Homeಕರ್ನಾಟಕರೋಹಿತ್ ವೇಮುಲ ಕಾಯ್ದೆ ಜಾರಿಗೆ ತರುವಂತೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಮನವಿ

ರೋಹಿತ್ ವೇಮುಲ ಕಾಯ್ದೆ ಜಾರಿಗೆ ತರುವಂತೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಮನವಿ

- Advertisement -
- Advertisement -

ನವದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರುವಂತೆ ವಿನಂತಿಸಿದ್ದಾರೆ.

ಈ ಸಂಬಂಧ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಹುಲ್‌ ಗಾಂಧಿ ಏಪ್ರಿಲ್ 16ರಂದು ಪತ್ರ ಬರೆದಿದ್ದಾರೆ. 2016ರಲ್ಲಿ ಜಾತಿ ತಾರತಮ್ಯದಿಂದ ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯ ಹೆಸರಿನ ಕಾನೂನಿಗೆ ಇದು ಹೆಸರಿಸಲಾಗಿದೆ.

ಬಿ.ಆರ್‌. ಅಂಬೇಡ್ಕರ್‌ ತಮ್ಮ ಜೀವಿತಾವಧಿಯಲ್ಲಿ ಎದುರಿಸಿದ್ದ ತಾರತಮ್ಯಕ್ಕೆ ಸಂಬಂಧಿಸಿದ ಹಲವು ಘಟನೆಗಳನ್ನು ರಾಹುಲ್ ಗಾಂಧಿ ಪತ್ರದಲ್ಲಿ ವಿವರಿಸಿದ್ದು, ಈ ಪತ್ರವನ್ನು ಅವರು ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ.

ಅಂಬೇಡ್ಕರ್‌ ಅವರು ಎದುರಿಸಿದಂತಹ ಅವಮಾನವನ್ನು ದೇಶದ ಯಾವ ಮಗುವೂ ಎದುರಿಸಬಾರದು ಎಂಬ ಮಾತನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪುತ್ತಾರೆ ಎಂದು ಹೇಳಿದ್ದಾರೆ. ದಲಿತ ಸಮುದಾಯದ ರೋಹಿತ್‌ ವೇಮುಲ, ತಾನು ಅಧ್ಯಯನ ಮಾಡುತ್ತಿದ್ದ ಶಿಕ್ಷಣ ಸಂಸ್ಥೆಯಲ್ಲಿ ಜಾತಿ ಆಧಾರಿತ ತಾರತಮ್ಯದಿಂದಾಗಿ 2016ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ವಿದ್ಯಾರ್ಥಿಗಳಿಗೆ ಅವರ ಸಾಮಾಜಿಕ, ಆರ್ಥಿಕ ಅಥವಾ ಧಾರ್ಮಿಕ ಹಿನ್ನೆಲೆಯ ಆಧಾರದ ಮೇಲೆ “ಹೊರಗಿಡುವಿಕೆ ಅಥವಾ ಅನ್ಯಾಯ” ವನ್ನು ತಡೆಗಟ್ಟಲು ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರಲು ಯೋಜಿಸುತ್ತಿದೆ.

2023ರಲ್ಲಿ ನಡೆದ ತನ್ನ ಸಮಗ್ರ ಸಭೆಯಲ್ಲಿ ದಲಿತರು, ಬುಡಕಟ್ಟು ಜನರು, ಇತರ ಹಿಂದುಳಿದ ವರ್ಗಗಳು (ಒಬಿಸಿಗಳು) ಮತ್ತು ಅಲ್ಪಸಂಖ್ಯಾತರ ಶಿಕ್ಷಣ ಮತ್ತು ಘನತೆಯ ಹಕ್ಕನ್ನು ರಕ್ಷಿಸಲು ರೋಹಿತ್ ವೇಮುಲಾ ಅವರ ಹೆಸರಿನ ವಿಶೇಷ ಕಾಯ್ದೆಯನ್ನು ಜಾರಿಗೆ ತರುವುದಾಗಿ ಕಾಂಗ್ರೆಸ್ ನಿರ್ಣಯವನ್ನು ಅಂಗೀಕರಿಸಿತ್ತು.

ಕಾಂಗ್ರೆಸ್ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಗಾಂಧಿಯವರು, “ರೋಹಿತ್ ವೇಮುಲಾ, ಪಾಯಲ್ ತಡ್ವಿ ಮತ್ತು ದರ್ಶನ್ ಸೋಲಂಕಿಯಂತಹ ಪ್ರತಿಭಾವಂತ ಯುವಕರ ಹತ್ಯೆ ಸ್ವೀಕಾರಾರ್ಹವಲ್ಲ” ಎಂದು ಬರೆದಿದ್ದಾರೆ.

