Homeಮುಖಪುಟಮಹಾರಾಷ್ಟ್ರಕ್ಕಾಗಿ 'ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು' ಬದಿಗಿಡಲು ಸಿದ್ಧರಿದ್ದೇವೆ ಎಂದ ಉದ್ಧವ್, ರಾಜ್ ಠಾಕ್ರೆ!

ಮಹಾರಾಷ್ಟ್ರಕ್ಕಾಗಿ ‘ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು’ ಬದಿಗಿಡಲು ಸಿದ್ಧರಿದ್ದೇವೆ ಎಂದ ಉದ್ಧವ್, ರಾಜ್ ಠಾಕ್ರೆ!

- Advertisement -
- Advertisement -

ಮಹಾರಾಷ್ಟ್ರದ ಹಿತಾಸಕ್ತಿಗಾಗಿ ತಮ್ಮ “ಸಣ್ಣ ಭಿನ್ನಾಭಿಪ್ರಾಯಗಳನ್ನು” ಬದಿಗಿಡಲು ಸಿದ್ಧರಿದ್ದೇವೆ ಎಂದು ದೂರವಾದ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಶನಿವಾರ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಪಕ್ಷದ ನೇತೃತ್ವ ವಹಿಸಿದ್ದರೆ, ರಾಜ್ ಠಾಕ್ರೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ಎಂಬ ಪಕ್ಷದ ನೇತೃತ್ವ ವಹಿಸಿದ್ದಾರೆ. ಮಹಾರಾಷ್ಟ್ರಕ್ಕಾಗಿ

2005 ರಲ್ಲಿ ಶಿವಸೇನೆಯ ಸಂಸ್ಥಾಪಕ ಬಾಳಾ ಠಾಕ್ರೆ ತಮ್ಮ ಪುತ್ರ ಉದ್ಧವ್ ಠಾಕ್ರೆ ಅವರನ್ನು ಉತ್ತರಾಧಿಕಾರಿಯಾಗಿ ಹೆಸರಿಸಿದ ನಂತರ ರಾಜ್ ಠಾಕ್ರೆ ಆಗಿನ ಅವಿಭಜಿತ ಶಿವಸೇನೆಯನ್ನು ತೊರೆದಿದ್ದರು. ಒಂದು ವರ್ಷದ ನಂತರ, ರಾಜ್ ಠಾಕ್ರೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯನ್ನು ಪ್ರಾರಂಭಿಸಿದ್ದರು.

ಶನಿವಾರ ಚಲನಚಿತ್ರ ನಿರ್ಮಾಪಕ ಮಹೇಶ್ ಮಂಜ್ರೇಕರ್ ಅವರೊಂದಿಗಿನ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡುತ್ತಾ, “ನನಗೆ, ಮಹಾರಾಷ್ಟ್ರದ ಹಿತಾಸಕ್ತಿ ದೊಡ್ಡದಾಗಿದ್ದು, ಉಳಿದೆಲ್ಲವೂ ಗೌಣವಾಗಿದೆ. ಅದಕ್ಕಾಗಿ ನಮ್ಮ ಸಣ್ಣ ವಿವಾದಗಳನ್ನು ನಾವು ಬದಿಗಿಡಬಹುದು.” ಎಂದು ಹೇಳಿದ್ದಾರೆ.

ಉದ್ಧವ್ ಠಾಕ್ರೆ ಅವರೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ಶಿವಸೇನೆ (ಯುಬಿಟಿ) ಮುಖ್ಯಸ್ಥರಾದ ಉದ್ಧವ್ ಠಾಕ್ರೆ ತಮ್ಮೊಂದಿಗೆ ಕೆಲಸ ಮಾಡಲು ಸಿದ್ಧರಿದ್ದಾರೆಯೇ ಎಂಬುದು ಒಂದೇ ಪ್ರಶ್ನೆಯಾಗಿದೆ ಎಂದು ಹೇಳಿದ್ದಾರೆ.

“ಪ್ರಮುಖ ಸಮಸ್ಯೆಗಳು ಉದ್ಭವಿಸಿದಾಗ, ನಮ್ಮ ನಡುವಿನ ವಿವಾದಗಳು ಮತ್ತು ಜಗಳಗಳು ಚಿಕ್ಕದಾಗಿರುತ್ತವೆ. ಮಹಾರಾಷ್ಟ್ರ ಮತ್ತು ಮರಾಠಿ ಜನರ ವಿಚಾರದಲ್ಲಿ ನಮ್ಮ ನಡುವಿನ ಸಂಘರ್ಷಗಳು ಅಷ್ಟೆನೂ ದೊಡ್ಡ ವಿಚಾರವಲ್ಲ” ಎಂದು ಅವರು ಹೇಳಿದ್ದಾರೆ.

