Homeಮುಖಪುಟಸುಪ್ರೀಂಕೋರ್ಟ್‌ ವಿರುದ್ಧ ತನ್ನ ಸಂಸದರ ಹೇಳಿಕೆ | ಅಂತರ ಕಾಪಾಡಿಕೊಂಡ ಬಿಜೆಪಿ

ಸುಪ್ರೀಂಕೋರ್ಟ್‌ ವಿರುದ್ಧ ತನ್ನ ಸಂಸದರ ಹೇಳಿಕೆ | ಅಂತರ ಕಾಪಾಡಿಕೊಂಡ ಬಿಜೆಪಿ

- Advertisement -
- Advertisement -

ಸುಪ್ರೀಂಕೋರ್ಟ್‌ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ತಮ್ಮ ಪಕ್ಷದ ಸಂಸದರಾದ ನಿಶಿಕಾಂತ್ ದುಬೆ ಮತ್ತು ದಿನೇಶ್ ಶರ್ಮಾ ಅವರಿಂದ ಬಿಜೆಪಿ ಅಂತರ ಕಾಪಾಡಿಕೊಂಡಿದ್ದು, ಅದು ಅವರ ವೈಯಕ್ತಿಕ ಹೇಳಿಕೆ ಎಂದು ಹೇಳಿದೆ. ತಮ್ಮ ಪಕ್ಷವು ನ್ಯಾಯಾಂಗವನ್ನು ಗೌರವಿಸುತ್ತದೆ ಎಂದು ಪಕ್ಷವೂ ಹೇಳಿದ್ದು, ಸುಪ್ರೀಂ ಕೋರ್ಟ್ ವಿರುದ್ಧ ಅವರು ನೀಡಿರುವ ಪ್ರಚೋದನಕಾರಿ ಹೇಳಿಕೆಗಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಒತ್ತಿ ಹೇಳಿದೆ.

“ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ ಮತ್ತು ದಿನೇಶ್ ಶರ್ಮಾ ಅವರು ನ್ಯಾಯಾಂಗ ಮತ್ತು ದೇಶದ ಮುಖ್ಯ ನ್ಯಾಯಾಧೀಶರ ಕುರಿತು ಮಾಡಿದ ಹೇಳಿಕೆಗಳಿಗೂ ಭಾರತೀಯ ಜನತಾ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಇವು ಅವರ ವೈಯಕ್ತಿಕ ಹೇಳಿಕೆಗಳು, ಆದರೆ ಬಿಜೆಪಿ ಅಂತಹ ಹೇಳಿಕೆಗಳನ್ನು ಒಪ್ಪುವುದಿಲ್ಲ ಅಥವಾ ಅಂತಹ ಹೇಳಿಕೆಗಳನ್ನು ಎಂದಿಗೂ ಬೆಂಬಲಿಸುವುದಿಲ್ಲ. ಬಿಜೆಪಿ ಈ ಹೇಳಿಕೆಗಳನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತದೆ” ಎಂದು ಜೆಪಿ ನಡ್ಡಾ ಎಕ್ಸ್‌ನಲ್ಲಿ ತಡರಾತ್ರಿ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಜಾರ್ಖಂಡ್‌ನ ಗೊಡ್ಡಾದ ಸಂಸದ ನಿಶಿಕಾಂತ್ ದುಬೆ, ಸುಪ್ರೀಂ ಕೋರ್ಟ್ ದೇಶದಲ್ಲಿ ಧಾರ್ಮಿಕ ಯುದ್ಧಗಳನ್ನು ಪ್ರಚೋದಿಸುತ್ತಿದ್ದು, ಅದು ತನ್ನ ಮಿತಿಗಳನ್ನು ಮೀರುತ್ತಿದೆ ಎಂದು ವಾದಿಸಿದ್ದಾರೆ. “ಪ್ರತಿಯೊಂದಕ್ಕೂ ಸುಪ್ರೀಂ ಕೋರ್ಟ್‌ಗೆ ಹೋಗಬೇಕಾಗುತ್ತದೆ. ಹೀಗಾದರೆ, ಸಂಸತ್ತು ಮತ್ತು ರಾಜ್ಯಗಳ ವಿಧಾನಸಭೆಯನ್ನು ಮುಚ್ಚಬೇಕು” ಎಂದು ಅವರು ಹೇಳಿದ್ದಾರೆ.

