Homeಮುಖಪುಟನ್ಯಾಯಾಂಗದ ಬಗ್ಗೆ ನಿಶಿಕಾಂತ್ ದುಬೆ ಹೇಳಿಕೆ: ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಒಪ್ಪಿಗೆ ಅಗತ್ಯವಿಲ್ಲ;...

ನ್ಯಾಯಾಂಗದ ಬಗ್ಗೆ ನಿಶಿಕಾಂತ್ ದುಬೆ ಹೇಳಿಕೆ: ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಒಪ್ಪಿಗೆ ಅಗತ್ಯವಿಲ್ಲ; ಸುಪ್ರೀಂ ಕೋರ್ಟ್

- Advertisement -
- Advertisement -

ಸುಪ್ರೀಂ ಕೋರ್ಟ್ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರನ್ನು ಟೀಕಿಸಿದ್ದಕ್ಕಾಗಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ತನ್ನ ಅನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ (ಏ.21) ಅರ್ಜಿದಾರರಿಗೆ ತಿಳಿಸಿದೆ.

ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಷಯ ವಿಚಾರಣೆಗೆ ಬಂದಿತ್ತು.

ದುಬೆಯವರ ಹೇಳಿಕೆಗಳ ಕುರಿತ ಇತ್ತೀಚಿನ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅರ್ಜಿದಾರರ ಪರ ವಕೀಲರು, ನ್ಯಾಯಾಲಯದ ಅನುಮತಿಯೊಂದಿಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಬಯಸುವುದಾಗಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿ, “ನೀವು ಅರ್ಜಿ ಸಲ್ಲಿಸಿ, ಅದಕ್ಕೆ ನಮ್ಮ ಅನುಮತಿ ಅಗತ್ಯವಿಲ್ಲ. ಆದರೆ, ಈ ವಿಷಯದಲ್ಲಿ ಅಟಾರ್ನಿ ಜನರಲ್ (ಎಜಿ) ಅವರಿಂದ ಅನುಮತಿ ಪಡೆಯಬೇಕಾಗಿದೆ. ಎಜಿ ಮುಂದೆ ಪ್ರಕರಣ ದಾಖಲಿಸಿ, ಅವರು ಅನುಮತಿ ನೀಡುತ್ತಾರೆ” ಎಂದು ಪ್ರತಿಕ್ರಿಯಿಸಿದ್ದಾಗಿ .barandbench.com ವರದಿ ಮಾಡಿದೆ.

ಸುಪ್ರೀಂ ಕೋರ್ಟ್ ಕಾನೂನುಗಳನ್ನು ರೂಪಿಸುವುದಾದರೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳನ್ನು ಮುಚ್ಚಿ ಎಂದು ಬಿಜೆಪಿ ಸಂಸದ ದುಬೆ ಶನಿವಾರ ವಾಗ್ದಾಳಿ ನಡೆಸಿದ್ದರು.

ದೇಶದಲ್ಲಿ “ಅಂತರ್ಯುದ್ಧ ಉಂಟಾದರೆ” ಸಿಜೆಐ ಖನ್ನಾ ಅವರೇ ಅದಕ್ಕೆ ಕಾರಣ ಎಂದು ಟೀಕಿಸಿದ್ದರು.

ಈ ತಿಂಗಳ ಆರಂಭದಲ್ಲಿ ಸಂಸತ್ತಿನ ಎರಡೂ ಸದನಗಳಲ್ಲಿ ಅಂಗೀಕರಿಸಲ್ಪಟ್ಟ ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಕಳೆದ ಬುಧವಾರ ವಿಚಾರಣೆ ನಡೆಸಿದೆ.

ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರಿಗೆ ಅವಕಾಶ ನೀಡುವುದು ಮತ್ತು ಬಳಕೆದಾರರಿಂದ ವಕ್ಫ್ ಆಸ್ತಿಗಳನ್ನು ತೆಗೆದು ಹಾಕಲು ಅವಕಾಶ ನೀಡುವಂತಹ ಕೆಲವು ನಿಬಂಧನೆಗಳು ಮೂಲಭೂತ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸುತ್ತವೆ ಎಂದು ಅರ್ಜಿದಾರರು ವಾದಿಸುತ್ತಿದ್ದಾರೆ. ಇದರಲ್ಲಿ ಸುಪ್ರೀಂ ಕೋರ್ಟ್ ಮಧ್ಯೆ ಪ್ರವೇಶಿಸುವುದನ್ನು ದುಬೆಯವರು ಪ್ರಶ್ನಿಸಿದ್ದಾರೆ.

