HomeUncategorizedಮುರ್ಷಿದಾಬಾದ್ ಗಲಭೆಯಲ್ಲಿ ಹೆಚ್ಚಿನ ಬಲಿಪಶುಗಳು ಮಹಿಳೆಯರು: ಮಹಿಳಾ ಆಯೋಗದ ಮುಖ್ಯಸ್ಥೆಯಿಂದ ಸಂತ್ರಸ್ತರ ಭೇಟಿ

ಮುರ್ಷಿದಾಬಾದ್ ಗಲಭೆಯಲ್ಲಿ ಹೆಚ್ಚಿನ ಬಲಿಪಶುಗಳು ಮಹಿಳೆಯರು: ಮಹಿಳಾ ಆಯೋಗದ ಮುಖ್ಯಸ್ಥೆಯಿಂದ ಸಂತ್ರಸ್ತರ ಭೇಟಿ

- Advertisement -
- Advertisement -

ಮುರ್ಷಿದಾಬಾದ್: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮತ್ತು ಮಾಲ್ಡಾದಲ್ಲಿ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭಾನುವಾರದಂದು ಭೇಟಿ ನೀಡಿದ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಖ್ಯಸ್ಥೆ ವಿಜಯಾ ರಹತ್ಕರ್ ಅವರು, “ಕೋಮು ಹಿಂಸಾಚಾರದ ಅತಿದೊಡ್ಡ ಬಲಿಪಶುಗಳು ಯಾವಾಗಲೂ ಮಹಿಳೆಯರು ಮತ್ತು ಮಕ್ಕಳು” ಎಂದು ಹೇಳಿದರು ಮತ್ತು ಅವರ ಮೇಲೆ ಅತ್ಯಂತ “ಅಮಾನವೀಯ ರೀತಿಯಲ್ಲಿ” ಬೆದರಿಕೆ ಮತ್ತು ದಾಳಿ ನಡೆಸಲಾಗಿದೆ ಎಂದಿದ್ದಾರೆ.

ವಕ್ಫ್ ಕಾಯ್ದೆ ವಿರೋಧಿ ಪ್ರತಿಭಟನೆಗಳಿಂದಾಗಿ ಮುರ್ಷಿದಾಬಾದ್ ಮತ್ತು ನೆರೆಯ ಪ್ರದೇಶಗಳಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ ತಂದೆ-ಮಗ ಜೋಡಿ ಸೇರಿದಂತೆ ಮೂವರು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

“ನಾನು ಅನೇಕ ಮಹಿಳೆಯರೊಂದಿಗೆ ಮಾತನಾಡಿದೆ ಮತ್ತು ಅಂತಹ ಕೋಮು ಹಿಂಸಾಚಾರದ ದೊಡ್ಡ ಬಲಿಪಶುಗಳು ಯಾವಾಗಲೂ ಮಹಿಳೆಯರು ಮತ್ತು ಮಕ್ಕಳು ಎಂದು ನಾನು ಅರಿತುಕೊಂಡೆ. ಹಲವಾರು ಮನೆಗಳನ್ನು ನಾಶಪಡಿಸಲಾಗಿದೆ ಮತ್ತು ಬೆಂಕಿ ಹಚ್ಚಲಾಗಿದೆ. ಅವರನ್ನು (ಜನರನ್ನು) ಲೂಟಿ ಮಾಡಲಾಗಿದೆ ಮತ್ತು ಹಿಂಸಿಸಲಾಗಿದೆ. ಈ ಹಿಂಸಾಚಾರವು ಮಹಿಳೆಯರ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಅವರು ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ತಮ್ಮ ಮನೆಗಳಿಂದ ಎಳೆದೊಯ್ದು, ಕ್ರೂರವಾಗಿ ಹಲ್ಲೆ ನಡೆಸಿ, ಅಮಾನವೀಯ ರೀತಿಯಲ್ಲಿ ಬೆದರಿಕೆ ಹಾಕಿದ ಮಹಿಳೆಯರ ನೋವು ಊಹಿಸಲೂ ಸಾಧ್ಯವಿಲ್ಲ. ಕೆಲವರಿಗೆ ತಮ್ಮ ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತೇವೆ ಕಳುಹಿಸಿ ಎಂದು ದುಷ್ಕರ್ಮಿಗಳು ಹೇಳಿದ್ದಾರೆ. ಸುರಕ್ಷತೆ ಮತ್ತು ನ್ಯಾಯವನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ಪಶ್ಚಿಮ ಬಂಗಾಳ ಸರ್ಕಾರದ ಮೇಲಿದೆ ಎಂದು ಮಹಿಳಾ ಆಯೋಗದ ಮುಖ್ಯಸ್ಥೆ ಹೇಳಿದರು.

