Homeಮುಖಪುಟ'ನನ್ನ ಪುಸ್ತಕ ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ': ಕಂಗನಾ ರನೌತ್ 'ಎಮರ್ಜೆನ್ಸಿ' ವಿರುದ್ಧ ಕಾನೂನು ಕ್ರಮಕ್ಕೆ...

‘ನನ್ನ ಪುಸ್ತಕ ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ’: ಕಂಗನಾ ರನೌತ್ ‘ಎಮರ್ಜೆನ್ಸಿ’ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಕೂಮಿ ಕಪೂರ್

- Advertisement -
- Advertisement -

‘ಐತಿಹಾಸಿಕ ವಿಷಯಗಳನ್ನು ತಪ್ಪಾಗಿ ಪ್ರಸ್ತುತಪಡಿಸಲಾಗಿದೆ’ ಎಂದು ಆರೋಪಿಸಿ, ಬಿಜೆಪಿ ಸಂಸದೆ ಕಂಗನಾ ರನೌತ್ ನಟನೆಯ ‘ಎಮರ್ಜೆನ್ಸಿ’ ಚಿತ್ರದ ನಿರ್ಮಾಪಕರ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಮತ್ತು ಮಾನನಷ್ಟ ಮೊಕದ್ದಮೆ ಹೂಡಲು ಲೇಖಕಿ ಕೂಮಿ ಕಪೂರ್ ನಿರ್ಧರಿಸಿದ್ದಾರೆ.

ಪ್ರತ್ಯೇಕತಾವಾದಿ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಅವರನ್ನು ಇಂದಿರಾ ಗಾಂಧಿಯವರೊಂದಿಗೆ ರಹಸ್ಯವಾಗಿ ಒಪ್ಪಂದ ಮಾಡಿಕೊಂಡು ಕೆಲಸ ಮಾಡುತ್ತಿರುವಂತೆ ಚಿತ್ರಿಸಿದ್ದಕ್ಕಾಗಿ ಈ ಹಿಂದೆ ಎಮರ್ಜೆನ್ಸಿ ಚಿತ್ರ ಸಿಖ್ ಗುಂಪುಗಳಿಂದ ವಿರೋಧವನ್ನು ಎದುರಿಸಿತ್ತು.

ಚಿತ್ರದ ಡಿಸ್ಕ್ಲೈಮರ್‌ನಲ್ಲಿ, ಇದು ಕೂಮಿ ಕಪೂರ್ ಅವರ ‘ದಿ ಎಮರ್ಜೆನ್ಸಿ’ ಮತ್ತು ‘ಜಯಂತ್ ವಸಂತ್ ಸಿನ್ಹಾ ಅವರ ‘ಪ್ರಿಯದರ್ಶಿನಿ’ ಕೃತಿಗಳನ್ನು ಆಧರಿಸಿದೆ ಎಂದು ಹೇಳಲಾಗಿದೆ. ಆದರೆ, ಇದಕ್ಕೆ ಕಪೂರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಎರಡು ಲೀಗಲ್ ನೋಟಿಸ್‌ಗಳ ನಂತರವೂ, ಚಿತ್ರದ ಡಿಸ್ಕ್ಲೈಮರ್‌ ಬದಲಾಗಿಲ್ಲ” ಎಂದು ಕೂಮಿ ಕಪೂರ್ ಹೇಳಿದ್ದಾಗಿ ದಿ ಟೆಲಿಗ್ರಾಫ್‌ಗೆ ವರದಿ ಮಾಡಿದೆ.

“ಅವರು ಇಂದಿರಾ ಗಾಂಧಿಯವರ ಬಗ್ಗೆ ಸಿನಿಮಾ ಮಾಡುತ್ತಿರುವುದಾಗಿ ನನಗೆ ಹೇಳಿದರು. ನಾನು ಅವರಿಗೆ ಅನುಮತಿ ಕೊಟ್ಟೆ. ಅದು ನನ್ನ ಮೂರ್ಖತನ, ಏಕೆಂದರೆ ಅವರು ನಾವು ಒಂದೇ ಅಧ್ಯಾಯವನ್ನು ಬಳಸುತ್ತಿರುವುದಾಗಿ ಹೇಳಿದ್ದರು. ಆದರೆ, ಎಲ್ಲಾ ಅಧ್ಯಾಯಗಳನ್ನು ಬಳಸಿಕೊಂಡಿದ್ದಾರೆ. ಇಂದಿರಾ ಗಾಂಧಿಯವರ ಜೀವನವು ಪಬ್ಲಿಕ್ ಡೊಮೈನ್‌ನಲ್ಲಿದೆ. ಹಾಗಾಗಿ, ನನ್ನ ಪುಸ್ತಕವನ್ನು ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ” ಎಂದು ಕೂಮಿ ಕಪೂರ್ ಹೇಳಿದ್ದಾರೆ.

