HomeUncategorizedಬಿಹಾರ ವಿಧಾನಸಭಾ ಚುನಾವಣೆ: ರಾಜಕೀಯ ಪಕ್ಷಗಳಲ್ಲಿ ಕೇಂದ್ರ ಸ್ಥಾನ ಪಡೆಯುತ್ತಿರುವ ದಲಿತರು

ಬಿಹಾರ ವಿಧಾನಸಭಾ ಚುನಾವಣೆ: ರಾಜಕೀಯ ಪಕ್ಷಗಳಲ್ಲಿ ಕೇಂದ್ರ ಸ್ಥಾನ ಪಡೆಯುತ್ತಿರುವ ದಲಿತರು

- Advertisement -
- Advertisement -

ಪಾಟ್ನಾ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಅಲ್ಲಿನ ರಾಜಕೀಯ ಪಕ್ಷಗಳು ಸಜ್ಜಾಗುತ್ತಿವೆ. ಹಾಗೆಯೇ ಇಲ್ಲಿನ ದಲಿತರು ಮತ್ತು ಯುವಕರು ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಅತ್ಯಂತ ಕೆಳ ಅಂಚಿನಲ್ಲಿರುವ ದಲಿತ ಸಮುದಾಯಗಳನ್ನು ತಲುಪಲು, ರಾಜಕೀಯ ಪಕ್ಷಗಳು ಮೂರು ಸಂಭಾವ್ಯ ಮಾರ್ಗಗಳನ್ನು ಅನುಸರಿಸುತ್ತಿವೆ. ದಲಿತ ಕೇಂದ್ರಿತ ಪಕ್ಷಗಳೊಂದಿಗೆ ಹೊಂದಾಣಿಕೆ, ದಲಿತ ನಾಯಕರನ್ನು ಉನ್ನತ ಸಾಂಸ್ಥಿಕ ಸ್ಥಾನಗಳಿಗೆ ನೇಮಿಸುವುದು ಮತ್ತು ದಲಿತ ಸಮುದಾಯಗಳೊಂದಿಗೆ ಸಾರ್ವಜನಿಕ ಸಭೆಗಳನ್ನು ಏರ್ಪಡಿಸುವುದನ್ನು ಮಾಡುತ್ತಿವೆ.

ಪಶುಪತಿ ಕುಮಾರ್ ಪರಾಸ್ ಅವರು ಎನ್‌ಡಿಎ ತೊರೆದಾಗಿನಿಂದ ಅವರ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ (ಆರ್‌ಎಲ್‌ಜೆಪಿ) ಅವರನ್ನು ಸೆಳೆಯಲು ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನೇತೃತ್ವದ ಮಹಾಘಟಬಂಧನ್ ಪ್ರಯತ್ನಿಸುತ್ತಿದೆ. ತಾನೇ ಸ್ವತಃ ಪ್ರತಿನಿಧಿಸುವ ದುಸಾಧ್ ಸಮುದಾಯದ ಮೇಲೆ ಪರಾಸ್ ಗಮನಾರ್ಹ ಪ್ರಭಾವ ಬೀರಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್ ದಲಿತ ನಾಯಕ ಜಗ್ಲಾಲ್ ಚೌಧರಿ ಅವರ 130ನೇ ಜನ್ಮ ದಿನಾಚರಣೆಯನ್ನು ಆಚರಿಸಿದೆ. ಇದರ ನಂತರ ಮಾರ್ಚ್‌ನಲ್ಲಿ ಪಕ್ಷದ ಹೊಸ ರಾಜ್ಯಾಧ್ಯಕ್ಷರಾಗಿ ಯುವ ದಲಿತ ನಾಯಕ ಮತ್ತು ಹಾಲಿ ಶಾಸಕ ರಾಜೇಶ್ ಕುಮಾರ್ ರಾಮ್ ಅವರನ್ನು ನೇಮಿಸಿದೆ. ರಾಮ್ ಅವರು ಜಾತವ್ ಸಮುದಾಯಕ್ಕೆ ಸೇರಿದವರಾಗಿದ್ದು, ಇದು ಬಿಹಾರದ ಎರಡನೇ ಅತಿದೊಡ್ಡ ದಲಿತ ಸಮುದಾಯವಾಗಿದ್ದು, ರಾಜ್ಯದ ಒಟ್ಟು ಜನಸಂಖ್ಯೆಯ ಸುಮಾರು ಶೇಕಡಾ 5ರಷ್ಟಿದೆ.

