪಲದ ಚಿತ್ರಾಂಜಲಿನಗರದ ನಿವಾಸಿ ಮಿಥುನ್ (37) ಹಾಗೂ ಮಂಗಳೂರಿನ ಪಡೀಲ್ ಕೋಡಕ್ಕಲ್ ನಿವಾಸಿ ಮನೀಶ್ (30) ಅವರನ್ನು ಬಂಧಿಸಲಾಗಿದೆ ಎಂದು ಅನುಪಮ್ ಅಗ್ರವಾಲ್ ಮಾಹಿತಿ ನೀಡಿದ್ದಾರೆ.

“ಪಶ್ಚಿಮ ಬಂಗಾಳದ ಕೂಚ್‌ಬಿಹಾರ್‌ ಮೂಲದ ಸುಮಾರು 20 ವರ್ಷ ಪ್ರಾಯದ ಯುವತಿ, ಕೇರಳದ ಪ್ಲೈವುಡ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಹೊಸ ಕೆಲಸ ಹುಡುಕುದಕ್ಕಾಗಿ ಗೆಳೆಯನ ಜೊತೆ ಮಂಗಳೂರಿಗೆ ಬಂದಿದ್ದರು. ಮಂಗಳೂರಲ್ಲಿ ಇಬ್ಬರ ನಡುವೆ ಜಗಳವಾಗಿತ್ತು. ಈ ವೇಳೆ ಯುವತಿಯ ಮೊಬೈಲ್ ಹಾನಿಗೊಂಡಿತ್ತು. ಅದನ್ನು ರಿಪೇರಿ ಮಾಡಿಸಲು ರಿಕ್ಷಾ ಹತ್ತಿದ ಯುವತಿ, ಮೊಬೈಲ್ ರಿಪೇರಿ ಆದ ಬಳಿಕ ಪಶ್ಚಿಮ ಬಂಗಾಳದ ರೈಲು ಹತ್ತಲು ತನ್ನನ್ನು ಸಮೀಪದ ರೈಲು ನಿಲ್ಧಾಣಕ್ಕೆ ಬಿಡುವಂತೆ ರಿಕ್ಷಾ ಚಾಲಕನಲ್ಲಿ ಕೋರಿದ್ದರು” ಎಂದು ಅಗ್ರವಾಲ್ ಹೇಳಿದ್ದಾರೆ.

“ಯುವತಿ ಗುರುವಾರ ನಸುಕಿನಲ್ಲಿ ಮುನ್ನೂರು ಗ್ರಾಮದ ಕೊಟ್ಟಾರಿಮೂಲೆ ಬಂಗುಲೆ ನೇತ್ರಾವತಿ ನದಿ ತೀರ ಸಮೀಪದ ಮನೆಯೊಂದರ ಬಾಗಿಲು ಬಡಿದು ನೀರು ಕೇಳಿದ್ದರು. ಮನೆಯವರು ಬಾಗಿಲು ತೆಗೆದ ಸ್ವಲ್ಪ ಹೊತ್ತಿನಲ್ಲೇ ಆಕೆ ಪ್ರಜ್ಞೆ ತಪ್ಪಿದ್ದರು. ಈ ವೇಳೆ ಮನೆಯವರು ಪೊಲೀಸ್ ಸಹಾಯವಾಣಿಗೆ (112) ಕರೆ ಮಾಡಿ ವಿಷಯ ತಿಳಿಸಿದ್ದರು. ಸ್ವಲ್ಪ ಹೊತ್ತಿನಲ್ಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂತ್ರಸ್ತ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ”

“ರಿಕ್ಷಾ ಚಾಲಕ ಆಹಾರದಲ್ಲಿ ಮತ್ತು ಬರುವ ಪದಾರ್ಥ ಬೆರೆಸಿದ್ದರಿಂದ ಪ್ರಜ್ಞೆ ಕಳೆದುಕೊಂಡಿದ್ದೆ. ಪ್ರಜ್ಞೆ ಮರಳಿದಾಗ ಕಾರೊಂದರಲ್ಲಿ ರಿಕ್ಷಾ ಚಾಲಕ ಸೇರಿ ಮೂವರು ಯುವಕರ ಜೊತೆ ಇದ್ದೆ. ಕಿರುಚಾಡಿದಾಗ ಅವರು ನನ್ನನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದರು. ನಾನು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಮೂವರು ಸೇರಿ ನನ್ನ ಮೇಲೆ ಅತ್ಯಾಚಾರ ನಡೆಸಿರಬಹುದು” ಎಂದು ಯುವತಿ ಹೇಳಿಕೆ ನೀಡಿದ್ದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಯುವತಿ ನೀಡಿದ ಹೇಳಿಕೆ ಆಧರಿಸಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಆಕೆಯ ಮೇಲೆ ಅತ್ಯಾಚಾರ ನಡೆದಿದೆಯೇ?..ಇಲ್ಲವೇ? ಎಂಬುವುದು ವೈದ್ಯಕೀಯ ಪರೀಕ್ಷೆಯ ವರದಿ ಬಂದ ಬಳಿಕ ತಿಳಿಯಲಿದೆ ಎಂದು ಅನುಪಮ್ ಅಗ್ರವಾಲ್ ಹೇಳಿದ್ದಾರೆ.

