HomeUncategorized41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್

41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್

- Advertisement -
- Advertisement -

ಉತ್ತರಪ್ರದೇಶದ ಹಾರ್ಪುರದ ಇಂದ್ರನಗರ ಕಾಲೋನಿಯಲ್ಲಿ 1986ರಿಂದ ವಾಸಿಸುತ್ತಿರುವ ದಲಿತ ಸಮುದಾಯಕ್ಕೆ ಸೇರಿದ 41 ಕುಟುಂಬಗಳಿಗೆ ನೀವು ಈ ಸ್ಥಳದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದೀರಿ, ಜಾಗ ಖಾಲಿ ಮಾಡಿ ಎಂದು ಪುರಸಭೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ.

ಇಲ್ಲಿ ದಲಿತರಿಗೆ ಸೇರಿದ 41 ಮನೆಗಳಲ್ಲಿ ನಲವತ್ತು ಮನೆಗಳನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿ ನಿರ್ಮಿಸಲಾಗಿತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2022ರ ವೇಳೆಗೆ “ಎಲ್ಲರಿಗೂ ವಸತಿ” ಒದಗಿಸುವ ಉದ್ದೇಶದಿಂದ ಆವಾಸ್ ಯೋಜನೆಯನ್ನು 2016ರಲ್ಲಿ ಪ್ರಾರಂಭಿಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣವನ್ನು ಬೆಂಬಲಿಸುವ ಯೋಜನೆಯನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (PMAY-G) ಎಂದು ಕರೆಯಲಾಗುತ್ತದೆ ಮತ್ತು ನಗರ ಪ್ರದೇಶಗಳಿಗೆ ಇದನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ – ನಗರ (PMAY-U) ಎಂದು ಕರೆಯಲಾಗುತ್ತದೆ.

ಇದೇ ಏಪ್ರಿಲ್ 8 ರಂದು ನೀಡಲಾದ ನೋಟಿಸ್‌ನಲ್ಲಿ ದಲಿತರು ಮನೆಗಳನ್ನು ನಿರ್ಮಿಸಿರುವ ಭೂಮಿ ಸರ್ಕಾರಕ್ಕೆ ಸೇರಿದ್ದು ಮತ್ತು ಅದು ಹಿಂದೆ ಕೊಳವಾಗಿತ್ತು ಎಂದು ಹೇಳಿದೆ.

ಗರ್ಮುಕ್ತೇಶ್ವರ ಪುರಸಭೆಯ ಕಾರ್ಯನಿರ್ವಾಹಕ ಅಧಿಕಾರಿ ಮುಕ್ತಾ ಸಿಂಗ್ ಅವರು ನೀಡಿದ ನೋಟಿಸ್‌ನಲ್ಲಿ, “ನೀವು ನಗರ ಪಾಲಿಕೆಯ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡು ಅದರಲ್ಲಿ ಮನೆ ಕಟ್ಟಿದ್ದೀರಿ ಮತ್ತು ಈ ಮನೆಗಳನ್ನು ತೆರವು ಮಾಡಲು ನೀವು ಬಯಸುತ್ತಿಲ್ಲವಾದ್ದರಿಂದ, ನಿಮ್ಮ ವಿರುದ್ಧ ಕಾನೂನು ಕ್ರಮಗಳನ್ನು ಪ್ರಾರಂಭಿಸುವುದು ಮುಖ್ಯವಾಗಿದೆ. ಈ ನೋಟಿಸ್ ಸ್ವೀಕರಿಸಿದ 15 ದಿನಗಳಲ್ಲಿ, ಭೂಮಿಯಲ್ಲಿರುವ ನಿಮಗೆ ಸಂಬಂಧಿಸಿದ ವಸ್ತುಗಳನ್ನು ತೆಗೆದುಹಾಕಿ ಮತ್ತು ಭೂಮಿಯನ್ನು ನಗರ ಪಾಲಿಕೆಗೆ ಒಪ್ಸಿಪಿ, ಇಲ್ಲದಿದ್ದರೆ ನಿಮ್ಮ ವಿರುದ್ಧದ ಪ್ರಕರಣಕ್ಕೆ ನೀವೇ ಜವಾಬ್ದಾರರಾಗಿರುತ್ತೀರಿ” ಎಂದು ಬರೆದಿದ್ದಾರೆ.