ಮತ್ತೊಂದೆಡೆ ಎನ್‌ಡಿಎ ತನ್ನ ವ್ಯಾಪ್ತಿಯಲ್ಲಿ ಎರಡು ದಲಿತ ಕೇಂದ್ರಿತ ಪಕ್ಷಗಳನ್ನು ಹೊಂದಿದೆ. ಅವು ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್ ವಿಲಾಸ್) ಮತ್ತು ಜಿತನ್ ರಾಮ್ ಮಾಂಝಿ ಅವರ ಪಕ್ಷ ಹಿಂದೂಸ್ತಾನಿ ಅವಾಮ್ ಮೋರ್ಚಾಗಳಾಗಿವೆ. ಎಸ್‌ಸಿಯೊಳಗಿನ ಅತಿದೊಡ್ಡ ಉಪಗುಂಪಾದ ಪಾಸ್ವಾನ್‌ಗಳು/ದುಸಾಧ್‌ಗಳಲ್ಲಿ ಎಲ್‌ಜೆಪಿ ಬಲವಾದ ಹಿಡಿತ ಹೊಂದಿದೆ ಮತ್ತು ಬಿಹಾರದ ಒಟ್ಟು ಜನಸಂಖ್ಯೆಯ ಶೇಕಡಾ 5.3 ರಷ್ಟಿದೆ. ಪಾಸ್ವಾನ್ ಸರಣಿ ಸಾರ್ವಜನಿಕ ಸಭೆಗಳನ್ನು ನಡೆಸುವ ಮೂಲಕ ದಲಿತ ಸಮುದಾಯಗಳನ್ನು ತಲುಪುತ್ತಿದ್ದಾರೆ. ಅದೇ ರೀತಿ, ಮಾಂಝಿ ಮುಸಾಹರ್ ಮತದಾರರ ಮೇಲೆ ಬಲವಾದ ಪ್ರಭಾವ ಬೀರಿದ್ದಾರೆ, ಇದು ರಾಜ್ಯದ ಜನಸಂಖ್ಯೆಯ ಶೇಕಡಾ 3 ಕ್ಕಿಂತ ಹೆಚ್ಚು ಇದೆ.

ಈ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಅವರ ಜೆಡಿ(ಯು) ದಲಿತ ಸಮುದಾಯಗಳೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಗಳನ್ನು ತೀವ್ರಗೊಳಿಸಿದೆ. ಗಮನಾರ್ಹವಾಗಿ ದಲಿತ ಮತ ಬ್ಯಾಂಕ್‌ನಲ್ಲಿ ಹಿಡಿತ ಸಾಧಿಸಲು 2007ರಲ್ಲಿ “ಮಹಾದಲಿತರು” ಎಂಬ ಹೊಸ ವರ್ಗವನ್ನು ಸೃಷ್ಟಿಸಿದವರು ಅವರು. ಈ ತಂತ್ರವು ನಂತರದ ಚುನಾವಣೆಗಳಲ್ಲಿ ಅವರಿಗೆ ಪ್ರಯೋಜನವನ್ನು ನೀಡಿದ್ದರೂ, ಇತ್ತೀಚಿನ ಚುನಾವಣೆಗಳಲ್ಲಿ ಅವರಿಗೆ ದಲಿತ ಮತದಾರರ ಬೆಂಬಲ ಕಡಿಮೆಯಾಗಿದೆ. ಉದಾಹರಣೆಗೆ ಪಕ್ಷವು 2015ರಲ್ಲಿ 38 ಎಸ್‌ಸಿ-ಮೀಸಲಾತಿ ಸ್ಥಾನಗಳಲ್ಲಿ 11 ಸ್ಥಾನಗಳನ್ನು ಗೆದ್ದಿತ್ತು, ಆದರೆ 2020ರಲ್ಲಿ ಅದು ಕೇವಲ ಎಂಟು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು.

