Homeಮುಖಪುಟಪಹಲ್ಗಾಮ್ ಭಯೋತ್ಪಾದಕ ದಾಳಿ: ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆ; ಕರ್ನಾಟಕದ ಇಬ್ಬರು ಬಲಿ

ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆ; ಕರ್ನಾಟಕದ ಇಬ್ಬರು ಬಲಿ

- Advertisement -
- Advertisement -

ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬೈಸರನ್ ಕಣಿವೆಯ ಸುಂದರ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮಂಗಳವಾರ (ಏ.22) ನಡೆಸಿದ ಗುಂಡಿನ ದಾಳಿಯಲ್ಲಿ ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.

ಪಹಲ್ಗಾಮ್ ಎಂಬ ರೆಸಾರ್ಟ್ ಪಟ್ಟಣದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಬೈಸರನ್‌ನಲ್ಲಿ ಮಧ್ಯಾಹ್ನ 2:30ರ ಸುಮಾರಿಗೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ದಟ್ಟವಾದ ಪೈನ್ ಕಾಡುಗಳು ಮತ್ತು ಪರ್ವತಗಳಿಂದ ಸುತ್ತುವರೆದಿರುವ ಈ ವಿಶಾಲವಾದ ಹುಲ್ಲುಗಾವಲು ಪ್ರದೇಶ ದೇಶ ವಿದೇಶಗಳ ಪ್ರವಾಸಿಗರ ನೆಚ್ಚಿನ ತಾಣವಾಗಿದೆ.

2019ರ ಪುಲ್ವಾಮಾ ದಾಳಿಯ ನಂತರ ಈ ಪ್ರದೇಶದಲ್ಲಿ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಇದಾಗಿದೆ.

ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್-ಎ-ತೈಬಾ (ಎಲ್‌ಇಟಿ) ಭಯೋತ್ಪಾದಕ ಗುಂಪಿನ ಜೊತೆ ನಂಟು ಹೊಂದಿರುವ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ದಾಳಿಯ ಹೊಣೆ ಹೊತ್ತುಕೊಂಡಿದೆ ಎಂದು ವರದಿಗಳು ಹೇಳಿವೆ.

ಇಬ್ಬರು ಕನ್ನಡಿಗರು ಸಾವು

ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಮತ್ತು ಬೆಂಗಳೂರಿನಲ್ಲಿ ವಾಸವಿದ್ದ ಹಾವೇರಿ ಮೂಲದ ಭರತ್ ಭೂಷಣ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ದಾಳಿಯಲ್ಲಿ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಂಡ ಕಳುಹಿಸಿದ ಕರ್ನಾಟಕ ಸರ್ಕಾರ

ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿಎಂ, ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದ್ದಾರೆ. ಸಿಎಂ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಐಪಿಎಸ್‌ ಅಧಿಕಾರಿ ಚೇತನ್ ಆರ್ ಮತ್ತು ಇತರ ಅಧಿಕಾರಿಗಳ ತಂಡ ಕಾಶ್ಮೀರಕ್ಕೆ ತಲುಪಿದ್ದಾರೆ.

ದಾಳಿಯಲ್ಲಿ ಸಾವಿಗೀಡಾದ ಕರ್ನಾಟಕ ಇಬ್ಬರ ಸೇರಿದಂತೆ 25 ಜನರ ಶವಗಳನ್ನು ಅವರ ಊರುಗಳಿಗೆ ತಲುಪಿಸಲು ವಿಮಾನದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ವ್ಯವಸ್ಥೆಗಳನ್ನು ಮಾಡಿದೆ.

