HomeUncategorizedಮುರ್ಷಿದಾಬಾದ್ ಗಲಭೆಯಲ್ಲಿ ಹೆಚ್ಚಿನ ಬಲಿಪಶುಗಳು ಮಹಿಳೆಯರು: ಮಹಿಳಾ ಆಯೋಗದ ಮುಖ್ಯಸ್ಥೆಯಿಂದ ಸಂತ್ರಸ್ತರ ಭೇಟಿ

ಮುರ್ಷಿದಾಬಾದ್ ಗಲಭೆಯಲ್ಲಿ ಹೆಚ್ಚಿನ ಬಲಿಪಶುಗಳು ಮಹಿಳೆಯರು: ಮಹಿಳಾ ಆಯೋಗದ ಮುಖ್ಯಸ್ಥೆಯಿಂದ ಸಂತ್ರಸ್ತರ ಭೇಟಿ

- Advertisement -
- Advertisement -

ಮುರ್ಷಿದಾಬಾದ್: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮತ್ತು ಮಾಲ್ಡಾದಲ್ಲಿ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭಾನುವಾರದಂದು ಭೇಟಿ ನೀಡಿದ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಖ್ಯಸ್ಥೆ ವಿಜಯಾ ರಹತ್ಕರ್ ಅವರು, “ಕೋಮು ಹಿಂಸಾಚಾರದ ಅತಿದೊಡ್ಡ ಬಲಿಪಶುಗಳು ಯಾವಾಗಲೂ ಮಹಿಳೆಯರು ಮತ್ತು ಮಕ್ಕಳು” ಎಂದು ಹೇಳಿದರು ಮತ್ತು ಅವರ ಮೇಲೆ ಅತ್ಯಂತ “ಅಮಾನವೀಯ ರೀತಿಯಲ್ಲಿ” ಬೆದರಿಕೆ ಮತ್ತು ದಾಳಿ ನಡೆಸಲಾಗಿದೆ ಎಂದಿದ್ದಾರೆ.

ವಕ್ಫ್ ಕಾಯ್ದೆ ವಿರೋಧಿ ಪ್ರತಿಭಟನೆಗಳಿಂದಾಗಿ ಮುರ್ಷಿದಾಬಾದ್ ಮತ್ತು ನೆರೆಯ ಪ್ರದೇಶಗಳಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ ತಂದೆ-ಮಗ ಜೋಡಿ ಸೇರಿದಂತೆ ಮೂವರು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

“ನಾನು ಅನೇಕ ಮಹಿಳೆಯರೊಂದಿಗೆ ಮಾತನಾಡಿದೆ ಮತ್ತು ಅಂತಹ ಕೋಮು ಹಿಂಸಾಚಾರದ ದೊಡ್ಡ ಬಲಿಪಶುಗಳು ಯಾವಾಗಲೂ ಮಹಿಳೆಯರು ಮತ್ತು ಮಕ್ಕಳು ಎಂದು ನಾನು ಅರಿತುಕೊಂಡೆ. ಹಲವಾರು ಮನೆಗಳನ್ನು ನಾಶಪಡಿಸಲಾಗಿದೆ ಮತ್ತು ಬೆಂಕಿ ಹಚ್ಚಲಾಗಿದೆ. ಅವರನ್ನು (ಜನರನ್ನು) ಲೂಟಿ ಮಾಡಲಾಗಿದೆ ಮತ್ತು ಹಿಂಸಿಸಲಾಗಿದೆ. ಈ ಹಿಂಸಾಚಾರವು ಮಹಿಳೆಯರ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಅವರು ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ತಮ್ಮ ಮನೆಗಳಿಂದ ಎಳೆದೊಯ್ದು, ಕ್ರೂರವಾಗಿ ಹಲ್ಲೆ ನಡೆಸಿ, ಅಮಾನವೀಯ ರೀತಿಯಲ್ಲಿ ಬೆದರಿಕೆ ಹಾಕಿದ ಮಹಿಳೆಯರ ನೋವು ಊಹಿಸಲೂ ಸಾಧ್ಯವಿಲ್ಲ. ಕೆಲವರಿಗೆ ತಮ್ಮ ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತೇವೆ ಕಳುಹಿಸಿ ಎಂದು ದುಷ್ಕರ್ಮಿಗಳು ಹೇಳಿದ್ದಾರೆ. ಸುರಕ್ಷತೆ ಮತ್ತು ನ್ಯಾಯವನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ಪಶ್ಚಿಮ ಬಂಗಾಳ ಸರ್ಕಾರದ ಮೇಲಿದೆ ಎಂದು ಮಹಿಳಾ ಆಯೋಗದ ಮುಖ್ಯಸ್ಥೆ ಹೇಳಿದರು.

