Homeಮುಖಪುಟಮಮತಾ ಬ್ಯಾನರ್ಜಿಯ ಸಹಾಯದಿಂದ ಪಶ್ಚಿಮ ಬಂಗಾಳದಲ್ಲಿ ಆರ್‌ಎಸ್‌ಎಸ್ ವಿಸ್ತರಿಸಿದೆ: ಸಿಪಿಎಂ

ಮಮತಾ ಬ್ಯಾನರ್ಜಿಯ ಸಹಾಯದಿಂದ ಪಶ್ಚಿಮ ಬಂಗಾಳದಲ್ಲಿ ಆರ್‌ಎಸ್‌ಎಸ್ ವಿಸ್ತರಿಸಿದೆ: ಸಿಪಿಎಂ

- Advertisement -
- Advertisement -

ಕೋಲ್ಕತ್ತಾ: ಮುರ್ಷಿದಾಬಾದ್ ಹಿಂಸಾಚಾರಕ್ಕೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯನ್ನು ದೂಷಿಸುತ್ತಾ,  ಬ್ಯಾನರ್ಜಿ ಅವರ ಸಹಾಯದಿಂದ ಆರ್‌ಎಸ್‌ಎಸ್ ಬಂಗಾಳದಲ್ಲಿ ಹಿಂದೆಂದಿಗಿಂತಲೂ ಹೆಚ್ಚಾಗಿ ತನ್ನ ಅಸ್ತಿತ್ವವನ್ನು ಹರಡಿದೆ ಎಂದು ಸಿಪಿಐ-ಎಂ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ ಭಾನುವಾರದಂದ ಹೇಳಿದರು.

ಇಲ್ಲಿನ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಮೆಗಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಆರ್‌ಎಸ್‌ಎಸ್‌ ಜೊತೆ ಕೈಜೋಡಿಸಿದ್ದಾರೆ ಎಂದು ಹೇಳಿದರು.

“ಬ್ಯಾನರ್ಜಿಯವರು ಆರ್‌ಎಸ್‌ಎಸ್‌ಗೆ ಹತ್ತಿರವಾಗಿದ್ದಾರೆ ಮತ್ತು ಆರ್‌ಎಸ್‌ಎಸ್ ಅವರನ್ನು ಬೆಂಬಲಿಸುತ್ತದೆ. ಕಳೆದ ಕೆಲವು ವರ್ಷಗಳಿಂದ, ಅದು ಬಂಗಾಳದಲ್ಲಿ ತನ್ನ ಶಕ್ತಿ ಮತ್ತು ಶಾಖೆಗಳನ್ನು ಹಿಂದೆಂದಿಗಿಂತಲೂ ಹೆಚ್ಚಾಗಿ ಹರಡುತ್ತಿದೆ” ಎಂದು ಸಲೀಮ್ ಹೇಳಿದ್ದಾರೆ.

“ಪ್ರತಿದಿನ, ಬಿಜೆಪಿ ಮತ್ತು ತೃಣಮೂಲದಿಂದ ಕೆಲವು ನಾಟಕಗಳು ನಡೆಯುತ್ತಿವೆ. ಬಂಗಾಳದಲ್ಲಿ ಬಿಜೆಪಿ ಮತ್ತು ತೃಣಮೂಲ ನಡುವಿನ ನಾಟಕದಲ್ಲಿ, ನಿಜವಾದ ಚಿತ್ರಕಥೆಯನ್ನು ಆರ್‌ಎಸ್‌ಎಸ್ ಬರೆದಿದೆ. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದರು ಮತ್ತು ಈಗ ನೀವು ಪರಿಸ್ಥಿತಿಯನ್ನು ನೋಡಬಹುದು” ಎಂದು ಅವರು ಹೇಳಿದರು.

ಈ ಎರಡೂ ಪಕ್ಷಗಳು ಬಂಗಾಳವನ್ನು “ಏಕತೆ, ಸಾಮರಸ್ಯ, ನ್ಯಾಯ ಮತ್ತು ಎಲ್ಲವೂ ದಾಳಿಗೊಳಗಾದ ಪರಿಸ್ಥಿತಿಗೆ ಕೊಂಡೊಯ್ಯುತ್ತಿವೆ. ನಾವು ದಿಕ್ಕನ್ನು ಬದಲಾಯಿಸಬೇಕಾಗಿದೆ” ಎಂದು ಅವರು ಹೇಳಿದರು.

