Homeಕರ್ನಾಟಕಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟುತ್ತಾರೆ ಹುಷಾರ್: ಸಿಎಂ ಸಿದ್ದರಾಮಯ್ಯ

ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟುತ್ತಾರೆ ಹುಷಾರ್: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ, ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂತಹ ಕತೆಗಳನ್ನು ಕಟ್ಟಿ ಬಿಡುತ್ತಾರೆ ಹುಷಾರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ತುಮಕೂರಿನಲ್ಲಿ ಶನಿವಾರ (ಏ.19) ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ‘ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ’ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು.

ಬಸವಣ್ಣ 850 ವರ್ಷಗಳ ಹಿಂದೆಯೇ ಅನುಭವ ಮಂಟಪ ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು. ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತಲೇ ಇರುತ್ತವೆ. ಹೀಗಾಗಿ ಪ್ರಗತಿಪರ ವಿಚಾರಗಳ ಜೊತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು. ಪ್ರಗತಿಪರ ವಿಚಾರಗಳ ಜೊತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ ಎಂದು ವಿವರಿಸಿದರು.

ಜಾತಿಗೆ ಚಲನ ಇಲ್ಲ, ವರ್ಗಕ್ಕೆ ಚಲನೆ ಇಲ್ಲ. ಜಾತಿ ವ್ಯವಸ್ಥೆ ನಿಂತ ನೀರು. ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿಯಲ್ಲೂ ಚಲನೆ ಸಿಗುತ್ತದೆ. ಈ ಚಲನೆ ಸಿಗಬೇಕಾದರೆ ಶಿಕ್ಷಣದ ಅಗತ್ಯ ಇದೆ. ಜಾತಿ ಮುಕ್ತ ಮಾನವೀಯ ಸಮಾಜ ನಿರ್ಮಾಣ ನಮ್ಮ ಸಂವಿಧಾನದ ಆಶಯ ಮತ್ತು ಬದ್ಧತೆ. ಆದರೆ, ಇವತ್ತಿಗೂ ಅಸ್ಪೃಶ್ಯತೆ ಹೋಗಿಲ್ಲದಿರುವುದು, ಶೈಕ್ಷಣಿಕ ಸಮಾನತೆ ಇಲ್ಲದಿರುವುದು ಬೇಸರದ ಸಂಗತಿ ಎಂದರು.

ನಾನು ಶಿಕ್ಷಣ ಪಡೆದಿರುವುದು ನನ್ನ ಸ್ವಾರ್ಥಕ್ಕೆ ಅಲ್ಲ. ಅವಕಾಶ ವಂಚಿತ ಸಮುದಾಯಗಳ ಬಿಡುಗಡೆಗಾಗಿ ವಿದ್ಯೆ ಸಂಪಾದನೆ ಮಾಡಿದ್ದೇನೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಬರದೇ ಇದ್ದರೆ ನಾವು, ನೀವು ಶಿಕ್ಷಣ ಪಡೆಯಲು ಸಾಧ್ಯವಿರಲಿಲ್ಲ. ಮನುಸ್ಮೃತಿ ಕಾರಣದಿಂದ ಜಾತಿ ಅಸಮಾನತೆ, ಜಾತಿ ಶೋಷಣೆ, ಜಾತಿ ದೌರ್ಜನ್ಯ ಹೆಚ್ಚಾಯಿತು ಎಂದು ಹೇಳಿದರು.

ಪಟ್ಟಭದ್ರರು ಹಿಂದಿನ ಜನ್ಮದ ಕರ್ಮ ಎಂದು ನಂಬಿಸಿ ಜನರನ್ನು ವಂಚಿಸುತ್ತಿದ್ದಾರೆ. ಅದಕ್ಕೇ ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದರು. ನಿಮ್ಮಲ್ಲಿ ಎಷ್ಟು ಜನ ಕರ್ಮ ಸಿದ್ಧಾಂತ ತಿರಸ್ಕರಿಸಿದ್ದೀರೋ ಗೊತ್ತಿಲ್ಲ. ಬ್ರಹ್ಮ ಒಬ್ಬರಿಗೆ ಶಿಕ್ಷಣ, ಮತ್ತೊಬ್ಬರಿಗೆ ಅನಕ್ಷರತೆ ಸಿಗಲಿ ಅಂತ ಬರೆದರಾ? ಒಬ್ಬನಿಗೆ ಬಡವನಾಗು, ಮತ್ತೊಬ್ಬನಿಗೆ ಶ್ರೀಮಂತನಾಗು ಅಂತ ಬ್ರಹ್ಮ ಬರೆದರಾ? ಒಬ್ಬ ಹೊಟ್ಟೆತುಂಬ ಉಣ್ಣಬೇಕು, ಉಳಿದವರು ಹಸಿವಿನಿಂದ ಬಿದ್ದಿರಬೇಕು ಎಂದು ಬ್ರಹ್ಮ ಬರೆದುಬಿಟ್ಟರಾ? ಎಂದು ಪ್ರಶ್ನಿಸಿದರು.

ಪಟ್ಟಭದ್ರರು ಬಸವಣ್ಣನವರ ಕ್ರಾಂತಿ ಮುಂದುವರೆಸಲು ಬಿಡಲಿಲ್ಲ. ಆದ್ದರಿಂದ ನಾವು ವೈಜ್ಞಾನಿಕವಾಗಿ, ವೈಚಾರಿಕವಾಗಿ ಚಿಂತಿಸುವುದು ಅಗತ್ಯ. ಅಹಿಂದ ಸಮಾಜ ಮತ್ತು ಎಲ್ಲಾ ಜಾತಿ, ಧರ್ಮಗಳ ಬಡತನ, ಹಸಿವು ನಿವಾರಣೆ ಆಗಬೇಕು. ಅನ್ನಕ್ಕಾಗಿ ಯಾರೂ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿ ನಿಲ್ಲಬಾರದು ಎನ್ನುವ ಕಾರಣದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ಎಂದು ಸ್ಮರಿಸಿದರು.

ಕಾಯಕ, ದಾಸೋಹ ಬಸವಣ್ಣನವರ ತತ್ವ. ಇದನ್ನು ಎಲ್ಲರೂ ಪಾಲಿಸಬೇಕು. ಎಲ್ಲಾ ಶ್ರಮಿಕ ವರ್ಗಗಳ ಸಂಸ್ಕೃತಿ, ಆಚಾರ, ವಿಚಾರ ಹೊರಗೆ ಬರಬೇಕು. ಇದಕ್ಕಾಗಿ ಎಲ್ಲರೂ ಸಾಹಿತ್ಯ ರಚನೆಯಲ್ಲಿ ತೊಡಬೇಕು. ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ನಿಗದಿಯಾಗಿತ್ತು. ಆದರೆ, ಈಗ ಶಿಕ್ಷಣ ಸಿಕ್ಕಿದೆ, ನಿಮ್ಮ ನಿಮ್ಮ‌ ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ. ನಮ್ಮ ಜ್ಞಾನ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು ಎಂದು ಸಿಎಂ ಪುನರುಚ್ಚರಿಸಿದರು.

ಬೆಂಗಳೂರು| ಆಟೋ ಚಾಲಕನಿಗೆ ‘ಹಿಂದಿ ಮಾತನಾಡು’ ಎಂದು ಧಮ್ಕಿ ಹಾಕಿದ ಉತ್ತರ ಭಾರತೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...