ವಕ್ಫ್ ಕಾಯ್ದೆಯ ತಿದ್ದುಪಡಿಗಳನ್ನು ಪ್ರಶ್ನಿಸಿದ ದಾವೆದಾರರಲ್ಲಿ ಒಬ್ಬರ ಪರ ವಕೀಲರಾಗಿರುವ ಸುಪ್ರೀಂ ಕೋರ್ಟ್ ವಕೀಲ ಅನಸ್ ತನ್ವೀರ್, ಅಟಾರ್ನಿ ಜನರಲ್ ಆರ್ ವೆಂಕಟ್ರಮಣಿ ಅವರಿಗೆ ಪತ್ರ ಬರೆದು, ಸುಪ್ರೀಂ ಕೋರ್ಟ್‌ನ ಘನತೆಯನ್ನು ಕುಗ್ಗಿಸುವ ಗುರಿಯನ್ನು ಹೊಂದಿರುವ ಹೇಳಿಕೆಗಳಿಗಾಗಿ ಸಂಸದ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಒಪ್ಪಿಗೆ ಕೋರಿದ್ದಾರೆ.

“1975ರ ಸುಪ್ರೀಂ ಕೋರ್ಟ್ ನಿಂದನೆ ಪ್ರಕ್ರಿಯೆಗಳನ್ನು ನಿಯಂತ್ರಿಸುವ ನಿಯಮಗಳ ನಿಬಂದನೆ 3 (ಸಿ) ಯೊಂದಿಗೆ ಓದಲಾದ ನ್ಯಾಯಾಂಗ ನಿಂದನೆ ಕಾಯ್ದೆ, 1971 ರ ಸೆಕ್ಷನ್ 15 (1) (ಬಿ) ಅಡಿಯಲ್ಲಿ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ, ಜಾರ್ಖಂಡ್‌ನ ಗೊಡ್ಡಾ ಸಂಸದೀಯ ಕ್ಷೇತ್ರದ ಲೋಕಸಭಾ ಸದಸ್ಯ ನಿಶಿಕಾಂತ್ ದುಬೆ ಅವರು ಸಾರ್ವಜನಿಕವಾಗಿ ನೀಡಿದ ಹೇಳಿಕೆಗಳು ದಾರಿತಪ್ಪಿಸುವ ಮತ್ತು ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಘನತೆ ಮತ್ತು ಅಧಿಕಾರವನ್ನು ಕುಗ್ಗಿಸುವ ಗುರಿಯನ್ನು ಹೊಂದಿರುವ ಹೇಳಿಕೆಗಳಾಗಿವೆ. ಹಾಗಾಗಿ, ಅವರ ವಿರುದ್ದ ಕ್ರಿಮಿನಲ್ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಲು ನಿಮ್ಮ ಒಪ್ಪಿಗೆ ಕೋರುತ್ತೇನೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್‌ ವಿರುದ್ದದ ದುಬೆ ಅವರ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದ್ದು, ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ಈ ಹೇಳಿಕೆಗಳನ್ನು ಅವರ ವೈಯಕ್ತಿಕ ಅಭಿಪ್ರಾಯಗಳು ಎಂದಿದ್ದಾರೆ.

ನ್ಯಾಯಾಂಗವು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ. ಅಂತಹ ಹೇಳಿಕೆಗಳನ್ನು ನೀಡದಂತೆ ಪಕ್ಷದ ನಾಯಕರಿಗೆ ನಿರ್ದೇಶನ ನೀಡಿದ್ದೇನೆ ಎಂದು ನಡ್ಡಾ ಹೇಳಿದ್ದಾರೆ.

ಬಿಹಾರ| ಪಾರ್ಕಿಂಗ್ ವಿಚಾರಕ್ಕೆ ಮದುವೆ ಮನೆಯಲ್ಲಿ ಗುಂಡಿನ ದಾಳಿ; ಇಬ್ಬರು ಸಾವು, ಐವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...