Homeಮುಖಪುಟಗುಜರಾತ್‌ | 17 ವರ್ಷಗಳ ಕಾಲ ವಕ್ಫ್‌ ಆಸ್ತಿಯ ಬಾಡಿಗೆ ಸಂಗ್ರಹಿಸುತ್ತಿದ್ದ ನಕಲಿ ಟ್ರಸ್ಟಿಗಳ ಬಂಧನ

ಗುಜರಾತ್‌ | 17 ವರ್ಷಗಳ ಕಾಲ ವಕ್ಫ್‌ ಆಸ್ತಿಯ ಬಾಡಿಗೆ ಸಂಗ್ರಹಿಸುತ್ತಿದ್ದ ನಕಲಿ ಟ್ರಸ್ಟಿಗಳ ಬಂಧನ

- Advertisement -
- Advertisement -

ಗುಜರಾತ್‌ ವಕ್ಫ್ ಮಂಡಳಿಯಡಿಯಲ್ಲಿ ನೋಂದಾಯಿಸಲ್ಪಟ್ಟ, ಅಹಮದಾಬಾದ್ ಮೂಲದ ಎರಡು ಟ್ರಸ್ಟ್‌ಗಳ ಒಡೆತನದ ಭೂಮಿಯಲ್ಲಿ ನಿರ್ಮಿಸಲಾದ ಕಟ್ಟಡಗಳ ಟ್ರಸ್ಟಿಗಳು ಎಂಬಂತೆ ನಟಿಸಿ 17 ವರ್ಷಗಳ ಕಾಲ ಬಾಡಿಗೆ ಸಂಗ್ರಹಿಸುತ್ತಿದ್ದ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಬಗ್ಗೆ ನಗರದ ಗಾಯಕ್ವಾಡ್ ಹವೇಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು ಎಂದು ವರದಿಯಾಗಿದೆ.

ಎಫ್‌ಐಆರ್ ಪ್ರಕಾರ, ಕಾಂಚ್ನಿ ಮಸೀದಿ ಟ್ರಸ್ಟ್ ಮತ್ತು ಶಾ ಬಡಾ ಕಸಮ್ ಟ್ರಸ್ಟ್‌ಗೆ ಸೇರಿದ ಭೂಮಿಯಲ್ಲಿ ಸುಮಾರು 100 ಮನೆಗಳು ಮತ್ತು ಅಂಗಡಿಗಳಿಂದ ವಂಚಕರು ಬಾಡಿಗೆ ಸಂಗ್ರಹಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

“ವಕ್ಫ್ ಮಂಡಳಿಯ ಅಡಿಯಲ್ಲಿ ನೋಂದಾಯಿಸಲಾದ ಟ್ರಸ್ಟ್‌ಗಳಿಗೆ ಸೇರಿದ ಆಸ್ತಿಗಳನ್ನು ಅವರು ವೈಯಕ್ತಿಕ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಕಂಡುಬಂದ ನಂತರ ಅವರ ವಿರುದ್ಧ ವಂಚನೆ ಮತ್ತು ನಕಲಿ ದಾಖಲೆಗಳ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಡಿಸಿಪಿ ಭರತ್ ರಾಥೋಡ್ ಹೇಳಿದ್ದಾರೆ.

ವಕ್ಫ್ ಆಸ್ತಿಯನ್ನು ಧಾರ್ಮಿಕ ಅಥವಾ ದತ್ತಿ ಉದ್ದೇಶಗಳಿಗೆ ಮೀಸಲಿಡಲಾಗಿದೆ. ಅಂತಹ ಆಸ್ತಿಗಳಿಂದ ಬರುವ ಆದಾಯವನ್ನು ಸಾಮಾನ್ಯವಾಗಿ ಧಾರ್ಮಿಕ ಚಟುವಟಿಕೆಗಳು, ದತ್ತಿ ಕಾರ್ಯಗಳು ಅಥವಾ ಸಾರ್ವಜನಿಕ ಪ್ರಯೋಜನಕ್ಕಾಗಿ ಬಳಸಲಾಗುತ್ತದೆ.