ಶಿಕ್ಷಣದಲ್ಲಿ ತಾರತಮ್ಯಕ್ಕೆ ದೃಢವಾದ ಅಂತ್ಯ ಹಾಡುವ ಸಮಯ ಇದು. ಡಾ. ಬಿ.ಆರ್.ಅಂಬೇಡ್ಕರ್, ರೋಹಿತ್ ವೇಮುಲಾ ಮತ್ತು ಲಕ್ಷಾಂತರ ಜನರು ಅನುಭವಿಸಿದ ತಾರತಮ್ಯವನ್ನು ಭಾರತದ ಯಾವುದೇ ಮಗುವೂ ಅನುಭವಿಸದಂತೆ ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರಬೇಕೆಂದು ನಾನು ಕರ್ನಾಟಕ ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದು ಗಾಂಧಿ ಪತ್ರದಲ್ಲಿ ಹೇಳಿದ್ದಾರೆ.

ಅಂಬೇಡ್ಕರ್ ಬದುಕಿನ ಘಟನೆಗಳ ಉಲ್ಲೇಖ ಎತ್ತಿನಗಾಡಿಯಲ್ಲಿ ಪ್ರಯಾಣ ಹೊರಟಿದ್ದರ ಕುರಿತು ಅಂಬೇಡ್ಕರ್ ವಿವರಿಸಿರುವುದನ್ನು ರಾಹುಲ್‌ ಉಲ್ಲೇಖಿಸಿದ್ದಾರೆ: ‘ಈ ಪಯಣದಲ್ಲಿ ನಮ್ಮೊಂದಿಗೆ ಸಾಕಷ್ಟು ಆಹಾರ ಇತ್ತು. ನಮ್ಮಲ್ಲಿ ಹಸಿವೂ ಇತ್ತು. ಆದಾಗ್ಯೂ ನಾವು ಏನನ್ನೂ ತಿನ್ನದೆಯೇ ಮಲಗಬೇಕಾಯಿತು. ನಮಗೆ ನೀರು ಸಿಗದ ಕಾರಣ ಹಸಿದ ಹೊಟ್ಟೆಯಲ್ಲೇ ಮಲಗಿದೆವು. ನಾವು ಅಸ್ಪೃಶ್ಯರಾಗಿದ್ದರಿಂದ ನಮಗೆ ನೀರು ಸಿಗಲಿಲ್ಲ’.  ಶಾಲೆಯಲ್ಲಿನ ಘಟನೆಯನ್ನು ಕೂಡ ಅಂಬೇಡ್ಕರ್ ವಿವರಿಸಿದ್ದಾರೆ ಅದನ್ನೂ ಪತ್ರದಲ್ಲಿ ವಿವರಿಸಲಾಗಿದೆ: ‘ನಾನು ಅಸ್ಪೃಶ್ಯ ಎಂಬುದು ನನಗೆ ಗೊತ್ತಿತ್ತು. ಅಸ್ಪೃಶ್ಯರು ಕೆಲ ತಾರತಮ್ಯ ಹಾಗೂ ಅವಮಾನಗಳನ್ನು ಎದುರಿಸಬೇಕಾಗುತ್ತಿತ್ತು. ನಾನು ಪಡೆದ ರ‍್ಯಾಂಕ್ ಆಧಾರದ ಮೇಲೆ ನಾನು ಶಾಲೆಯಲ್ಲಿ ನನ್ನ ಸಹಪಾಠಿಗಳೊಂದಿಗೆ ಕೂಡಲು ಸಾಧ್ಯವಿಲ್ಲ ಎಂಬುದು ಕೂಡ ಗೊತ್ತಿತ್ತು. ನಾನು ಕೊಠಡಿಯ ಒಂದು ಮೂಲೆಯಲ್ಲಿ ಒಬ್ಬನೇ ಕುಳಿತುಕೊಳ್ಳುತ್ತಿದ್ದೆ’.

ನಮ್ಮ ಶೈಕ್ಷಣಿಕ ವ್ಯವಸ್ಥೆಯಲ್ಲಿ ಇಂದಿಗೂ ದಲಿತ, ಆದಿವಾಸಿ ಮತ್ತು ಒಬಿಸಿ ಸಮುದಾಯಗಳ ಲಕ್ಷಾಂತರ ವಿದ್ಯಾರ್ಥಿಗಳು ಇಂತಹ ಕ್ರೂರ ತಾರತಮ್ಯವನ್ನು ಎದುರಿಸಬೇಕಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಗಾಂಧಿ ಹೇಳಿದರು.

