Homeಮುಖಪುಟ3 ವರ್ಗಾವಣೆ, 2 ನಿವೃತ್ತಿಗಳಿಂದಾಗಿ ದೆಹಲಿ ಹೈಕೋರ್ಟ್‌ನ ಖಾಲಿ ಹುದ್ದೆಗಳು 40% ಕ್ಕೆ ಏರಿಕೆ

3 ವರ್ಗಾವಣೆ, 2 ನಿವೃತ್ತಿಗಳಿಂದಾಗಿ ದೆಹಲಿ ಹೈಕೋರ್ಟ್‌ನ ಖಾಲಿ ಹುದ್ದೆಗಳು 40% ಕ್ಕೆ ಏರಿಕೆ

- Advertisement -
- Advertisement -

ಈ ವರ್ಷದ ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ನಡೆದ ಮೂರು ವರ್ಗಾವಣೆಗಳು ಮತ್ತು ಎರಡು ನಿವೃತ್ತಿಗಳೊಂದಿಗೆ ದೆಹಲಿ ಹೈಕೋರ್ಟ್‌ನ ಕಾರ್ಯನಿರತ ನ್ಯಾಯಾಧೀಶರ ಸಂಖ್ಯೆ 36 ಕ್ಕೆ ಇಳಿದಿದ್ದು, ಶೇಕಡ 40 ರಷ್ಟು ಹುದ್ದೆಗಳು ಖಾಲಿಯಾಗಿವೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. 3 ವರ್ಗಾವಣೆ

ಈ ವರ್ಷದ ಕೊನೆಯಲ್ಲಿ ಇನ್ನೂ ಇಬ್ಬರು ನ್ಯಾಯಾಧೀಶರು – ನ್ಯಾಯಮೂರ್ತಿಗಳಾದ ಧರ್ಮೇಶ್ ಶರ್ಮಾ ಮತ್ತು ಶಾಲಿಂದರ್ ಕೌರ್ – ನಿವೃತ್ತರಾಗಲಿದ್ದಾರೆ. ಆ ವೇಳೆ ಕೂಡಾ ಯಾವುದೇ ನೇಮಕಾತಿಗಳನ್ನು ಮಾಡದಿದ್ದರೆ, 60 ಜನರ ಅನುಮೋದಿತ ಬಲವನ್ನು ಹೊಂದಿರುವ ಹೈಕೋರ್ಟ್‌ನಲ್ಲಿ ಕೇವಲ 34 ನ್ಯಾಯಾಧೀಶರು ಮಾತ್ರ ಕಾರ್ಯನಿರ್ವಹಿಸಲಿದ್ದಾರೆ ಎಂದು ವರದಿ ಹೇಳಿದೆ.

ಮಾರ್ಚ್‌ನಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ನೋಟುಗಳ ರಾಶಿ ಪತ್ತೆಯಾಗಿದೆ ಎಂಬ ಆರೋಪ ದೆಹಲಿ ಹೈಕೋರ್ಟ್ ಅನ್ನು ಬೆಚ್ಚಿಬೀಳಿಸಿತ್ತು. ಮಾರ್ಚ್ 24 ರಂದು, ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರನ್ನು ಅವರ ಮಾತೃ ಕೋರ್ಟ್ ಆದ ಅಲಹಾಬಾದ್ ಹೈಕೋರ್ಟ್‌ಗೆ ವಾಪಸ್ ಕಳುಹಿಸಲು ಆದೇಶಿಸಿತು. ಸರ್ಕಾರ ಕೂಡಾ ದೆಹಲಿಯ ಹೈಕೋರ್ಟ್‌ನ ಮೂರನೇ ಹಿರಿಯ ನ್ಯಾಯಾಧೀಶರಾಗಿದ್ದ ಅವರ ವರ್ಗಾವಣೆಯನ್ನು ತಕ್ಷಣವೇ ಅನುಮೋದಿಸಿತ್ತು.

