Homeಅಂತರಾಷ್ಟ್ರೀಯಅನುದಾನ ತಡೆ ಹಿಡಿದ ಟ್ರಂಪ್ ಆಡಳಿತ: ಕಾನೂನು ಸಮರಕ್ಕೆ ಮುಂದಾದ ಹಾರ್ವರ್ಡ್‌ ವಿವಿ

ಅನುದಾನ ತಡೆ ಹಿಡಿದ ಟ್ರಂಪ್ ಆಡಳಿತ: ಕಾನೂನು ಸಮರಕ್ಕೆ ಮುಂದಾದ ಹಾರ್ವರ್ಡ್‌ ವಿವಿ

- Advertisement -
- Advertisement -

ತನ್ನ ತಾಳಕ್ಕೆ ತಕ್ಕಂತೆ ಕುಣಿಯದ್ದಕ್ಕೆ 2.2 ಬಿಲಿಯನ್ ಡಾಲರ್‌ಗಿಂತ ಹೆಚ್ಚಿನ ಅನುದಾನವನ್ನು ತಡೆ ಹಿಡಿದ ಟ್ರಂಪ್ ಆಡಳಿತದ ವಿರುದ್ಧ ಮೊಕದ್ದಮೆ ದಾಖಲಿಸಿರುವುದಾಗಿ ಹಾರ್ವರ್ಡ್‌ ವಿಶ್ವ ವಿದ್ಯಾಲಯ ಪ್ರಕಟಿಸಿದೆ.

ಏಪ್ರಿಲ್ 11ರಂದು ಹಾರ್ವರ್ಡ್‌ಗೆ ಬರೆದ ಪತ್ರದಲ್ಲಿ, ಟ್ರಂಪ್ ಆಡಳಿತವು ವಿಶ್ವವಿದ್ಯಾಲಯದ ಚಟುವಟಿಕೆಗಳಿಗೆ ಮೂಗುದಾರ ಹಾಕುವ ಹಲವು ಬೇಡಿಕೆಗಳನ್ನು ಮುಂದಿಟ್ಟಿತ್ತು.

ಅಮೆರಿಕನ್ ಮೌಲ್ಯಗಳಿಗೆ ವಿರುದ್ದವಾಗಿರುವ ವಿದ್ಯಾರ್ಥಿಗಳ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಬೇಕು.ಯಹೂದಿ ವಿರೋಧಿ ಮನಸ್ಥಿತಿಯನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನು ಪರಿಶೀಲಿಸಲು ಬಾಹ್ಯ ಸರ್ಕಾರ-ಅನುಮೋದಿತ ಪಕ್ಷಕ್ಕೆ ಅವಕಾಶ ನೀಡಬೇಕು. ಕ್ಯಾಂಪಸ್‌ನಲ್ಲಿ ಮಾಸ್ಕ್‌ ನಿಷೇಧಿಸುವುದು, ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ ಉಪಕ್ರಮಗಳನ್ನು ಕೊನೆಗೊಳಿಸುವುದು, ಅಪರಾಧ ಚಟುವಟಿಕೆ, ಹಿಂಸೆ ಅಥವಾ ಕಿರುಕುಳವನ್ನು ಉತ್ತೇಜಿಸುವ ಆರೋಪ ಹೊತ್ತಿರುವ ವಿದ್ಯಾರ್ಥಿ ಕ್ಲಬ್‌ಗಳ ಮಾನ್ಯತೆ ರದ್ದುಪಡಿಸುವುದು ಸರ್ಕಾರದ ಬೇಡಿಕೆಗಳಲ್ಲಿ ಸೇರಿವೆ.

ಏಪ್ರಿಲ್ 14ರಂದು ವಿಶ್ವವಿದ್ಯಾಲಯ ಸಮುದಾಯಕ್ಕೆ ಬರೆದ ಹಾರ್ವರ್ಡ್ ಅಧ್ಯಕ್ಷ ಅಲನ್ ಗಾರ್ಬರ್ ವಿಶ್ವವಿದ್ಯಾನಿಲಯವು ಸರ್ಕಾರ ಬೇಡಿಕೆಗಳಿಗೆ ಮಣಿಯುವುದಿಲ್ಲ ಎಂದು ಹೇಳಿದ್ದರು. ಈ ಬೆನ್ನಲ್ಲೇ ಸರ್ಕಾರ ಅನುದಾನ ತಡೆ ಹಿಡಿದಿದೆ ಎಂದು ವರದಿಯಾಗಿದೆ.

