Homeಕರ್ನಾಟಕಕೆ.ಆರ್.ಪೇಟೆ: ಕಮಲ ಅರಳಿಸಲು ಯಡ್ಡಿ ಪ್ರಯತ್ನ. ಜೆಡಿಎಸ್‌ಗೆ ಜಾತಿಬಲ, ಒಡಕಿನ ಲಾಭ ಪಡೆಯುವುದೇ ಕಾಂಗ್ರೆಸ್?

ಕೆ.ಆರ್.ಪೇಟೆ: ಕಮಲ ಅರಳಿಸಲು ಯಡ್ಡಿ ಪ್ರಯತ್ನ. ಜೆಡಿಎಸ್‌ಗೆ ಜಾತಿಬಲ, ಒಡಕಿನ ಲಾಭ ಪಡೆಯುವುದೇ ಕಾಂಗ್ರೆಸ್?

- Advertisement -
- Advertisement -

ಯಡಿಯೂರಪ್ಪನವರು ಕ್ಷೇತ್ರಕ್ಕೆ ಒಂದು ಸಾವಿರ ಕೋಟಿ ಕೊಡುವುದಾಗಿ ಹೇಳಿದ್ದರಿಂದಲೇ ರಾಜೀನಾಮೆ ಕೊಟ್ಟು ಬಿಜೆಪಿಗೆ ಹೋದೆ ಎಂದು ಅನರ್ಹ ಶಾಸಕ ನಾರಾಯಣಗೌಡ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ದೇವೇಗೌಡರು ಚಪ್ಪಲಿ ಬಿಡುವ ಜಾಗದಲ್ಲಿ ನಿಲ್ಲಿಸುತ್ತಿದ್ದರು ಎಂದೂ ಸಹ ಆರೋಪಿಸಿದ್ದಾರೆ. ಅದಕ್ಕಾಗಿ ಬಿಜೆಪಿಯಿಂದ ನಿಂತಿದ್ದೀನಿ ಎನ್ನುತ್ತಿದ್ದಾರೆ. ಇವರು ಗ್ರಾ.ಪಂ ಸದಸ್ಯರಿಂದ ಹಿಡಿದು ಸಣ್ಣ ಪುಟ್ಟ ಮುಖಂಡರನ್ನು ಕೊಳ್ಳಲು ಸಾಕಷ್ಟು ಹಣದ ಹೊಳೆ ಹರಿಸುತ್ತಿದ್ದಾರೆ ಎಂಬ ಆರೋಪಗಳಿವೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಕೆ.ಆರ್.ಪೇಟೆ ನನ್ನ ಜನ್ಮಭೂಮಿ. ನಾನು ಹುಟ್ಟಿದ ಜಿಲ್ಲೆಯಲ್ಲಿ ಬಿಜೆಪಿ ಒಂದು ಸೀಟೂ ಗೆಲ್ಲದೇ ಇರುವುದಕ್ಕೆ ನಾಚಿಕೆಯಾಗುತ್ತಿದೆ. ಈ ಬಾರಿ ದಯವಿಟ್ಟು ಗೆಲ್ಲಿಸಿ ಎಂದು ಅವಲತ್ತುಕೊಂಡಿದ್ದಾರೆ. ಅವರ ಮಗ ಬಿ.ವೈ.ವಿಜಯೇಂದ್ರನನ್ನು ಅಲ್ಲಿಯೇ ಠಿಕಾಣಿ ಹೂಡಿಸಿ, ಮತಬೇಟೆಗೆ ಇಳಿಸಿದ್ದಾರೆ. ಮಂಡ್ಯ ಸಂಸದೆ ಸುಮಲತಾರವರು ಇದಕ್ಕೆ ಸಾಥ್ ನೀಡಿದ್ದಾರೆ. ಆರ್.ಎಸ್.ಎಸ್ ಅಂಗಸಂಸ್ಥೆಗಳು ಈ ಬಾರಿ ತುಸು ಬಿರುಸಿನಿಂದಲೇ ಪ್ರಚಾರಕ್ಕಿಳಿದಿವೆ.

ಇನ್ನು ತನ್ನ ಭದ್ರಕೋಟೆಯಲ್ಲಿ ಜೆ.ಡಿ.ಎಸ್ ಜಾತಿಬಲವನ್ನು ನೆಚ್ಚಿಕೊಂಡಿದೆ. ಮೊನ್ನೆ ಯಡಿಯೂರಪ್ಪನವರು ವೀರಶೈವ ಲಿಂಗಾಯಿತರ ಒಂದೂ ಓಟು ಕೂಡ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗಬಾರದು ಎಂದು ಹೇಳಿದ್ದನ್ನು ಜೆಡಿಎಸ್ ಎನ್‌ಕ್ಯಾಶ್ ಮಾಡಿಕೊಳ್ಳಲು ಹೊರಟಿದೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿರುವ ಒಕ್ಕಲಿಗರು ಜೆಡಿಎಸ್‌ನತ್ತ ಧ್ರುವೀಕರಣಗೊಳ್ಳುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಯಾರೇ ನಿಂತರೂ ಗೆಲುವು ಖಚಿತ ಎಂಬಂತಿರುವಾಗ, ಅಧಿಕೃತ ಅಭ್ಯರ್ಥಿ ದೇವರಾಜು ಗೆಲುವು ನಿಶ್ಚಿತ ಎನ್ನುವುದು ಜೆಡಿಎಸ್ ಕಾರ್ಯಕರ್ತರ ವಿಶ್ವಾಸ.