ಬಂಧಿತರ ಪೈಕಿ ಪ್ರಭುರಾಜ್ 10 ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಆಟೋ ಚಾಲಕರಾಗಿದ್ದಾರೆ. ಆತ ಬುಧವಾರ ಮಧ್ಯಾಹ್ನ 2.30ರಿಂದಲೇ ಯುವತಿ ಜೊತೆಗಿದ್ದರು. ಮೊಬೈಲ್‌ ದುರಸ್ತಿಗಾಗಿ ಆತನ ಜೊತೆ ಯುವತಿ ಅನೇಕ ಮಳಿಗೆಗಳಿಗೆ ಸುತ್ತಿದ್ದಾರೆ. ಈ ವೇಳೆ ಪ್ರಭುರಾಜ್ ಆಕೆಗೆ ಉಪಾಹಾರ ನೀಡಿದ್ದರು. ಮೊಬೈಲ್ ದುರಸ್ತಿಯ ಹಣವನ್ನೂ ಅವರೇ ಪಾವತಿಸಿದ್ದರು. ಇನ್ನಿಬ್ಬರು ಆರೋಪಿಗಳಲ್ಲಿ ಆರೋಪಿ ಮಿಥುನ್ ಪೇಂಟಿಂಗ್‌, ಚಾಲಕ ಹಾಗೂ ಎಲೆಕ್ಟ್ರಿಷಿಯನ್ ಕೆಲಸಗಳನ್ನು ಮಾಡುತ್ತಿದ್ದರು. ಮನೀಶ್ ಡೆಲಿವರಿ ಬಾಯ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಯುವತಿಯ ಪ್ರಜ್ಞೆ ತಪ್ಪಿಸಿ ಮುನ್ನೂರು ಗ್ರಾಮಕ್ಕೆ ಕರೆದೊಯ್ಯುವಾಗ ಮೂವರು ಆರೋಪಿಗಳೂ ಮದ್ಯಪಾನ ಮಾಡಿದ್ದರು. ಯುವತಿಗೂ ಮದ್ಯ ಕುಡಿಸಿದ್ದರು ಎಂದು ಪೊಲೀಸ್ ಆಯುಕ್ತರು ವಿವರಿಸಿದ್ದಾರೆ.

ವರದಿಗಳ ಪ್ರಕಾರ, ಆರೋಪಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 126 (ಬಲವಂತದಿಂದ ಬಂಧನದಲ್ಲಿರಿಸುವುದು), ಸೆಕ್ಷನ್ 140 (2) (ಬಲವಂತದಿಂದ ಅಪಹರಣ ನಡೆಸುವುದು), 352 (ಶಾಂತಿಭಂಗವನ್ನುಂಟುಮಾಡುವುದು), ಸೆಕ್ಷನ್ 351 (1) ( ಕ್ರಿಮಿನಲ್ ಬೆದರಿಕೆ ಒಡ್ಡುವುದು) 115 (2) (ಹಲ್ಲೆನಡೆಸುವುದು), ಸೆಕ್ಷನ್‌ 64 (ಅತ್ಯಾಚಾರ ನಡೆಸುವುದು), ಸೆಕ್ಷನ್ 309 (6) (ಬೆದರಿಸಿ ಸುಲಿಗೆ ಮಾಡುವುದು), ಸೆಕ್ಷನ್‌ 70 (ಸಾಮೂಹಿಕ ಅತ್ಯಾಚಾರ) ಹಾಗೂ ಸೆಕ್ಷನ್ 3 (5)ರ (ಕೂಟ ರಚಿಸಿಕೊಂಡು ಕ್ರಿಮಿನಲ್ ಕೃತ್ಯ ನಡೆಸುವುದು) ಅಡಿ ಎಫ್‌ಐಆರ್ ದಾಖಲಾಗಿದೆ.

ಜಾತಿಗಣತಿ ಕುರಿತ ಸಚಿವ ಸಂಪುಟ ಸಭೆ ‘ಅಪೂರ್ಣ, ಆದರೆ ಸೌಹಾರ್ದಯುತ’: ಎಚ್.ಕೆ.ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...