ತನ್ನ ಪ್ರಸ್ತುತ ದಲಿತ ಸಂಪರ್ಕದ ಭಾಗವಾಗಿ ಜೆಡಿಯು ಕಳೆದ ವರ್ಷ ನವೆಂಬರ್-ಡಿಸೆಂಬರ್‌ನಲ್ಲಿ “ಭೀಮ್ ಸಂಸದ್” ಅನ್ನು ಆಯೋಜಿಸಿತ್ತು. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಮುನ್ನಾದಿನದಂದು ಏಪ್ರಿಲ್ 13ರಂದು ನಿತೀಶ್ ಕುಮಾರ್ ಪಾಟ್ನಾದಲ್ಲಿ “ಭೀಮ್ ಸಂವಾದ” ವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಪಕ್ಷದ ನಾಯಕರು ಪರಿಶಿಷ್ಟ ಜಾತಿಗಳಲ್ಲಿ ಸರ್ಕಾರಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಒತ್ತಾಯಿಸಿದರು. ಅವರು “ಅಂಬೇಡ್ಕರ್ ಸಮಗ್ರ ಯೋಜನೆ”ಯನ್ನು ಘೋಷಿಸಿದರು, ಇದರ ಮೂಲಕ ಮುಂದಿನ 100 ದಿನಗಳಲ್ಲಿ 40 ಲಕ್ಷ ದಲಿತ ಕುಟುಂಬಗಳನ್ನು ತಲುಪಿ, ಸುಮಾರು ಒಂದು ಡಜನ್ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶ ಹೊಂದಿದೆ.

ಬಿಹಾರದಲ್ಲಿ ದಲಿತರಿಗಾಗಿ ಕೆಲವು ಗಮನಾರ್ಹ ಸರ್ಕಾರಿ ಯೋಜನೆಗಳಲ್ಲಿ ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆ ಮತ್ತು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಕ್ರಮವಾಗಿ 50,000 ರೂ. ಮತ್ತು 1 ಲಕ್ಷ ರೂ.ಗಳ ಆರ್ಥಿಕ ನೆರವು; ಬಿಹಾರ ಮಹಾದಲಿತ ವಿಕಾಸ್ ಮಿಷನ್ (ಬಿಎಂವಿಎಂ) ಮತ್ತು ಸಮುದಾಯದ ನಡುವೆ ಕೊಂಡಿಯಾಗಿ ಕೆಲಸ ಮಾಡುವ ವಿಕಾಸ್ ಮಿತ್ರರ ನೇಮಕಾತಿ; ವ್ಯಾಪಾರ ಪ್ರಾರಂಭಿಸಲು ರೂ. 10 ಲಕ್ಷ (ಅನುದಾನವಾಗಿ ಹೆಚ್ಚುವರಿ 50 ಪ್ರತಿಶತ ಸೇರಿದಂತೆ); 91 ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಕಲಿಯುತ್ತಿರುವ ಪ್ರತಿ ದಲಿತ ವಿದ್ಯಾರ್ಥಿಗೆ ವಿದ್ಯಾರ್ಥಿವೇತನಗಳು ಸೇರಿವೆ. ಕಾಗದದ ಮೇಲೆ ಈ ಯೋಜನೆಗಳು ಸಾಕಷ್ಟು ಆಕರ್ಷಕವಾಗಿವೆ ಮತ್ತು ದಲಿತ ಸಮುದಾಯಗಳ ಸದಸ್ಯರೊಂದಿಗೆ ಪ್ರತಿಧ್ವನಿಸಬಹುದು.