ನಿವಾಸಿಗಳಿಗೆ ಹಲವಾರು ಬಾರಿ ಮೌಖಿಕವಾಗಿ ಎಚ್ಚರಿಕೆ ನೀಡಲಾಗಿದ್ದರೂ, “ಅವರ ಅಹಂಕಾರದಿಂದಾಗಿ” ಅವರು ಪುರಸಭೆಯ ಆದೇಶಗಳನ್ನು ಪಾಲಿಸಿಲ್ಲ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

“ನಗರಸಭೆಯ ಅಧಿಕಾರಿಗಳು ನಿಮಗೆ ಭೂಮಿಯನ್ನು ಖಾಲಿ ಮಾಡುವಂತೆ ಹಲವಾರು ಬಾರಿ ಮೌಖಿಕವಾಗಿ ಆದೇಶ ನೀಡಲಾಗಿದ್ದರೂ, ಶಾಸನಬದ್ಧ ನಿಬಂಧನೆಗಳನ್ನು ಪಾಲಿಸದೆ ನೀವು ಭೂಮಿಯನ್ನು ಖಾಲಿ ಮಾಡಲು ನಿರಾಕರಿಸುತ್ತಿದ್ದೀರಿ ಮತ್ತು ನಿಮ್ಮ ಭೂ ದಾಖಲೆಗಳಲ್ಲಿ ಸದರಿ ಭೂಮಿಯನ್ನು ಸರಕಾರವು ತಮಗೆ ನೀಡಿದೆ ಮತ್ತು ದಾಖಲೆಗಳನ್ನು ನೀಡಿದೆ ಎಂದು ನೀವು ಹೇಳುತ್ತೀರಿ. ಸದರಿ ಭೂಮಿಯಲ್ಲಿ ಯಾವುದೇ ವಸತಿ ಪ್ಲಾಟ್‌ಗಳ ದಾಖಲೆಗಳಿಲ್ಲ ಮತ್ತು ಯಾವುದೇ ಸಂದರ್ಭದಲ್ಲಿ ಯಾರ ಹೆಸರಿನಲ್ಲಿ ಭೂ ದಾಖಲೆಗಳನ್ನು ಹೊಂದಿದ್ದರೆ ಅದನ್ನು ರದ್ದುಗೊಳಿಸಲಾಗಿದೆ.” ಎಂದು ಅವರು ಹೇಳಿದ್ದಾರೆ.

ಪ್ರಕಟಣೆಯೊಂದಿಗೆ ಮಾತನಾಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರೇರಣಾ ಶರ್ಮಾ, “ನಾವು ಈ ವಿಷಯವನ್ನು ಪರಿಶೀಲಿಸುತ್ತಿದ್ದೇವೆ. ಇದನ್ನು ಮಂಗಳವಾರ ನಮ್ಮ ಗಮನಕ್ಕೆ ತರಲಾಗಿದೆ. ಜನರ ಹಕ್ಕುಗಳು ಸರಿಯಾಗಿದ್ದರೆ, ನಾವು ತನಿಖೆ ಮಾಡುತ್ತೇವೆ. PMAY ಯೋಜನೆಯಡಿಯಲ್ಲಿ ಭೂ ದಾಖಲೆಗಳ ದೃಢೀಕರಣವನ್ನು ನಾವು ಪರಿಶೀಲಿಸುವುದಿಲ್ಲ, ದಸ್ತಾವೇಜಿನ ಪ್ರಕಾರ ವ್ಯಕ್ತಿಯು ಸರಿಯಾದ ಮಾಲೀಕರೇ ಎಂಬುದನ್ನು ಮಾತ್ರ ನಾವು ಪರಿಶೀಲಿಸುತ್ತೇವೆ. ನಾವು ಹಕ್ಕುಗಳನ್ನು ಪರಿಶೀಲಿಸಬೇಕಾಗಿದೆ” ಎಂದು ವಿವರಿಸಿದ್ದಾರೆ.

