Homeಕರ್ನಾಟಕಏ.26ರಂದು ದಾವಣಗೆರೆಯಲ್ಲಿ ಬೃಹತ್ 'ಸಂವಿಧಾನ ಸಂರಕ್ಷಕರ ಸಮಾವೇಶ'

ಏ.26ರಂದು ದಾವಣಗೆರೆಯಲ್ಲಿ ಬೃಹತ್ ‘ಸಂವಿಧಾನ ಸಂರಕ್ಷಕರ ಸಮಾವೇಶ’

- Advertisement -
- Advertisement -

“ಸ್ವಾತಂತ್ರ್ಯ”ದ ಜಾಗದಲ್ಲಿ ಸರ್ವಾಧಿಕಾರ, “ಸಮಾನತೆ”ಯ ಜಾಗದಲ್ಲಿ ಬಲಾಢ್ಯರ ಅಭಿವೃದ್ದಿ,”ಸೋದರತ್ವ”ದ ಜಾಗದಲ್ಲಿ ಸನಾತನವಾದ, “ಸಾಮಾಜಿಕ ನ್ಯಾಯ”ದ ಜಾಗದಲ್ಲಿ ಮೇಲ್ವರ್ಗದವರಿಗೆ ಮೇಲ್ಪಂಕ್ತಿ ಹಾಕಿ ಕೊಡುವ ಮೂಲಕ ಸಂವಿಧಾನದ ಮೌಲ್ಯಗಳನ್ನು ಬುಡಮೇಲು ಮಾಡುತ್ತಿರುವ ದೊಡ್ಡ ಅಪಾಯವನ್ನು ದೇಶ ಎದುರಿಸುತ್ತಿದೆ ಎಂದು ಎದ್ದೇಳು ಕರ್ನಾಟಕದ ಬೆಂಗಳೂರಿನ ಶ್ರೀಗೌರಿ ಹೇಳಿದ್ದಾರೆ.

ಸರ್ವರನ್ನು ಒಳಗೊಂಡ ಬಹುತ್ವದ ಭಾರತವನ್ನು ಉಳಿಸಿಕೊಳ್ಳಲು ರಾಜ್ಯದ ಪ್ರತಿ ಊರು, ಕೇರಿ, ಹಾಡಿ, ಮೊಹಲ್ಲಾಗಳಲ್ಲಿ ಎದ್ದೇಳು ಕರ್ನಾಟಕದ ವತಿಯಿಂದ “ಸಂವಿಧಾನ ಸಂರಕ್ಷಣಾ ಪಡೆ” ಕಟ್ಟುವ ಮಹಾಯಾನಕ್ಕೆ ಚಾಲನೆಯಾಗಿ ದಾವಣಗೆರೆಯಲ್ಲಿ “ಸಂವಿಧಾನ ಸಂರಕ್ಷಕರ ಮಹಾ ಸಮಾವೇಶ” ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದುಡಿಯುವ ವರ್ಗದ ಹೋರಾಟಗಳಿಗೆ ಹೆಸರಾಗಿದ್ದ ದಾವಣಗೆರೆ ಹೊಸ ತಲೆ ಮಾರಿನ ಮಹಾಯಾನಕ್ಕೆ ವೇದಿಕೆಯಾಗುತ್ತಿದೆ. ಏಪ್ರಿಲ್ 26ರಂದು ಶನಿವಾರ ಕರುನಾಡಿನ ಕೇಂದ್ರ ನಗರಿಯ ಹೈಸ್ಕೂಲ್‌ ಫೀಲ್ಡ್‌ ಬಳಿಯ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಂವಿಧಾನ ಈ ದೇಶದ ದುಡಿಯುವ ಜನರಾದ ರೈತ, ಕೂಲಿ, ಕಾರ್ಮಿಕ, ಸಾಮಾನ್ಯ ಜನರಿಗೆ ನೀಡಿದ್ದ ಹಕ್ಕುಗಳನ್ನೆಲ್ಲಾ ವೇಗಗತಿಯಲ್ಲಿ ರದ್ದುಗೊಳಿಸಲಾಗುತ್ತಿದೆ. ಈ ದೇಶದ ದಮನಿತ ಸಮುದಾಯಗಳಾದ ದಲಿತ, ಆದಿವಾಸಿ, ಅಲ್ಪಸಂಖ್ಯಾತ, ಅತಿಹಿಂದುಳಿದ, ಮಹಿಳಾ, ಲೈಂಗಿಕ ಅಲ್ಪಸಂಖ್ಯಾತ ಮುಂತಾದ ಜನ ವರ್ಗಗಳಿಗೆ ಸಾಮಾಜಿಕವಾಗಿ ಮುಂದೆ ಬರಲು ನೀಡಲಾಗಿದ್ದ ಅವಕಾಶಗಳ ಮಾರ್ಗಗಳನ್ನೆಲ್ಲಾ ಮುಚ್ಚಲಾಗುತ್ತಿದೆ. ಸರ್ಕಾರಿ ಶಿಕ್ಷಣ, ಸರ್ಕಾರಿ ಚಿಕಿತ್ಸೆ ಕಣ್ಮರೆಯಾಗುತ್ತಿವೆ. ಇವು ಲೂಟಿಕೋರ ದಂಧೆಗಳಾಗಿ ಪರಿವರ್ತನೆಯಾಗಿವೆ. ನಿರುದ್ಯೋಗ ವೇಗಗತಿಯಲ್ಲಿ ಹೆಚ್ಚಾಗುತ್ತಿದೆ. ಉದ್ಯೋಗ ಸಿಕ್ಕರೂ ಘನತೆಯಿಂದ ಬದುಕುವ ವೇತನವಿಲ್ಲ. ಜನಸಾಮಾನ್ಯರು ಸಾಲದ ಸುಳಿಯಲ್ಲಿ ಸಿಲುಕಿ ನಲುಗುತ್ತಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳು ಮಿತಿಮೀರಿ ಬೆಳೆಯುತ್ತಿವೆ, ಜಾತಿ ಧರ್ಮದ ಹೆಸರಿನಲ್ಲಿ ನೆತ್ತರು ಹರಿದಾಡುತ್ತಿದೆ. “ನಾಡಲ್ಲವೋ ಇದು ವಿಷದ ಸಮುದ್ರ” ಎಂಬಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂದು ಶ್ರೀಗೌರಿ ಹೇಳಿದ್ದಾರೆ.