ಏಪ್ರಿಲ್ 3ರಂದು ಕಂಗನಾ ರನೌತ್ ಅವರ ‘ಮಣಿಕರ್ಣಿಕಾ ಫಿಲ್ಮ್ಸ್’ ಮತ್ತು ಒಟಿಟಿ ಪ್ಲಾಟ್‌ಫಾರ್ಮ್ ‘ನೆಟ್‌ಫ್ಲಿಕ್ಸ್‌’ಗೆ ನೋಟಿಸ್‌ ನೀಡಿರುವ ಕಪೂರ್ ಪರ ವಕೀಲರು, “ನೀವು ಉದ್ದೇಶಪೂರ್ವಕವಾಗಿ ಮತ್ತು ದುರುದ್ದೇಶಪೂರಿತವಾಗಿ ಚಿತ್ರದಲ್ಲಿ ಸತ್ಯಗಳನ್ನು ತಿರುಚಿದ್ದೀರಿ. ನಮ್ಮ ಕಕ್ಷಿದಾರರ ಹಕ್ಕುಗಳು ಮತ್ತು ಒಪ್ಪಿಗೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದೀರಿ ಮತ್ತು ಸದರಿ ಚಿತ್ರದೊಂದಿಗೆ ಅವರ ಹೆಸರನ್ನು ಕಾನೂನುಬಾಹಿರವಾಗಿ ಬಳಸಿಕೊಂಡಿದ್ದೀರಿ” ಎಂದಿದ್ದಾರೆ.

ಕಪೂರ್ ಪರ ವಕೀಲರು ಎಮರ್ಜೆನ್ಸಿ ಚಿತ್ರದಲ್ಲಿ ವಿಷಯಗಳನ್ನು ತಿರುಚಲಾಗಿದೆ ಎಂಬುವುದಕ್ಕೆ 6 ಉದಾಹಣೆಗಳನ್ನು ಕೊಟ್ಟಿದ್ದಾರೆ. ಅವುಗಳಲ್ಲಿ, “ಇಂದಿರಾ ಗಾಂಧಿಯವರು ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರ ಬಳಿಗೆ ವೈಯಕ್ತಿಕವಾಗಿ ಹೋಗಿ ಸಂಪುಟ ಸಭೆ ಕರೆಯದೆ ತುರ್ತು ಪರಿಸ್ಥಿತಿ ಘೋಷಿಸುವಂತೆ ಬೆದರಿಕೆ ಹಾಕಿದ್ದಾರೆ ಎಂಬುದು ಮತ್ತು ಪತ್ರಕರ್ತ ನಿಖಿಲ್ ಚಕ್ರವರ್ತಿ ಅವರನ್ನು ಆಂತರಿಕ ಭದ್ರತಾ ನಿರ್ವಹಣೆ ಕಾಯ್ದೆ [ಮಿಸಾ] ಅಡಿಯಲ್ಲಿ ಬಂಧಿಸಲಾಗಿದೆ ಎಂಬುದು ಒಳಗೊಂಡಿವೆ.