ಕಾಂಗ್ರೆಸ್‌ನಿಂದ ಹಳೇ ಹುರಿಯಾಳು ಕೆ.ಬಿ.ಚಂದ್ರಶೇಖರ್ ಕಣಕ್ಕಿಳಿದಿದ್ದಾರೆ. ಕಳೆದ ಎರಡು ಚುನಾವಣೆಗಳಲ್ಲಿ ಸೋತು ಕಂಗೆಟ್ಟಿರುವ ಅವರಿಗೆ ಗೆಲುವು ಬೇಕೇ ಬೇಕು. ಯಾವಾಗೆಲ್ಲ ಜೆಡಿಎಸ್ ಅಭ್ಯರ್ಥಿಗಳು ಪಕ್ಷಾಂತರ ಮಾಡಿ ಬೇರೆ ಪಕ್ಷಗಳಿಂದ ಸ್ಪರ್ಧಿಸಿದ್ದರೋ ಆಗೆಲ್ಲಾ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ. 1989 ಮತ್ತು 1999ರಲ್ಲಿ ಇದೇ ರೀತಿ ಆಗಿದೆ. ಅದರ ಪುನರಾವರ್ತನೆಗಾಗಿ ಕಾಂಗ್ರೆಸ್ ಎದುರು ನೋಡುತ್ತಿದೆ. ಕ್ಷೇತ್ರದಲ್ಲಿ ಒಂದಷ್ಟು ಬಲ ಹೊಂದಿರುವ ಕರ್ನಾಟಕ ರಾಜ್ಯ ರೈತ ಸಂಘವು ಪರೋಕ್ಷವಾಗಿ ಕಾಂಗ್ರೆಸ್‌ಗೆ ಬೆಂಬಲಿಸುತ್ತಿರುವುದು ಕೆಬಿಸಿಗೆ ಪ್ಲಸ್ ಪಾಯಿಂಟ್.

ಲಿಂಗಾಯಿತ ಸೇರಿದಂತೆ ಕೆಲ ಮೇಲ್ಜಾತಿ ಓಟುಗಳು ಪೂರ್ತಿ ಬಿಜೆಪಿ ಪಾಲಾದರೆ, ಮಾದಿಗರು ಮತ್ತು ನಾಯಕ ಸಮುದಾಯದ ಒಂದಷ್ಟು ಓಟನ್ನು ಬಿಜೆಪಿ ಪಡೆದುಕೊಳ್ಳಲಿದೆಯೆಂದು ಅಂದಾಜಿಸಲಾಗುತ್ತಿದೆ. ಜೆಡಿಎಸ್ ಅತಿ ಹೆಚ್ಚು ಒಕ್ಕಲಿಗ ಓಟುಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳಲಿದೆ. ಕಾಂಗ್ರೆಸ್ ಕುರುಬರು, ಮುಸ್ಲಿಮರ ಬಹುತೇಕ ಓಟುಗಳನ್ನು ಪಡೆದರೆ ಒಕ್ಕಲಿಗರು ಮತ್ತು ದಲಿತರ ಒಂದಷ್ಟು ಓಟುಗಳನ್ನು ಸೆಳೆಯುತ್ತದೆ. ಅಲ್ಲಿಗೆ ಒಕ್ಕಲಿಗ ಓಟುಗಳನ್ನು ಎಷ್ಟು ಪಡೆದುಕೊಳ್ಳುತ್ತಾರೆ ಎನ್ನುವದರ ಮೇಲೆ ಜಯ ಜೆಡಿಎಸ್‌ನದೊ ಅಥವಾ ಕಾಂಗ್ರೆಸ್‌ನದೋ ಎನ್ನುವುದು ನಿರ್ಧಾರವಾಗುತ್ತದೆ.

ಇದನ್ನೂ ಓದಿ: ಹುಣಸೂರಿನಲ್ಲಿ ಕಾಂಗ್ರೆಸ್ – ಬಿಜೆಪಿ ನಡುವೆ ಬಿಗ್ ಫೈಟ್: ಇವರಿಬ್ಬರಲ್ಲಿ ಜೆಡಿಎಸ್ ಯಾರನ್ನು ಗೆಲ್ಲಿಸಲಿದೆ?

ಇದನ್ನೂ ಓದಿ: ಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯನ ಗೆಲುವಿಗೆ ಮುನ್ನುಡಿ ಬರೆಯಿತೇ ಜೆಡಿಎಸ್?

ಇದನ್ನೂ ಓದಿ: ಯಲ್ಲಾಪುರ ಉಪಸಮರದಲ್ಲಿ ದೇಶಪಾಂಡೆ ಹಠಕ್ಕೆ ಹೆದರಿದ ಅನರ್ಹ ಶಾಸಕ ಶಿವರಾಮ್‌ ಹೆಬ್ಬಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...