ಆರೋಪಿಗಳು ಎರಡು ಟ್ರಸ್ಟ್‌ಗಳಿಗೆ ಸೇರಿದ 5,000 ಚದರ ಮೀಟರ್‌ಗಿಂತ ಹೆಚ್ಚು ಅಕ್ರಮ ನಿರ್ಮಾಣವನ್ನು ನಡೆಸುತ್ತಿದ್ದಾರೆ. ಅವರು ಸುಮಾರು 100 ಆಸ್ತಿಗಳನ್ನು (ಮನೆಗಳು ಮತ್ತು ಅಂಗಡಿಗಳು) ನಿರ್ಮಿಸಿದ್ದು, 2008 ಮತ್ತು 2025 ರ ನಡುವೆ ಮಾಸಿಕ ಬಾಡಿಗೆಯನ್ನು ಸಂಗ್ರಹಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಂಧಿತ ಐವರು ಆರೋಪಿಗಳನ್ನು ಸಲೀಂ ಖಾನ್ ಪಠಾಣ್, ಮೊಹಮ್ಮದ್ ಯಾಸರ್ ಶೇಖ್, ಮಹಮೂದ್‌ಖಾನ್ ಪಠಾಣ್, ಫೈಜ್ ಮೊಹಮ್ಮದ್ ಚೋಬ್ದಾರ್ ಮತ್ತು ಶಾಹಿದ್ ಅಹ್ಮದ್ ಶೇಖ್ ಎಂದು ಗುರುತಿಸಲಾಗಿದೆ. ಸಲೀಂ ಖಾನ್ ಪಠಾಣ್ ಒಬ್ಬ ರೌಡಿ ಶೀಟರ್‌ ಆಗಿದ್ದು, ಶಸ್ತ್ರಾಸ್ತ್ರ ಕಾಯ್ದೆ ಸಂಬಂಧಿಸಿದ ಒಟ್ಟು ಐದು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಆರೋಪಿಗಳಲ್ಲಿ ಯಾರೂ ಕೂಡಾ ಯಾವುದೇ ಟ್ರಸ್ಟ್‌ನ ಸದಸ್ಯರಲ್ಲ ಎಂದು ದೂರುದಾರ ಮೊಹಮ್ಮದ್ ರಫೀಕ್ ಹೇಳಿದ್ದಾರೆ. ಅವರು ಕಾಂಚಿನಿ ಮಸೀದಿ ಟ್ರಸ್ಟ್‌ಗೆ ಸೇರಿದ ಭೂಮಿಯಲ್ಲಿ ನಿರ್ಮಿಸಲಾದ ಆಸ್ತಿಗಳ ಬಾಡಿಗೆದಾರರಾಗಿದ್ದಾರೆ. ಬಾಡಿಗೆ ಹಣವನ್ನು ತಮ್ಮ ಲಾಭಕ್ಕಾಗಿ ಬಳಸುವುದರ ಜೊತೆಗೆ, ಶಾ ಬಡಾ ಕಾಸಿ ಟ್ರಸ್ಟ್‌ನ ದೇಣಿಗೆ ಪೆಟ್ಟಿಗೆಯಲ್ಲಿ ಸಂಗ್ರಹಿಸಿದ ಹಣದ ಮಾಲೀಕತ್ವ ತಮ್ಮದು ಎಂದು ಆರೋಪಿಗಳು ಹೇಳಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಆರೋಪಿಗಳು ಕಾಂಚಿನಿ ಮಸೀದಿ ಟ್ರಸ್ಟ್‌ಗೆ ಸೇರಿದ ಭೂಮಿಯಲ್ಲಿ 15 ಅಂಗಡಿಗಳನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಭೂಮಿಯನ್ನು ಹಿಂದೆ ಉರ್ದು ಶಾಲೆಗಾಗಿ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಎಎಂಸಿ) ಗೆ ಹಸ್ತಾಂತರಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. 2001 ರ ಭೂಕಂಪದ ಸಮಯದಲ್ಲಿ, ಶಾಲಾ ಕಟ್ಟಡ ಶಿಥಿಲಗೊಂಡಿತ್ತು. ಎಎಂಸಿ 2009 ರಲ್ಲಿ ಶಾಲೆಯನ್ನು ಕೆಡವಿ ಹತ್ತಿರದ ಪ್ರದೇಶಕ್ಕೆ ಸ್ಥಳಾಂತರಿಸಿತು.

ಈ ಮಧ್ಯೆ, ನಕಲಿ ಟ್ರಸ್ಟಿಗಳು ಅಲ್ಲಿ ಹತ್ತು ಅಂಗಡಿಗಳನ್ನು ನಿರ್ಮಿಸಿದರು, ಅದರಲ್ಲಿ ಒಂದನ್ನು ಆರೋಪಿ ಸಲೀಂ ಖಾನ್ ತನ್ನ ಕಚೇರಿಯನ್ನಾಗಿ ಬಳಸುತ್ತಿದ್ದರು ಎಂದು ದೂರುದಾರರು ಹೇಳಿದ್ದಾರೆ. ಉಳಿದವುಗಳನ್ನು ಬಾಡಿಗೆಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆರೋಪಿಗಳು ಸಂಗ್ರಹಿಸಿದ ಬಾಡಿಗೆಯನ್ನು ಟ್ರಸ್ಟ್‌ನ ಖಾತೆಯಲ್ಲಿ ಠೇವಣಿ ಮಾಡಿಲ್ಲ ಅಥವಾ ಎಎಂಸಿಗೆ ಹಸ್ತಾಂತರಿಸಿಲ್ಲ. ಈ ಮೂಲಕ ಅವರು ಎಎಂಸಿ ಮತ್ತು ವಕ್ಫ್ ಮಂಡಳಿಗೆ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.  ಗುಜರಾತ್‌

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ಬಳಸುವಂತೆ ಹಿಂದೂಗಳಿಗೆ ಭಾಗವತ್ ಕರೆ

ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ಬಳಸುವಂತೆ ಹಿಂದೂಗಳಿಗೆ ಭಾಗವತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...