ಮೂರು ದಿನಗಳ ನಂತರ, ಕೊಲಿಜಿಯಂ ನ್ಯಾಯಮೂರ್ತಿ ಡಿ.ಕೆ. ಶರ್ಮಾ ಅವರನ್ನು ಕಲ್ಕತ್ತಾಗೆ ವರ್ಗಾಯಿಸಲು ಆದೇಶಿಸಿತು. ಈ ವರ್ಗಾವಣೆಗೆ ಯಾವುದೇ ಕಾರಣವನ್ನು ನೀಡದಿದ್ದರೂ, ಕೋಲ್ಕತ್ತಾದ ವಕೀಲರ ಸಂಘಟನೆಗಳು ಈ ಶಿಫಾರಸನ್ನು ಆಕ್ಷೇಪಿಸಿದವು. ಆದಾಗ್ಯೂ, ನ್ಯಾಯಮೂರ್ತಿ ಶರ್ಮಾ ತಮ್ಮ ವಿದಾಯ ಭಾಷಣದಲ್ಲಿ ಈ ಆತಂಕಗಳನ್ನು ಹೋಗಲಾಡಿಸಲು ಪ್ರಯತ್ನಿಸಿದ್ದರು. ಈ ವೇಳೆ ಮಾತನಾಡಿದ್ದ ಅವರು, “ನನ್ನ ಸಾಮರ್ಥ್ಯ ಮತ್ತು ಉದ್ದೇಶಗಳಿಗೆ ತಕ್ಕಂತೆ ಸಂಸ್ಥೆಗೆ ಸೇವೆ ಸಲ್ಲಿಸುತ್ತೇನೆ” ಎಂದು ಹೇಳಿದ್ದರು.

ಮಾರ್ಚ್ 28 ರಂದು ಕೇಂದ್ರವು ನ್ಯಾಯಮೂರ್ತಿ ಚಂದ್ರ ಧಾರಿ ಸಿಂಗ್ ಅವರನ್ನು ಅಲಹಾಬಾದ್‌ಗೆ ವಾಪಸ್ ಕಳುಹಿಸಲು ಅನುಮತಿ ನೀಡಿದಾಗ ದೆಹಲಿ ಹೈಕೋರ್ಟ್‌ನಿಂದ ಮತ್ತೊಂದು ವರ್ಗಾವಣೆ ನಡೆಯಿತು. ಸುಪ್ರೀಂ ಕೋರ್ಟ್ ಕೊಲಿಜಿಯಂ ನವೆಂಬರ್‌ನಲ್ಲಿ ವರ್ಗಾವಣೆಯನ್ನು ಶಿಫಾರಸು ಮಾಡಿತ್ತು. ಆದಾಗ್ಯೂ, ಸರ್ಕಾರವು ತನ್ನ ನಿರ್ಧಾರ ತೆಗೆದುಕೊಳ್ಳಲು ನಾಲ್ಕು ತಿಂಗಳುಗಳನ್ನು ತೆಗೆದುಕೊಂಡಿತು.

ಮಾರ್ಚ್‌ನ ಆರಂಭದಲ್ಲಿ, ನ್ಯಾಯಮೂರ್ತಿಗಳಾದ ರೇಖಾ ಪಲ್ಲಿ ಮತ್ತು ಅನೂಪ್ ಕುಮಾರ್ ಮೆಂಡಿರಟ್ಟ ನಿವೃತ್ತರಾಗಿದ್ದರು.

ಕಾನೂನು ಮತ್ತು ನ್ಯಾಯ ಸಚಿವಾಲಯವು ಏಪ್ರಿಲ್ 15 ರವರೆಗೆ ಒದಗಿಸಿದ ಮಾಹಿತಿಯ ಪ್ರಕಾರ, ದೆಹಲಿ ಹೈಕೋರ್ಟ್, 40% ಖಾಲಿ ಹುದ್ದೆಗಳನ್ನು ಹೊಂದಿದ್ದು, ಹೈಕೋರ್ಟ್‌ನ ಹುದ್ದೆಗಳ ಪರಿಸ್ಥಿತಿ ರಾಷ್ಟ್ರೀಯ ಸರಾಸರಿಗಿಂತ ಕೆಟ್ಟದಾಗಿದೆ. ಒಟ್ಟಾರೆ ದೇಶದ 25 ಹೈಕೋರ್ಟ್‌ಗಳಲ್ಲಿ 1,122 ನ್ಯಾಯಾಧೀಶರ ಹುದ್ದೆಗಳಿದ್ದು, ಅದರಲ್ಲಿ 357 (31.8%) ಖಾಲಿ ಇದ್ದವು.

ದೆಹಲಿ ಈ ಹೈಕೋರ್ಟ್‌ಗಳಲ್ಲಿ ನಾಲ್ಕನೇ ಕೆಟ್ಟ ಸ್ಥಾನದಲ್ಲಿದೆ. ಅಲಹಾಬಾದ್ ಹೈಕೋರ್ಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಅಲ್ಲಿ ನ್ಯಾಯಾಧೀಶರ ಅರ್ಧದಷ್ಟು ಹುದ್ದೆಗಳು ಖಾಲಿ ಇವೆ. ಇದರ ನಂತರ ಜಮ್ಮು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ಮತ್ತು ಒರಿಸ್ಸಾ ಹೈಕೋರ್ಟ್ 44% ಮತ್ತು 42% ಹುದ್ದೆಗಳೊಂದಿಗೆ ಇವೆ. ರಾಷ್ಟ್ರ ರಾಜಧಾನಿ ದೆಹಲಿ, ಜಾರ್ಖಂಡ್ ಮತ್ತು ಮಣಿಪುರ ನಾಲ್ಕನೇ ಸ್ಥಾನವನ್ನು ಹಂಚಿಕೊಂಡಿದೆ.