ಸಾವಿಗೀಡಾದವರ ಶವ ಊರಿಗೆ ತಲುಪಿಸಲು ವಿಮಾನದ ವ್ಯವಸ್ಥೆ

ಅಧಿಕಾರಿಗಳ ಸಭೆ ನಡೆಸಿದ ಅಮಿತ್ ಶಾ

ಭಯೋತ್ಪಾದಕ ದಾಳಿ ನಡೆದ ಬೆನ್ನಲ್ಲೇ ಮಂಗಳವಾರ ಸಂಜೆ ದೆಹಲಿಯಿಂದ ಕಾಶ್ಮೀರಕ್ಕೆ ತೆರಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಶ್ರೀನಗರದ ರಾಜಭವನದಲ್ಲಿ ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಅಧಿಕಾರಿಗಳ ಸಭೆ ನಡೆಸಿದ ಅಮಿತ್ ಶಾ

ಸೌದಿಯಿಂದ ಹಿಂದಿರುಗಿದ ಪ್ರಧಾನಿ ಮೋದಿ

ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ಹಿಂದಿರುಗಿದ್ದಾರೆ. ಎರಡು ದಿನಗಳ ಭೇಟಿಗೆ ಮಂಗಳವಾರ ಸೌದಿ ತಲುಪಿದ ಅವರು, ಇಂದು ಮುಂಜಾನೆ ತುರ್ತಾಗಿ ದೇಶಕ್ಕೆ ಮರಳಿದ್ದಾರೆ. ಅಧಿಕಾರಿಗಳ ಜೊತೆ ಇಂದು ಪ್ರಧಾನಿ ಸಭೆ ನಡೆಸುವ ಸಾಧ್ಯತೆ ಇದೆ.

ಅಮಿತ್ ಶಾ ಜೊತೆ ರಾಹುಲ್ ಗಾಂಧಿ ಚರ್ಚೆ

ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಗೃಹ ಸಚಿವ ಅಮಿತ್ ಶಾ, ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಮತ್ತು ಜಮ್ಮು ಕಾಶ್ಮೀರ ಪಿಸಿಸಿ ಅಧ್ಯಕ್ಷ ತಾರಿಕ್ ಕರ್ರಾ ಅವರೊಂದಿಗೆ ಮಾತನಾಡಿದೆ. ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದೆ. ಬಲಿಪಶುಗಳ ಕುಟುಂಬಗಳಿಗೆ ನ್ಯಾಯ ಮತ್ತು ನಮ್ಮ ಸಂಪೂರ್ಣ ಬೆಂಬಲ ಬೇಕು ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಸಹಾಯವಾಣಿ ತೆರೆದ ಪೊಲೀಸರು

ಅಗತ್ಯವಿರುವ ಪ್ರವಾಸಿಗರಿಗೆ ತಕ್ಷಣದ ಬೆಂಬಲ ಮತ್ತು ಮಾಹಿತಿಯನ್ನು ಒದಗಿಸಲು ಅನಂತನಾಗ್ ಪೊಲೀಸರು ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ 24/7 ತುರ್ತು ಸಹಾಯ ಕೇಂದ್ರವನ್ನು ಸ್ಥಾಪಿಸಿದ್ದಾರೆ. ಯಾವುದೇ ತುರ್ತು ಪರಿಸ್ಥಿತಿಗಳು ಅಥವಾ ಪ್ರಶ್ನೆಗಳಿಗೆ ಪ್ರವಾಸಿಗರಿಗೆ ಸಹಾಯ ಮಾಡಲು ಮೀಸಲಾಗಿರುವ ಅನಂತ್‌ನಾಗ್ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಈಗ ದಿನದ 24 ಗಂಟೆಯೂ ವಿಶೇಷ ಸಹಾಯ ಕೇಂದ್ರ ಕಾರ್ಯನಿರ್ವಹಿಸುತ್ತಿದೆ.

ಸಹಾಯವಾಣಿಯ ಸಂಪರ್ಕ ಸಂಖ್ಯೆಗಳು ಕೆಳಗಿವೆ

9596777669
01932225870
ವಾಟ್ಸಾಪ್ : 9419051940

ತಮಿಳುನಾಡು ರಾಜ್ಯಪಾಲರ ವಿರುದ್ಧದ ಸುಪ್ರೀಂಕೋರ್ಟ್‌ನ ತೀರ್ಪು ಕೇರಳಕ್ಕೆ ಅನ್ವಯಿಸುವುದಿಲ್ಲ: ಕೇಂದ್ರ ಸರ್ಕಾರ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...