ಆದಾಗ್ಯೂ ನೋಟಿಸ್‌ನಲ್ಲಿ ಬಳಸಲಾದ ಸ್ವರ ಮತ್ತು ಭಾಷೆಯ ಬಗ್ಗೆ ಕೇಳಿದಾಗ, ಅಧಿಕಾರಿಗಳು ಪ್ರತಿಕ್ರಿಯಿಸಲು ನಿರಾಕರಿಸಿದರು. ನೋಟಿಸ್ ಸ್ವೀಕರಿಸಿದ ನಂತರ ಹಲವಾರು ನಿವಾಸಿಗಳು ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿಯಾಗಿದ್ದಾರೆ.

ವರದಿಯ ಪ್ರಕಾರ 58 ವರ್ಷದ ಗಂಗಾರಾಮ್, “ನಾನು 4ನೇ ತರಗತಿಯವರೆಗೆ ಮಾತ್ರ ಓದಿದ್ದೇನೆ ಮತ್ತು ನನ್ನ ಹೆಸರನ್ನು ಮಾತ್ರ ಓದಬಲ್ಲೆ. ಕಾಲೋನಿಯಲ್ಲಿರುವ ಇತರರು ನನ್ನ ಮನೆಯನ್ನು ಖಾಲಿ ಮಾಡಬೇಕೆಂದು ನನಗೆ ವಿವರಿಸಿದರು. ನಮ್ಮ ಕಾಲೋನಿ ಅಕ್ರಮ ಎಂದು ಅಧಿಕಾರಿಗಳು ನಮಗೆ ಹೇಳಿದರು. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಅವರು ನಮಗೆ ಹೇಳಿದರು. ನಾವು ಬಡವರು, ನಾವು ದೂರು ನೀಡಬಹುದು.” ಎಂದು ಆವಲತ್ತುಕೊಂಡಿದ್ದಾರೆ.

PMAY ಯೋಜನೆಯಡಿಯಲ್ಲಿ ಇಲ್ಲಿ ಮನೆ ನಿರ್ಮಾಣಕ್ಕೆ ಮೊದಲ COVID-19 ಲಾಕ್‌ಡೌನ್ ನಂತರ ನಾನು ಮೂರು ಕಂತುಗಳನ್ನು ಪಡೆದೆನು. ತಲಾ 1 ಲಕ್ಷ ರೂ. ಮತ್ತು ಮುಂದಿನ ಕಂತುಗಳಲ್ಲಿ ತಲಾ 50,000 ರೂ. ಪಡೆದೆನು. ಆಳಿದುಳಿದ ಮನೆ ನಿರ್ಮಾಣವನ್ನು ಪೂರ್ಣಗೊಳಿಸಲು ಹೆಚ್ಚುವರಿಯಾಗಿ ತಮ್ಮ ಉಳಿತಾಯದಿಂದ 1.5 ಲಕ್ಷ ರೂ.ಗಳನ್ನು ಬಳಕೆ ಮಾಡಿದೆ ಎಂದು ಅವರು ಹೇಳಿದರು.

1986ರಲ್ಲಿ ಗಾಜಿಯಾಬಾದ್ ಜಿಲ್ಲೆಯ ಭಾಗವಾಗಿದ್ದ ಗರ್ಮುಕ್ತೇಶ್ವರದ ಚುಪ್ಲಾದಿಂದ ಸರಕಾರವು ಆ ಪ್ರದೇಶಕ್ಕೆ ತಮ್ಮನ್ನು ಸ್ಥಳಾಂತರಿಸಲಾಗಿದೆ ಎಂದು ನಿವಾಸಿಗಳು ಹೇಳಿದರು.