ದಲಿತ ಸಮುದಾಯಗಳ ನಾಯಕರನ್ನು ಸೇರಿಸಿಕೊಳ್ಳುವುದರಿಂದ ಪಕ್ಷಗಳು ಆಯಾ ಸಮುದಾಯಗಳ ಮೇಲಿನ ಪ್ರಭಾವದಿಂದಾಗಿ ತಮ್ಮ ಮತ ಪಾಲನ್ನು ಪಡೆಯಲು ಸಹಾಯ ಮಾಡಬಹುದು. ಆದರೆ ಅದು ಅವರಿಗೆ ಸಕಾರಾತ್ಮಕ ಪರಿಣಾಮ ಬಿರುತ್ತೆ ಎಂದು ಖಾತರಿಪಡಿಸಲು ಸಾಧ್ಯವಿಲ್ಲ. ಏಕೆಂದರೆ ದಲಿತರಿಗೆ ನಾಯಕನ ಉಪಜಾತಿಯು ಹಲವು ಮುಖ್ಯವಾದ ವಿಷಯಗಳಲ್ಲಿ ಒಂದಾಗಿದೆ. ಅಂತಿಮವಾಗಿ ಚುನಾವಣೆಗಳನ್ನು ಗೆಲ್ಲಲು ರಾಜಕೀಯ ಪಕ್ಷಗಳಿಗೆ ತಮ್ಮ ಖಾತರಿಪಡಿಸಿದ ಕ್ಷೇತ್ರಗಳನ್ನು ಮೀರಿ ನಿರ್ಣಾಯಕ ಮತಗಳು ಬೇಕಾಗುತ್ತವೆ. ಹೀಗಾಗಿ, ವಿವಿಧ ದಲಿತ ಸಮುದಾಯಗಳಿಂದ ಹೆಚ್ಚಿದ ಬೆಂಬಲವು ಅವರ ಚುನಾವಣಾ ನಿರೀಕ್ಷೆಯನ್ನು ಬೆಳಗಿಸುವ ಸಾಧ್ಯತೆಯಿದೆ.

ರಾಹುಲ್ ಗಾಂಧಿಯವರ ಸಂವಿಧಾನ ಮತ್ತು ದಲಿತ ಹಕ್ಕುಗಳ ಇತ್ತೀಚಿನ ಪ್ರಸ್ತಾಪ, ಸಾಮಾಜಿಕ ನ್ಯಾಯ ರಾಜಕೀಯದಲ್ಲಿ ಹೊಸ ಅಲೆಯನ್ನು ಸ್ವೀಕರಿಸಲು M-Y ಸಮೀಕರಣವನ್ನು ಮೀರಿ RJDಯ ಗಮನ, ನಿತೀಶ್ ಅವರ ನೆಲೆಯನ್ನು ವಿಸ್ತರಿಸುವ ಪ್ರಯತ್ನ ಮತ್ತು ಪ್ರಮುಖ ದಲಿತ ಪಕ್ಷಗಳೊಂದಿಗೆ ಬಿಜೆಪಿಯ ಮೈತ್ರಿಗಳು ಎಚ್ಚರಿಕೆಯಿಂದ ರೂಪಿಸುವುದು, ಬಿಹಾರದಲ್ಲಿ ಚುನಾವಣಾ ಚರ್ಚೆಯನ್ನು ದಲಿತ ಕೇಂದ್ರಿತವಾಗಿಸುವ ಸಾಮರ್ಥ್ಯವನ್ನು ಹೊಂದಿವೆ.

ಮಂಗಳೂರು| ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ: ಭಾರೀ ಸಂಖ್ಯೆಯಲ್ಲಿ ಜನರು ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...