Homeಕರ್ನಾಟಕಮಾಜಿ ಭೂಗತ ದೊರೆ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಗುಂಡಿನ ದಾಳಿ

ಮಾಜಿ ಭೂಗತ ದೊರೆ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಗುಂಡಿನ ದಾಳಿ

- Advertisement -
- Advertisement -

ಮಾಜಿ ಡಾನ್​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವಂತಹ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ  ಎಂದು ಟಿವಿ9 ವರದಿ ಮಾಡಿದೆ.

ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್​ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. ಆದರೆ ಹಿಂಬದಿ ಸೀಟ್​ನಲ್ಲಿದ್ದ ರಿಕ್ಕಿ ರೈಗೆ ಮೂಗು, ಕೈಗೆ ಗುಂಡು ತಾಕಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

2 ದಿನದ ಹಿಂದಷ್ಟೇ ರಷ್ಯಾದಿಂದ ವಾಪಸ್ ಆಗಿದ್ದ ರಿಕ್ಕಿ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸಕ್ರಿಯವಾಗಿದ್ದರು. ನಿನ್ನೆ ರಾಮನಗರ ತಾಲೂಕಿನ ಬಿಡದಿ ಮನೆಯಿಂದ ತಡರಾತ್ರಿ ತನ್ನ ಫಾರ್ಚ್ಯೂನರ್​ ಕಾರಲ್ಲಿ ಬೆಂಗಳೂರಿಗೆ ಹೊರಟಿದ್ದರು. ಸುಮಾರು 11.30 ರ ಹೊತ್ತಿಗೆ ಮನೆಯಿಂದ ಹೊರಬರ್ತಿದ್ದಂತೆ ಗೇಟ್​​ ಬಳಿ ದುಷ್ಕರ್ಮಿ, ಎರಡು ಸುತ್ತಿನ ಫೈರಿಂಗ್​ ಮಾಡಿದ್ದಾನೆ. 70 ಎಂಎಂ ಬುಲೆಟ್​ನ ಶಾಟ್​ಗನ್​ ಬಳಸಿ ಫೈರಿಂಗ್ ಮಾಡಲಾಗಿದೆ.

ರಿಕ್ಕಿ ರೈ ಪ್ರತಿ ಬಾರಿ ತಾವೇ ಕಾರು ಡ್ರೈವ್​ ಮಾಡುತ್ತಿದ್ದರು. ಹೀಗಾಗಿ ಡ್ರೈವರ್​​ ಸೀಟ್​ ಗುರಿ​ ಮಾಡಿ ಅಟ್ಯಾಕ್​ ಮಾಡಲಾಗಿತ್ತು. ಆದರೆ ತಡರಾತ್ರಿ ಅದ್ಯಾವ ಕಾರಣವೋ ಗೊತ್ತಿಲ್ಲ ತನ್ನ ಬದಲು ಡ್ರೈವರ್​ಗೆ ಕಾರು ಚಲಾಯಿಸಲು ಹೇಳಿದ್ದ ರಿಕ್ಕಿ ರೈ, ಹಿಂಬದಿ ಸೀಟ್​ನಲ್ಲಿ ಗನ್​ ಮ್ಯಾನ್​ ಜತೆ ಕುಳಿತಿದ್ದರು. ಹೀಗಾಗಿ ಫೈರಿಂಗ್​ ಆಗುತ್ತಿದ್ದಂತೆ ಕಾರು ಚಾಲಕ ರಾಜು ಮುಂದೆ ಬಗ್ಗಿದ್ದು, ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.​

ಖಾಸಗಿಯವರಿಗೆ ಸೇರಿದ, ರಸ್ತೆ ಪಕ್ಕದ ಕಾಂಪೌಡ್ ಬಳಿ ಬಚ್ಚಿಟ್ಟುಕೊಂಡು ದುಷ್ಕರ್ಮಿ ದಾಳಿ ಮಾಡಿದ್ದಾನೆ. ಅಂದರೆ ಕಾರು ಬೆಂಗಳೂರಿಗೆ ಹೊಗುತ್ತಿರಬೇಕಾದರೆ ಬಲಗಡೆ ಭಾಗದಲ್ಲಿ ಒಂದು ಕಾಂಪೌಂಡ್​ ಮಧ್ಯೆ ಅವಿತುಕೊಂಡು, ಅದರ ಒಂದು ರಂಧ್ರದಿಂದಲೇ ಗುಂಡಿನ ದಾಳಿ ಆಗಿದೆ.