ಕಪೂರ್ ಪರ ವಕೀಲರು ನೀಡಿರುವ ಮಾನನಷ್ಟ ಮೊಕದ್ದಮೆ ನೋಟಿಸ್‌ನಲ್ಲಿ, “ಕಿಶೋರ್ ಕುಮಾರ್ ಅವರ ಹಾಡುಗಳನ್ನು ಆಲ್ ಇಂಡಿಯಾ ರೇಡಿಯೋ ನಿಷೇಧಿಸಿದಾಗ ಅವರು ಭಾರತದಲ್ಲಿ ಇರಲಿಲ್ಲ ಎಂದು ಆಕ್ರೋಶಗೊಂಡ ಅಕ್ಬರ್ ಅಹ್ಮದ್ (ಡಂಪಿ) ನಮ್ಮ ಕಕ್ಷಿದಾರರಿಗೆ ದೂರವಾಣಿ ಕರೆ ಮಾಡಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ನಮ್ಮ ಕಕ್ಷಿದಾರರು ಅವರನ್ನು ಸಮಾಧಾನಪಡಿಸಿ ತಮ್ಮ ಪುಸ್ತಕದಲ್ಲಿ ಆಲ್ ಇಂಡಿಯಾ ರೇಡಿಯೋದಲ್ಲಿ ಕಿಶೋರ್ ಕುಮಾರ್ ಅವರ ಹಾಡುಗಳನ್ನು ನಿಷೇಧಿಸಲು ಅಂದಿನ ಮಾಹಿತಿ ಮತ್ತು ಪ್ರಸಾರ ಸಚಿವ ವಿ ಸಿ ಶುಕ್ಲಾ ಕಾರಣ, ಅಕ್ಬರ್ ಅಹ್ಮದ್ (ಡಂಪಿ) ಅಲ್ಲ” ಎಂದು ಎಂದು ವಿವರಿಸಬೇಕಾಯಿತು” ಎಂದು ಹೇಳಲಾಗಿದೆ.

ಕಪೂರ್ ಅವರ ಪ್ರಕಾಶಕರಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಮತ್ತು ಮಣಿಕರ್ಣಿಕಾ ಫಿಲ್ಮ್ಸ್ ನಡುವಿನ 2021ರ ಒಪ್ಪಂದವು ಸತ್ಯಗಳನ್ನು ತಿರುಚಲು ಅವಕಾಶ ನೀಡುವುದಿಲ್ಲ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಪ್ರಸ್ತಾವಿತ ಚಿತ್ರದ ಸ್ಕ್ರಿಪ್ಟ್ ಅನ್ನು ನಮ್ಮ ಕಕ್ಷಿದಾರರಿಗೆ ತೋರಿಸಲು ನಿಮ್ಮನ್ನು ವಿನಂತಿಸಲಾಗಿತ್ತು. ನಮ್ಮ ಕಕ್ಷಿದಾರ ಫಾಲೋ-ಅಪ್ ಸಂದೇಶಗಳ ಹೊರತಾಗಿಯೂ, ನೀವು ಅದನ್ನು ಮಾಡಿಲ್ಲ ಎಂದು ಕಪೂರ್ ಪರ ವಕೀಲರು ಹೇಳಿದ್ದಾರೆ.

ಇದಲ್ಲದೆ, ಸದರಿ ಒಪ್ಪಂದದಲ್ಲಿ ನಮ್ಮ ಕಕ್ಷಿದಾರ ಹೆಸರು, ಭಾವಚಿತ್ರ, ಜೀವನಚರಿತ್ರೆ ಮತ್ತು ಗುರುತನ್ನು ಜಾಹೀರಾತು ಮತ್ತು ಪ್ರಚಾರದ ಉದ್ದೇಶಗಳಿಗಾಗಿ ಬಳಸುವುದು ಕಟ್ಟುನಿಟ್ಟಾಗಿ ‘ಲೇಖಕರ ಲಿಖಿತ ಅನುಮೋದನೆಗೆ ಒಳಪಟ್ಟಿರುತ್ತದೆ’ ಎಂದು ನಿರ್ದಿಷ್ಟವಾಗಿ ಹೇಳಲಾಗಿದೆ. ನೀವು ಅಂತಹ ಯಾವುದೇ ಅನುಮೋದನೆಯನ್ನು ತೆಗೆದುಕೊಂಡಿಲ್ಲ ಎಂದು ತಿಳಿಸಲಾಗಿದೆ.

ಏಪ್ರಿಲ್ 10 ರಂದು, ಮಣಿಕರ್ಣಿಕಾ ಫಿಲ್ಮ್ಸ್ ಕಪೂರ್ ಅವರ 2015ರ ಪುಸ್ತಕವು ಚಿತ್ರಕ್ಕೆ ಏಕೈಕ ಆಧಾರವಲ್ಲ. ಹಾಗಾಗಿ, ಸ್ಕ್ರಿಪ್ಟ್ ಅನ್ನು ಅವರಿಂದ ಅನುಮೋದಿಸುವ ಯಾವುದೇ ಅಗತ್ಯತೆ ಕಂಪನಿಗೆ ಇಲ್ಲ ಎಂದು ಹೇಳುವ ಮೂಲಕ ಆರೋಪಗಳನ್ನು ತಿರಸ್ಕರಿತ್ತು.

