Homeಮುಖಪುಟ'ಶರಬತ್ ಜಿಹಾದ್' ಹೇಳಿಕೆ ಆಘಾತಕಾರಿ: ಪತಂಜಲಿಯ ರಾಮದೇವ್‌ಗೆ ದೆಹಲಿ ಹೈಕೋರ್ಟ್ ತರಾಟೆ

‘ಶರಬತ್ ಜಿಹಾದ್’ ಹೇಳಿಕೆ ಆಘಾತಕಾರಿ: ಪತಂಜಲಿಯ ರಾಮದೇವ್‌ಗೆ ದೆಹಲಿ ಹೈಕೋರ್ಟ್ ತರಾಟೆ

ಹಮ್ದರ್ದ್‌ನ ರೂಹ್‌ ಅಫ್ಝಾಗೆ ಕೋಮು ಬಣ್ಣ ಬೆರೆಸಿದ ಪ್ರಕರಣ

- Advertisement -
- Advertisement -

ಔಷಧ ಮತ್ತು ಆಹಾರ ಕಂಪನಿ ಹಮ್ದರ್ದ್‌ ಮತ್ತು ಅದರ ಜನಪ್ರಿಯ ಪಾನೀಯ ರೂಹ್ ಅಫ್ಝಾವನ್ನು ಗುರಿಯಾಗಿಸಿಕೊಂಡು ಕೋಮು ನಿಂದನೆಯ ಹೇಳಿಕೆ ನೀಡಿದ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮದೇವ್ ಅವರನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಏ.22) ತರಾಟೆಗೆ ತೆಗೆದುಕೊಂಡಿದೆ.

ಪತಂಜಲಿ ಸಂಸ್ಥೆ ಮತ್ತು ರಾಮ್‌ದೇವ್ ವಿರುದ್ಧ ಹಮ್ದರ್ದ್ ದಾಖಲಿಸಿದ್ದ ಮೊಕದ್ದಮೆಯ ಪ್ರಾಥಮಿಕ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರು, ‘ಕಠಿಣ ಆದೇಶದ’ ಎಚ್ಚರಿಕೆ ನೀಡಿದ್ದಾರೆ ಎಂದು barandbench.com ವರದಿ ಮಾಡಿದೆ.

“ಇದು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತವನ್ನುಂಟುಮಾಡುತ್ತದೆ. ಸಮರ್ಥನೀಯವಲ್ಲ” ಎಂದು ಹೇಳಿದ ನ್ಯಾಯಾಲಯ, ತಮ್ಮ ಕಕ್ಷಿದಾರರಿಂದ (ರಾಮ್‌ದೇವ್‌) ಸೂಚನೆಗಳನ್ನು ಪಡೆದು ಹಾಜರಾಗುವಂತೆ ರಾಮ್‌ದೇವ್ ಪರ ವಕೀಲರಿಗೆ ಸೂಚಿಸಿದೆ.

ಏಪ್ರಿಲ್ 3ರಂದು ತಮ್ಮ ಕಂಪನಿಯ ಉತ್ಪನ್ನವಾದ ‘ಗುಲಾಬ್ ಶರ್ಬತ್’ ಅನ್ನು ಪ್ರಚಾರ ಮಾಡುವಾಗ ರಾಮ್‌ದೇವ್ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

ವಿಡಿಯೋವೊಂದರಲ್ಲಿ, ಅವರು ಹಮ್ದರ್ದ್‌ನ ರೂಹ್ ಅಫ್ಝಾವನ್ನು ಗುರಿಯಾಗಿಸಿಕೊಂಡು, ಹಮ್ದರ್ದ್ ತನ್ನ ಹಣವನ್ನು ಮಸೀದಿ ಮತ್ತು ಮದರಸಾಗಳ ನಿರ್ಮಾಣಕ್ಕೆ ಬಳಸುತ್ತಿದೆ ಎಂದು ದೂರಿದ್ದರು ಮತ್ತು ‘ಶರ್ಬತ್ ಜಿಹಾದ್’ ಎಂಬ ಪದವನ್ನು ಬಳಸಿ ಆರೋಪ ಮಾಡಿದ್ದರು.