ಆ ಸಮಯದಲ್ಲಿ ಹೊರಡಿಸಲಾದ ನೋಟಿಸ್‌ನಲ್ಲಿ, “ಪುನರ್ವಸತಿ ಉದ್ದೇಶಕ್ಕಾಗಿ, ಸಾಮೂಹಿಕ ಅರ್ಜಿ ಪತ್ರವನ್ನು ಪರಿಗಣಿಸಿ, ಪುನರ್ವಸತಿ ಸಮಸ್ಯೆ ಬಗೆಹರಿಯಲು 100 ಗಜ ಭೂಮಿಯನ್ನು ನಿಮಗೆ ನೀಡಲು ನಾವು ನಿರ್ಧರಿಸಿದ್ದೇವೆ. ಭೂಮಿಯನ್ನು ಮಾರಾಟ ಮಾಡುವ ಮತ್ತು ವರ್ಗಾಯಿಸುವ ಹಕ್ಕು ನಿಮಗೆ ಇರುವುದಿಲ್ಲ. ನೀವು ಮತ್ತು ನಿಮ್ಮ ಕುಟುಂಬ ಸದಸ್ಯರು ವಸತಿ ಉದ್ದೇಶಗಳಿಗಾಗಿ ಭೂಮಿಯನ್ನು ಬಳಸುತ್ತೀರಿ” ಎಂದಿದೆ.

ಅವರು ಸ್ಥಳಾಂತರಗೊಂಡಾಗ ಅಲ್ಲಿ ಬತ್ತಿದ ಕೊಳವಿತ್ತು ಎಂದು ಗಂಗಾರಾಮ್ ಹೇಳುತ್ತಾರೆ. ಆದಾಗ್ಯೂ ನಗರ ಪಾಲಿಕೆ ಅಧಿಕಾರಿಗಳು ಅದನ್ನು ಮುಚ್ಚಿಸಿ ಅಲ್ಲಿಗೆ ನಮ್ಮನ್ನು ಸ್ಥಳಾಂತರಿಸಲು ಸಹಾಯ ಮಾಡಿದರು ಎಂದು ಅವರು ಹೇಳುತ್ತಾರೆ.

ಮತ್ತೊಬ್ಬ ನಿವಾಸಿ ಕಮಲಾ ಅವರು, “ಅವರು (ಅಧಿಕಾರಿಗಳು) ತಾವು ಮಾಡಬೇಕಾದ್ದನ್ನು ಮಾಡಿದ್ದೇವೆ ಎಂದು ನಮಗೆ ಹೇಳಿದರು, ಮತ್ತು ಈಗ ನಮಗೆ ಸಾಧ್ಯವಾದದ್ದನ್ನು ಮಾಡುವುದು ನಮ್ಮ ಜವಾಬ್ದಾರಿಯಾಗಿದೆ… ನಮಗೆ ನಿದ್ರೆ ಬರುತ್ತಿಲ್ಲ, ನಮ್ಮ ಉಳಿತಾಯದ ಎಲ್ಲಾ ಹಣವನ್ನು ನಮ್ಮ ಮನೆಗಳನ್ನು ನಿರ್ಮಿಸಲು ಬಳಸಿದ್ದೇವೆ. ಈಗ ನಾವು ಎಲ್ಲಿಗೆ ಹೋಗುಬೇಕು” ಎಂದು ಪ್ರಶ್ನಿಸುತ್ತಾರೆ.

ಹಣ, ಹೆಂಡಕ್ಕೆ ಮತ ನೀಡಿದರೆ ಮುಂದಿನ ಜನ್ಮದಲ್ಲಿ ನಾಯಿ, ಬೆಕ್ಕುಗಳಾಗಿ ಹುಟ್ಟುತ್ತೀರಿ: ಬಿಜೆಪಿ ಶಾಸಕಿ ಉಷಾ ಠಾಕೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...