Homeಕರ್ನಾಟಕಏ.26ರಂದು ದಾವಣಗೆರೆಯಲ್ಲಿ ಬೃಹತ್ 'ಸಂವಿಧಾನ ಸಂರಕ್ಷಕರ ಸಮಾವೇಶ'

ಏ.26ರಂದು ದಾವಣಗೆರೆಯಲ್ಲಿ ಬೃಹತ್ ‘ಸಂವಿಧಾನ ಸಂರಕ್ಷಕರ ಸಮಾವೇಶ’

- Advertisement -
- Advertisement -

“ಸ್ವಾತಂತ್ರ್ಯ”ದ ಜಾಗದಲ್ಲಿ ಸರ್ವಾಧಿಕಾರ, “ಸಮಾನತೆ”ಯ ಜಾಗದಲ್ಲಿ ಬಲಾಢ್ಯರ ಅಭಿವೃದ್ದಿ,”ಸೋದರತ್ವ”ದ ಜಾಗದಲ್ಲಿ ಸನಾತನವಾದ, “ಸಾಮಾಜಿಕ ನ್ಯಾಯ”ದ ಜಾಗದಲ್ಲಿ ಮೇಲ್ವರ್ಗದವರಿಗೆ ಮೇಲ್ಪಂಕ್ತಿ ಹಾಕಿ ಕೊಡುವ ಮೂಲಕ ಸಂವಿಧಾನದ ಮೌಲ್ಯಗಳನ್ನು ಬುಡಮೇಲು ಮಾಡುತ್ತಿರುವ ದೊಡ್ಡ ಅಪಾಯವನ್ನು ದೇಶ ಎದುರಿಸುತ್ತಿದೆ ಎಂದು ಎದ್ದೇಳು ಕರ್ನಾಟಕದ ಬೆಂಗಳೂರಿನ ಶ್ರೀಗೌರಿ ಹೇಳಿದ್ದಾರೆ.

ಸರ್ವರನ್ನು ಒಳಗೊಂಡ ಬಹುತ್ವದ ಭಾರತವನ್ನು ಉಳಿಸಿಕೊಳ್ಳಲು ರಾಜ್ಯದ ಪ್ರತಿ ಊರು, ಕೇರಿ, ಹಾಡಿ, ಮೊಹಲ್ಲಾಗಳಲ್ಲಿ ಎದ್ದೇಳು ಕರ್ನಾಟಕದ ವತಿಯಿಂದ “ಸಂವಿಧಾನ ಸಂರಕ್ಷಣಾ ಪಡೆ” ಕಟ್ಟುವ ಮಹಾಯಾನಕ್ಕೆ ಚಾಲನೆಯಾಗಿ ದಾವಣಗೆರೆಯಲ್ಲಿ “ಸಂವಿಧಾನ ಸಂರಕ್ಷಕರ ಮಹಾ ಸಮಾವೇಶ” ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದುಡಿಯುವ ವರ್ಗದ ಹೋರಾಟಗಳಿಗೆ ಹೆಸರಾಗಿದ್ದ ದಾವಣಗೆರೆ ಹೊಸ ತಲೆ ಮಾರಿನ ಮಹಾಯಾನಕ್ಕೆ ವೇದಿಕೆಯಾಗುತ್ತಿದೆ. ಏಪ್ರಿಲ್ 26ರಂದು ಶನಿವಾರ ಕರುನಾಡಿನ ಕೇಂದ್ರ ನಗರಿಯ ಹೈಸ್ಕೂಲ್‌ ಫೀಲ್ಡ್‌ ಬಳಿಯ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಂವಿಧಾನ ಈ ದೇಶದ ದುಡಿಯುವ ಜನರಾದ ರೈತ, ಕೂಲಿ, ಕಾರ್ಮಿಕ, ಸಾಮಾನ್ಯ ಜನರಿಗೆ ನೀಡಿದ್ದ ಹಕ್ಕುಗಳನ್ನೆಲ್ಲಾ ವೇಗಗತಿಯಲ್ಲಿ ರದ್ದುಗೊಳಿಸಲಾಗುತ್ತಿದೆ. ಈ ದೇಶದ ದಮನಿತ ಸಮುದಾಯಗಳಾದ ದಲಿತ, ಆದಿವಾಸಿ, ಅಲ್ಪಸಂಖ್ಯಾತ, ಅತಿಹಿಂದುಳಿದ, ಮಹಿಳಾ, ಲೈಂಗಿಕ ಅಲ್ಪಸಂಖ್ಯಾತ ಮುಂತಾದ ಜನ ವರ್ಗಗಳಿಗೆ ಸಾಮಾಜಿಕವಾಗಿ ಮುಂದೆ ಬರಲು ನೀಡಲಾಗಿದ್ದ ಅವಕಾಶಗಳ ಮಾರ್ಗಗಳನ್ನೆಲ್ಲಾ ಮುಚ್ಚಲಾಗುತ್ತಿದೆ. ಸರ್ಕಾರಿ ಶಿಕ್ಷಣ, ಸರ್ಕಾರಿ ಚಿಕಿತ್ಸೆ ಕಣ್ಮರೆಯಾಗುತ್ತಿವೆ. ಇವು ಲೂಟಿಕೋರ ದಂಧೆಗಳಾಗಿ ಪರಿವರ್ತನೆಯಾಗಿವೆ. ನಿರುದ್ಯೋಗ ವೇಗಗತಿಯಲ್ಲಿ ಹೆಚ್ಚಾಗುತ್ತಿದೆ. ಉದ್ಯೋಗ ಸಿಕ್ಕರೂ ಘನತೆಯಿಂದ ಬದುಕುವ ವೇತನವಿಲ್ಲ. ಜನಸಾಮಾನ್ಯರು ಸಾಲದ ಸುಳಿಯಲ್ಲಿ ಸಿಲುಕಿ ನಲುಗುತ್ತಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳು ಮಿತಿಮೀರಿ ಬೆಳೆಯುತ್ತಿವೆ, ಜಾತಿ ಧರ್ಮದ ಹೆಸರಿನಲ್ಲಿ ನೆತ್ತರು ಹರಿದಾಡುತ್ತಿದೆ. “ನಾಡಲ್ಲವೋ ಇದು ವಿಷದ ಸಮುದ್ರ” ಎಂಬಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂದು ಶ್ರೀಗೌರಿ ಹೇಳಿದ್ದಾರೆ.