ಬಿಡದಿ ಮನೆಯಿಂದ KA 53 MC 7128 ನಂಬರ್​​​ ಕಾರಿನಲ್ಲಿ ಮೂವರು ತೆರಳುತ್ತಿದ್ದರು. ರಿಕ್ಕಿ ರೈ ಜತೆಗೆ ಗನ್​ ಮ್ಯಾನ್ ಇದ್ದು, ಚಾಲಕ ಕಾರು ಚಲಾಯಿಸ್ತಿದ್ದ. ಹಿಂಬದಿ ಸೀಟ್​ನಲ್ಲಿ ರಿಕ್ಕಿ ರೈ ಕುಳಿತಿದ್ದರು. ಪೊಲೀಸರ ಮಾಹಿತಿ ಪ್ರಕಾರ 70mm ಬುಲೆಟ್​ನ ಶಾಟ್​ಗನ್​ ಬಳಸಿ ಫೈರಿಂಗ್ ನಡೆಸಲಾಗಿದೆ. ಒಂದು ಬಾರಿ ಮಾತ್ರ ಗುಂಡು ಹಾರಿಸಿದ್ದು, ಕಾರಿನ ಡೋರ್​ ಸೀಳಿ ಬಂದ ಬುಲೆಟ್, ಡ್ರೈವರ್ ಸೀಟ್ ಕುಶನ್ ಒಳಗೆ ನುಗ್ಗಿದೆ. ನಂತರ ಕಾರಿನ ಹಿಂಬದಿ ಸೀಟ್​ನ ಎಡಭಾಗದ ಡೋರ್​ಗೆ ತಾಗಿದೆ. ಈ ವೇಳೆ ಡ್ರೈವರ್ ಬೆನ್ನಿಗೆ ಹಾಗೂ ರಿಕ್ಕಿ ರೈ ಮೂಗು ಹಾಗೂ ಕೈಗೆ ಗಾಯವಾಗಿದೆ.

ರಿಕ್ಕಿ ರೈ ಹತ್ಯೆಗೆ ಪೂರ್ವ ನಿಯೋಜಿತ ಸಂಚು ನಡೆದಿತ್ತಾ ಎಂಬ ಅನುಮಾನಗಳು ಹುಟ್ಟುಕೊಂಡಿವೆ. ಎರಡು ದಿನಗಳ ಹಿಂದೆ ರಷ್ಯಾದಿಂದ ಬಂದಿರುವ ರಿಕ್ಕಿ ರೈ ಬಿಡದಿ ಮನೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ. ಈ ವೇಳೆ ಹಿಂಬಾಲಿಸಿ ಕಾದು ಕೃತ್ಯ ಎಸಗಲಾಗಿದೆ. ರಿಕ್ಕಿ ಬರೊದನ್ನೇ ಕಾದು ಜಾಗವನ್ನು ಗುರುತಿಸಿಕೊಳ್ಳಲಾಗಿದೆ. ಕಾಂಪೌಂಡ್​ ಒಂದರ ಮಧ್ಯೆ ಅವಿತುಕೊಂಡು ದುಷ್ಕರ್ಮಿ ಶೂಟ್​ ಮಾಡಿದ್ದಾನೆ. ಹೀಗಾಗಿ ಮಿಡ್ ನೈಟ್​ನಲ್ಲಿ ರಿಕ್ಕಿ ರೈ ಹೋಗೋ ಬಗ್ಗೆ ಮಾಹಿತಿ ಕೊಟ್ಟವರು ಯಾರು? ಸಂಚಿನ ಹಿಂದಿರೋರು ಯಾರು? ಯಾವ ಕಾರಣಕ್ಕೆ ಈ ದುಷ್ಕೃತ್ಯ ಎಸಗಿದರು ಅನ್ನೋದು ಪತ್ತೆ ಹಚ್ಚಲಾಗುತ್ತಿದೆ. ಮೇಲ್ನೋಟಕ್ಕೆ ಪ್ರೋಪೆಷನಲ್ ಶಾರ್ಪ್ ಶೂಟರ್​ನಿಂದಲೇ ಅಟ್ಯಾಕ್ ನಡೆದಿದ್ದು, ಅದೃಷ್ಟವಶಾತ್ ರಿಕ್ಕಿ ರೈ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸದ್ಯ ಪರಿಶೀಲನೆ ವೇಳೆ ಪೊಲೀಸರಿಗೆ ದುಷ್ಕರ್ಮಿಯ ಕ್ಲ್ಯೂ ಸಿಕ್ಕಿದೆ ಎನ್ನಲಾಗುತ್ತಿದೆ. ಜತೆಗೆ ಎರಡು ಬುಲೆಟ್ ಹಾಗೂ ಒಂದು ಮೊಬೈಲ್ ಪತ್ತೆಯಾಗಿದ್ದು, ಕಿರಾತಕನ ಪತ್ತೆಗೆ ಬಲೆ ಬೀಸಿದ್ದಾರೆ.

ಜೈ ಶ್ರೀರಾಮ್ ಕೂಗಲು ನಿರಾಕರಣೆ: 13 ವರ್ಷದ ಮುಸ್ಲಿಂ ಬಾಲಕನಿಗೆ ಚಾಕು ಇರಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...