Homeಮುಖಪುಟ'ಶರಬತ್ ಜಿಹಾದ್' ಹೇಳಿಕೆ ಆಘಾತಕಾರಿ: ಪತಂಜಲಿಯ ರಾಮದೇವ್‌ಗೆ ದೆಹಲಿ ಹೈಕೋರ್ಟ್ ತರಾಟೆ

‘ಶರಬತ್ ಜಿಹಾದ್’ ಹೇಳಿಕೆ ಆಘಾತಕಾರಿ: ಪತಂಜಲಿಯ ರಾಮದೇವ್‌ಗೆ ದೆಹಲಿ ಹೈಕೋರ್ಟ್ ತರಾಟೆ

ಹಮ್ದರ್ದ್‌ನ ರೂಹ್‌ ಅಫ್ಝಾಗೆ ಕೋಮು ಬಣ್ಣ ಬೆರೆಸಿದ ಪ್ರಕರಣ

- Advertisement -
- Advertisement -

ಔಷಧ ಮತ್ತು ಆಹಾರ ಕಂಪನಿ ಹಮ್ದರ್ದ್‌ ಮತ್ತು ಅದರ ಜನಪ್ರಿಯ ಪಾನೀಯ ರೂಹ್ ಅಫ್ಝಾವನ್ನು ಗುರಿಯಾಗಿಸಿಕೊಂಡು ಕೋಮು ನಿಂದನೆಯ ಹೇಳಿಕೆ ನೀಡಿದ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮದೇವ್ ಅವರನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಏ.22) ತರಾಟೆಗೆ ತೆಗೆದುಕೊಂಡಿದೆ.

ಪತಂಜಲಿ ಸಂಸ್ಥೆ ಮತ್ತು ರಾಮ್‌ದೇವ್ ವಿರುದ್ಧ ಹಮ್ದರ್ದ್ ದಾಖಲಿಸಿದ್ದ ಮೊಕದ್ದಮೆಯ ಪ್ರಾಥಮಿಕ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರು, ‘ಕಠಿಣ ಆದೇಶದ’ ಎಚ್ಚರಿಕೆ ನೀಡಿದ್ದಾರೆ ಎಂದು barandbench.com ವರದಿ ಮಾಡಿದೆ.

“ಇದು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತವನ್ನುಂಟುಮಾಡುತ್ತದೆ. ಸಮರ್ಥನೀಯವಲ್ಲ” ಎಂದು ಹೇಳಿದ ನ್ಯಾಯಾಲಯ, ತಮ್ಮ ಕಕ್ಷಿದಾರರಿಂದ (ರಾಮ್‌ದೇವ್‌) ಸೂಚನೆಗಳನ್ನು ಪಡೆದು ಹಾಜರಾಗುವಂತೆ ರಾಮ್‌ದೇವ್ ಪರ ವಕೀಲರಿಗೆ ಸೂಚಿಸಿದೆ.

ಏಪ್ರಿಲ್ 3ರಂದು ತಮ್ಮ ಕಂಪನಿಯ ಉತ್ಪನ್ನವಾದ ‘ಗುಲಾಬ್ ಶರ್ಬತ್’ ಅನ್ನು ಪ್ರಚಾರ ಮಾಡುವಾಗ ರಾಮ್‌ದೇವ್ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

ವಿಡಿಯೋವೊಂದರಲ್ಲಿ, ಅವರು ಹಮ್ದರ್ದ್‌ನ ರೂಹ್ ಅಫ್ಝಾವನ್ನು ಗುರಿಯಾಗಿಸಿಕೊಂಡು, ಹಮ್ದರ್ದ್ ತನ್ನ ಹಣವನ್ನು ಮಸೀದಿ ಮತ್ತು ಮದರಸಾಗಳ ನಿರ್ಮಾಣಕ್ಕೆ ಬಳಸುತ್ತಿದೆ ಎಂದು ದೂರಿದ್ದರು ಮತ್ತು ‘ಶರ್ಬತ್ ಜಿಹಾದ್’ ಎಂಬ ಪದವನ್ನು ಬಳಸಿ ಆರೋಪ ಮಾಡಿದ್ದರು.

