Homeಅಂತರಾಷ್ಟ್ರೀಯಅನುದಾನ ತಡೆ ಹಿಡಿದ ಟ್ರಂಪ್ ಆಡಳಿತ: ಕಾನೂನು ಸಮರಕ್ಕೆ ಮುಂದಾದ ಹಾರ್ವರ್ಡ್‌ ವಿವಿ

ಅನುದಾನ ತಡೆ ಹಿಡಿದ ಟ್ರಂಪ್ ಆಡಳಿತ: ಕಾನೂನು ಸಮರಕ್ಕೆ ಮುಂದಾದ ಹಾರ್ವರ್ಡ್‌ ವಿವಿ

- Advertisement -
- Advertisement -

ತನ್ನ ತಾಳಕ್ಕೆ ತಕ್ಕಂತೆ ಕುಣಿಯದ್ದಕ್ಕೆ 2.2 ಬಿಲಿಯನ್ ಡಾಲರ್‌ಗಿಂತ ಹೆಚ್ಚಿನ ಅನುದಾನವನ್ನು ತಡೆ ಹಿಡಿದ ಟ್ರಂಪ್ ಆಡಳಿತದ ವಿರುದ್ಧ ಮೊಕದ್ದಮೆ ದಾಖಲಿಸಿರುವುದಾಗಿ ಹಾರ್ವರ್ಡ್‌ ವಿಶ್ವ ವಿದ್ಯಾಲಯ ಪ್ರಕಟಿಸಿದೆ.

ಏಪ್ರಿಲ್ 11ರಂದು ಹಾರ್ವರ್ಡ್‌ಗೆ ಬರೆದ ಪತ್ರದಲ್ಲಿ, ಟ್ರಂಪ್ ಆಡಳಿತವು ವಿಶ್ವವಿದ್ಯಾಲಯದ ಚಟುವಟಿಕೆಗಳಿಗೆ ಮೂಗುದಾರ ಹಾಕುವ ಹಲವು ಬೇಡಿಕೆಗಳನ್ನು ಮುಂದಿಟ್ಟಿತ್ತು.

ಅಮೆರಿಕನ್ ಮೌಲ್ಯಗಳಿಗೆ ವಿರುದ್ದವಾಗಿರುವ ವಿದ್ಯಾರ್ಥಿಗಳ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಬೇಕು.ಯಹೂದಿ ವಿರೋಧಿ ಮನಸ್ಥಿತಿಯನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನು ಪರಿಶೀಲಿಸಲು ಬಾಹ್ಯ ಸರ್ಕಾರ-ಅನುಮೋದಿತ ಪಕ್ಷಕ್ಕೆ ಅವಕಾಶ ನೀಡಬೇಕು. ಕ್ಯಾಂಪಸ್‌ನಲ್ಲಿ ಮಾಸ್ಕ್‌ ನಿಷೇಧಿಸುವುದು, ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ ಉಪಕ್ರಮಗಳನ್ನು ಕೊನೆಗೊಳಿಸುವುದು, ಅಪರಾಧ ಚಟುವಟಿಕೆ, ಹಿಂಸೆ ಅಥವಾ ಕಿರುಕುಳವನ್ನು ಉತ್ತೇಜಿಸುವ ಆರೋಪ ಹೊತ್ತಿರುವ ವಿದ್ಯಾರ್ಥಿ ಕ್ಲಬ್‌ಗಳ ಮಾನ್ಯತೆ ರದ್ದುಪಡಿಸುವುದು ಸರ್ಕಾರದ ಬೇಡಿಕೆಗಳಲ್ಲಿ ಸೇರಿವೆ.

ಏಪ್ರಿಲ್ 14ರಂದು ವಿಶ್ವವಿದ್ಯಾಲಯ ಸಮುದಾಯಕ್ಕೆ ಬರೆದ ಹಾರ್ವರ್ಡ್ ಅಧ್ಯಕ್ಷ ಅಲನ್ ಗಾರ್ಬರ್ ವಿಶ್ವವಿದ್ಯಾನಿಲಯವು ಸರ್ಕಾರ ಬೇಡಿಕೆಗಳಿಗೆ ಮಣಿಯುವುದಿಲ್ಲ ಎಂದು ಹೇಳಿದ್ದರು. ಈ ಬೆನ್ನಲ್ಲೇ ಸರ್ಕಾರ ಅನುದಾನ ತಡೆ ಹಿಡಿದಿದೆ ಎಂದು ವರದಿಯಾಗಿದೆ.