ಅವರ ಈ ಹೇಳಿಕೆಯ ನಂತರ ಉದ್ಧವ್ ಠಾಕ್ರೆ ಅವರು ಕೂಡಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮಹಾರಾಷ್ಟ್ರದ ಹಿತದೃಷ್ಟಿಯಿಂದ ತಮ್ಮ ವಿವಾದಗಳನ್ನು ಬದಿಗಿಡಲು ಸಿದ್ಧರಿರುವುದಾಗಿ ಹೇಳಿದ್ದಾರೆ. “ಸಣ್ಣ ಜಗಳಗಳನ್ನು ಬದಿಗಿಟ್ಟು ಮರಾಠಿ ಸಮುದಾಯದ ಹಿತಾಸಕ್ತಿಗಾಗಿ ಒಟ್ಟಿಗೆ ಸೇರಲು ನಾನು ಸಿದ್ಧನಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಮೊದಲು, ಮಹಾರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ವರ್ತಿಸುವವರನ್ನು ಮನೆಗೆ ಆಹ್ವಾನಿಸುವುದನ್ನು ಮತ್ತು ಅವರಿಗೆ  ಊಟ ಬಡಿಸುವುದನ್ನು ನಿಲ್ಲಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಿ. ನಂತರ ರಾಜ್ಯದ ಕಲ್ಯಾಣದ ಬಗ್ಗೆ ಮಾತನಾಡಬೇಕು.” ಎಂದು ಅವರು ಹೇಳುದ್ದಾರೆ. ಅವರು ಈ ಹೇಳಿಕೆಗಳನ್ನು 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯೊಂದಿಗೆ ರಾಜ್ ಠಾಕ್ರೆ ಅವರ ಮೈತ್ರಿಯನ್ನು ಉಲ್ಲೇಖಿಸಿ ಹೇಳಿದ್ದಾಗಿದೆ.

“ಲೋಕಸಭಾ ಚುನಾವಣೆಯ ಸಮಯದಲ್ಲಿ ಕೈಗಾರಿಕೆಗಳನ್ನು ಮಹಾರಾಷ್ಟ್ರದಿಂದ ಗುಜರಾತ್‌ಗೆ ಸ್ಥಳಾಂತರಿಸಲಾಗುತ್ತಿದೆ ಎಂದು ನಾನು ಹೇಳುತ್ತಿದ್ದೆ. ಆ ಸಮಯದಲ್ಲಿ ಈ ಬಗ್ಗೆ ವಿರೋಧಿಸುತ್ತಿದ್ದರೆ, ಇಂದು ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಇರುತ್ತಿರಲಿಲ್ಲ” ಎಂದು ಅವರು ಹೇಳಿದ್ದಾರೆ.

ಶನಿವಾರದ ಬೆಳವಣಿಗೆಯ ಕುರಿತು ಮಾತನಾಡಿದ ಉದ್ಧವ್ ನೇತೃತ್ವದ ಶಿವಸೇನೆಯ ವಕ್ತಾರ ಸಂಜಯ್ ರಾವತ್, ಮಹಾರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾಗಿರುವವರೊಂದಿಗೆ ರಾಜ್ ಠಾಕ್ರೆ ವ್ಯವಹರಿಸಬೇಕು ಎಂದು ಪುನರುಚ್ಚರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಅವರು [ರಾಜ್] ಒಬ್ಬ ಠಾಕ್ರೆ. ಉದ್ಧವ್ ಕೂಡ ಒಬ್ಬ ಠಾಕ್ರೆ. ಅವರ ಸಂಬಂಧ ಶಾಶ್ವತ. ರಾಜಕೀಯ ಭಿನ್ನಾಭಿಪ್ರಾಯಗಳಿಂದಾಗಿ, ಅವರು ಪ್ರತ್ಯೇಕ ಮಾರ್ಗಗಳನ್ನು ಆರಿಸಿಕೊಂಡಿದ್ದಾರೆ.” ಎಂದು ಅವರು ಹೇಳಿದ್ದಾರೆ.

“ಲೋಕಸಭಾ ಚುನಾವಣೆಯ ಸಮಯದಲ್ಲಿ ಮಹಾರಾಷ್ಟ್ರದ ಶತ್ರುಗಳಿಗೆ ಯಾವುದೇ ರೀತಿಯ ಸಹಾಯವನ್ನು ನೀಡಬಾರದು ಎಂದು ನಾವು ಸ್ಪಷ್ಟಪಡಿಸಿದ್ದೆವು. ಮಹಾರಾಷ್ಟ್ರವನ್ನು ಕಡಿಮೆ ಅಂದಾಜು ಮಾಡುವ ಕೆಲವು ಶಕ್ತಿಗಳಿವೆ ಎಂದು ಉದ್ಧವ್ ಠಾಕ್ರೆ ಹೇಳಿದ್ದರು. ಅವರು ಮರಾಠಿ ಜನರ ಹಿತಾಸಕ್ತಿಗಳ ವಿರುದ್ಧ ಪಿತೂರಿ ನಡೆಸುತ್ತಲೇ ಇದ್ದಾರೆ.” ಎಂದು ಸಂಜಯ್ ಹೇಳಿದ್ದಾರೆ

ಅಂತಹ ಶಕ್ತಿಗಳೊಂದಿಗೆ ರಾಜ್ ಠಾಕ್ರೆ ಬೆರೆಯಬಾರದು ಅಥವಾ ಕುಳಿತುಕೊಳ್ಳಬಾರದು. ಅವರು [ರಾಜ್] ಈ ನಿಲುವನ್ನು ಅಳವಡಿಸಿಕೊಳ್ಳಬೇಕು. ಅವರು ಈ ನಿಲುವನ್ನು ತೆಗೆದುಕೊಂಡರೆ, ನಾವು … ಚರ್ಚೆಗಳನ್ನು ನಡೆಸಲು ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರಕ್ಕಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಹಾರ| ಸಹೋದ್ಯೋಗಿಯನ್ನು ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿ ಕೊಂದ ಪೊಲೀಸ್ ಕಾನ್‌ಸ್ಟೆಬಲ್

ಬಿಹಾರ| ಸಹೋದ್ಯೋಗಿಯನ್ನು ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿ ಕೊಂದ ಪೊಲೀಸ್ ಕಾನ್‌ಸ್ಟೆಬಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...