ಹೈಕೋರ್ಟ್ ನ್ಯಾಯಾಧೀಶರನ್ನು ಹೇಗೆ ನೇಮಿಸಲಾಗುತ್ತದೆ?

ಹೈಕೋರ್ಟ್‌ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ 217 ಮತ್ತು 224 ನೇ ವಿಧಿಗಳ ಅಡಿಯಲ್ಲಿ ಮತ್ತು 1998 ರಲ್ಲಿ ಸಿದ್ಧಪಡಿಸಲಾದ ಕಾರ್ಯವಿಧಾನದ ಜ್ಞಾಪಕ ಪತ್ರದಲ್ಲಿ (MoP) ನಿಗದಿಪಡಿಸಿದ ಕಾರ್ಯವಿಧಾನದ ಪ್ರಕಾರ ನೇಮಕ ಮಾಡಲಾಗುತ್ತದೆ. ಅಕ್ಟೋಬರ್ 6, 1993 ರ ಸುಪ್ರೀಂ ಕೋರ್ಟ್ ತೀರ್ಪು, ಎರಡನೇ ನ್ಯಾಯಾಧೀಶರ ಪ್ರಕರಣ ಮತ್ತು ಅಕ್ಟೋಬರ್ 28, 1998 ರ ಮೂರನೇ ನ್ಯಾಯಾಧೀಶರ ಪ್ರಕರಣದ ನಂತರ ಎಂಒಪಿಯನ್ನು ಸಿದ್ಧಪಡಿಸಲಾಗಿತ್ತು.

ಎಂಒಪಿ ಪ್ರಕಾರ, ಹೈಕೋರ್ಟ್ ನ್ಯಾಯಾಧೀಶರ ನೇಮಕಾತಿಗೆ ಪ್ರಸ್ತಾವನೆಯನ್ನು ಪ್ರಾರಂಭಿಸುವುದು ಸಂಬಂಧಪಟ್ಟ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರ ಬಳಿ ಇರುತ್ತದೆ. ಹೈಕೋರ್ಟ್ ನ್ಯಾಯಾಧೀಶರ ಹುದ್ದೆ ಖಾಲಿಯಾಗುವ ಆರು ತಿಂಗಳ ಮೊದಲು ಭರ್ತಿ ಮಾಡುವ ಪ್ರಸ್ತಾವನೆಯನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರು ಪ್ರಾರಂಭಿಸಬೇಕಾಗುತ್ತದೆ.

ಆದಾಗ್ಯೂ, ಈ ಕಾಲಮಿತಿಯನ್ನು ಹೈಕೋರ್ಟ್‌ಗಳು ಹೆಚ್ಚಾಗಿ ಪಾಲಿಸುವುದಿಲ್ಲ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ ಹೇಳುತ್ತದೆ.

ಹೈಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದ ಎಲ್ಲಾ ಹೆಸರುಗಳನ್ನು ಸರ್ಕಾರದ ಅಭಿಪ್ರಾಯಗಳೊಂದಿಗೆ ಸುಪ್ರೀಂ ಕೋರ್ಟ್ ಕೊಲಿಜಿಯಂಗೆ ಸಲಹೆಗಾಗಿ ಕಳುಹಿಸಲಾಗುತ್ತದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ಹೆಸರುಗಳ ಬಗ್ಗೆ ಚರ್ಚಿಸುತ್ತದೆ ಮತ್ತು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು ಮಾಡಿದ ವ್ಯಕ್ತಿಗಳನ್ನು ಮಾತ್ರ ನ್ಯಾಯಾಧೀಶರನ್ನಾಗಿ ನೇಮಿಸಲಾಗುತ್ತದೆ. 3 ವರ್ಗಾವಣೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ಬಳಸುವಂತೆ ಹಿಂದೂಗಳಿಗೆ ಭಾಗವತ್ ಕರೆ

ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ಬಳಸುವಂತೆ ಹಿಂದೂಗಳಿಗೆ ಭಾಗವತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...