ವರದಿಗಳ ಪ್ರಕಾರ, ರಾಮದೇವ್ ವಿರುದ್ಧ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಕಳೆದ ವಾರ ಭೋಪಾಲ್‌ನಲ್ಲಿ ಧಾರ್ಮಿಕ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದರು.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ರಾಮ್‌ದೇವ್ ತನ್ನ ಕೋಮುವಾದಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ತಮ್ಮ ವಿಡಿಯೋದಲ್ಲಿ ಯಾವುದೇ ನಿರ್ದಿಷ್ಟ ಬ್ರ್ಯಾಂಡ್ ಅನ್ನು ಹೆಸರಿಸಿಲ್ಲ ಎಂದಿದ್ದರು.

ಹಮ್ದರ್ದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ರಾಮದೇವ್ ಹಮ್ದರ್ದ್ ವಿರುದ್ಧ ಎಗ್ಗಿಲ್ಲದೆ ಮಾತನಾಡುತ್ತಿದ್ದಾರೆ ಮತ್ತು ಕಂಪನಿಯ ಮಾಲೀಕರ ಧರ್ಮದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಇಂದು ಹೈಕೋರ್ಟ್‌ಗೆ ತಿಳಿಸಿದ್ದಾರೆ.

“ಇದು ಆಘಾತಕಾರಿ ಪ್ರಕರಣವಾಗಿದ್ದು, ಅವಹೇಳನದ ಮಿತಿಯನ್ನು ಮೀರಿದೆ. ಇದು ದ್ವೇಷ ಭಾಷಣದಂತೆಯೇ ಕೋಮು ವಿಭಜನೆಯನ್ನು ಸೃಷ್ಟಿಸುವ ಪ್ರಕರಣವಾಗಿದೆ. ಮಾನನಷ್ಟ ಕಾನೂನಿನಿಂದ ಇದಕ್ಕೆ ರಕ್ಷಣೆ ಇರುವುದಿಲ್ಲ” ಎಂದು ರೋಹಟಗಿ ವಾದಿಸಿದ್ದಾರೆ.

“ಇಂತಹ (ರಾಮ್‌ದೇವ್ ಹೇಳಿಕೆಯ) ವಿಡಿಯೋಗಳ ಪ್ರಸಾರಕ್ಕೆ ಒಂದು ಕ್ಷಣವೂ ಅನುಮತಿಸಬಾರದು. ದೇಶದಲ್ಲಿ ಈಗಾಗಲೇ ಸಾಕಷ್ಟು ಸಮಸ್ಯೆಗಳಿವೆ. ಹಿಮಾಲಯ ಎಂಬ ಮತ್ತೊಂದು ಕಂಪನಿ ಮುಸ್ಲಿಂ ಒಡೆತನದಲ್ಲಿದೆ ಎಂಬ ಕಾರಣಕ್ಕಾಗಿ ರಾಮದೇವ್ ಅದರ ಮೇಲೆಯೂ ದಾಳಿ ನಡೆಸಿದ್ದಾರೆ” ಎಂದು ಮುಕುಲ್ ರೋಹಟಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅಲೋಪತಿಯನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ರಾಮದೇವ್ ಅವರು ಈ ಹಿಂದೆ ಸುಪ್ರೀಂ ಕೋರ್ಟ್‌ನಿಂದ ಕಠಿಣ ಶಿಕ್ಷೆಯನ್ನು ಎದುರಿಸಿದ್ದರು ಎಂದು ನ್ಯಾಯಾಲದ ಗಮನಕ್ಕೆ ತಂದಿದ್ದಾರೆ.

ಹಮ್ದರ್ದ್ ಪರವಾಗಿ ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಸಂದೀಪ್ ಸೇಥಿ ಮತ್ತು ವಕೀಲರಾದ ಪ್ರವೀಣ್ ಆನಂದ್, ಧ್ರುವ ಆನಂದ್, ನಿಖಿಲ್ ರೋಹಟಗಿ, ಉದಿತಾ ಪಾತ್ರೋ, ಶಿವೇಂದ್ರ ಸಿಂಗ್ ಪ್ರತಾಪ್, ಧನಂಜಯ್ ಖನ್ನಾ, ನಿಮ್ರತ್ ಸಿಂಗ್, ಸಂಪೂರ್ಣ ಸನ್ಯಾಲ್, ನವದೀಪ್ ಮತ್ತು ಮೆಹಕ್ ಖನ್ನಾ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಧರ್ಮದಿಂದಲ್ಲ, ಪ್ರತಿಭೆಯಿಂದ ಗುರುತಿಸಿ | ಮಾಜಿ ಮುಖ್ಯ ಚುನಾವಣಾ ಆಯುಕ್ತ ಖುರೈಷಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...