ಇದಕ್ಕೆಲ್ಲ ಪರಿಹಾರ ಕಂಡುಕೊಳ್ಳಬೇಕಿದೆ. ಸ್ವಾತಂತ್ರ್ಯದ ದೀವಿಗೆ ಈಗ ನಮ್ಮ ಕೈಯಲ್ಲಿದೆ. ಅದನ್ನು ಹಿಡಿದುಕೊಂಡು ನಾಡಿಗೆ ಬೆಳಕು ನೀಡಬೇಕಿದೆ. ಆ ನಿಟ್ಟಿನಲ್ಲಿ ದೊಡ್ಡ ಪ್ರಯತ್ನವಾಗಿದೆ “ಸಂವಿಧಾನ ಸಂರಕ್ಷಕರ ಸಮಾವೇಶ”. ಈ ಕಾರ್ಯಕ್ರಮಕ್ಕೆ ಪ್ರತಿ ಜಿಲ್ಲೆಯಿಂದ ಸಂವಿಧಾನ ಸಂರಕ್ಷಕ ತಂಡಗಳು ಬರಲಿವೆ. ದೇಶದ ಮತ್ತು ರಾಜ್ಯದ ಜನಚಳವಳಿಗಳ ಮುಂದಾಳುಗಳು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಕಸವುಭರಿತ ಸಾಂಸ್ಕೃತಿಕ ತಂಡಗಳು “ಕಲಾ ಕಹಳೆ” ಮೊಳಗಿಸಲಿವೆ. ಈ ಅಭೂತವಪೂರ್ವ ಕಾರ್ಯಕ್ರಮದಲ್ಲಿ ನೀವು ಪಾಲ್ಗೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.

ಬೆಂಗಳೂರಲ್ಲಿ ಟ್ರಾನ್ಸ್‌ಜೆಂಡರ್ ಶವವಾಗಿ ಪತ್ತೆ: ಕೊಲೆ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...