Homeಮುಖಪುಟನ್ಯಾಯಾಂಗದ ಬಗ್ಗೆ ನಿಶಿಕಾಂತ್ ದುಬೆ ಹೇಳಿಕೆ: ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಒಪ್ಪಿಗೆ ಅಗತ್ಯವಿಲ್ಲ;...

ನ್ಯಾಯಾಂಗದ ಬಗ್ಗೆ ನಿಶಿಕಾಂತ್ ದುಬೆ ಹೇಳಿಕೆ: ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಒಪ್ಪಿಗೆ ಅಗತ್ಯವಿಲ್ಲ; ಸುಪ್ರೀಂ ಕೋರ್ಟ್

- Advertisement -
- Advertisement -

ಸುಪ್ರೀಂ ಕೋರ್ಟ್ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರನ್ನು ಟೀಕಿಸಿದ್ದಕ್ಕಾಗಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ತನ್ನ ಅನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ (ಏ.21) ಅರ್ಜಿದಾರರಿಗೆ ತಿಳಿಸಿದೆ.

ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಷಯ ವಿಚಾರಣೆಗೆ ಬಂದಿತ್ತು.

ದುಬೆಯವರ ಹೇಳಿಕೆಗಳ ಕುರಿತ ಇತ್ತೀಚಿನ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅರ್ಜಿದಾರರ ಪರ ವಕೀಲರು, ನ್ಯಾಯಾಲಯದ ಅನುಮತಿಯೊಂದಿಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಬಯಸುವುದಾಗಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿ, “ನೀವು ಅರ್ಜಿ ಸಲ್ಲಿಸಿ, ಅದಕ್ಕೆ ನಮ್ಮ ಅನುಮತಿ ಅಗತ್ಯವಿಲ್ಲ. ಆದರೆ, ಈ ವಿಷಯದಲ್ಲಿ ಅಟಾರ್ನಿ ಜನರಲ್ (ಎಜಿ) ಅವರಿಂದ ಅನುಮತಿ ಪಡೆಯಬೇಕಾಗಿದೆ. ಎಜಿ ಮುಂದೆ ಪ್ರಕರಣ ದಾಖಲಿಸಿ, ಅವರು ಅನುಮತಿ ನೀಡುತ್ತಾರೆ” ಎಂದು ಪ್ರತಿಕ್ರಿಯಿಸಿದ್ದಾಗಿ .barandbench.com ವರದಿ ಮಾಡಿದೆ.

ಸುಪ್ರೀಂ ಕೋರ್ಟ್ ಕಾನೂನುಗಳನ್ನು ರೂಪಿಸುವುದಾದರೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳನ್ನು ಮುಚ್ಚಿ ಎಂದು ಬಿಜೆಪಿ ಸಂಸದ ದುಬೆ ಶನಿವಾರ ವಾಗ್ದಾಳಿ ನಡೆಸಿದ್ದರು.

ದೇಶದಲ್ಲಿ “ಅಂತರ್ಯುದ್ಧ ಉಂಟಾದರೆ” ಸಿಜೆಐ ಖನ್ನಾ ಅವರೇ ಅದಕ್ಕೆ ಕಾರಣ ಎಂದು ಟೀಕಿಸಿದ್ದರು.

ಈ ತಿಂಗಳ ಆರಂಭದಲ್ಲಿ ಸಂಸತ್ತಿನ ಎರಡೂ ಸದನಗಳಲ್ಲಿ ಅಂಗೀಕರಿಸಲ್ಪಟ್ಟ ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಕಳೆದ ಬುಧವಾರ ವಿಚಾರಣೆ ನಡೆಸಿದೆ.

ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರಿಗೆ ಅವಕಾಶ ನೀಡುವುದು ಮತ್ತು ಬಳಕೆದಾರರಿಂದ ವಕ್ಫ್ ಆಸ್ತಿಗಳನ್ನು ತೆಗೆದು ಹಾಕಲು ಅವಕಾಶ ನೀಡುವಂತಹ ಕೆಲವು ನಿಬಂಧನೆಗಳು ಮೂಲಭೂತ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸುತ್ತವೆ ಎಂದು ಅರ್ಜಿದಾರರು ವಾದಿಸುತ್ತಿದ್ದಾರೆ. ಇದರಲ್ಲಿ ಸುಪ್ರೀಂ ಕೋರ್ಟ್ ಮಧ್ಯೆ ಪ್ರವೇಶಿಸುವುದನ್ನು ದುಬೆಯವರು ಪ್ರಶ್ನಿಸಿದ್ದಾರೆ.