“ವಿಶ್ವ ವಿದ್ಯಾಲಯದ ವೈದ್ಯಕೀಯ, ವೈಜ್ಞಾನಿಕ, ತಾಂತ್ರಿಕ ಮತ್ತು ಇತರ ವಿಭಾಗಗಳು ಮತ್ತು ಯಹೂದಿ ವಿರೋಧಿ ಮನಸ್ಥಿತಿಗಳ ನಡುವೆ ಸಂಪರ್ಕ ಇರುವುದನ್ನು ತೋರಿಸಲು ಸರ್ಕಾರಕ್ಕೆ ಸಾಧ್ಯವಿಲ್ಲ. ಈ ವಿಭಾಗಗಳು ಅಮೆರಿಕನ್ನರ ಜೀವಗಳನ್ನು ಉಳಿಸುವ, ಅಮೆರಿಕನ್ನರ ಯಶಸ್ಸನ್ನು ಬೆಳೆಸುವ, ಅಮೆರಿಕನ್ ಭದ್ರತೆಯನ್ನು ಕಾಪಾಡುವ ಮತ್ತು ನಾವೀನ್ಯತೆಯಲ್ಲಿ ಜಾಗತಿಕ ನಾಯಕನಾಗಿ ಅಮೆರಿಕದ ಸ್ಥಾನವನ್ನು ಕಾಯ್ದುಕೊಳ್ಳುವ ಗುರಿಯನ್ನು ಹೊಂದಿವೆ” ಎಂದು ಬೋಸ್ಟನ್ ಫೆಡರಲ್ ನ್ಯಾಯಾಲಯಕ್ಕೆ ಸಲ್ಲಿಸಲಾದ ಮೊಕದ್ದಮೆಯಲ್ಲಿ ಹಾರ್ವರ್ಡ್‌ ಹೇಳಿದೆ.

“ಹಾರ್ವರ್ಡ್‌ನ ಸಂಶೋಧನಾ ಕಾರ್ಯಕ್ರಮಗಳು, ಆ ಸಂಶೋಧನೆಯ ಫಲಾನುಭವಿಗಳು ಮತ್ತು ಅಮೆರಿಕದ ನಾವೀನ್ಯತೆ ಮತ್ತು ಪ್ರಗತಿಯನ್ನು ಹೆಚ್ಚಿಸುವ ರಾಷ್ಟ್ರೀಯ ಹಿತಾಸಕ್ತಿಯ ಶತಕೋಟಿ ಡಾಲರ್‌ಗಳ ಫೆಡರಲ್ ಸಂಶೋಧನಾ ನಿಧಿಯನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸುವುದರಿಂದ ಉಂಟಾಗುವ ಗಮನಾರ್ಹ ಪರಿಣಾಮಗಳನ್ನು ಸರ್ಕಾರ ಒಪ್ಪಿಕೊಂಡಿಲ್ಲ” ಎಂದು ಆರೋಪಿಸಿದೆ.

ಅನುದಾ ಸ್ಥಗಿತವನ್ನು “ಅನಿಯಂತ್ರಿತ ಮತ್ತು ವಿಚಿತ್ರವಾದದ್ದು” ಎಂದು ಕರೆದಿರುವ ಹಾರ್ವರ್ಡ್‌, ಇದು ನಾಗರಿಕ ಹಕ್ಕುಗಳ ಕಾಯ್ದೆಯ ಶೀರ್ಷಿಕೆ VIರ ಶಾಸನಬದ್ಧ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದೆ. ವಿವಿ ಆರೋಪಕ್ಕೆ ಸರ್ಕಾರ ತಿರುಗೇಟು ಕೊಟ್ಟಿದೆ.

“ಹಾರ್ವರ್ಡ್‌ನಂತಹ ಸಂಸ್ಥೆಗಳಿಗೆ ಫೆಡರಲ್ ಅನುದಾನ ಕೊನೆಗೊಳ್ಳುತ್ತಿದೆ. ಈ ಸಂಸ್ಥೆಗಳು ಹೆಣಗಾಡುತ್ತಿರುವ ಅಮೆರಿಕನ್ನರ ತೆರಿಗೆ ಹಣದಿಂದ ತಮ್ಮ ಅಧಿಕಾರಿಗಳನ್ನು ಶ್ರೀಮಂತಗೊಳಿಸುತ್ತಿವೆ.
ತೆರಿಗೆದಾರರ ನಿಧಿಗಳು ಒಂದು ಸವಲತ್ತು. ಆ ಸವಲತ್ತನ್ನು ಪಡೆಯಲು ಅಗತ್ಯವಾದ ಮೂಲಭೂತ ಷರತ್ತುಗಳನ್ನು ಪೂರೈಸಲು ಹಾರ್ವರ್ಡ್ ವಿಫಲವಾಗಿದೆ” ಎಂದು ಶ್ವೇತಭವನದ ವಕ್ತಾರ ಹ್ಯಾರಿಸನ್ ಫೀಲ್ಡ್ಸ್ ಸೋಮವಾರ ಹೇಳಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...