Homeಅಂತರಾಷ್ಟ್ರೀಯಅನುದಾನ ತಡೆ ಹಿಡಿದ ಟ್ರಂಪ್ ಆಡಳಿತ: ಕಾನೂನು ಸಮರಕ್ಕೆ ಮುಂದಾದ ಹಾರ್ವರ್ಡ್‌ ವಿವಿ

ಅನುದಾನ ತಡೆ ಹಿಡಿದ ಟ್ರಂಪ್ ಆಡಳಿತ: ಕಾನೂನು ಸಮರಕ್ಕೆ ಮುಂದಾದ ಹಾರ್ವರ್ಡ್‌ ವಿವಿ

- Advertisement -
- Advertisement -

ತನ್ನ ತಾಳಕ್ಕೆ ತಕ್ಕಂತೆ ಕುಣಿಯದ್ದಕ್ಕೆ 2.2 ಬಿಲಿಯನ್ ಡಾಲರ್‌ಗಿಂತ ಹೆಚ್ಚಿನ ಅನುದಾನವನ್ನು ತಡೆ ಹಿಡಿದ ಟ್ರಂಪ್ ಆಡಳಿತದ ವಿರುದ್ಧ ಮೊಕದ್ದಮೆ ದಾಖಲಿಸಿರುವುದಾಗಿ ಹಾರ್ವರ್ಡ್‌ ವಿಶ್ವ ವಿದ್ಯಾಲಯ ಪ್ರಕಟಿಸಿದೆ.

ಏಪ್ರಿಲ್ 11ರಂದು ಹಾರ್ವರ್ಡ್‌ಗೆ ಬರೆದ ಪತ್ರದಲ್ಲಿ, ಟ್ರಂಪ್ ಆಡಳಿತವು ವಿಶ್ವವಿದ್ಯಾಲಯದ ಚಟುವಟಿಕೆಗಳಿಗೆ ಮೂಗುದಾರ ಹಾಕುವ ಹಲವು ಬೇಡಿಕೆಗಳನ್ನು ಮುಂದಿಟ್ಟಿತ್ತು.

ಅಮೆರಿಕನ್ ಮೌಲ್ಯಗಳಿಗೆ ವಿರುದ್ದವಾಗಿರುವ ವಿದ್ಯಾರ್ಥಿಗಳ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಬೇಕು.ಯಹೂದಿ ವಿರೋಧಿ ಮನಸ್ಥಿತಿಯನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನು ಪರಿಶೀಲಿಸಲು ಬಾಹ್ಯ ಸರ್ಕಾರ-ಅನುಮೋದಿತ ಪಕ್ಷಕ್ಕೆ ಅವಕಾಶ ನೀಡಬೇಕು. ಕ್ಯಾಂಪಸ್‌ನಲ್ಲಿ ಮಾಸ್ಕ್‌ ನಿಷೇಧಿಸುವುದು, ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ ಉಪಕ್ರಮಗಳನ್ನು ಕೊನೆಗೊಳಿಸುವುದು, ಅಪರಾಧ ಚಟುವಟಿಕೆ, ಹಿಂಸೆ ಅಥವಾ ಕಿರುಕುಳವನ್ನು ಉತ್ತೇಜಿಸುವ ಆರೋಪ ಹೊತ್ತಿರುವ ವಿದ್ಯಾರ್ಥಿ ಕ್ಲಬ್‌ಗಳ ಮಾನ್ಯತೆ ರದ್ದುಪಡಿಸುವುದು ಸರ್ಕಾರದ ಬೇಡಿಕೆಗಳಲ್ಲಿ ಸೇರಿವೆ.

ಏಪ್ರಿಲ್ 14ರಂದು ವಿಶ್ವವಿದ್ಯಾಲಯ ಸಮುದಾಯಕ್ಕೆ ಬರೆದ ಹಾರ್ವರ್ಡ್ ಅಧ್ಯಕ್ಷ ಅಲನ್ ಗಾರ್ಬರ್ ವಿಶ್ವವಿದ್ಯಾನಿಲಯವು ಸರ್ಕಾರ ಬೇಡಿಕೆಗಳಿಗೆ ಮಣಿಯುವುದಿಲ್ಲ ಎಂದು ಹೇಳಿದ್ದರು. ಈ ಬೆನ್ನಲ್ಲೇ ಸರ್ಕಾರ ಅನುದಾನ ತಡೆ ಹಿಡಿದಿದೆ ಎಂದು ವರದಿಯಾಗಿದೆ.