ತಮ್ಮ ಭೇಟಿಯ ವಿವರಗಳನ್ನು ಹಂಚಿಕೊಂಡ ರಹತ್ಕರ್, ಸುಟ್ಟುಹೋದ ಮನೆಗಳು ಮತ್ತು ಪರಿಹಾರ ಶಿಬಿರಗಳಲ್ಲಿ ಹಲವಾರು ಮಹಿಳೆಯರು ಮತ್ತು ಮಕ್ಕಳನ್ನು ಭೇಟಿಯಾದೆ ಮತ್ತು ಅವರ ಸಂಕಷ್ಟದ ನೇರ ಕಥೆಗಳನ್ನು ಕೇಳಿದೆ ಎಂದು ಹೇಳಿದರು. “ನಾಲ್ಕು ದಿನಗಳ ಹಿಂದೆ ತಾಯಿಯಾದ ಮಹಿಳೆಯೊಬ್ಬರು ತಮ್ಮ ನಾಲ್ಕು ದಿನಗಳ ಮಗುವಿನೊಂದಿಗೆ ತಮ್ಮ ಜೀವಗಳನ್ನು ಉಳಿಸಿಕೊಳ್ಳಲು ಓಡುತ್ತಿರುವುದನ್ನು ನೀವು ಊಹಿಸಬಲ್ಲಿರಾ!” ಎಂದು ಅವರು ಪ್ರಶ್ನಿಸಿದರು.

ಗಲಭೆ ಪೀಡಿತ ಜನರಿಗೆ ಸಹಾಯ ಮಾಡುವಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ವಹಿಸಿದ್ದ ಪಾತ್ರಕ್ಕಾಗಿ ರಹತ್ಕರ್ ಅವರನ್ನು ಶ್ಲಾಘಿಸಿದರು. ಬಿಎಸ್‌ಎಫ್ ತಮಗೆ ಎಲ್ಲಾ ಸಹಾಯವನ್ನು ನೀಡಿದೆ ಮತ್ತು ಅಲ್ಲಿನ ಸಂತ್ರಸ್ತರು ಇವರಿಂದ ಮಾತ್ರ ಜೀವಂತವಾಗಿದ್ದಾರೆ ಎಂದು ಅಲ್ಲಿನ ಜನರು ಹೇಳಿದರು ಎಂದು ಅವರು ಹೇಳಿದರು.

ಎನ್‌ಸಿಡಬ್ಲ್ಯೂ ಅಧ್ಯಕ್ಷರ ಪ್ರಕಾರ, ಮುರ್ಷಿದಾಬಾದ್ ಮತ್ತು ಪೀಡಿತ ಪ್ರದೇಶಗಳ ಮಹಿಳೆಯರು ತಮ್ಮ ಎಲ್ಲಾ ಕನಸುಗಳು ಭಗ್ನಗೊಂಡಿವೆ ಮತ್ತು ಅವರಿಗೆ ಏನೂ ಉಳಿದಿಲ್ಲ ಎಂದು ಹೇಳಿದರು.

ಎನ್‌ಸಿಡಬ್ಲ್ಯೂ ಮುಖ್ಯಸ್ಥರು ಪಶ್ಚಿಮ ಬಂಗಾಳ ಸರ್ಕಾರಕ್ಕೆ ತ್ವರಿತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. “ಇವರು ನಮ್ಮ ಸ್ವಂತ ಹೆಣ್ಣುಮಕ್ಕಳು ಮತ್ತು ಮಹಿಳೆಯರು ಆಗಿರುವುದರಿಂದ ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ನಾವು ಬಂಗಾಳ ಸರ್ಕಾರಕ್ಕೆ ಮನವಿ ಮಾಡುತ್ತೇವೆ” ಎಂದು ಅವರು ಹೇಳಿದರು.

ಪಶ್ಚಿಮ ಬಂಗಾಳ ರಾಜ್ಯ ಮಹಿಳಾ ಆಯೋಗವು ಸಂತ್ರಸ್ತ ಪ್ರದೇಶಗಳಿಗೆ ಭೇಟಿ ನೀಡಬೇಕೆಂದು ಅವರು ಕರೆ ನೀಡಿದರು. “ಹೋಗಿ ಅವರ ಬಗ್ಗೆ ನಿಮ್ಮ ಸಹಾನುಭೂತಿ ತೋರಿಸಿ, ಕನಿಷ್ಠ ನೀವು ಅವರೊಂದಿಗೆ ಇದ್ದೀರಿ ಎಂದು ಹೇಳಿ. ಇದು ನಿಮ್ಮ ಕೆಲಸ!” ಎಂದಿದ್ದಾರೆ.

ಕೇಂದ್ರದ ಮುಂದೆ ವಿವರವಾದ ವರದಿಯನ್ನು ಸಲ್ಲಿಸಲಾಗುವುದು ಮತ್ತು ಪ್ರತಿಗಳನ್ನು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಕಳುಹಿಸಲಾಗುವುದು ಎಂದು ರಹತ್ಕರ್ ಹೇಳಿದರು.

ಕಾಂಗ್ರೆಸ್ಸಿನಿಂದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ರ್ಯಾಲಿ; ನಿತೀಶ್ ‘ಖುರ್ಚಿ’ಗಾಗಿ ಬಿಜೆಪಿ ಜೊತೆ ಮೈತ್ರಿ; ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...