“ವಿಶ್ವ ವಿದ್ಯಾಲಯದ ವೈದ್ಯಕೀಯ, ವೈಜ್ಞಾನಿಕ, ತಾಂತ್ರಿಕ ಮತ್ತು ಇತರ ವಿಭಾಗಗಳು ಮತ್ತು ಯಹೂದಿ ವಿರೋಧಿ ಮನಸ್ಥಿತಿಗಳ ನಡುವೆ ಸಂಪರ್ಕ ಇರುವುದನ್ನು ತೋರಿಸಲು ಸರ್ಕಾರಕ್ಕೆ ಸಾಧ್ಯವಿಲ್ಲ. ಈ ವಿಭಾಗಗಳು ಅಮೆರಿಕನ್ನರ ಜೀವಗಳನ್ನು ಉಳಿಸುವ, ಅಮೆರಿಕನ್ನರ ಯಶಸ್ಸನ್ನು ಬೆಳೆಸುವ, ಅಮೆರಿಕನ್ ಭದ್ರತೆಯನ್ನು ಕಾಪಾಡುವ ಮತ್ತು ನಾವೀನ್ಯತೆಯಲ್ಲಿ ಜಾಗತಿಕ ನಾಯಕನಾಗಿ ಅಮೆರಿಕದ ಸ್ಥಾನವನ್ನು ಕಾಯ್ದುಕೊಳ್ಳುವ ಗುರಿಯನ್ನು ಹೊಂದಿವೆ” ಎಂದು ಬೋಸ್ಟನ್ ಫೆಡರಲ್ ನ್ಯಾಯಾಲಯಕ್ಕೆ ಸಲ್ಲಿಸಲಾದ ಮೊಕದ್ದಮೆಯಲ್ಲಿ ಹಾರ್ವರ್ಡ್‌ ಹೇಳಿದೆ.

“ಹಾರ್ವರ್ಡ್‌ನ ಸಂಶೋಧನಾ ಕಾರ್ಯಕ್ರಮಗಳು, ಆ ಸಂಶೋಧನೆಯ ಫಲಾನುಭವಿಗಳು ಮತ್ತು ಅಮೆರಿಕದ ನಾವೀನ್ಯತೆ ಮತ್ತು ಪ್ರಗತಿಯನ್ನು ಹೆಚ್ಚಿಸುವ ರಾಷ್ಟ್ರೀಯ ಹಿತಾಸಕ್ತಿಯ ಶತಕೋಟಿ ಡಾಲರ್‌ಗಳ ಫೆಡರಲ್ ಸಂಶೋಧನಾ ನಿಧಿಯನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸುವುದರಿಂದ ಉಂಟಾಗುವ ಗಮನಾರ್ಹ ಪರಿಣಾಮಗಳನ್ನು ಸರ್ಕಾರ ಒಪ್ಪಿಕೊಂಡಿಲ್ಲ” ಎಂದು ಆರೋಪಿಸಿದೆ.

ಅನುದಾ ಸ್ಥಗಿತವನ್ನು “ಅನಿಯಂತ್ರಿತ ಮತ್ತು ವಿಚಿತ್ರವಾದದ್ದು” ಎಂದು ಕರೆದಿರುವ ಹಾರ್ವರ್ಡ್‌, ಇದು ನಾಗರಿಕ ಹಕ್ಕುಗಳ ಕಾಯ್ದೆಯ ಶೀರ್ಷಿಕೆ VIರ ಶಾಸನಬದ್ಧ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದೆ. ವಿವಿ ಆರೋಪಕ್ಕೆ ಸರ್ಕಾರ ತಿರುಗೇಟು ಕೊಟ್ಟಿದೆ.

“ಹಾರ್ವರ್ಡ್‌ನಂತಹ ಸಂಸ್ಥೆಗಳಿಗೆ ಫೆಡರಲ್ ಅನುದಾನ ಕೊನೆಗೊಳ್ಳುತ್ತಿದೆ. ಈ ಸಂಸ್ಥೆಗಳು ಹೆಣಗಾಡುತ್ತಿರುವ ಅಮೆರಿಕನ್ನರ ತೆರಿಗೆ ಹಣದಿಂದ ತಮ್ಮ ಅಧಿಕಾರಿಗಳನ್ನು ಶ್ರೀಮಂತಗೊಳಿಸುತ್ತಿವೆ.
ತೆರಿಗೆದಾರರ ನಿಧಿಗಳು ಒಂದು ಸವಲತ್ತು. ಆ ಸವಲತ್ತನ್ನು ಪಡೆಯಲು ಅಗತ್ಯವಾದ ಮೂಲಭೂತ ಷರತ್ತುಗಳನ್ನು ಪೂರೈಸಲು ಹಾರ್ವರ್ಡ್ ವಿಫಲವಾಗಿದೆ” ಎಂದು ಶ್ವೇತಭವನದ ವಕ್ತಾರ ಹ್ಯಾರಿಸನ್ ಫೀಲ್ಡ್ಸ್ ಸೋಮವಾರ ಹೇಳಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...