ಸಂವಿಧಾನವನ್ನು ಉಲ್ಲೇಖಿಸಿ ಮಾತನಾಡಿದ ಮತ್ತೊಬ್ಬ ಬಿಜೆಪಿ ಸಂಸದ ದಿನೇಶ್ ಶರ್ಮಾ, “ಯಾರಿಗೂ ಲೋಕಸಭೆ ಮತ್ತು ರಾಜ್ಯಸಭೆಯನ್ನು ನಿರ್ದೇಶಿಸಲು ಸಾಧ್ಯವಿಲ್ಲ” ಎಂದು ಘೋಷಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಸಂಸದರು ಮತ್ತು ಇತರ ಎಲ್ಲರಿಗೂ ಅಂತಹ ಹೇಳಿಕೆಗಳನ್ನು ನೀಡದಂತೆ ತಿಳಿಸಲಾಗಿದೆ, “ನ್ಯಾಯಾಂಗವು ನಮ್ಮ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ” ಎಂದು ಹೇಳಿದ್ದಾರೆ.

“ಭಾರತೀಯ ಜನತಾ ಪಕ್ಷವು ಯಾವಾಗಲೂ ನ್ಯಾಯಾಂಗವನ್ನು ಗೌರವಿಸುತ್ತದೆ ಮತ್ತು ಅದರ ಆದೇಶಗಳು ಮತ್ತು ಸಲಹೆಗಳನ್ನು ಸಂತೋಷದಿಂದ ಸ್ವೀಕರಿಸಿದೆ. ಏಕೆಂದರೆ ಒಂದು ಪಕ್ಷವಾಗಿ ಸುಪ್ರೀಂ ಕೋರ್ಟ್ ಸೇರಿದಂತೆ ದೇಶದ ಎಲ್ಲಾ ನ್ಯಾಯಾಲಯಗಳು ನಮ್ಮ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ ಮತ್ತು ಸಂವಿಧಾನದ ರಕ್ಷಣೆಯ ಬಲವಾದ ಆಧಾರಸ್ತಂಭವಾಗಿದೆ ಎಂದು ನಾವು ನಂಬುತ್ತೇವೆ. ಅಂತಹ ಹೇಳಿಕೆಗಳನ್ನು ನೀಡದಂತೆ ನಾನು ಅವರಿಬ್ಬರಿಗೂ ಮತ್ತು ಇತರರಿಗೂ ಸೂಚನೆ ನೀಡಿದ್ದೇನೆ” ಎಂದು ಕೇಂದ್ರ ಆರೋಗ್ಯ ಸಚಿವರೂ ಆಗಿರುವ ನಡ್ಡಾ ಹೇಳಿದ್ದಾರೆ.

ತಮಿಳುನಾಡಿನ 10 ಮಸೂದೆಗಳಿಗೆ ಒಪ್ಪಿಗೆ ನೀಡುವುದನ್ನು ತಡೆಹಿಡಿದ ರಾಜ್ಯಪಾಲ ಆರ್.ಎನ್. ರವಿ ಅವರ ನಿರ್ಧಾರವನ್ನು ಇತ್ತಿಚೆಗೆ ಟೀಕಿಸಿದ್ದ ಸುಪ್ರಿಂಕೋರ್ಟ್, ಅದನ್ನು “ಕಾನೂನುಬಾಹಿರ ಮತ್ತು ಅನಿಯಂತ್ರಿತ” ಎಂದು ತೀರ್ಪು ನೀಡಿತ್ತು. ಇತರ ನಂತರ ಬಿಜೆಪಿ ಸಂಸದರ ತೀಕ್ಷ್ಣವಾದ ಹೇಳಿಕೆಗಳನ್ನು ನೀಡಿದ್ದಾರೆ.