ತಮ್ಮ ಭೇಟಿಯ ವಿವರಗಳನ್ನು ಹಂಚಿಕೊಂಡ ರಹತ್ಕರ್, ಸುಟ್ಟುಹೋದ ಮನೆಗಳು ಮತ್ತು ಪರಿಹಾರ ಶಿಬಿರಗಳಲ್ಲಿ ಹಲವಾರು ಮಹಿಳೆಯರು ಮತ್ತು ಮಕ್ಕಳನ್ನು ಭೇಟಿಯಾದೆ ಮತ್ತು ಅವರ ಸಂಕಷ್ಟದ ನೇರ ಕಥೆಗಳನ್ನು ಕೇಳಿದೆ ಎಂದು ಹೇಳಿದರು. “ನಾಲ್ಕು ದಿನಗಳ ಹಿಂದೆ ತಾಯಿಯಾದ ಮಹಿಳೆಯೊಬ್ಬರು ತಮ್ಮ ನಾಲ್ಕು ದಿನಗಳ ಮಗುವಿನೊಂದಿಗೆ ತಮ್ಮ ಜೀವಗಳನ್ನು ಉಳಿಸಿಕೊಳ್ಳಲು ಓಡುತ್ತಿರುವುದನ್ನು ನೀವು ಊಹಿಸಬಲ್ಲಿರಾ!” ಎಂದು ಅವರು ಪ್ರಶ್ನಿಸಿದರು.

ಗಲಭೆ ಪೀಡಿತ ಜನರಿಗೆ ಸಹಾಯ ಮಾಡುವಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ವಹಿಸಿದ್ದ ಪಾತ್ರಕ್ಕಾಗಿ ರಹತ್ಕರ್ ಅವರನ್ನು ಶ್ಲಾಘಿಸಿದರು. ಬಿಎಸ್‌ಎಫ್ ತಮಗೆ ಎಲ್ಲಾ ಸಹಾಯವನ್ನು ನೀಡಿದೆ ಮತ್ತು ಅಲ್ಲಿನ ಸಂತ್ರಸ್ತರು ಇವರಿಂದ ಮಾತ್ರ ಜೀವಂತವಾಗಿದ್ದಾರೆ ಎಂದು ಅಲ್ಲಿನ ಜನರು ಹೇಳಿದರು ಎಂದು ಅವರು ಹೇಳಿದರು.

ಎನ್‌ಸಿಡಬ್ಲ್ಯೂ ಅಧ್ಯಕ್ಷರ ಪ್ರಕಾರ, ಮುರ್ಷಿದಾಬಾದ್ ಮತ್ತು ಪೀಡಿತ ಪ್ರದೇಶಗಳ ಮಹಿಳೆಯರು ತಮ್ಮ ಎಲ್ಲಾ ಕನಸುಗಳು ಭಗ್ನಗೊಂಡಿವೆ ಮತ್ತು ಅವರಿಗೆ ಏನೂ ಉಳಿದಿಲ್ಲ ಎಂದು ಹೇಳಿದರು.

ಎನ್‌ಸಿಡಬ್ಲ್ಯೂ ಮುಖ್ಯಸ್ಥರು ಪಶ್ಚಿಮ ಬಂಗಾಳ ಸರ್ಕಾರಕ್ಕೆ ತ್ವರಿತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. “ಇವರು ನಮ್ಮ ಸ್ವಂತ ಹೆಣ್ಣುಮಕ್ಕಳು ಮತ್ತು ಮಹಿಳೆಯರು ಆಗಿರುವುದರಿಂದ ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ನಾವು ಬಂಗಾಳ ಸರ್ಕಾರಕ್ಕೆ ಮನವಿ ಮಾಡುತ್ತೇವೆ” ಎಂದು ಅವರು ಹೇಳಿದರು.

ಪಶ್ಚಿಮ ಬಂಗಾಳ ರಾಜ್ಯ ಮಹಿಳಾ ಆಯೋಗವು ಸಂತ್ರಸ್ತ ಪ್ರದೇಶಗಳಿಗೆ ಭೇಟಿ ನೀಡಬೇಕೆಂದು ಅವರು ಕರೆ ನೀಡಿದರು. “ಹೋಗಿ ಅವರ ಬಗ್ಗೆ ನಿಮ್ಮ ಸಹಾನುಭೂತಿ ತೋರಿಸಿ, ಕನಿಷ್ಠ ನೀವು ಅವರೊಂದಿಗೆ ಇದ್ದೀರಿ ಎಂದು ಹೇಳಿ. ಇದು ನಿಮ್ಮ ಕೆಲಸ!” ಎಂದಿದ್ದಾರೆ.

ಕೇಂದ್ರದ ಮುಂದೆ ವಿವರವಾದ ವರದಿಯನ್ನು ಸಲ್ಲಿಸಲಾಗುವುದು ಮತ್ತು ಪ್ರತಿಗಳನ್ನು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಕಳುಹಿಸಲಾಗುವುದು ಎಂದು ರಹತ್ಕರ್ ಹೇಳಿದರು.

ಕಾಂಗ್ರೆಸ್ಸಿನಿಂದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ರ್ಯಾಲಿ; ನಿತೀಶ್ ‘ಖುರ್ಚಿ’ಗಾಗಿ ಬಿಜೆಪಿ ಜೊತೆ ಮೈತ್ರಿ; ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...