ವಕ್ಫ್ ಕಾಯ್ದೆಯ ತಿದ್ದುಪಡಿಗಳನ್ನು ಪ್ರಶ್ನಿಸಿದ ದಾವೆದಾರರಲ್ಲಿ ಒಬ್ಬರ ಪರ ವಕೀಲರಾಗಿರುವ ಸುಪ್ರೀಂ ಕೋರ್ಟ್ ವಕೀಲ ಅನಸ್ ತನ್ವೀರ್, ಅಟಾರ್ನಿ ಜನರಲ್ ಆರ್ ವೆಂಕಟ್ರಮಣಿ ಅವರಿಗೆ ಪತ್ರ ಬರೆದು, ಸುಪ್ರೀಂ ಕೋರ್ಟ್‌ನ ಘನತೆಯನ್ನು ಕುಗ್ಗಿಸುವ ಗುರಿಯನ್ನು ಹೊಂದಿರುವ ಹೇಳಿಕೆಗಳಿಗಾಗಿ ಸಂಸದ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಒಪ್ಪಿಗೆ ಕೋರಿದ್ದಾರೆ.

“1975ರ ಸುಪ್ರೀಂ ಕೋರ್ಟ್ ನಿಂದನೆ ಪ್ರಕ್ರಿಯೆಗಳನ್ನು ನಿಯಂತ್ರಿಸುವ ನಿಯಮಗಳ ನಿಬಂದನೆ 3 (ಸಿ) ಯೊಂದಿಗೆ ಓದಲಾದ ನ್ಯಾಯಾಂಗ ನಿಂದನೆ ಕಾಯ್ದೆ, 1971 ರ ಸೆಕ್ಷನ್ 15 (1) (ಬಿ) ಅಡಿಯಲ್ಲಿ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ, ಜಾರ್ಖಂಡ್‌ನ ಗೊಡ್ಡಾ ಸಂಸದೀಯ ಕ್ಷೇತ್ರದ ಲೋಕಸಭಾ ಸದಸ್ಯ ನಿಶಿಕಾಂತ್ ದುಬೆ ಅವರು ಸಾರ್ವಜನಿಕವಾಗಿ ನೀಡಿದ ಹೇಳಿಕೆಗಳು ದಾರಿತಪ್ಪಿಸುವ ಮತ್ತು ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಘನತೆ ಮತ್ತು ಅಧಿಕಾರವನ್ನು ಕುಗ್ಗಿಸುವ ಗುರಿಯನ್ನು ಹೊಂದಿರುವ ಹೇಳಿಕೆಗಳಾಗಿವೆ. ಹಾಗಾಗಿ, ಅವರ ವಿರುದ್ದ ಕ್ರಿಮಿನಲ್ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಲು ನಿಮ್ಮ ಒಪ್ಪಿಗೆ ಕೋರುತ್ತೇನೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್‌ ವಿರುದ್ದದ ದುಬೆ ಅವರ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದ್ದು, ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ಈ ಹೇಳಿಕೆಗಳನ್ನು ಅವರ ವೈಯಕ್ತಿಕ ಅಭಿಪ್ರಾಯಗಳು ಎಂದಿದ್ದಾರೆ.

ನ್ಯಾಯಾಂಗವು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ. ಅಂತಹ ಹೇಳಿಕೆಗಳನ್ನು ನೀಡದಂತೆ ಪಕ್ಷದ ನಾಯಕರಿಗೆ ನಿರ್ದೇಶನ ನೀಡಿದ್ದೇನೆ ಎಂದು ನಡ್ಡಾ ಹೇಳಿದ್ದಾರೆ.

ಬಿಹಾರ| ಪಾರ್ಕಿಂಗ್ ವಿಚಾರಕ್ಕೆ ಮದುವೆ ಮನೆಯಲ್ಲಿ ಗುಂಡಿನ ದಾಳಿ; ಇಬ್ಬರು ಸಾವು, ಐವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...