ತಮ್ಮ ಎಕ್ಸ್  ಪೋಸ್ಟ್‌ನಲ್ಲಿ, ಇತ್ತೀಚೆಗೆ ಸಂಸತ್ತಿನಲ್ಲಿ ದಲಿತ, ಆದಿವಾಸಿ ಮತ್ತು ಒಬಿಸಿ ಸಮುದಾಯಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಭೇಟಿಯಾದ ನಂತರ ಈ ಪತ್ರ ಬರೆದಿದ್ದೇನೆ ಎಂದು ಗಾಂಧಿ ತಿಳಿಸಿದ್ದಾರೆ.

“ಸಂಭಾಷಣೆಯ ಸಮಯದಲ್ಲಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಈ ಶೋಷಿತ ಸಮುದಾಯದ ವಿದ್ಯಾರ್ಥಿಗಳು ಹೇಗೆ ಎದುರಿಸುತ್ತಾರೆ ಎಂಬುದನ್ನು ಅವರು ನನಗೆ ಹೇಳಿದರು” ಎಂದು ಗಾಂಧಿ ಹೇಳಿದ್ದಾರೆ.

ಶಿಕ್ಷಣದಿಂದ ವಂಚಿತರು ಸಹ ಸಬಲರಾಗಲು ಮತ್ತು ಜಾತಿ ವ್ಯವಸ್ಥೆಯನ್ನು ಮುರಿಯಲು ಶಿಕ್ಷಣವು ಏಕೈಕ ಮಾರ್ಗವಾಗಿದೆ ಎಂದು ಬಾಬಾಸಾಹೇಬ್ ಅಂಬೇಡ್ಕರ್ ತೋರಿಸಿದ್ದರು. ಆದರೆ ದಶಕಗಳ ನಂತರವೂ, ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಜಾತಿ ತಾರತಮ್ಯವನ್ನು ಎದುರಿಸುತ್ತಿರುವುದು ತುಂಬಾ ದುರದೃಷ್ಟಕರ ಎಂದು ವಿರೋಧ ಪಕ್ಷದ ನಾಯಕರಾದ ರಾಹುಲ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

2016ರ ಜನವರಿ 17ರಂದು ವಿಶ್ವವಿದ್ಯಾಲಯದ ಆವರಣದಲ್ಲಿ 25 ವರ್ಷದ ವೇಮುಲಾ ಅವರ ಆತ್ಮಹತ್ಯೆ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿವಾದದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ಹುಟ್ಟುಹಾಕಿತು.

………………………….

ಬೆಂಗಳೂರು: ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕಾನೂನು ಜಾರಿಗೆ ತರುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ನೀಡಿದ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರುವ ತಮ್ಮ ಸರ್ಕಾರದ ಬದ್ಧತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಪುನರುಚ್ಚರಿಸಿದ್ದಾರೆ.

ಮಾಜಿ ಕಾಂಗ್ರೆಸ್ ಅಧ್ಯಕ್ಷರ ಹೃತ್ಪೂರ್ವಕ ಪತ್ರ ಮತ್ತು ಸಾಮಾಜಿಕ ನ್ಯಾಯಕ್ಕೆ ಅಚಲ ಬದ್ಧತೆಗೆ ಧನ್ಯವಾದ ಹೇಳಿದ ಅವರು, ರಾಜ್ಯ ಸರ್ಕಾರವು ಆದಷ್ಟು ಬೇಗ ಈ ಕಾನೂನನ್ನು ತರಲಿದೆ ಎಂದು ಭರವಸೆ ನೀಡಿದರು.

“ಕರ್ನಾಟಕದಲ್ಲಿ ಯಾವುದೇ ವಿದ್ಯಾರ್ಥಿ ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ಎದುರಿಸದಂತೆ ನೋಡಿಕೊಳ್ಳಲು ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರುವ ಸಂಕಲ್ಪದಲ್ಲಿ ನಮ್ಮ ಸರ್ಕಾರ ದೃಢವಾಗಿದೆ. ರೋಹಿತ್, ಪಾಯಲ್, ದರ್ಶನ್ ಮತ್ತು ಬಹಿಷ್ಕಾರಕ್ಕಲ್ಲ, ಘನತೆಗೆ ಅರ್ಹರಾದ ಅಸಂಖ್ಯಾತ ಇತರರ ಕನಸುಗಳನ್ನು ಗೌರವಿಸಲು ನಾವು ಈ ಕಾನೂನನ್ನು ಆದಷ್ಟು ಬೇಗ ತರುತ್ತೇವೆ” ಎಂದು ಅವರು “X” ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮಂಗಳೂರು| ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ: ಭಾರೀ ಸಂಖ್ಯೆಯಲ್ಲಿ ಜನರು ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...