ವಿಷಯ ಕಥೆ ಮತ್ತು ಚಿತ್ರಕಥೆಗೆ ಅಗತ್ಯ ಮಾರ್ಪಾಡುಗಳನ್ನು ಮಾಡಲು ಸೃಜನಶೀಲ ಸ್ವಾತಂತ್ರ್ಯಗಳನ್ನು ಚಲಾಯಿಸಲಾಗುವುದು ಎಂದು ಪಕ್ಷಗಳ ಒಪ್ಪಂದದಲ್ಲಿ ಸ್ಪಷ್ಟವಾಗಿ ಒಪ್ಪಿಕೊಳ್ಳಲಾಗಿದೆ ಮತ್ತು ಈ ಉದ್ದೇಶಕ್ಕಾಗಿ ಕಪೂರ್ ಅವರು ಪುಸ್ತಕದ ಮೇಲಿನ ‘ಸಂಪೂರ್ಣ ಬೌದ್ಧಿಕ ಆಸ್ತಿ ಹಕ್ಕುಗಳನ್ನು’ ನಿರ್ಮಾಪಕರಿಗೆ ನೀಡಿದ್ದಾರೆ ಎಂದು ಆರೋಪಗಳ ಕುರಿತು ಮಣಿಕರ್ಣಿಕಾ ಫಿಲ್ಮ್ಸ್‌ ಹೇಳಿದೆ.

ಕಂಪನಿಯ ನಿರ್ದೇಶಕಿಯಾಗಿರುವ ರನೌತ್, ನಮ್ಮ ಇಮೇಲ್ ಮತ್ತು ವಾಟ್ಸಾಪ್ ಸಂದೇಶಕ್ಕೆ ಪ್ರತಿಕ್ರಿಯಿಸಿಲ್ಲ ಎಂದು ದಿ ಟೆಲಿಗ್ರಾಫ್ ಹೇಳಿದೆ.

ಸೆನ್ಸಾರ್ ಮಂಡಳಿಯು ತನ್ನ ಚಿತ್ರದ ಪ್ರಮಾಣೀಕರಣವನ್ನು ಸ್ಥಗಿತಗೊಳಿಸುವ ಮೂಲಕ “ತುರ್ತು ಪರಿಸ್ಥಿತಿ” ಹೇರಿದೆ ಎಂದು ಕಳೆದ ವರ್ಷ ಕಂಗನಾ ರನೌತ್ ಅವರು ಆರೋಪಿಸಿದ್ದರು.

ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನಿಂದ ಚಿತ್ರಕ್ಕೆ ‘ಪರವಾನಗಿ’ ನೀಡಲಾಗಿದ್ದು, ಹಾಗಾಗಿ, ಕಪೂರ್ ಅವರು ನಮ್ಮ ಬದಲು ಅವರನ್ನೇ ಸಂಪರ್ಕಿಸಬೇಕು ಎಂದು ಏಪ್ರಿಲ್ 8 ರಂದು ನೆಟ್‌ಫ್ಲಿಕ್ಸ್ ಕೈ ತೊಳೆದುಕೊಂಡಿದೆ.

ಕಪೂರ್ ಅವರ ಕಾನೂನು ತಂಡವು ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡುವುದಾಗಿ ತಿಳಿಸಿದೆ.

ಜನವರಿಯಲ್ಲಿ ಚಿತ್ರ ಮಂದಿರಗಳಲ್ಲಿ ಎಮರ್ಜೆನ್ಸಿ ಚಿತ್ರ ಬಿಡುಗಡೆಯಾದಾಗ ಕಪೂರ್ ಅವರು ನೋಡಿರಲಿಲ್ಲ. ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಮಾಡಿದ ನಂತರವೇ ಅವರು ನೋಡಿದ್ದಾರೆ. ಅದರಲ್ಲಿನ ತಪ್ಪು ಉಲ್ಲೇಖಗಳು ಕಂಡು ಅವರಿಗೆ ದಿಗಿಲು ಉಂಟಾಗಿದೆ ಎಂದು ದಿ ಟೆಲಿಗ್ರಾಫ್ ಹೇಳಿದೆ.

ಯೇಸುಕ್ರಿಸ್ತಗೆ ಅಗೌರವ ಆರೋಪ: ‘ಜಾಟ್’ ಚಿತ್ರತಂಡದ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...