ಸಿಪಿಐ-ಎಂ ನ್ಯಾಯಾಂಗ ತನಿಖೆಗೆ ಒತ್ತಾಯ

ಮುರ್ಷಿದಾಬಾದ್ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಸಲೀಮ್ ಒತ್ತಾಯಿಸಿದರು. “ಬಿಜೆಪಿ ಅಥವಾ ತೃಣಮೂಲ ನ್ಯಾಯಾಂಗ ತನಿಖೆಗೆ ಒತ್ತಾಯಿಸುವುದಿಲ್ಲ. ಈ ಸಾಮಾನ್ಯ ಜನರಿಗೆ ಸರಿಯಾದ ಪುನರ್ವಸತಿ ಮತ್ತು ಪರಿಹಾರ ನೀಡಬೇಕು” ಎಂದು ಸಲೀಮ್ ಹೇಳಿದರು.

ಇದು ದೇವಸ್ಥಾನ ಮತ್ತು ಮಸೀದಿಯ ನಡುವಿನ ಹೋರಾಟವಲ್ಲ. ಬಾಂಗ್ಲಾದೇಶವನ್ನು ನೋಡಿ, ಏನಾಯಿತು? ಅಲ್ಪಸಂಖ್ಯಾತರು ಕಡಿಮೆಯಾಗುವ ಸ್ಥಳವಾಗಲು ನಾವು ಮುರ್ಷಿದಾಬಾದ್ ಅನ್ನು ಬಿಡುವುದಿಲ್ಲ” ಎಂದರು.

ಬಂಗಾಳ: ಸಿಪಿಐಎಂನ ಬ್ರಿಗೇಡ್ ಪರೇಡ್ ರ್ಯಾಲಿಗೆ ಕಾಂಗ್ರೆಸ್ ಮತ್ತು ಐಎಸ್ಎಫ್ ಬೆಂಬಲ

ಮುರ್ಷಿದಾಬಾದ್ ಗಲಭೆಯ ಹಿಂದಿನ ಪಿತೂರಿಗಾಗಿ ಆರ್‌ಎಸ್‌ಎಸ್ ಅನ್ನು ಸಿಪಿಐ(ಎಂ)ನ ಎಂಡಿ ಸಲೀಂ ದೂಷಿಸುತ್ತಿದ್ದಾರೆ ಮತ್ತು ಸಿಎಂ ಕೂಡ ಇಂತಹ ಗಲಭೆಗಳು ಸಂಭವಿಸಬೇಕೆಂದು ಬಯಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಭಾನುವಾರ ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಸಿಪಿಐ(ಎಂ)ನ ಮುಂದಾಳತ್ವದ ಸಂಘಟನೆಗಳ ಮೆಗಾ ರ್ಯಾಲಿಗೆ ಕಾಂಗ್ರೆಸ್ ಮತ್ತು ಭಾರತೀಯ ಜಾತ್ಯತೀತ ರಂಗ (ಐಎಸ್‌ಎಫ್) ಪಕ್ಷಗಳ ಬೆಂಬಲವನ್ನು ಸೂಚಿಸಿವೆ.

ಎಡಪಕ್ಷಗಳ ಜಾತ್ಯತೀತ ರುಜುವಾತುಗಳನ್ನು ಒತ್ತಿ ಹೇಳಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು, ಸಿಪಿಎಂ ಪಕ್ಷವು “ಕೋಮು ರಾಜಕೀಯ ಮಾಡುವುದಿಲ್ಲ” ಎಂದು ಹೇಳಿದ್ದಾರೆ.

“ಭಾರತದಲ್ಲಿ ಎಡಪಂಥೀಯರು ಜಾತ್ಯತೀತ ಶಕ್ತಿ. ಭಾರತದ ಇಂತಹ ಪರಿಸ್ಥಿತಿಯಲ್ಲಿ ಅವರ ಬ್ರಿಗೇಡ್ ರ್ಯಾಲಿ (ಬ್ರಿಗೇಡ್ 2025) ಯಶಸ್ವಿಯಾಗಲಿ,” ಎಂದು ಅವರು ಹೇಳಿದರು. “ರಾಜಕೀಯ ಮತ್ತು ಸಿದ್ಧಾಂತದ ವಿಷಯದಲ್ಲಿ ನಮಗೆ ಅವರೊಂದಿಗೆ ಹಲವು ಭಿನ್ನಾಭಿಪ್ರಾಯಗಳಿರಬಹುದು. ನಾನು ಎಡಪಂಥೀಯರ ವಿರುದ್ಧ ಹೋರಾಡಿದ್ದೇನೆ. ನನ್ನ ಎದೆಯ ಮೇಲೆ ಇನ್ನೂ ಗುಂಡಿನ ಗಾಯಗಳಿವೆ. ನಾನು ಅವರೊಂದಿಗೆ ಹೋರಾಡಿ ಜೈಲು ಶಿಕ್ಷೆ ಅನುಭವಿಸಿದೆ. ಆದರೆ ನಾನು ಹೇಳಲೇಬೇಕು, ಅವರು ಧರ್ಮದೊಂದಿಗೆ ರಾಜಕೀಯ ಮಾಡುವುದಿಲ್ಲ. ಅವರು ಕೋಮು ರಾಜಕೀಯ ಮಾಡುವುದಿಲ್ಲವಾದ್ದರಿಂದ ಈ ರ್ಯಾಲಿ ಯಶಸ್ವಿಯಾಗಬೇಕೆಂದು ನಾನು ಬಯಸುತ್ತೇನೆ” ಎಂದಿದ್ದಾರೆ.