ಶಾಸಕಾಂಗವು ಎರಡನೇ ಬಾರಿಗೆ ಅಂಗೀಕರಿಸಿದ ಮಸೂದೆಗಳಿಗೆ ರಾಷ್ಟ್ರಪತಿ ಮತ್ತು ರಾಜ್ಯಪಾಲರ ಒಪ್ಪಿಗೆಗಾಗಿ ಸುಪ್ರೀಂ ಕೋರ್ಟ್ ಪೀಠವು ಮೂರು ತಿಂಗಳ ಗಡುವನ್ನು ನಿಗದಿಪಡಿಸಿತ್ತು. ಸಾಂವಿಧಾನಿಕ ಪ್ರಶ್ನೆಗಳನ್ನು ಹೊಂದಿರುವ ಮಸೂದೆಗಳನ್ನು ಸುಪ್ರೀಂಕೋರ್ಟ್‌ಗೆ ಉಲ್ಲೇಖಿಸುವುದು ವಿವೇಕಯುತವಾಗಿದೆ ಎಂದು ಸುಪ್ರೀಂ ಕೋರ್ಟ್ ಇದೇ ವೇಳೆ ಒತ್ತಿ ಹೇಳಿತ್ತು.

ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯ ಮಧ್ಯೆಯೂ ಈ ಹೇಳಿಕೆಗಳನ್ನು ನೀಡಲಾಗಿತ್ತು.

ಏಪ್ರಿಲ್ 17 ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಯಾವುದೇ ‘ಬಳಕೆದಾರ ವಕ್ಫ್(ವಕ್ಫ್‌ ಬೈ ಯೂಸರ್)’ ನಿಬಂಧನೆಯನ್ನು ಡಿನೋಟಿಫೈ ಮಾಡುವುದಿಲ್ಲ ಮತ್ತು ಮಂಡಳಿಯಲ್ಲಿ ಯಾವುದೇ ಮುಸ್ಲಿಮೇತರ ಸದಸ್ಯರನ್ನು ಸೇರಿಸಿಕೊಳ್ಳುವುದಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಭರವಸೆ ನೀಡಿತ್ತು. ಕಾನೂನಿನ ಆ ಭಾಗಗಳನ್ನು ತಡೆಯುವುದನ್ನು ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದ ಒಂದು ದಿನದ ನಂತರ ಈ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿತ್ತು.

ಬಿಜೆಪಿಯ ದುಬೆ ಅವರ ಹೇಳಿಕೆಗಳನ್ನು ಖಂಡಿಸಿದ ಕಾಂಗ್ರೆಸ್, “ಸುಪ್ರೀಂ ಕೋರ್ಟ್ ಅನ್ನು ಗುರಿಯಾಗಿಸಲಾಗುತ್ತಿದೆ” ಎಂದು ಹೇಳಿದೆ.

“ಸುಪ್ರೀಂ ಕೋರ್ಟ್ ಅನ್ನು ದುರ್ಬಲಗೊಳಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ವಿಭಿನ್ನ ಧ್ವನಿಗಳು ಉದ್ದೇಶಪೂರ್ವಕವಾಗಿ ಬರುತ್ತಿದ್ದು, ಸುಪ್ರೀಂಕೋರ್ಟ್ ಅನ್ನು ಗುರಿಯಾಗಿಸಲಾಗುತ್ತಿದೆ. ಚುನಾವಣಾ ಬಾಂಡ್‌ಗಳ ಸಮಸ್ಯೆ ಇದೆ, ವಕ್ಫ್ ಸಮಸ್ಯೆ ಉದ್ಭವಿಸಿದೆ, ಚುನಾವಣಾ ಆಯೋಗದ ಸಮಸ್ಯೆ ಬರಲಿದೆ” ಎಂದು ಕಾಂಗ್ರೆಸ್‌ನ ಸಂವಹನದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಸುಪ್ರೀಂಕೋರ್ಟ್‌ ವಿರುದ್ಧ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...