Homeಮುಖಪುಟಹೋಳಿ ಹಬ್ಬದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ; ಸಂಭಾಲ್ ವೃತ್ತ ನಿರೀಕ್ಷಕರಿಗೆ ಕ್ಲೀನ್ ಚಿಟ್

ಹೋಳಿ ಹಬ್ಬದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ; ಸಂಭಾಲ್ ವೃತ್ತ ನಿರೀಕ್ಷಕರಿಗೆ ಕ್ಲೀನ್ ಚಿಟ್

- Advertisement -
- Advertisement -

ಇತ್ತೀಚೆಗೆ ಹೋಳಿ ಹಬ್ಬದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಭಾಲ್ ವೃತ್ತ ನಿರೀಕ್ಷಕ ಅನುಜ್ ಚೌಧರಿ ಅವರಿಗೆ ಉತ್ತರ ಪ್ರದೇಶ ಪೊಲೀಸ್ ಇಲಾಖೆ ಕ್ಲೀನ್ ಚಿಟ್ ನೀಡಿದೆ.

ಈ ವರ್ಷದ ಹೋಳಿ ಶುಕ್ರವಾರದ ಪ್ರಾರ್ಥನೆಯಂದೇ ಬಂದಿತ್ತು. ಈ ಪ್ರದೇಶದಲ್ಲಿ ಕೋಮು ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡಿಕೊಳ್ಳಲು, ಶಾಂತಿ ಸಮಿತಿ ಸಭೆ ನಡೆಸಲಾಯಿತು. ಅಲ್ಲಿ ಮಾತನಾಡಿದ್ದ ಸಿಒ ಚೌಧರಿ, “ಹೋಳಿ ಹಬ್ಬದ ಸಮಯದಲ್ಲಿ ಮುಸ್ಲಿಮರು ಬಣ್ಣ ಬಳಿಯುವುದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ, ಅವರು ಮನೆಯಲ್ಲಿಯೇ ಇರಬೇಕು” ಎಂದು ಹೇಳಿದರು.

ಅವರ ಹೇಳಿಕೆಗಳು ವ್ಯಾಪಕ ಖಂಡನೆಗೆ ಕಾರಣವಾದವು, ಅದರ ನಂತರ ನಿವೃತ್ತ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಅವರು ಚೌಧರಿ ಅವರು ಸೇವಾ ಮತ್ತು ಸಮವಸ್ತ್ರ ನಡವಳಿಕೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.

ಪೊಲೀಸ್ ವರಿಷ್ಠಾಧಿಕಾರಿ (ಕಾನೂನು ಮತ್ತು ಸುವ್ಯವಸ್ಥೆ) ಮನೋಜ್ ಕುಮಾರ್ ಅವಸ್ಥಿ ನೇತೃತ್ವದ ತನಿಖಾ ತಂಡವು ಸಂಭಾಲ್ ವೃತ್ತ ನಿರೀಕ್ಷಕರನ್ನು ತಪ್ಪಿತಸ್ಥರೆಂದು ಪರಿಗಣಿಸಿಲ್ಲ. ಅವಸ್ಥಿ ಅವರ ವರದಿಯು, “ದೂರುದಾರರ ಆರೋಪಗಳನ್ನು ಬೆಂಬಲಿಸಲು ಯಾವುದೇ ವಿಶ್ವಾಸಾರ್ಹ ಪುರಾವೆಗಳು ಕಂಡುಬಂದಿಲ್ಲ” ಎಂದು ಸೂಚಿಸಿದೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ, ತನಿಖಾ ತಂಡವು ಜನ್ ಕಲ್ಯಾಣ್ ಸಮಿತಿಯ ಅಧ್ಯಕ್ಷ ಜಿತೇಂದ್ರ ವರ್ಮಾ ಮತ್ತು ಅಸ್ಮೋಲಿ ಗ್ರಾಮದ ಯಾಸೀನ್ ಎಂಬ ವ್ಯಕ್ತಿಯ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಕುತೂಹಲಕಾರಿಯಾಗಿ, ಇಬ್ಬರೂ ಸಂಭಾಲ್ ವೃತ್ತ ನಿರೀಕ್ಷಕರ ಹೇಳಿಕೆಯನ್ನು ಬಲವಾಗಿ ಬೆಂಬಲಿಸಿದ್ದಾರೆ.

ಸಂಭಾಲ್ ವೃತ್ತ ನಿರೀಕ್ಷಕರಿಗೆ ವಿವಾದ ಹೊಸದಲ್ಲ. ಈ ವರ್ಷದ ಜನವರಿಯಲ್ಲಿ, ಚೌಧರಿ ಸಮವಸ್ತ್ರದಲ್ಲಿ ಹಿಂದೂ ಯಾತ್ರೆಯಲ್ಲಿ (ಮೆರವಣಿಗೆ) ಭಾಗವಹಿಸಿದ ನಂತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೀಡಿಯೊ ಕಾಣಿಸಿಕೊಂಡಿತು. ಈ ದೃಶ್ಯಾವಳಿಗಳು ಅವರು ಕೇಸರಿ ವಸ್ತ್ರ ಧರಿಸಿದ ಪುರೋಹಿತರ ಜೊತೆಗೆ ನಡೆದುಕೊಂಡು ಹೋಗುವಾಗ ಗದೆಯನ್ನು ಹಿಡಿದುಕೊಂಡು ಸ್ತುತಿಗೀತೆಗಳನ್ನು ಹಾಡುತ್ತಿರುವುದನ್ನು ದಾಅಖಲಾಗಿದೆ. ಅವರು ದೇವಾಲಯಗಳಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಸಹ ಮಾಡಿದರು.

ಕಳೆದ ವರ್ಷ, ನವೆಂಬರ್ 24 ರಂದು ಮೊಘಲ್ ಯುಗದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯ ಸಂದರ್ಭದಲ್ಲಿ ಸಂಭಾಲ್‌ನಲ್ಲಿ ಹಿಂಸಾತ್ಮಕ ಘರ್ಷಣೆಗಳ ನಂತರ, ಸರ್ಕಲ್ ಇನ್ಸ್‌ಪೆಕ್ಟರ್, ಪೊಲೀಸ್ ಗುಂಡಿನ ದಾಳಿಯಲ್ಲಿ ನಾಗರಿಕ ಹತ್ಯೆಗಳ ಬಗ್ಗೆ ಕೇಳಿದಾಗ, “ಇಂತಹ ಅಸಂಸ್ಕೃತ ಜನರಿಂದ ವಿದ್ಯಾವಂತ ವ್ಯಕ್ತಿ ಸಾಯುತ್ತಾನೆಯೇ? ನಾವು ಈ ರೀತಿ ಸಾಯಲು ಪೊಲೀಸ್ ಪಡೆಗೆ ಸೇರಲಿಲ್ಲ” ಎಂದು ಹೇಳಿದ್ದರು.

ಬ್ರಾಹ್ಮಣರ ಕುರಿತ ಹೇಳಿಕೆ ವಿವಾದ: ಅನುರಾಗ್ ಕಶ್ಯಪ್ ಕುಟುಂಬಕ್ಕೆ ಕೊಲೆ, ಅತ್ಯಾಚಾರ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...