ಐಎಸ್‌ಎಫ್ ಶಾಸಕ ನೌಶಾದ್ ಸಿದ್ದಿಕ್ ಕೂಡ ಎಡಪಂಥೀಯರ ಈ ರ್ಯಾಲಿಗೆ ಬೆಂಬಲ ವ್ಯಕ್ತಪಡಿಸಿದರು. “ಈ ಬ್ರಿಗೇಡ್ ಕಷ್ಟಪಟ್ಟು ದುಡಿಯುವ ಜನರಿಂದ ಕೂಡಿದೆ ಮತ್ತು ಅವರು ಹೋರಾಟಗಾರರು, ಆದ್ದರಿಂದ ನಾನು ಉತ್ತಮ ಯಶಸ್ಸನ್ನು ಬಯಸುತ್ತೇನೆ” ಎಂದು ಅವರು ಘೋಷಿಸಿದರು.

ಆದಾಗ್ಯೂ, ರ್ಯಾಲಿಯು ಇತರ ರಾಜಕೀಯ ಬಣಗಳಿಂದ ತೀವ್ರ ಟೀಕೆಗೆ ಗುರಿಯಾಯಿತು. ಟಿಎಂಸಿ ವಕ್ತಾರ ಕುನಾಲ್ ಘೋಷ್ ರ್ಯಾಲಿಯ ಮಹತ್ವವನ್ನು ತಳ್ಳಿಹಾಕಿದರು. ಭಾಗವಹಿಸಿದವರಲ್ಲಿ ಅನೇಕರು ಬಿಜೆಪಿ ಮತದಾರರು ಎಂದು ಆರೋಪಿಸಿದರು. “ನಾನು ಪುನರಾವರ್ತಿಸುತ್ತೇನೆ, ಸಿಪಿಎಂ ಬ್ರಿಗೇಡ್‌ಗೆ ಹೋದವರು, ಅವರಲ್ಲಿ 99% ಜನರು ಬಿಜೆಪಿಗೆ ಮತ ಹಾಕಿದ್ದಾರೆ ಮತ್ತು ಹಾಗೆ ಮಾಡುತ್ತಿದ್ದಾರೆ. ಸಭೆಯಲ್ಲಿ ಕೆಲವೇ ಜನರು ಕಾಣಿಸಿಕೊಳ್ಳುವುದು ದೊಡ್ಡ ವಿಷಯವಲ್ಲ, ಅವರು ಬಿಜೆಪಿಗೆ ಹಿಂತಿರುಗಿ ಮತ ಹಾಕುವವರು. ಇದು ಈ ಹಿಂದೆ ಹಲವಾರು ಬಾರಿ ಮತ ಎಣಿಕೆಯಿಂದ ಸಾಬೀತಾಗಿದೆ” ಎಂದು ಘೋಷ್ ಹೇಳಿದರು.

“ಅವರು ಸ್ವತಃ ಕೋಮುವಾದಿ ವ್ಯಕ್ತಿ. ಅವರು ಮೂರು ಬಾರಿ ಮತ ಚಲಾಯಿಸಿ ಸೋತರು. 2019 ರಾಯ್‌ಗಂಜ್‌ನಲ್ಲಿ, 2021ರಲ್ಲಿ ಚಂಡಿತಾಲ ಮತ್ತು 2024ರಲ್ಲಿ ಮುರ್ಷಿದಾಬಾದ್‌ನಲ್ಲಿ ಅವರು ಸೋತಿದ್ದಾರೆ. ಅವರು ಮಮತಾ ಅವರ ಏಜೆಂಟ್ ಮತ್ತು ಬ್ರಿಗೇಡ್‌ನಲ್ಲಿ ದೊಡ್ಡದಾಗಿ ಮಾತನಾಡುತ್ತಿದ್ದಾರೆ ಎಂದು ಸಿಪಿಎಂ ನಾಯಕ ಮೊಹಮ್ಮದ್ ಸಲೀಂ ಅವರನ್ನು ಗುರಿಯಾಗಿಸಿಕೊಂಡು ಸುವೇಂದು ಅಧಿಕಾರಿ ಹೇಳಿದರು.

ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...