ಇದಕ್ಕೆಲ್ಲ ಪರಿಹಾರ ಕಂಡುಕೊಳ್ಳಬೇಕಿದೆ. ಸ್ವಾತಂತ್ರ್ಯದ ದೀವಿಗೆ ಈಗ ನಮ್ಮ ಕೈಯಲ್ಲಿದೆ. ಅದನ್ನು ಹಿಡಿದುಕೊಂಡು ನಾಡಿಗೆ ಬೆಳಕು ನೀಡಬೇಕಿದೆ. ಆ ನಿಟ್ಟಿನಲ್ಲಿ ದೊಡ್ಡ ಪ್ರಯತ್ನವಾಗಿದೆ “ಸಂವಿಧಾನ ಸಂರಕ್ಷಕರ ಸಮಾವೇಶ”. ಈ ಕಾರ್ಯಕ್ರಮಕ್ಕೆ ಪ್ರತಿ ಜಿಲ್ಲೆಯಿಂದ ಸಂವಿಧಾನ ಸಂರಕ್ಷಕ ತಂಡಗಳು ಬರಲಿವೆ. ದೇಶದ ಮತ್ತು ರಾಜ್ಯದ ಜನಚಳವಳಿಗಳ ಮುಂದಾಳುಗಳು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಕಸವುಭರಿತ ಸಾಂಸ್ಕೃತಿಕ ತಂಡಗಳು “ಕಲಾ ಕಹಳೆ” ಮೊಳಗಿಸಲಿವೆ. ಈ ಅಭೂತವಪೂರ್ವ ಕಾರ್ಯಕ್ರಮದಲ್ಲಿ ನೀವು ಪಾಲ್ಗೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.

ಬೆಂಗಳೂರಲ್ಲಿ ಟ್ರಾನ್ಸ್‌ಜೆಂಡರ್ ಶವವಾಗಿ ಪತ್ತೆ: ಕೊಲೆ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...