Homeಅಂತರಾಷ್ಟ್ರೀಯಯುದ್ಧ ಕೊನೆಗೊಳಿಸುವ ಒಪ್ಪಂದಕ್ಕೆ ಸಿದ್ದ, ಕದನ ವಿರಾಮದ ಒಪ್ಪಂದಕ್ಕೆ ಸಿದ್ಧವಿಲ್ಲ: ಹಮಾಸ್ 

ಯುದ್ಧ ಕೊನೆಗೊಳಿಸುವ ಒಪ್ಪಂದಕ್ಕೆ ಸಿದ್ದ, ಕದನ ವಿರಾಮದ ಒಪ್ಪಂದಕ್ಕೆ ಸಿದ್ಧವಿಲ್ಲ: ಹಮಾಸ್ 

- Advertisement -
- Advertisement -

ಕೈರೋ: ನಾವು ಗಾಜಾ ಪಟ್ಟಿಯಲ್ಲಿ ಯುದ್ದ ಕೊನೆಗೊಳಿಸುವ ಒಪ್ಪಂದಕ್ಕೆ ಸಿದ್ಧವಿದ್ದೆವೇ ಹೊರತು, ಕದನ ವಿರಾಮದಂತ ಅರೆಕಾಲಿಕ  ಒಪ್ಪಂದಕ್ಕೆ ಸಿದ್ದವಿಲ್ಲ. ಅಂದರೆ ಹಮಾಸ್ ಸಮಗ್ರ ಒಪ್ಪಂದವನ್ನು ಬಯಸುತ್ತದೆ ಎಂದು ಹಮಾಸ್ ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ದೂರದರ್ಶನದ ಭಾಷಣದಲ್ಲಿ, ಅದರ ಮಾತುಕತೆ ತಂಡದ ನೇತೃತ್ವ ವಹಿಸಿರುವ ಹಮಾಸ್ ಮುಖ್ಯಸ್ಥ ಖಲೀಲ್ ಅಲ್-ಹಯಾ ಅವರು, ನಾವು ಇನ್ನು ಮುಂದೆ ಇಸ್ರೇಲಿನ ಮಧ್ಯಂತರ ಒಪ್ಪಂದಗಳಿಗೆ ಒಪ್ಪುವುದಿಲ್ಲ. ಸಮಗ್ರ ಒಪ್ಪಂದವನ್ನು ಬಯಸುತ್ತೇವೆ. ಸಂಪೂರ್ಣ ಯುದ್ಧವನ್ನು ಕೊನೆಗೊಳಿಸುವ ಒಪ್ಪಂದಕ್ಕೆ ಸಿದ್ದವಿದ್ದವೇ ಹೊರತು ಅರೆಕಾಲಿಕ ಕದನ ವಿರಾಮದ ಒಪ್ಪಂದಕ್ಕೆ ನಾವು ಸಿದ್ಧವಿಲ್ಲ ಎಂದು ಹೇಳಿದರು.

ಗಾಜಾ ಯುದ್ಧವನ್ನು ಕೊನೆಗೊಳಿಸಲು ಇಸ್ರೇಲ್‌ನ ಜೈಲಿನಲ್ಲಿರುವ ಪ್ಯಾಲೆಸ್ಟೀನಿಯನ್ನರ ಬಿಡುಗಡೆ ಮತ್ತು ಗಾಜಾದ ಪುನರ್ನಿರ್ಮಾಣಕ್ಕೆ ಪ್ರತಿಯಾಗಿ ಹಮಾಸ್ ತನ್ನ ಕಸ್ಟಡಿಯಲ್ಲಿರುವ ಉಳಿದ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು “ಸಮಗ್ರ ಪ್ಯಾಕೇಜ್ ಮಾತುಕತೆಗಳಲ್ಲಿ” ತಕ್ಷಣ ತೊಡಗಿಸಿಕೊಳ್ಳಲು ಸಿದ್ಧವಾಗಿದೆ ಎಂದು ಹಯಾ ಹೇಳಿದರು.

“ನೆತನ್ಯಾಹು ಮತ್ತು ಅವರ ಸರ್ಕಾರವು ತಮ್ಮ ರಾಜಕೀಯ ಕಾರ್ಯಸೂಚಿಗೆ ಭಾಗಶಃ ಒಪ್ಪಂದಗಳನ್ನು ಮರೆಮಾಚಲು ಬಳಸುತ್ತದೆ, ಇದು ನಿರ್ನಾಮ ಮತ್ತು ಹಸಿವಿನ ಯುದ್ಧವನ್ನು ಮುಂದುವರಿಸುವುದನ್ನು ಆಧರಿಸಿದೆ” ಎಂದು ಹಯ್ಯ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಉಲ್ಲೇಖಿಸಿ ಹೇಳಿದರು.