ವರದಿಗಳ ಪ್ರಕಾರ, ರಾಮದೇವ್ ವಿರುದ್ಧ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಕಳೆದ ವಾರ ಭೋಪಾಲ್‌ನಲ್ಲಿ ಧಾರ್ಮಿಕ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದರು.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ರಾಮ್‌ದೇವ್ ತನ್ನ ಕೋಮುವಾದಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ತಮ್ಮ ವಿಡಿಯೋದಲ್ಲಿ ಯಾವುದೇ ನಿರ್ದಿಷ್ಟ ಬ್ರ್ಯಾಂಡ್ ಅನ್ನು ಹೆಸರಿಸಿಲ್ಲ ಎಂದಿದ್ದರು.

ಹಮ್ದರ್ದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ರಾಮದೇವ್ ಹಮ್ದರ್ದ್ ವಿರುದ್ಧ ಎಗ್ಗಿಲ್ಲದೆ ಮಾತನಾಡುತ್ತಿದ್ದಾರೆ ಮತ್ತು ಕಂಪನಿಯ ಮಾಲೀಕರ ಧರ್ಮದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಇಂದು ಹೈಕೋರ್ಟ್‌ಗೆ ತಿಳಿಸಿದ್ದಾರೆ.

“ಇದು ಆಘಾತಕಾರಿ ಪ್ರಕರಣವಾಗಿದ್ದು, ಅವಹೇಳನದ ಮಿತಿಯನ್ನು ಮೀರಿದೆ. ಇದು ದ್ವೇಷ ಭಾಷಣದಂತೆಯೇ ಕೋಮು ವಿಭಜನೆಯನ್ನು ಸೃಷ್ಟಿಸುವ ಪ್ರಕರಣವಾಗಿದೆ. ಮಾನನಷ್ಟ ಕಾನೂನಿನಿಂದ ಇದಕ್ಕೆ ರಕ್ಷಣೆ ಇರುವುದಿಲ್ಲ” ಎಂದು ರೋಹಟಗಿ ವಾದಿಸಿದ್ದಾರೆ.

“ಇಂತಹ (ರಾಮ್‌ದೇವ್ ಹೇಳಿಕೆಯ) ವಿಡಿಯೋಗಳ ಪ್ರಸಾರಕ್ಕೆ ಒಂದು ಕ್ಷಣವೂ ಅನುಮತಿಸಬಾರದು. ದೇಶದಲ್ಲಿ ಈಗಾಗಲೇ ಸಾಕಷ್ಟು ಸಮಸ್ಯೆಗಳಿವೆ. ಹಿಮಾಲಯ ಎಂಬ ಮತ್ತೊಂದು ಕಂಪನಿ ಮುಸ್ಲಿಂ ಒಡೆತನದಲ್ಲಿದೆ ಎಂಬ ಕಾರಣಕ್ಕಾಗಿ ರಾಮದೇವ್ ಅದರ ಮೇಲೆಯೂ ದಾಳಿ ನಡೆಸಿದ್ದಾರೆ” ಎಂದು ಮುಕುಲ್ ರೋಹಟಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅಲೋಪತಿಯನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ರಾಮದೇವ್ ಅವರು ಈ ಹಿಂದೆ ಸುಪ್ರೀಂ ಕೋರ್ಟ್‌ನಿಂದ ಕಠಿಣ ಶಿಕ್ಷೆಯನ್ನು ಎದುರಿಸಿದ್ದರು ಎಂದು ನ್ಯಾಯಾಲದ ಗಮನಕ್ಕೆ ತಂದಿದ್ದಾರೆ.

ಹಮ್ದರ್ದ್ ಪರವಾಗಿ ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಸಂದೀಪ್ ಸೇಥಿ ಮತ್ತು ವಕೀಲರಾದ ಪ್ರವೀಣ್ ಆನಂದ್, ಧ್ರುವ ಆನಂದ್, ನಿಖಿಲ್ ರೋಹಟಗಿ, ಉದಿತಾ ಪಾತ್ರೋ, ಶಿವೇಂದ್ರ ಸಿಂಗ್ ಪ್ರತಾಪ್, ಧನಂಜಯ್ ಖನ್ನಾ, ನಿಮ್ರತ್ ಸಿಂಗ್, ಸಂಪೂರ್ಣ ಸನ್ಯಾಲ್, ನವದೀಪ್ ಮತ್ತು ಮೆಹಕ್ ಖನ್ನಾ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಧರ್ಮದಿಂದಲ್ಲ, ಪ್ರತಿಭೆಯಿಂದ ಗುರುತಿಸಿ | ಮಾಜಿ ಮುಖ್ಯ ಚುನಾವಣಾ ಆಯುಕ್ತ ಖುರೈಷಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...