“ವಿಶ್ವ ವಿದ್ಯಾಲಯದ ವೈದ್ಯಕೀಯ, ವೈಜ್ಞಾನಿಕ, ತಾಂತ್ರಿಕ ಮತ್ತು ಇತರ ವಿಭಾಗಗಳು ಮತ್ತು ಯಹೂದಿ ವಿರೋಧಿ ಮನಸ್ಥಿತಿಗಳ ನಡುವೆ ಸಂಪರ್ಕ ಇರುವುದನ್ನು ತೋರಿಸಲು ಸರ್ಕಾರಕ್ಕೆ ಸಾಧ್ಯವಿಲ್ಲ. ಈ ವಿಭಾಗಗಳು ಅಮೆರಿಕನ್ನರ ಜೀವಗಳನ್ನು ಉಳಿಸುವ, ಅಮೆರಿಕನ್ನರ ಯಶಸ್ಸನ್ನು ಬೆಳೆಸುವ, ಅಮೆರಿಕನ್ ಭದ್ರತೆಯನ್ನು ಕಾಪಾಡುವ ಮತ್ತು ನಾವೀನ್ಯತೆಯಲ್ಲಿ ಜಾಗತಿಕ ನಾಯಕನಾಗಿ ಅಮೆರಿಕದ ಸ್ಥಾನವನ್ನು ಕಾಯ್ದುಕೊಳ್ಳುವ ಗುರಿಯನ್ನು ಹೊಂದಿವೆ” ಎಂದು ಬೋಸ್ಟನ್ ಫೆಡರಲ್ ನ್ಯಾಯಾಲಯಕ್ಕೆ ಸಲ್ಲಿಸಲಾದ ಮೊಕದ್ದಮೆಯಲ್ಲಿ ಹಾರ್ವರ್ಡ್‌ ಹೇಳಿದೆ.

“ಹಾರ್ವರ್ಡ್‌ನ ಸಂಶೋಧನಾ ಕಾರ್ಯಕ್ರಮಗಳು, ಆ ಸಂಶೋಧನೆಯ ಫಲಾನುಭವಿಗಳು ಮತ್ತು ಅಮೆರಿಕದ ನಾವೀನ್ಯತೆ ಮತ್ತು ಪ್ರಗತಿಯನ್ನು ಹೆಚ್ಚಿಸುವ ರಾಷ್ಟ್ರೀಯ ಹಿತಾಸಕ್ತಿಯ ಶತಕೋಟಿ ಡಾಲರ್‌ಗಳ ಫೆಡರಲ್ ಸಂಶೋಧನಾ ನಿಧಿಯನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸುವುದರಿಂದ ಉಂಟಾಗುವ ಗಮನಾರ್ಹ ಪರಿಣಾಮಗಳನ್ನು ಸರ್ಕಾರ ಒಪ್ಪಿಕೊಂಡಿಲ್ಲ” ಎಂದು ಆರೋಪಿಸಿದೆ.

ಅನುದಾ ಸ್ಥಗಿತವನ್ನು “ಅನಿಯಂತ್ರಿತ ಮತ್ತು ವಿಚಿತ್ರವಾದದ್ದು” ಎಂದು ಕರೆದಿರುವ ಹಾರ್ವರ್ಡ್‌, ಇದು ನಾಗರಿಕ ಹಕ್ಕುಗಳ ಕಾಯ್ದೆಯ ಶೀರ್ಷಿಕೆ VIರ ಶಾಸನಬದ್ಧ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದೆ. ವಿವಿ ಆರೋಪಕ್ಕೆ ಸರ್ಕಾರ ತಿರುಗೇಟು ಕೊಟ್ಟಿದೆ.

“ಹಾರ್ವರ್ಡ್‌ನಂತಹ ಸಂಸ್ಥೆಗಳಿಗೆ ಫೆಡರಲ್ ಅನುದಾನ ಕೊನೆಗೊಳ್ಳುತ್ತಿದೆ. ಈ ಸಂಸ್ಥೆಗಳು ಹೆಣಗಾಡುತ್ತಿರುವ ಅಮೆರಿಕನ್ನರ ತೆರಿಗೆ ಹಣದಿಂದ ತಮ್ಮ ಅಧಿಕಾರಿಗಳನ್ನು ಶ್ರೀಮಂತಗೊಳಿಸುತ್ತಿವೆ.
ತೆರಿಗೆದಾರರ ನಿಧಿಗಳು ಒಂದು ಸವಲತ್ತು. ಆ ಸವಲತ್ತನ್ನು ಪಡೆಯಲು ಅಗತ್ಯವಾದ ಮೂಲಭೂತ ಷರತ್ತುಗಳನ್ನು ಪೂರೈಸಲು ಹಾರ್ವರ್ಡ್ ವಿಫಲವಾಗಿದೆ” ಎಂದು ಶ್ವೇತಭವನದ ವಕ್ತಾರ ಹ್ಯಾರಿಸನ್ ಫೀಲ್ಡ್ಸ್ ಸೋಮವಾರ ಹೇಳಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...