ಕಳೆದ ತಿಂಗಳು ಗಾಜಾದಲ್ಲಿ ಹೋರಾಟವನ್ನು ನಿಲ್ಲಿಸಿದ ಜನವರಿಯ ಕದನ ವಿರಾಮ ಒಪ್ಪಂದವನ್ನು ಪುನರುಜ್ಜೀವನಗೊಳಿಸಲು ಈಜಿಪ್ಟ್ ಮಧ್ಯವರ್ತಿಗಳು ಕೆಲಸ ಮಾಡುತ್ತಿದ್ದಾರೆ, ಆದರೆ ಇಸ್ರೇಲ್ ಮತ್ತು ಹಮಾಸ್ ಎರಡೂ ಪರಸ್ಪರ ದೂಷಿಸುತ್ತಿವೆ, ಪ್ರಗತಿಯ ಯಾವುದೇ ಲಕ್ಷಣಗಳಿಲ್ಲ ಎಂದು ವರದಿಯಾಗಿದೆ.

ಹಮಾಸ್ ಹೇಳಿಕೆಗಳು ಅವರು ಶಾಂತಿಯಲ್ಲಿ ಆಸಕ್ತಿ ಹೊಂದಿಲ್ಲ. ಆದರೆ ಶಾಶ್ವತ ಹಿಂಸಾಚಾರದಲ್ಲಿ ಆಸಕ್ತಿ ಹೊಂದಿದ್ದಾರೆಂದು ತೋರಿಸುತ್ತವೆ. ಟ್ರಂಪ್ ಆಡಳಿತವು ಮಾಡಿದ ನಿಯಮಗಳು ಬದಲಾಗಿಲ್ಲ. ಒತ್ತೆಯಾಳುಗಳನ್ನು ಬಿಡುಗಡೆ ಮಾಡಿ ಅಥವಾ ನರಕವನ್ನು ಎದುರಿಸಿ ಎಂದು ಹಮಾಸ್ ಗೆ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜೇಮ್ಸ್ ಹೆವಿಟ್ ಹೇಳಿದ್ದಾರೆ.

ಕದನ ವಿರಾಮವನ್ನು ಪುನಃಸ್ಥಾಪಿಸಲು ಮತ್ತು ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಲು ಸೋಮವಾರ ಕೈರೋದಲ್ಲಿ ನಡೆದ ಇತ್ತೀಚಿನ ಹಲವು ಸುತ್ತಿನ ಮಾತುಕತೆಗಳು ಯಾವುದೇ ಸ್ಪಷ್ಟ ಪ್ರಗತಿಯಿಲ್ಲದೆ ಕೊನೆಗೊಂಡಿವೆ ಎಂದು ಪ್ಯಾಲೆಸ್ಟೀನಿಯನ್ ಮತ್ತು ಈಜಿಪ್ಟ್ ಮೂಲಗಳು ತಿಳಿಸಿವೆ.

ಒತ್ತೆಯಾಳುಗಳ ಬಿಡುಗಡೆಗೆ ಅವಕಾಶ ನೀಡಲು ಮತ್ತು ಯುದ್ಧವನ್ನು ಕೊನೆಗೊಳಿಸಲು ಪರೋಕ್ಷ ಮಾತುಕತೆಗಳನ್ನು ಪ್ರಾರಂಭಿಸಲು ಇಸ್ರೇಲ್ ದೇಶವು ಗಾಜಾದಲ್ಲಿ 45 ದಿನಗಳ ಕದನ ವಿರಾಮವನ್ನು ಪ್ರಸ್ತಾಪಿಸಿತ್ತು. ಹಮಾಸ್ ಅದರ ಒಂದು ಷರತ್ತಾದ ಶಸ್ತ್ರ ತ್ಯಜಿಸಬೇಕೆಂಬುದನ್ನು ತಿರಸ್ಕರಿಸಿದೆ. ತನ್ನ ಭಾಷಣದಲ್ಲಿ ಹಯ್ಯ ಅವರು, ಇಸ್ರೇಲ್ “ಅಸಾಧ್ಯ ಷರತ್ತುಗಳೊಂದಿಗೆ” ಪ್ರತಿ ಪ್ರಸ್ತಾಪವನ್ನು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ಜನವರಿ 19ರಂದು ಪ್ರಾರಂಭವಾದ ಕದನ ವಿರಾಮದ ಅಡಿಯಲ್ಲಿ ಹಮಾಸ್ 38 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ. ಮಾರ್ಚ್‌ನಲ್ಲಿ ಇಸ್ರೇಲ್ ಸೇನೆಯು ಗಾಜಾದ ಮೇಲೆ ತನ್ನ ಭೂ ಮತ್ತು ವೈಮಾನಿಕ ದಾಳಿಯನ್ನು ಪುನರಾರಂಭಿಸಿದೆ. ಯುದ್ಧವನ್ನು ಕೊನೆಗೊಳಿಸದೆ ಕದನ ವಿರಾಮವನ್ನು ವಿಸ್ತರಿಸುವ ಪ್ರಸ್ತಾಪಗಳನ್ನು ಹಮಾಸ್ ತಿರಸ್ಕರಿಸಿದ ನಂತರ ಕದನ ವಿರಾಮವನ್ನು ಕೈಬಿಡಲಾಗಿದೆ.

ಉಳಿದ 59 ಒತ್ತೆಯಾಳುಗಳನ್ನು ಬಿಡುಗಡೆ ಮಾಡುವವರೆಗೆ ಮತ್ತು ಗಾಜಾವನ್ನು ಸೇನಾಮುಕ್ತಗೊಳಿಸುವವರೆಗೆ ದಾಳಿ ಮುಂದುವರಿಯುತ್ತದೆ ಎಂದು ಇಸ್ರೇಲಿ ಅಧಿಕಾರಿಗಳು ಹೇಳುತ್ತಾರೆ. ಯುದ್ಧವನ್ನು ಕೊನೆಗೊಳಿಸುವ ಒಪ್ಪಂದದ ಭಾಗವಾಗಿ ಮಾತ್ರ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಾಗಿ ಹಮಾಸ್ ಒತ್ತಾಯಿಸುತ್ತದೆ ಮತ್ತು ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸುವ ಬೇಡಿಕೆಗಳನ್ನು ತಿರಸ್ಕರಿಸಿದೆ.

ಇದೇ ವೇಳೆ ಗುರುವಾರ ಗಾಜಾ ಪಟ್ಟಿಯಾದ್ಯಂತ ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 32 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಗಾಜಾ ಪಟ್ಟಿಯ ಜಬಾಲಿಯಾದಲ್ಲಿರುವ ವಿಶ್ವಸಂಸ್ಥೆ ನಡೆಸುತ್ತಿರುವ ಶಾಲೆಯಲ್ಲಿ ನಡೆದ ದಾಳಿಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಹಮಾಸ್ ಕಮಾಂಡ್ ಸೆಂಟರ್ ಅನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಇಸ್ರೇಲಿ ಮಿಲಿಟರಿ ತಿಳಿಸಿದೆ.

2023ರ ಅಕ್ಟೋಬರ್ 7ರಂದು ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯಿಂದ ಯುದ್ಧ ಪ್ರಾರಂಭವಾಯಿತು. ಇದರಲ್ಲಿ 1,200 ಜನರು ಸಾವನ್ನಪ್ಪಿದರು ಮತ್ತು 251 ಜನರನ್ನು ಗಾಜಾಗೆ ಒತ್ತೆಯಾಳಾಗಿ ಇರಿಸಲಾಯಿತು ಎಂದು ಇಸ್ರೇಲಿ ಅಂಕಿಅಂಶಗಳು ತಿಳಿಸಿವೆ.

ಸ್ಥಳೀಯ ಆರೋಗ್ಯ ಅಧಿಕಾರಿಗಳ ಪ್ರಕಾರ, ಅಂದಿನಿಂದ ಇಸ್ರೇಲ್ ದಾಳಿಯಲ್ಲಿ 51,000 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ.

ಸಂಭಾಲ್‌: 250 ವರ್ಷದ ಜನೇತಾ ದರ್ಗಾ ಸರ್ಕಾರಿ ಭೂಮಿ ಎಂದು ಘೋಷಣೆ: ತನಿಖೆಗೆ ಸೂಚಿಸಿದ ಯೋಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...